Homeಮುಖಪುಟಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಹರಡುವಿಕೆ ಪ್ರಾರಂಭಿಸಿದೆ: ICMR

ಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಹರಡುವಿಕೆ ಪ್ರಾರಂಭಿಸಿದೆ: ICMR

- Advertisement -
- Advertisement -

ಯಾವುದೇ ವಿದೇಶಿ ಪ್ರಯಾಣದ ಇತಿಹಾಸ ಅಥವಾ ಕೊರೊನಾ ಸೋಂಕಿತರ ಸಂಪರ್ಕವಿಲ್ಲದೆಯೂ ಸಹ ಹೆಚ್ಚು ಹೆಚ್ಚು ಜನರು ಕೊರೊನ ವೈರಸ್‌ಗೆ ತುತ್ತಾಗುತ್ತಿದ್ದಾರೆ ಎಂಬುದು ಯಾದೃಚ್ಛಿಕ ಪರೀಕ್ಷೆಗಳಿಂದ (Random coronavirus tests) ದೃಢಪಟ್ಟಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ICMR) ಸಂಗ್ರಹಿಸಿದ ಮಾಹಿತಿಯು ಈ ಅಂಶವನ್ನು ಹೊರಹಾಕಿದ್ದು, ಜ್ವರ ಮತ್ತು ತೀವ್ರವಾದ ಉಸಿರಾಟದ ಕಾಯಿಲೆಗಳಿರುವ ರೋಗಿಗಳ ಮೇಲೆ ನಡೆಸಿದ ಯಾದೃಚ್ಛಿಕ ಕೊರೊನಾ ವೈರಸ್ ಪರೀಕ್ಷೆಗಳಿಂದ ಶೇಕಡಾ 38 ರಷ್ಟು ರೋಗಿಗಳಿಗೆ ಪ್ರಯಾಣದ ಇತಿಹಾಸವಿಲ್ಲದಿದ್ದರೂ ಸೋಂಕು ಹರಡಿದೆ ಎಂದು ತಿಳಿದುಬಂದಿದೆ.

ಎರಡು ವಾರಗಳ ಹಿಂದೆ ಕೊರೊನ ವೈರಸ್ ಸಮುದಾಯಿಕವಾಗಿ ಹರಡುತ್ತಿಲ್ಲ ಎಂದು ICMR ಪ್ರತಿಕ್ರಿಯಿಸಿತ್ತು. ಆದರೆ ICMR ತೀವ್ರ ಉಸಿರಾಟದ ಕಾಯಿಲೆಯ ವೈರಸ್ ಸಮುದಾಯಿಕವಾಗಿ ಹರಡುತ್ತಿದೆಯೇ ಎಂದು ತಿಳಿಯಲು ಯಾದೃಚ್ಛಿಕ ಪರೀಕ್ಷೆಗಳನ್ನು (Random coronavirus tests)  ನಡೆಸುತ್ತಿದೆ ನಂತರ ಅವರ ಡಾಟಾದಲ್ಲಿ ಮಹತ್ತರ ಬದಲಾವಣೆಗಳು ಕಂಡಿಬಂದಿವೆ.

ಇತ್ತೀಚಿಗಿನವರೆಗೆ ಭಾರತದ ಹೆಚ್ಚಿನ ರೋಗಿಗಳು ತಮ್ಮ ವಿದೇಶ ಪ್ರವಾಸದಿಂದ ಅಥವಾ ವಿದೇಶಕ್ಕೆ ಪ್ರಯಾಣಿಸಿದ ವ್ಯಕ್ತಿಯಿಂದ ಸೋಂಕು ತಗುಲಿಸಿಕೊಂಡಿದ್ದರು. ಇದರಿಂದಾಗಿ ಅವರನ್ನು ಪ್ರತ್ಯೇಕಗೊಳಿಸಿ ರೋಗಿಗಳ ಸಂಖ್ಯೆ ಶೂನ್ಯವಾಗುವಂತೆ ಮಾಡಬಹುದಾಗಿತ್ತು. ಆದರೆ ಈಗಿನ ಸ್ಥಿತಿಯನ್ನು 3 ನೇ ಹಂತ ಅಥವಾ ಸಮುದಾಯ ಹರಡುವಿಕೆ ಎಂದು ಕರೆಯಲಾಗುತ್ತದೆ.

SARI (Severe Acute Respiratory Illness) ತೀವ್ರ ಉಸಿರಾಟದ ಕಾಯಿಲೆ, ಮತ್ತು ಐಸಿಎಂಆರ್ ವೈರಸ್ನ ಯಾವುದೇ ಸಮುದಾಯ ಹರಡುವಿಕೆ ನಡೆಯುತ್ತಿದೆಯೇ ಎಂದು ಪರೀಕ್ಷಿಸಲು ಅವರ ಮೇಲೆ ಯಾದೃಚ್ಛಿಕ ಪರೀಕ್ಷೆಗಳನ್ನು ನಡೆಸುತ್ತಿದೆ.

ಆದರೆ ಯಾದೃಚಿಕ ಪರೀಕ್ಷೆಗಳ ಬದಲು ತೀವ್ರ ಉಸಿರಾಟದ ಕಾಯಿಲೆಯಿರುವ ಎಲ್ಲಾ ರೋಗಿಗಳನ್ನು ಪರೀಕ್ಷಿಸುವಂತಹ ನೀತಿಯನ್ನು ತಂದಾಗ ಮಾರ್ಚ್ 15 ಮತ್ತು ಮಾರ್ಚ್ 21 ರ ನಡುವೆ 106 ರೋಗಿಗಳಲ್ಲಿ ಇಬ್ಬರಲ್ಲಿ ವೈರಸ್ ಇರುವುದು ಕಂಡುಬಂದಿದೆ.

ಅದರ ನಂತರ ತುಂಬಾ ಬದಲಾವಣೆಗಳು ಆಗಿದೆ. ಮಾರ್ಚ್ 22 ಮತ್ತು ಮಾರ್ಚ್ 28 ರ ನಡುವೆ ಯಾದೃಚಿಕವಾಗಿ ಪರೀಕ್ಷಿಸಲ್ಪಟ್ಟ 2,877 ರೋಗಿಗಳಲ್ಲಿ 48 (ಶೇಕಡಾ 1.7) ರೋಗಿಗಳು ಕೊರೊನಾ ಪಾಸಿಟಿವ್ ಆಗಿದ್ದಾರೆ. ಮಾರ್ಚ್ 29 ಮತ್ತು ಏಪ್ರಿಲ್ 2 ರ ನಡುವೆ 2,069 ತೀವ್ರ ಉಸಿರಾಟದ ಕಾಯಿಲೆಯ ರೋಗಿಗಳಲ್ಲಿ 54 (ಶೇಕಡಾ 2.6) ರೋಗಿಗಳಿಗೆ ಕೊರೊನ ವೈರಸ್ ಇರುವುದು ಪತ್ತೆಯಾಗಿದೆ.

ಒಟ್ಟಾರೆಯಾಗಿ 5,911 ತೀವ್ರ ಉಸಿರಾಟದ ಕಾಯಿಲೆಯ ರೋಗಿಗಳಲ್ಲಿ 104 (ಶೇಕಡಾ 1.8) ರೋಗಿಗಳಿಗೆ ಕೊರೊನ ವೈರಸ್ ಇರುವುದು ಪತ್ತೆಯಾಗಿದೆ .

ಇದರಲ್ಲಿ ನಲವತ್ತು ರೋಗಿಗಳು ಯಾವುದೇ ಅಂತರರಾಷ್ಟ್ರೀಯ ಪ್ರಯಾಣ ಅಥವಾ ಪ್ರಯಾಣಿಸಿದವರ ಸಂಪರ್ಕವನ್ನು ಹೊಂದಿಲ್ಲ. ಭಾರತದ 15 ರಾಜ್ಯಗಳ 36 ಜಿಲ್ಲೆಗಳಿಂದ ಇಂತಹ ಪ್ರಕರಣಗಳು ವರದಿಯಾಗಿವೆ. ICMR ತನ್ನ ವರದಿಯಲ್ಲಿ ” ಕೊರೊನ ವೈರಸ್ ವಿರುದ್ದ ಚಟುವಟಿಕೆಗಳನ್ನು ಗುರಿಯಾಗಿಸಲು ಈ ಜಿಲ್ಲೆಗಳಿಗೆ ಆದ್ಯತೆ ನೀಡಬೇಕಾಗಿದೆ” ಎಂದು ಹೇಳಿದೆ.

ಇದರಲ್ಲಿ ಪುರುಷರಲ್ಲೇ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಕಂಡುಬಂದಿದೆ. ಅದರಲ್ಲೂ 40 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳಲ್ಲಿ 85 ಪ್ರಕರಣಗಳು (ಶೇಕಡಾ 83.3) ಪುರುಷರಾಗಿದ್ದಾರೆ. ಎಂಭತ್ತಮೂರು ರೋಗಿಗಳು (ಶೇಕಡಾ 81.4) 40 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...