Homeಮುಖಪುಟಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಹರಡುವಿಕೆ ಪ್ರಾರಂಭಿಸಿದೆ: ICMR

ಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಹರಡುವಿಕೆ ಪ್ರಾರಂಭಿಸಿದೆ: ICMR

- Advertisement -
- Advertisement -

ಯಾವುದೇ ವಿದೇಶಿ ಪ್ರಯಾಣದ ಇತಿಹಾಸ ಅಥವಾ ಕೊರೊನಾ ಸೋಂಕಿತರ ಸಂಪರ್ಕವಿಲ್ಲದೆಯೂ ಸಹ ಹೆಚ್ಚು ಹೆಚ್ಚು ಜನರು ಕೊರೊನ ವೈರಸ್‌ಗೆ ತುತ್ತಾಗುತ್ತಿದ್ದಾರೆ ಎಂಬುದು ಯಾದೃಚ್ಛಿಕ ಪರೀಕ್ಷೆಗಳಿಂದ (Random coronavirus tests) ದೃಢಪಟ್ಟಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ICMR) ಸಂಗ್ರಹಿಸಿದ ಮಾಹಿತಿಯು ಈ ಅಂಶವನ್ನು ಹೊರಹಾಕಿದ್ದು, ಜ್ವರ ಮತ್ತು ತೀವ್ರವಾದ ಉಸಿರಾಟದ ಕಾಯಿಲೆಗಳಿರುವ ರೋಗಿಗಳ ಮೇಲೆ ನಡೆಸಿದ ಯಾದೃಚ್ಛಿಕ ಕೊರೊನಾ ವೈರಸ್ ಪರೀಕ್ಷೆಗಳಿಂದ ಶೇಕಡಾ 38 ರಷ್ಟು ರೋಗಿಗಳಿಗೆ ಪ್ರಯಾಣದ ಇತಿಹಾಸವಿಲ್ಲದಿದ್ದರೂ ಸೋಂಕು ಹರಡಿದೆ ಎಂದು ತಿಳಿದುಬಂದಿದೆ.

ಎರಡು ವಾರಗಳ ಹಿಂದೆ ಕೊರೊನ ವೈರಸ್ ಸಮುದಾಯಿಕವಾಗಿ ಹರಡುತ್ತಿಲ್ಲ ಎಂದು ICMR ಪ್ರತಿಕ್ರಿಯಿಸಿತ್ತು. ಆದರೆ ICMR ತೀವ್ರ ಉಸಿರಾಟದ ಕಾಯಿಲೆಯ ವೈರಸ್ ಸಮುದಾಯಿಕವಾಗಿ ಹರಡುತ್ತಿದೆಯೇ ಎಂದು ತಿಳಿಯಲು ಯಾದೃಚ್ಛಿಕ ಪರೀಕ್ಷೆಗಳನ್ನು (Random coronavirus tests)  ನಡೆಸುತ್ತಿದೆ ನಂತರ ಅವರ ಡಾಟಾದಲ್ಲಿ ಮಹತ್ತರ ಬದಲಾವಣೆಗಳು ಕಂಡಿಬಂದಿವೆ.

ಇತ್ತೀಚಿಗಿನವರೆಗೆ ಭಾರತದ ಹೆಚ್ಚಿನ ರೋಗಿಗಳು ತಮ್ಮ ವಿದೇಶ ಪ್ರವಾಸದಿಂದ ಅಥವಾ ವಿದೇಶಕ್ಕೆ ಪ್ರಯಾಣಿಸಿದ ವ್ಯಕ್ತಿಯಿಂದ ಸೋಂಕು ತಗುಲಿಸಿಕೊಂಡಿದ್ದರು. ಇದರಿಂದಾಗಿ ಅವರನ್ನು ಪ್ರತ್ಯೇಕಗೊಳಿಸಿ ರೋಗಿಗಳ ಸಂಖ್ಯೆ ಶೂನ್ಯವಾಗುವಂತೆ ಮಾಡಬಹುದಾಗಿತ್ತು. ಆದರೆ ಈಗಿನ ಸ್ಥಿತಿಯನ್ನು 3 ನೇ ಹಂತ ಅಥವಾ ಸಮುದಾಯ ಹರಡುವಿಕೆ ಎಂದು ಕರೆಯಲಾಗುತ್ತದೆ.

SARI (Severe Acute Respiratory Illness) ತೀವ್ರ ಉಸಿರಾಟದ ಕಾಯಿಲೆ, ಮತ್ತು ಐಸಿಎಂಆರ್ ವೈರಸ್ನ ಯಾವುದೇ ಸಮುದಾಯ ಹರಡುವಿಕೆ ನಡೆಯುತ್ತಿದೆಯೇ ಎಂದು ಪರೀಕ್ಷಿಸಲು ಅವರ ಮೇಲೆ ಯಾದೃಚ್ಛಿಕ ಪರೀಕ್ಷೆಗಳನ್ನು ನಡೆಸುತ್ತಿದೆ.

ಆದರೆ ಯಾದೃಚಿಕ ಪರೀಕ್ಷೆಗಳ ಬದಲು ತೀವ್ರ ಉಸಿರಾಟದ ಕಾಯಿಲೆಯಿರುವ ಎಲ್ಲಾ ರೋಗಿಗಳನ್ನು ಪರೀಕ್ಷಿಸುವಂತಹ ನೀತಿಯನ್ನು ತಂದಾಗ ಮಾರ್ಚ್ 15 ಮತ್ತು ಮಾರ್ಚ್ 21 ರ ನಡುವೆ 106 ರೋಗಿಗಳಲ್ಲಿ ಇಬ್ಬರಲ್ಲಿ ವೈರಸ್ ಇರುವುದು ಕಂಡುಬಂದಿದೆ.

ಅದರ ನಂತರ ತುಂಬಾ ಬದಲಾವಣೆಗಳು ಆಗಿದೆ. ಮಾರ್ಚ್ 22 ಮತ್ತು ಮಾರ್ಚ್ 28 ರ ನಡುವೆ ಯಾದೃಚಿಕವಾಗಿ ಪರೀಕ್ಷಿಸಲ್ಪಟ್ಟ 2,877 ರೋಗಿಗಳಲ್ಲಿ 48 (ಶೇಕಡಾ 1.7) ರೋಗಿಗಳು ಕೊರೊನಾ ಪಾಸಿಟಿವ್ ಆಗಿದ್ದಾರೆ. ಮಾರ್ಚ್ 29 ಮತ್ತು ಏಪ್ರಿಲ್ 2 ರ ನಡುವೆ 2,069 ತೀವ್ರ ಉಸಿರಾಟದ ಕಾಯಿಲೆಯ ರೋಗಿಗಳಲ್ಲಿ 54 (ಶೇಕಡಾ 2.6) ರೋಗಿಗಳಿಗೆ ಕೊರೊನ ವೈರಸ್ ಇರುವುದು ಪತ್ತೆಯಾಗಿದೆ.

ಒಟ್ಟಾರೆಯಾಗಿ 5,911 ತೀವ್ರ ಉಸಿರಾಟದ ಕಾಯಿಲೆಯ ರೋಗಿಗಳಲ್ಲಿ 104 (ಶೇಕಡಾ 1.8) ರೋಗಿಗಳಿಗೆ ಕೊರೊನ ವೈರಸ್ ಇರುವುದು ಪತ್ತೆಯಾಗಿದೆ .

ಇದರಲ್ಲಿ ನಲವತ್ತು ರೋಗಿಗಳು ಯಾವುದೇ ಅಂತರರಾಷ್ಟ್ರೀಯ ಪ್ರಯಾಣ ಅಥವಾ ಪ್ರಯಾಣಿಸಿದವರ ಸಂಪರ್ಕವನ್ನು ಹೊಂದಿಲ್ಲ. ಭಾರತದ 15 ರಾಜ್ಯಗಳ 36 ಜಿಲ್ಲೆಗಳಿಂದ ಇಂತಹ ಪ್ರಕರಣಗಳು ವರದಿಯಾಗಿವೆ. ICMR ತನ್ನ ವರದಿಯಲ್ಲಿ ” ಕೊರೊನ ವೈರಸ್ ವಿರುದ್ದ ಚಟುವಟಿಕೆಗಳನ್ನು ಗುರಿಯಾಗಿಸಲು ಈ ಜಿಲ್ಲೆಗಳಿಗೆ ಆದ್ಯತೆ ನೀಡಬೇಕಾಗಿದೆ” ಎಂದು ಹೇಳಿದೆ.

ಇದರಲ್ಲಿ ಪುರುಷರಲ್ಲೇ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಕಂಡುಬಂದಿದೆ. ಅದರಲ್ಲೂ 40 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳಲ್ಲಿ 85 ಪ್ರಕರಣಗಳು (ಶೇಕಡಾ 83.3) ಪುರುಷರಾಗಿದ್ದಾರೆ. ಎಂಭತ್ತಮೂರು ರೋಗಿಗಳು (ಶೇಕಡಾ 81.4) 40 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...