Homeಮುಖಪುಟಹಸಿವಿಗಿಂತ ಕೊರೊನಾ ವೈರಸ್‌ ಉತ್ತಮ: ಕೆಲಸಕ್ಕೆ ಮರಳಿದ ಯುಪಿ ಕಾರ್ಮಿಕರು

ಹಸಿವಿಗಿಂತ ಕೊರೊನಾ ವೈರಸ್‌ ಉತ್ತಮ: ಕೆಲಸಕ್ಕೆ ಮರಳಿದ ಯುಪಿ ಕಾರ್ಮಿಕರು

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ಲಾಕ್‌ಡೌನ್‌ ಘೋಷಿಸಿ ನೂರು ದಿನಗಳಾಗುತ್ತಾ ಬರುತ್ತಿದೆ. ಸರ್ಕಾರಗಳು ಜನರ ಕಷ್ಟ ಕಡಿಮೆ ಮಾಡಲು ಏನೆಲ್ಲಾ ಪ್ಯಾಕೇಜ್‌ಗಳು ಘೋಷಿಸಿದರೂ ಜನರ ಕಷ್ಟ ಕಡಿಮೆಯಾಗಿಲ್ಲ. ಅದಕ್ಕೆ ನೇರ ಉದಾಹರಣೆಯೆಂದರೆ ಉತ್ತರ ಪ್ರದೇಶದ ಕಾರ್ಮಿಕರು “ಹಸಿವಿಗಿಂತ ಕೊರೊನಾ ವೈರಸ್‌ ಉತ್ತಮ” ಎಂದು ನಿರ್ಧರಿಸಿ ಕೆಲಸಕ್ಕೆ ಮರಳುತ್ತಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಲಾಕ್ ಡೌನ್ ಸಮಯದಲ್ಲಿ ಹಿಂದಿರುಗಿದ ಉತ್ತರ ಪ್ರದೇಶದ 30 ಲಕ್ಷಕ್ಕೂ ಹೆಚ್ಚಿನ ವಲಸೆ ಕಾರ್ಮಿಕರು ಮತ್ತೆ ಕೆಲಸಕ್ಕೆ ಹೋಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಹಲವು ನಗರಗಳ ಬಸ್‌ ನಿಲ್ದಾಣದಲ್ಲಿ ಕಾರ್ಮಿಕರು ಸಾಲುಗಟ್ಟಿ ನಿಂತಿದ್ದಾರೆ.

ಅನ್ಸಾರಿ ಎಂಬುವವರು ಮುಂಬೈನಲ್ಲಿ ಕಾರ್ಖಾನೆಯ ಕೆಲಸಗಾರರಾಗಿದ್ದು, ಅವರ ದೊಡ್ಡ ಟೈಲರಿಂಗ್ ಘಟಕವು ಇನ್ನೂ ಮುಚ್ಚಲ್ಪಟ್ಟಿದೆ. ಅವರು ಕೇವಲ ಒಂದು ತಿಂಗಳ ಹಿಂದೆ ಮನೆಗೆ ಮರಳಿದ್ದಾರೆ ಎಂದು ಹೇಳುತ್ತಾರೆ. “ಯುಪಿಯಲ್ಲಿ ಉದ್ಯೋಗವಿದ್ದರೆ, ನಾನು ಹಿಂತಿರುಗುವುದಿಲ್ಲ. ನನ್ನ ಕಂಪನಿ ಇನ್ನೂ ಪ್ರಾರಂಭವಾಗಿಲ್ಲ ಆದರೆ ನಾನು ಮಾಡಬಹುದಾದ ಯಾವುದೇ ಕೆಲಸವನ್ನು ಹುಡುಕಲು ಹಿಂದಿರುಗುತ್ತಿದ್ದೇನೆ. ಹಸಿವುಗಿಂತ ಕರೋನಾ ಉತ್ತಮವಾಗಿದೆ. ನನ್ನ ಮಕ್ಕಳು ಹಸಿದು ಸಾಯುವುದಕ್ಕಿಂತ ನಾನು ಕೊರೊನಾದಿಂದ ಸಾಯುವುದು ಉತ್ತಮ” ಎಂದು ಅನ್ಸಾರಿ ಬಸ್ ಹತ್ತುವ ಮೊದಲು ಹೇಳುತ್ತಾರೆ.

ಕೋಲ್ಕತ್ತ ಮೂಲದ ಸಂಸ್ಥೆಯೊಂದರಲ್ಲಿ ತಂತ್ರಜ್ಞರಾಗಿರುವ ಪ್ರಸಾದ್ ಅವರು ಹೋಳಿ ಪ್ರಯುಕ್ತ ಮನೆಗೆ ಬಂದಿದ್ದರು. ಆದರೆ ಲಾಕ್‌ಡೌನ್‌ ಘೋಷಣೆಯಾದ್ದರಿಂದ ಯುಪಿಯಲ್ಲಿ ಸಿಲುಕಿಕೊಂಡರು. ಅವರ ಸಂಸ್ಥೆಯು ಮತ್ತೆ ತೆರೆಯಲ್ಪಟ್ಟಿದೆ ಹಾಗಾಗಿ ವಾಪಸ್‌ ಕೆಲಸಕ್ಕೆ ಮರಳಿದ್ದೇನೆ ಎನ್ನುತ್ತಾರೆ. “ನನಗೆ ಕೆಲಸಕ್ಕೆ ಹೋಗಲು ಭಯವಾಗುತ್ತಿದೆ. ಆದರೆ ಇಲ್ಲಿಯೇ ಇರುವುದು ಅದಕ್ಕಿಂತಲೂ ಭಯವಾಗುತ್ತದೆ. ಏಕೆಂದರೆ ನಾನು ಏನು ತಿನ್ನಲ್ಲಿ? ನನ್ನ ಕುಟುಂಬವನ್ನು ಹೇಗೆ ಪೋಷಿಸಲಿ ಎಂದು ಪ್ರಶ್ನಿಸುತ್ತಾರೆ.

ದೂರದ ಮತ್ತು ಹಿಂದುಳಿದ ಪೂರ್ವ ಯುಪಿ ಜಿಲ್ಲೆಯಾದ ಸಿದ್ಧಾರ್ಥ್ ನಗರದಿಂದ ಗರಿಷ್ಠ ಸಂಖ್ಯೆಯ ವಲಸೆ ಕಾರ್ಮಿಕರು ಕೆಲಸಕ್ಕೆ ತೆರಳುತ್ತಿದ್ದಾರೆ. ಎಸಿ ರಿಪೇರಿ ತಂತ್ರಜ್ಞ ಮೊಹಮ್ಮದ್ ಅಬಿದ್, ತಾನು ಮುಂಬೈಗೆ ಹಿಂದಿರುಗುತ್ತಿದ್ದೇನೆ ಎಂದು ಹೇಳುತ್ತಾರೆ. ಏಕೆಂದರೆ ಸರ್ಕಾರದ ಯಾವುದೇ ಯೋಜನೆಗಳು ಮತ್ತು ಭರವಸೆಗಳು ಅವರನ್ನು ತಲುಪಿಲ್ಲ. “ಮುಂಬೈನಲ್ಲಿ ಉತ್ತಮ ಹಣ ಸಿಗುತ್ತದೆ ಆದರೆ ನನಗೆ ಇಲ್ಲಿ (ಉತ್ತರಪ್ರದೇಶದಲ್ಲಿ) ಬದುಕು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಸರ್ಕಾರಗಳು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದ್ದರೂ ಅವು ನಮ್ಮನ್ನು ತಲುಪುತ್ತಿಲ್ಲ. ಇಲ್ಲಿ ನಿರುದ್ಯೋಗಿಯಾಗಿಬೇಕು. ಇಲ್ಲಿ ಯಾವುದೇ ಕೆಲಸವಿಲ್ಲ. ನೀವು ಹೋಗಿ ಯಾರ ಬಳಿಯಾದರೂ ಕೆಲಸ ಕೇಳಿ, ಅವರು ಇಲ್ಲ ಎನ್ನುತ್ತಾರೆ ಎಂದು ಅಬಿದ್ ಹೇಳಿದ್ದಾರೆ.

ಒಟ್ಟಿನಲ್ಲಿ ಜನರ ಜೀವನ ಬಂಡಿ ಸಾಗಲು ಅವರ ಹೆಚ್ಚುತ್ತಿರುವ ಕೊರೊನಾ ವೈರಸ್ ಮಧ್ಯೆಯೂ ಕೆಲಸ ಹುಡುಕಿ ವಲಸೆ ಹೋಗಬೇಕಾದ ಪರಿಸ್ಥಿತಿ ಉದ್ಬವಿಸಿದೆ.


ಇದನ್ನೂ ಓದಿ: ಬಾಲಿವುಡ್ ಸೆಲೆಬ್ರಿಟಿಗಳೇ, ತಮಿಳುನಾಡಿನಲ್ಲಿ ಏನಾಯಿತು ಎಂದು ನೀವು ಕೇಳಿದ್ದೀರಾ ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...