Homeಮುಖಪುಟಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಹರಡುವಿಕೆ ಪ್ರಾರಂಭಿಸಿದೆ: ICMR

ಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಹರಡುವಿಕೆ ಪ್ರಾರಂಭಿಸಿದೆ: ICMR

- Advertisement -
- Advertisement -

ಯಾವುದೇ ವಿದೇಶಿ ಪ್ರಯಾಣದ ಇತಿಹಾಸ ಅಥವಾ ಕೊರೊನಾ ಸೋಂಕಿತರ ಸಂಪರ್ಕವಿಲ್ಲದೆಯೂ ಸಹ ಹೆಚ್ಚು ಹೆಚ್ಚು ಜನರು ಕೊರೊನ ವೈರಸ್‌ಗೆ ತುತ್ತಾಗುತ್ತಿದ್ದಾರೆ ಎಂಬುದು ಯಾದೃಚ್ಛಿಕ ಪರೀಕ್ಷೆಗಳಿಂದ (Random coronavirus tests) ದೃಢಪಟ್ಟಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ICMR) ಸಂಗ್ರಹಿಸಿದ ಮಾಹಿತಿಯು ಈ ಅಂಶವನ್ನು ಹೊರಹಾಕಿದ್ದು, ಜ್ವರ ಮತ್ತು ತೀವ್ರವಾದ ಉಸಿರಾಟದ ಕಾಯಿಲೆಗಳಿರುವ ರೋಗಿಗಳ ಮೇಲೆ ನಡೆಸಿದ ಯಾದೃಚ್ಛಿಕ ಕೊರೊನಾ ವೈರಸ್ ಪರೀಕ್ಷೆಗಳಿಂದ ಶೇಕಡಾ 38 ರಷ್ಟು ರೋಗಿಗಳಿಗೆ ಪ್ರಯಾಣದ ಇತಿಹಾಸವಿಲ್ಲದಿದ್ದರೂ ಸೋಂಕು ಹರಡಿದೆ ಎಂದು ತಿಳಿದುಬಂದಿದೆ.

ಎರಡು ವಾರಗಳ ಹಿಂದೆ ಕೊರೊನ ವೈರಸ್ ಸಮುದಾಯಿಕವಾಗಿ ಹರಡುತ್ತಿಲ್ಲ ಎಂದು ICMR ಪ್ರತಿಕ್ರಿಯಿಸಿತ್ತು. ಆದರೆ ICMR ತೀವ್ರ ಉಸಿರಾಟದ ಕಾಯಿಲೆಯ ವೈರಸ್ ಸಮುದಾಯಿಕವಾಗಿ ಹರಡುತ್ತಿದೆಯೇ ಎಂದು ತಿಳಿಯಲು ಯಾದೃಚ್ಛಿಕ ಪರೀಕ್ಷೆಗಳನ್ನು (Random coronavirus tests)  ನಡೆಸುತ್ತಿದೆ ನಂತರ ಅವರ ಡಾಟಾದಲ್ಲಿ ಮಹತ್ತರ ಬದಲಾವಣೆಗಳು ಕಂಡಿಬಂದಿವೆ.

ಇತ್ತೀಚಿಗಿನವರೆಗೆ ಭಾರತದ ಹೆಚ್ಚಿನ ರೋಗಿಗಳು ತಮ್ಮ ವಿದೇಶ ಪ್ರವಾಸದಿಂದ ಅಥವಾ ವಿದೇಶಕ್ಕೆ ಪ್ರಯಾಣಿಸಿದ ವ್ಯಕ್ತಿಯಿಂದ ಸೋಂಕು ತಗುಲಿಸಿಕೊಂಡಿದ್ದರು. ಇದರಿಂದಾಗಿ ಅವರನ್ನು ಪ್ರತ್ಯೇಕಗೊಳಿಸಿ ರೋಗಿಗಳ ಸಂಖ್ಯೆ ಶೂನ್ಯವಾಗುವಂತೆ ಮಾಡಬಹುದಾಗಿತ್ತು. ಆದರೆ ಈಗಿನ ಸ್ಥಿತಿಯನ್ನು 3 ನೇ ಹಂತ ಅಥವಾ ಸಮುದಾಯ ಹರಡುವಿಕೆ ಎಂದು ಕರೆಯಲಾಗುತ್ತದೆ.

SARI (Severe Acute Respiratory Illness) ತೀವ್ರ ಉಸಿರಾಟದ ಕಾಯಿಲೆ, ಮತ್ತು ಐಸಿಎಂಆರ್ ವೈರಸ್ನ ಯಾವುದೇ ಸಮುದಾಯ ಹರಡುವಿಕೆ ನಡೆಯುತ್ತಿದೆಯೇ ಎಂದು ಪರೀಕ್ಷಿಸಲು ಅವರ ಮೇಲೆ ಯಾದೃಚ್ಛಿಕ ಪರೀಕ್ಷೆಗಳನ್ನು ನಡೆಸುತ್ತಿದೆ.

ಆದರೆ ಯಾದೃಚಿಕ ಪರೀಕ್ಷೆಗಳ ಬದಲು ತೀವ್ರ ಉಸಿರಾಟದ ಕಾಯಿಲೆಯಿರುವ ಎಲ್ಲಾ ರೋಗಿಗಳನ್ನು ಪರೀಕ್ಷಿಸುವಂತಹ ನೀತಿಯನ್ನು ತಂದಾಗ ಮಾರ್ಚ್ 15 ಮತ್ತು ಮಾರ್ಚ್ 21 ರ ನಡುವೆ 106 ರೋಗಿಗಳಲ್ಲಿ ಇಬ್ಬರಲ್ಲಿ ವೈರಸ್ ಇರುವುದು ಕಂಡುಬಂದಿದೆ.

ಅದರ ನಂತರ ತುಂಬಾ ಬದಲಾವಣೆಗಳು ಆಗಿದೆ. ಮಾರ್ಚ್ 22 ಮತ್ತು ಮಾರ್ಚ್ 28 ರ ನಡುವೆ ಯಾದೃಚಿಕವಾಗಿ ಪರೀಕ್ಷಿಸಲ್ಪಟ್ಟ 2,877 ರೋಗಿಗಳಲ್ಲಿ 48 (ಶೇಕಡಾ 1.7) ರೋಗಿಗಳು ಕೊರೊನಾ ಪಾಸಿಟಿವ್ ಆಗಿದ್ದಾರೆ. ಮಾರ್ಚ್ 29 ಮತ್ತು ಏಪ್ರಿಲ್ 2 ರ ನಡುವೆ 2,069 ತೀವ್ರ ಉಸಿರಾಟದ ಕಾಯಿಲೆಯ ರೋಗಿಗಳಲ್ಲಿ 54 (ಶೇಕಡಾ 2.6) ರೋಗಿಗಳಿಗೆ ಕೊರೊನ ವೈರಸ್ ಇರುವುದು ಪತ್ತೆಯಾಗಿದೆ.

ಒಟ್ಟಾರೆಯಾಗಿ 5,911 ತೀವ್ರ ಉಸಿರಾಟದ ಕಾಯಿಲೆಯ ರೋಗಿಗಳಲ್ಲಿ 104 (ಶೇಕಡಾ 1.8) ರೋಗಿಗಳಿಗೆ ಕೊರೊನ ವೈರಸ್ ಇರುವುದು ಪತ್ತೆಯಾಗಿದೆ .

ಇದರಲ್ಲಿ ನಲವತ್ತು ರೋಗಿಗಳು ಯಾವುದೇ ಅಂತರರಾಷ್ಟ್ರೀಯ ಪ್ರಯಾಣ ಅಥವಾ ಪ್ರಯಾಣಿಸಿದವರ ಸಂಪರ್ಕವನ್ನು ಹೊಂದಿಲ್ಲ. ಭಾರತದ 15 ರಾಜ್ಯಗಳ 36 ಜಿಲ್ಲೆಗಳಿಂದ ಇಂತಹ ಪ್ರಕರಣಗಳು ವರದಿಯಾಗಿವೆ. ICMR ತನ್ನ ವರದಿಯಲ್ಲಿ ” ಕೊರೊನ ವೈರಸ್ ವಿರುದ್ದ ಚಟುವಟಿಕೆಗಳನ್ನು ಗುರಿಯಾಗಿಸಲು ಈ ಜಿಲ್ಲೆಗಳಿಗೆ ಆದ್ಯತೆ ನೀಡಬೇಕಾಗಿದೆ” ಎಂದು ಹೇಳಿದೆ.

ಇದರಲ್ಲಿ ಪುರುಷರಲ್ಲೇ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಕಂಡುಬಂದಿದೆ. ಅದರಲ್ಲೂ 40 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳಲ್ಲಿ 85 ಪ್ರಕರಣಗಳು (ಶೇಕಡಾ 83.3) ಪುರುಷರಾಗಿದ್ದಾರೆ. ಎಂಭತ್ತಮೂರು ರೋಗಿಗಳು (ಶೇಕಡಾ 81.4) 40 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...