Homeಮುಖಪುಟಹಸಿವಿಗಿಂತ ಕೊರೊನಾ ವೈರಸ್‌ ಉತ್ತಮ: ಕೆಲಸಕ್ಕೆ ಮರಳಿದ ಯುಪಿ ಕಾರ್ಮಿಕರು

ಹಸಿವಿಗಿಂತ ಕೊರೊನಾ ವೈರಸ್‌ ಉತ್ತಮ: ಕೆಲಸಕ್ಕೆ ಮರಳಿದ ಯುಪಿ ಕಾರ್ಮಿಕರು

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ಲಾಕ್‌ಡೌನ್‌ ಘೋಷಿಸಿ ನೂರು ದಿನಗಳಾಗುತ್ತಾ ಬರುತ್ತಿದೆ. ಸರ್ಕಾರಗಳು ಜನರ ಕಷ್ಟ ಕಡಿಮೆ ಮಾಡಲು ಏನೆಲ್ಲಾ ಪ್ಯಾಕೇಜ್‌ಗಳು ಘೋಷಿಸಿದರೂ ಜನರ ಕಷ್ಟ ಕಡಿಮೆಯಾಗಿಲ್ಲ. ಅದಕ್ಕೆ ನೇರ ಉದಾಹರಣೆಯೆಂದರೆ ಉತ್ತರ ಪ್ರದೇಶದ ಕಾರ್ಮಿಕರು “ಹಸಿವಿಗಿಂತ ಕೊರೊನಾ ವೈರಸ್‌ ಉತ್ತಮ” ಎಂದು ನಿರ್ಧರಿಸಿ ಕೆಲಸಕ್ಕೆ ಮರಳುತ್ತಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಲಾಕ್ ಡೌನ್ ಸಮಯದಲ್ಲಿ ಹಿಂದಿರುಗಿದ ಉತ್ತರ ಪ್ರದೇಶದ 30 ಲಕ್ಷಕ್ಕೂ ಹೆಚ್ಚಿನ ವಲಸೆ ಕಾರ್ಮಿಕರು ಮತ್ತೆ ಕೆಲಸಕ್ಕೆ ಹೋಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಹಲವು ನಗರಗಳ ಬಸ್‌ ನಿಲ್ದಾಣದಲ್ಲಿ ಕಾರ್ಮಿಕರು ಸಾಲುಗಟ್ಟಿ ನಿಂತಿದ್ದಾರೆ.

ಅನ್ಸಾರಿ ಎಂಬುವವರು ಮುಂಬೈನಲ್ಲಿ ಕಾರ್ಖಾನೆಯ ಕೆಲಸಗಾರರಾಗಿದ್ದು, ಅವರ ದೊಡ್ಡ ಟೈಲರಿಂಗ್ ಘಟಕವು ಇನ್ನೂ ಮುಚ್ಚಲ್ಪಟ್ಟಿದೆ. ಅವರು ಕೇವಲ ಒಂದು ತಿಂಗಳ ಹಿಂದೆ ಮನೆಗೆ ಮರಳಿದ್ದಾರೆ ಎಂದು ಹೇಳುತ್ತಾರೆ. “ಯುಪಿಯಲ್ಲಿ ಉದ್ಯೋಗವಿದ್ದರೆ, ನಾನು ಹಿಂತಿರುಗುವುದಿಲ್ಲ. ನನ್ನ ಕಂಪನಿ ಇನ್ನೂ ಪ್ರಾರಂಭವಾಗಿಲ್ಲ ಆದರೆ ನಾನು ಮಾಡಬಹುದಾದ ಯಾವುದೇ ಕೆಲಸವನ್ನು ಹುಡುಕಲು ಹಿಂದಿರುಗುತ್ತಿದ್ದೇನೆ. ಹಸಿವುಗಿಂತ ಕರೋನಾ ಉತ್ತಮವಾಗಿದೆ. ನನ್ನ ಮಕ್ಕಳು ಹಸಿದು ಸಾಯುವುದಕ್ಕಿಂತ ನಾನು ಕೊರೊನಾದಿಂದ ಸಾಯುವುದು ಉತ್ತಮ” ಎಂದು ಅನ್ಸಾರಿ ಬಸ್ ಹತ್ತುವ ಮೊದಲು ಹೇಳುತ್ತಾರೆ.

ಕೋಲ್ಕತ್ತ ಮೂಲದ ಸಂಸ್ಥೆಯೊಂದರಲ್ಲಿ ತಂತ್ರಜ್ಞರಾಗಿರುವ ಪ್ರಸಾದ್ ಅವರು ಹೋಳಿ ಪ್ರಯುಕ್ತ ಮನೆಗೆ ಬಂದಿದ್ದರು. ಆದರೆ ಲಾಕ್‌ಡೌನ್‌ ಘೋಷಣೆಯಾದ್ದರಿಂದ ಯುಪಿಯಲ್ಲಿ ಸಿಲುಕಿಕೊಂಡರು. ಅವರ ಸಂಸ್ಥೆಯು ಮತ್ತೆ ತೆರೆಯಲ್ಪಟ್ಟಿದೆ ಹಾಗಾಗಿ ವಾಪಸ್‌ ಕೆಲಸಕ್ಕೆ ಮರಳಿದ್ದೇನೆ ಎನ್ನುತ್ತಾರೆ. “ನನಗೆ ಕೆಲಸಕ್ಕೆ ಹೋಗಲು ಭಯವಾಗುತ್ತಿದೆ. ಆದರೆ ಇಲ್ಲಿಯೇ ಇರುವುದು ಅದಕ್ಕಿಂತಲೂ ಭಯವಾಗುತ್ತದೆ. ಏಕೆಂದರೆ ನಾನು ಏನು ತಿನ್ನಲ್ಲಿ? ನನ್ನ ಕುಟುಂಬವನ್ನು ಹೇಗೆ ಪೋಷಿಸಲಿ ಎಂದು ಪ್ರಶ್ನಿಸುತ್ತಾರೆ.

ದೂರದ ಮತ್ತು ಹಿಂದುಳಿದ ಪೂರ್ವ ಯುಪಿ ಜಿಲ್ಲೆಯಾದ ಸಿದ್ಧಾರ್ಥ್ ನಗರದಿಂದ ಗರಿಷ್ಠ ಸಂಖ್ಯೆಯ ವಲಸೆ ಕಾರ್ಮಿಕರು ಕೆಲಸಕ್ಕೆ ತೆರಳುತ್ತಿದ್ದಾರೆ. ಎಸಿ ರಿಪೇರಿ ತಂತ್ರಜ್ಞ ಮೊಹಮ್ಮದ್ ಅಬಿದ್, ತಾನು ಮುಂಬೈಗೆ ಹಿಂದಿರುಗುತ್ತಿದ್ದೇನೆ ಎಂದು ಹೇಳುತ್ತಾರೆ. ಏಕೆಂದರೆ ಸರ್ಕಾರದ ಯಾವುದೇ ಯೋಜನೆಗಳು ಮತ್ತು ಭರವಸೆಗಳು ಅವರನ್ನು ತಲುಪಿಲ್ಲ. “ಮುಂಬೈನಲ್ಲಿ ಉತ್ತಮ ಹಣ ಸಿಗುತ್ತದೆ ಆದರೆ ನನಗೆ ಇಲ್ಲಿ (ಉತ್ತರಪ್ರದೇಶದಲ್ಲಿ) ಬದುಕು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಸರ್ಕಾರಗಳು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದ್ದರೂ ಅವು ನಮ್ಮನ್ನು ತಲುಪುತ್ತಿಲ್ಲ. ಇಲ್ಲಿ ನಿರುದ್ಯೋಗಿಯಾಗಿಬೇಕು. ಇಲ್ಲಿ ಯಾವುದೇ ಕೆಲಸವಿಲ್ಲ. ನೀವು ಹೋಗಿ ಯಾರ ಬಳಿಯಾದರೂ ಕೆಲಸ ಕೇಳಿ, ಅವರು ಇಲ್ಲ ಎನ್ನುತ್ತಾರೆ ಎಂದು ಅಬಿದ್ ಹೇಳಿದ್ದಾರೆ.

ಒಟ್ಟಿನಲ್ಲಿ ಜನರ ಜೀವನ ಬಂಡಿ ಸಾಗಲು ಅವರ ಹೆಚ್ಚುತ್ತಿರುವ ಕೊರೊನಾ ವೈರಸ್ ಮಧ್ಯೆಯೂ ಕೆಲಸ ಹುಡುಕಿ ವಲಸೆ ಹೋಗಬೇಕಾದ ಪರಿಸ್ಥಿತಿ ಉದ್ಬವಿಸಿದೆ.


ಇದನ್ನೂ ಓದಿ: ಬಾಲಿವುಡ್ ಸೆಲೆಬ್ರಿಟಿಗಳೇ, ತಮಿಳುನಾಡಿನಲ್ಲಿ ಏನಾಯಿತು ಎಂದು ನೀವು ಕೇಳಿದ್ದೀರಾ ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...