Homeಮುಖಪುಟಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಹರಡುವಿಕೆ ಪ್ರಾರಂಭಿಸಿದೆ: ICMR

ಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಹರಡುವಿಕೆ ಪ್ರಾರಂಭಿಸಿದೆ: ICMR

- Advertisement -
- Advertisement -

ಯಾವುದೇ ವಿದೇಶಿ ಪ್ರಯಾಣದ ಇತಿಹಾಸ ಅಥವಾ ಕೊರೊನಾ ಸೋಂಕಿತರ ಸಂಪರ್ಕವಿಲ್ಲದೆಯೂ ಸಹ ಹೆಚ್ಚು ಹೆಚ್ಚು ಜನರು ಕೊರೊನ ವೈರಸ್‌ಗೆ ತುತ್ತಾಗುತ್ತಿದ್ದಾರೆ ಎಂಬುದು ಯಾದೃಚ್ಛಿಕ ಪರೀಕ್ಷೆಗಳಿಂದ (Random coronavirus tests) ದೃಢಪಟ್ಟಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ICMR) ಸಂಗ್ರಹಿಸಿದ ಮಾಹಿತಿಯು ಈ ಅಂಶವನ್ನು ಹೊರಹಾಕಿದ್ದು, ಜ್ವರ ಮತ್ತು ತೀವ್ರವಾದ ಉಸಿರಾಟದ ಕಾಯಿಲೆಗಳಿರುವ ರೋಗಿಗಳ ಮೇಲೆ ನಡೆಸಿದ ಯಾದೃಚ್ಛಿಕ ಕೊರೊನಾ ವೈರಸ್ ಪರೀಕ್ಷೆಗಳಿಂದ ಶೇಕಡಾ 38 ರಷ್ಟು ರೋಗಿಗಳಿಗೆ ಪ್ರಯಾಣದ ಇತಿಹಾಸವಿಲ್ಲದಿದ್ದರೂ ಸೋಂಕು ಹರಡಿದೆ ಎಂದು ತಿಳಿದುಬಂದಿದೆ.

ಎರಡು ವಾರಗಳ ಹಿಂದೆ ಕೊರೊನ ವೈರಸ್ ಸಮುದಾಯಿಕವಾಗಿ ಹರಡುತ್ತಿಲ್ಲ ಎಂದು ICMR ಪ್ರತಿಕ್ರಿಯಿಸಿತ್ತು. ಆದರೆ ICMR ತೀವ್ರ ಉಸಿರಾಟದ ಕಾಯಿಲೆಯ ವೈರಸ್ ಸಮುದಾಯಿಕವಾಗಿ ಹರಡುತ್ತಿದೆಯೇ ಎಂದು ತಿಳಿಯಲು ಯಾದೃಚ್ಛಿಕ ಪರೀಕ್ಷೆಗಳನ್ನು (Random coronavirus tests)  ನಡೆಸುತ್ತಿದೆ ನಂತರ ಅವರ ಡಾಟಾದಲ್ಲಿ ಮಹತ್ತರ ಬದಲಾವಣೆಗಳು ಕಂಡಿಬಂದಿವೆ.

ಇತ್ತೀಚಿಗಿನವರೆಗೆ ಭಾರತದ ಹೆಚ್ಚಿನ ರೋಗಿಗಳು ತಮ್ಮ ವಿದೇಶ ಪ್ರವಾಸದಿಂದ ಅಥವಾ ವಿದೇಶಕ್ಕೆ ಪ್ರಯಾಣಿಸಿದ ವ್ಯಕ್ತಿಯಿಂದ ಸೋಂಕು ತಗುಲಿಸಿಕೊಂಡಿದ್ದರು. ಇದರಿಂದಾಗಿ ಅವರನ್ನು ಪ್ರತ್ಯೇಕಗೊಳಿಸಿ ರೋಗಿಗಳ ಸಂಖ್ಯೆ ಶೂನ್ಯವಾಗುವಂತೆ ಮಾಡಬಹುದಾಗಿತ್ತು. ಆದರೆ ಈಗಿನ ಸ್ಥಿತಿಯನ್ನು 3 ನೇ ಹಂತ ಅಥವಾ ಸಮುದಾಯ ಹರಡುವಿಕೆ ಎಂದು ಕರೆಯಲಾಗುತ್ತದೆ.

SARI (Severe Acute Respiratory Illness) ತೀವ್ರ ಉಸಿರಾಟದ ಕಾಯಿಲೆ, ಮತ್ತು ಐಸಿಎಂಆರ್ ವೈರಸ್ನ ಯಾವುದೇ ಸಮುದಾಯ ಹರಡುವಿಕೆ ನಡೆಯುತ್ತಿದೆಯೇ ಎಂದು ಪರೀಕ್ಷಿಸಲು ಅವರ ಮೇಲೆ ಯಾದೃಚ್ಛಿಕ ಪರೀಕ್ಷೆಗಳನ್ನು ನಡೆಸುತ್ತಿದೆ.

ಆದರೆ ಯಾದೃಚಿಕ ಪರೀಕ್ಷೆಗಳ ಬದಲು ತೀವ್ರ ಉಸಿರಾಟದ ಕಾಯಿಲೆಯಿರುವ ಎಲ್ಲಾ ರೋಗಿಗಳನ್ನು ಪರೀಕ್ಷಿಸುವಂತಹ ನೀತಿಯನ್ನು ತಂದಾಗ ಮಾರ್ಚ್ 15 ಮತ್ತು ಮಾರ್ಚ್ 21 ರ ನಡುವೆ 106 ರೋಗಿಗಳಲ್ಲಿ ಇಬ್ಬರಲ್ಲಿ ವೈರಸ್ ಇರುವುದು ಕಂಡುಬಂದಿದೆ.

ಅದರ ನಂತರ ತುಂಬಾ ಬದಲಾವಣೆಗಳು ಆಗಿದೆ. ಮಾರ್ಚ್ 22 ಮತ್ತು ಮಾರ್ಚ್ 28 ರ ನಡುವೆ ಯಾದೃಚಿಕವಾಗಿ ಪರೀಕ್ಷಿಸಲ್ಪಟ್ಟ 2,877 ರೋಗಿಗಳಲ್ಲಿ 48 (ಶೇಕಡಾ 1.7) ರೋಗಿಗಳು ಕೊರೊನಾ ಪಾಸಿಟಿವ್ ಆಗಿದ್ದಾರೆ. ಮಾರ್ಚ್ 29 ಮತ್ತು ಏಪ್ರಿಲ್ 2 ರ ನಡುವೆ 2,069 ತೀವ್ರ ಉಸಿರಾಟದ ಕಾಯಿಲೆಯ ರೋಗಿಗಳಲ್ಲಿ 54 (ಶೇಕಡಾ 2.6) ರೋಗಿಗಳಿಗೆ ಕೊರೊನ ವೈರಸ್ ಇರುವುದು ಪತ್ತೆಯಾಗಿದೆ.

ಒಟ್ಟಾರೆಯಾಗಿ 5,911 ತೀವ್ರ ಉಸಿರಾಟದ ಕಾಯಿಲೆಯ ರೋಗಿಗಳಲ್ಲಿ 104 (ಶೇಕಡಾ 1.8) ರೋಗಿಗಳಿಗೆ ಕೊರೊನ ವೈರಸ್ ಇರುವುದು ಪತ್ತೆಯಾಗಿದೆ .

ಇದರಲ್ಲಿ ನಲವತ್ತು ರೋಗಿಗಳು ಯಾವುದೇ ಅಂತರರಾಷ್ಟ್ರೀಯ ಪ್ರಯಾಣ ಅಥವಾ ಪ್ರಯಾಣಿಸಿದವರ ಸಂಪರ್ಕವನ್ನು ಹೊಂದಿಲ್ಲ. ಭಾರತದ 15 ರಾಜ್ಯಗಳ 36 ಜಿಲ್ಲೆಗಳಿಂದ ಇಂತಹ ಪ್ರಕರಣಗಳು ವರದಿಯಾಗಿವೆ. ICMR ತನ್ನ ವರದಿಯಲ್ಲಿ ” ಕೊರೊನ ವೈರಸ್ ವಿರುದ್ದ ಚಟುವಟಿಕೆಗಳನ್ನು ಗುರಿಯಾಗಿಸಲು ಈ ಜಿಲ್ಲೆಗಳಿಗೆ ಆದ್ಯತೆ ನೀಡಬೇಕಾಗಿದೆ” ಎಂದು ಹೇಳಿದೆ.

ಇದರಲ್ಲಿ ಪುರುಷರಲ್ಲೇ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಕಂಡುಬಂದಿದೆ. ಅದರಲ್ಲೂ 40 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳಲ್ಲಿ 85 ಪ್ರಕರಣಗಳು (ಶೇಕಡಾ 83.3) ಪುರುಷರಾಗಿದ್ದಾರೆ. ಎಂಭತ್ತಮೂರು ರೋಗಿಗಳು (ಶೇಕಡಾ 81.4) 40 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...