Homeಮುಖಪುಟಹಸಿವಿಗಿಂತ ಕೊರೊನಾ ವೈರಸ್‌ ಉತ್ತಮ: ಕೆಲಸಕ್ಕೆ ಮರಳಿದ ಯುಪಿ ಕಾರ್ಮಿಕರು

ಹಸಿವಿಗಿಂತ ಕೊರೊನಾ ವೈರಸ್‌ ಉತ್ತಮ: ಕೆಲಸಕ್ಕೆ ಮರಳಿದ ಯುಪಿ ಕಾರ್ಮಿಕರು

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ಲಾಕ್‌ಡೌನ್‌ ಘೋಷಿಸಿ ನೂರು ದಿನಗಳಾಗುತ್ತಾ ಬರುತ್ತಿದೆ. ಸರ್ಕಾರಗಳು ಜನರ ಕಷ್ಟ ಕಡಿಮೆ ಮಾಡಲು ಏನೆಲ್ಲಾ ಪ್ಯಾಕೇಜ್‌ಗಳು ಘೋಷಿಸಿದರೂ ಜನರ ಕಷ್ಟ ಕಡಿಮೆಯಾಗಿಲ್ಲ. ಅದಕ್ಕೆ ನೇರ ಉದಾಹರಣೆಯೆಂದರೆ ಉತ್ತರ ಪ್ರದೇಶದ ಕಾರ್ಮಿಕರು “ಹಸಿವಿಗಿಂತ ಕೊರೊನಾ ವೈರಸ್‌ ಉತ್ತಮ” ಎಂದು ನಿರ್ಧರಿಸಿ ಕೆಲಸಕ್ಕೆ ಮರಳುತ್ತಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಲಾಕ್ ಡೌನ್ ಸಮಯದಲ್ಲಿ ಹಿಂದಿರುಗಿದ ಉತ್ತರ ಪ್ರದೇಶದ 30 ಲಕ್ಷಕ್ಕೂ ಹೆಚ್ಚಿನ ವಲಸೆ ಕಾರ್ಮಿಕರು ಮತ್ತೆ ಕೆಲಸಕ್ಕೆ ಹೋಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಹಲವು ನಗರಗಳ ಬಸ್‌ ನಿಲ್ದಾಣದಲ್ಲಿ ಕಾರ್ಮಿಕರು ಸಾಲುಗಟ್ಟಿ ನಿಂತಿದ್ದಾರೆ.

ಅನ್ಸಾರಿ ಎಂಬುವವರು ಮುಂಬೈನಲ್ಲಿ ಕಾರ್ಖಾನೆಯ ಕೆಲಸಗಾರರಾಗಿದ್ದು, ಅವರ ದೊಡ್ಡ ಟೈಲರಿಂಗ್ ಘಟಕವು ಇನ್ನೂ ಮುಚ್ಚಲ್ಪಟ್ಟಿದೆ. ಅವರು ಕೇವಲ ಒಂದು ತಿಂಗಳ ಹಿಂದೆ ಮನೆಗೆ ಮರಳಿದ್ದಾರೆ ಎಂದು ಹೇಳುತ್ತಾರೆ. “ಯುಪಿಯಲ್ಲಿ ಉದ್ಯೋಗವಿದ್ದರೆ, ನಾನು ಹಿಂತಿರುಗುವುದಿಲ್ಲ. ನನ್ನ ಕಂಪನಿ ಇನ್ನೂ ಪ್ರಾರಂಭವಾಗಿಲ್ಲ ಆದರೆ ನಾನು ಮಾಡಬಹುದಾದ ಯಾವುದೇ ಕೆಲಸವನ್ನು ಹುಡುಕಲು ಹಿಂದಿರುಗುತ್ತಿದ್ದೇನೆ. ಹಸಿವುಗಿಂತ ಕರೋನಾ ಉತ್ತಮವಾಗಿದೆ. ನನ್ನ ಮಕ್ಕಳು ಹಸಿದು ಸಾಯುವುದಕ್ಕಿಂತ ನಾನು ಕೊರೊನಾದಿಂದ ಸಾಯುವುದು ಉತ್ತಮ” ಎಂದು ಅನ್ಸಾರಿ ಬಸ್ ಹತ್ತುವ ಮೊದಲು ಹೇಳುತ್ತಾರೆ.

ಕೋಲ್ಕತ್ತ ಮೂಲದ ಸಂಸ್ಥೆಯೊಂದರಲ್ಲಿ ತಂತ್ರಜ್ಞರಾಗಿರುವ ಪ್ರಸಾದ್ ಅವರು ಹೋಳಿ ಪ್ರಯುಕ್ತ ಮನೆಗೆ ಬಂದಿದ್ದರು. ಆದರೆ ಲಾಕ್‌ಡೌನ್‌ ಘೋಷಣೆಯಾದ್ದರಿಂದ ಯುಪಿಯಲ್ಲಿ ಸಿಲುಕಿಕೊಂಡರು. ಅವರ ಸಂಸ್ಥೆಯು ಮತ್ತೆ ತೆರೆಯಲ್ಪಟ್ಟಿದೆ ಹಾಗಾಗಿ ವಾಪಸ್‌ ಕೆಲಸಕ್ಕೆ ಮರಳಿದ್ದೇನೆ ಎನ್ನುತ್ತಾರೆ. “ನನಗೆ ಕೆಲಸಕ್ಕೆ ಹೋಗಲು ಭಯವಾಗುತ್ತಿದೆ. ಆದರೆ ಇಲ್ಲಿಯೇ ಇರುವುದು ಅದಕ್ಕಿಂತಲೂ ಭಯವಾಗುತ್ತದೆ. ಏಕೆಂದರೆ ನಾನು ಏನು ತಿನ್ನಲ್ಲಿ? ನನ್ನ ಕುಟುಂಬವನ್ನು ಹೇಗೆ ಪೋಷಿಸಲಿ ಎಂದು ಪ್ರಶ್ನಿಸುತ್ತಾರೆ.

ದೂರದ ಮತ್ತು ಹಿಂದುಳಿದ ಪೂರ್ವ ಯುಪಿ ಜಿಲ್ಲೆಯಾದ ಸಿದ್ಧಾರ್ಥ್ ನಗರದಿಂದ ಗರಿಷ್ಠ ಸಂಖ್ಯೆಯ ವಲಸೆ ಕಾರ್ಮಿಕರು ಕೆಲಸಕ್ಕೆ ತೆರಳುತ್ತಿದ್ದಾರೆ. ಎಸಿ ರಿಪೇರಿ ತಂತ್ರಜ್ಞ ಮೊಹಮ್ಮದ್ ಅಬಿದ್, ತಾನು ಮುಂಬೈಗೆ ಹಿಂದಿರುಗುತ್ತಿದ್ದೇನೆ ಎಂದು ಹೇಳುತ್ತಾರೆ. ಏಕೆಂದರೆ ಸರ್ಕಾರದ ಯಾವುದೇ ಯೋಜನೆಗಳು ಮತ್ತು ಭರವಸೆಗಳು ಅವರನ್ನು ತಲುಪಿಲ್ಲ. “ಮುಂಬೈನಲ್ಲಿ ಉತ್ತಮ ಹಣ ಸಿಗುತ್ತದೆ ಆದರೆ ನನಗೆ ಇಲ್ಲಿ (ಉತ್ತರಪ್ರದೇಶದಲ್ಲಿ) ಬದುಕು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಸರ್ಕಾರಗಳು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದ್ದರೂ ಅವು ನಮ್ಮನ್ನು ತಲುಪುತ್ತಿಲ್ಲ. ಇಲ್ಲಿ ನಿರುದ್ಯೋಗಿಯಾಗಿಬೇಕು. ಇಲ್ಲಿ ಯಾವುದೇ ಕೆಲಸವಿಲ್ಲ. ನೀವು ಹೋಗಿ ಯಾರ ಬಳಿಯಾದರೂ ಕೆಲಸ ಕೇಳಿ, ಅವರು ಇಲ್ಲ ಎನ್ನುತ್ತಾರೆ ಎಂದು ಅಬಿದ್ ಹೇಳಿದ್ದಾರೆ.

ಒಟ್ಟಿನಲ್ಲಿ ಜನರ ಜೀವನ ಬಂಡಿ ಸಾಗಲು ಅವರ ಹೆಚ್ಚುತ್ತಿರುವ ಕೊರೊನಾ ವೈರಸ್ ಮಧ್ಯೆಯೂ ಕೆಲಸ ಹುಡುಕಿ ವಲಸೆ ಹೋಗಬೇಕಾದ ಪರಿಸ್ಥಿತಿ ಉದ್ಬವಿಸಿದೆ.


ಇದನ್ನೂ ಓದಿ: ಬಾಲಿವುಡ್ ಸೆಲೆಬ್ರಿಟಿಗಳೇ, ತಮಿಳುನಾಡಿನಲ್ಲಿ ಏನಾಯಿತು ಎಂದು ನೀವು ಕೇಳಿದ್ದೀರಾ ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...