Homeಮುಖಪುಟಹಸಿವಿಗಿಂತ ಕೊರೊನಾ ವೈರಸ್‌ ಉತ್ತಮ: ಕೆಲಸಕ್ಕೆ ಮರಳಿದ ಯುಪಿ ಕಾರ್ಮಿಕರು

ಹಸಿವಿಗಿಂತ ಕೊರೊನಾ ವೈರಸ್‌ ಉತ್ತಮ: ಕೆಲಸಕ್ಕೆ ಮರಳಿದ ಯುಪಿ ಕಾರ್ಮಿಕರು

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ಲಾಕ್‌ಡೌನ್‌ ಘೋಷಿಸಿ ನೂರು ದಿನಗಳಾಗುತ್ತಾ ಬರುತ್ತಿದೆ. ಸರ್ಕಾರಗಳು ಜನರ ಕಷ್ಟ ಕಡಿಮೆ ಮಾಡಲು ಏನೆಲ್ಲಾ ಪ್ಯಾಕೇಜ್‌ಗಳು ಘೋಷಿಸಿದರೂ ಜನರ ಕಷ್ಟ ಕಡಿಮೆಯಾಗಿಲ್ಲ. ಅದಕ್ಕೆ ನೇರ ಉದಾಹರಣೆಯೆಂದರೆ ಉತ್ತರ ಪ್ರದೇಶದ ಕಾರ್ಮಿಕರು “ಹಸಿವಿಗಿಂತ ಕೊರೊನಾ ವೈರಸ್‌ ಉತ್ತಮ” ಎಂದು ನಿರ್ಧರಿಸಿ ಕೆಲಸಕ್ಕೆ ಮರಳುತ್ತಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಲಾಕ್ ಡೌನ್ ಸಮಯದಲ್ಲಿ ಹಿಂದಿರುಗಿದ ಉತ್ತರ ಪ್ರದೇಶದ 30 ಲಕ್ಷಕ್ಕೂ ಹೆಚ್ಚಿನ ವಲಸೆ ಕಾರ್ಮಿಕರು ಮತ್ತೆ ಕೆಲಸಕ್ಕೆ ಹೋಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಹಲವು ನಗರಗಳ ಬಸ್‌ ನಿಲ್ದಾಣದಲ್ಲಿ ಕಾರ್ಮಿಕರು ಸಾಲುಗಟ್ಟಿ ನಿಂತಿದ್ದಾರೆ.

ಅನ್ಸಾರಿ ಎಂಬುವವರು ಮುಂಬೈನಲ್ಲಿ ಕಾರ್ಖಾನೆಯ ಕೆಲಸಗಾರರಾಗಿದ್ದು, ಅವರ ದೊಡ್ಡ ಟೈಲರಿಂಗ್ ಘಟಕವು ಇನ್ನೂ ಮುಚ್ಚಲ್ಪಟ್ಟಿದೆ. ಅವರು ಕೇವಲ ಒಂದು ತಿಂಗಳ ಹಿಂದೆ ಮನೆಗೆ ಮರಳಿದ್ದಾರೆ ಎಂದು ಹೇಳುತ್ತಾರೆ. “ಯುಪಿಯಲ್ಲಿ ಉದ್ಯೋಗವಿದ್ದರೆ, ನಾನು ಹಿಂತಿರುಗುವುದಿಲ್ಲ. ನನ್ನ ಕಂಪನಿ ಇನ್ನೂ ಪ್ರಾರಂಭವಾಗಿಲ್ಲ ಆದರೆ ನಾನು ಮಾಡಬಹುದಾದ ಯಾವುದೇ ಕೆಲಸವನ್ನು ಹುಡುಕಲು ಹಿಂದಿರುಗುತ್ತಿದ್ದೇನೆ. ಹಸಿವುಗಿಂತ ಕರೋನಾ ಉತ್ತಮವಾಗಿದೆ. ನನ್ನ ಮಕ್ಕಳು ಹಸಿದು ಸಾಯುವುದಕ್ಕಿಂತ ನಾನು ಕೊರೊನಾದಿಂದ ಸಾಯುವುದು ಉತ್ತಮ” ಎಂದು ಅನ್ಸಾರಿ ಬಸ್ ಹತ್ತುವ ಮೊದಲು ಹೇಳುತ್ತಾರೆ.

ಕೋಲ್ಕತ್ತ ಮೂಲದ ಸಂಸ್ಥೆಯೊಂದರಲ್ಲಿ ತಂತ್ರಜ್ಞರಾಗಿರುವ ಪ್ರಸಾದ್ ಅವರು ಹೋಳಿ ಪ್ರಯುಕ್ತ ಮನೆಗೆ ಬಂದಿದ್ದರು. ಆದರೆ ಲಾಕ್‌ಡೌನ್‌ ಘೋಷಣೆಯಾದ್ದರಿಂದ ಯುಪಿಯಲ್ಲಿ ಸಿಲುಕಿಕೊಂಡರು. ಅವರ ಸಂಸ್ಥೆಯು ಮತ್ತೆ ತೆರೆಯಲ್ಪಟ್ಟಿದೆ ಹಾಗಾಗಿ ವಾಪಸ್‌ ಕೆಲಸಕ್ಕೆ ಮರಳಿದ್ದೇನೆ ಎನ್ನುತ್ತಾರೆ. “ನನಗೆ ಕೆಲಸಕ್ಕೆ ಹೋಗಲು ಭಯವಾಗುತ್ತಿದೆ. ಆದರೆ ಇಲ್ಲಿಯೇ ಇರುವುದು ಅದಕ್ಕಿಂತಲೂ ಭಯವಾಗುತ್ತದೆ. ಏಕೆಂದರೆ ನಾನು ಏನು ತಿನ್ನಲ್ಲಿ? ನನ್ನ ಕುಟುಂಬವನ್ನು ಹೇಗೆ ಪೋಷಿಸಲಿ ಎಂದು ಪ್ರಶ್ನಿಸುತ್ತಾರೆ.

ದೂರದ ಮತ್ತು ಹಿಂದುಳಿದ ಪೂರ್ವ ಯುಪಿ ಜಿಲ್ಲೆಯಾದ ಸಿದ್ಧಾರ್ಥ್ ನಗರದಿಂದ ಗರಿಷ್ಠ ಸಂಖ್ಯೆಯ ವಲಸೆ ಕಾರ್ಮಿಕರು ಕೆಲಸಕ್ಕೆ ತೆರಳುತ್ತಿದ್ದಾರೆ. ಎಸಿ ರಿಪೇರಿ ತಂತ್ರಜ್ಞ ಮೊಹಮ್ಮದ್ ಅಬಿದ್, ತಾನು ಮುಂಬೈಗೆ ಹಿಂದಿರುಗುತ್ತಿದ್ದೇನೆ ಎಂದು ಹೇಳುತ್ತಾರೆ. ಏಕೆಂದರೆ ಸರ್ಕಾರದ ಯಾವುದೇ ಯೋಜನೆಗಳು ಮತ್ತು ಭರವಸೆಗಳು ಅವರನ್ನು ತಲುಪಿಲ್ಲ. “ಮುಂಬೈನಲ್ಲಿ ಉತ್ತಮ ಹಣ ಸಿಗುತ್ತದೆ ಆದರೆ ನನಗೆ ಇಲ್ಲಿ (ಉತ್ತರಪ್ರದೇಶದಲ್ಲಿ) ಬದುಕು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಸರ್ಕಾರಗಳು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದ್ದರೂ ಅವು ನಮ್ಮನ್ನು ತಲುಪುತ್ತಿಲ್ಲ. ಇಲ್ಲಿ ನಿರುದ್ಯೋಗಿಯಾಗಿಬೇಕು. ಇಲ್ಲಿ ಯಾವುದೇ ಕೆಲಸವಿಲ್ಲ. ನೀವು ಹೋಗಿ ಯಾರ ಬಳಿಯಾದರೂ ಕೆಲಸ ಕೇಳಿ, ಅವರು ಇಲ್ಲ ಎನ್ನುತ್ತಾರೆ ಎಂದು ಅಬಿದ್ ಹೇಳಿದ್ದಾರೆ.

ಒಟ್ಟಿನಲ್ಲಿ ಜನರ ಜೀವನ ಬಂಡಿ ಸಾಗಲು ಅವರ ಹೆಚ್ಚುತ್ತಿರುವ ಕೊರೊನಾ ವೈರಸ್ ಮಧ್ಯೆಯೂ ಕೆಲಸ ಹುಡುಕಿ ವಲಸೆ ಹೋಗಬೇಕಾದ ಪರಿಸ್ಥಿತಿ ಉದ್ಬವಿಸಿದೆ.


ಇದನ್ನೂ ಓದಿ: ಬಾಲಿವುಡ್ ಸೆಲೆಬ್ರಿಟಿಗಳೇ, ತಮಿಳುನಾಡಿನಲ್ಲಿ ಏನಾಯಿತು ಎಂದು ನೀವು ಕೇಳಿದ್ದೀರಾ ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...