Homeಮುಖಪುಟಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಹರಡುವಿಕೆ ಪ್ರಾರಂಭಿಸಿದೆ: ICMR

ಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಹರಡುವಿಕೆ ಪ್ರಾರಂಭಿಸಿದೆ: ICMR

- Advertisement -
- Advertisement -

ಯಾವುದೇ ವಿದೇಶಿ ಪ್ರಯಾಣದ ಇತಿಹಾಸ ಅಥವಾ ಕೊರೊನಾ ಸೋಂಕಿತರ ಸಂಪರ್ಕವಿಲ್ಲದೆಯೂ ಸಹ ಹೆಚ್ಚು ಹೆಚ್ಚು ಜನರು ಕೊರೊನ ವೈರಸ್‌ಗೆ ತುತ್ತಾಗುತ್ತಿದ್ದಾರೆ ಎಂಬುದು ಯಾದೃಚ್ಛಿಕ ಪರೀಕ್ಷೆಗಳಿಂದ (Random coronavirus tests) ದೃಢಪಟ್ಟಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ICMR) ಸಂಗ್ರಹಿಸಿದ ಮಾಹಿತಿಯು ಈ ಅಂಶವನ್ನು ಹೊರಹಾಕಿದ್ದು, ಜ್ವರ ಮತ್ತು ತೀವ್ರವಾದ ಉಸಿರಾಟದ ಕಾಯಿಲೆಗಳಿರುವ ರೋಗಿಗಳ ಮೇಲೆ ನಡೆಸಿದ ಯಾದೃಚ್ಛಿಕ ಕೊರೊನಾ ವೈರಸ್ ಪರೀಕ್ಷೆಗಳಿಂದ ಶೇಕಡಾ 38 ರಷ್ಟು ರೋಗಿಗಳಿಗೆ ಪ್ರಯಾಣದ ಇತಿಹಾಸವಿಲ್ಲದಿದ್ದರೂ ಸೋಂಕು ಹರಡಿದೆ ಎಂದು ತಿಳಿದುಬಂದಿದೆ.

ಎರಡು ವಾರಗಳ ಹಿಂದೆ ಕೊರೊನ ವೈರಸ್ ಸಮುದಾಯಿಕವಾಗಿ ಹರಡುತ್ತಿಲ್ಲ ಎಂದು ICMR ಪ್ರತಿಕ್ರಿಯಿಸಿತ್ತು. ಆದರೆ ICMR ತೀವ್ರ ಉಸಿರಾಟದ ಕಾಯಿಲೆಯ ವೈರಸ್ ಸಮುದಾಯಿಕವಾಗಿ ಹರಡುತ್ತಿದೆಯೇ ಎಂದು ತಿಳಿಯಲು ಯಾದೃಚ್ಛಿಕ ಪರೀಕ್ಷೆಗಳನ್ನು (Random coronavirus tests)  ನಡೆಸುತ್ತಿದೆ ನಂತರ ಅವರ ಡಾಟಾದಲ್ಲಿ ಮಹತ್ತರ ಬದಲಾವಣೆಗಳು ಕಂಡಿಬಂದಿವೆ.

ಇತ್ತೀಚಿಗಿನವರೆಗೆ ಭಾರತದ ಹೆಚ್ಚಿನ ರೋಗಿಗಳು ತಮ್ಮ ವಿದೇಶ ಪ್ರವಾಸದಿಂದ ಅಥವಾ ವಿದೇಶಕ್ಕೆ ಪ್ರಯಾಣಿಸಿದ ವ್ಯಕ್ತಿಯಿಂದ ಸೋಂಕು ತಗುಲಿಸಿಕೊಂಡಿದ್ದರು. ಇದರಿಂದಾಗಿ ಅವರನ್ನು ಪ್ರತ್ಯೇಕಗೊಳಿಸಿ ರೋಗಿಗಳ ಸಂಖ್ಯೆ ಶೂನ್ಯವಾಗುವಂತೆ ಮಾಡಬಹುದಾಗಿತ್ತು. ಆದರೆ ಈಗಿನ ಸ್ಥಿತಿಯನ್ನು 3 ನೇ ಹಂತ ಅಥವಾ ಸಮುದಾಯ ಹರಡುವಿಕೆ ಎಂದು ಕರೆಯಲಾಗುತ್ತದೆ.

SARI (Severe Acute Respiratory Illness) ತೀವ್ರ ಉಸಿರಾಟದ ಕಾಯಿಲೆ, ಮತ್ತು ಐಸಿಎಂಆರ್ ವೈರಸ್ನ ಯಾವುದೇ ಸಮುದಾಯ ಹರಡುವಿಕೆ ನಡೆಯುತ್ತಿದೆಯೇ ಎಂದು ಪರೀಕ್ಷಿಸಲು ಅವರ ಮೇಲೆ ಯಾದೃಚ್ಛಿಕ ಪರೀಕ್ಷೆಗಳನ್ನು ನಡೆಸುತ್ತಿದೆ.

ಆದರೆ ಯಾದೃಚಿಕ ಪರೀಕ್ಷೆಗಳ ಬದಲು ತೀವ್ರ ಉಸಿರಾಟದ ಕಾಯಿಲೆಯಿರುವ ಎಲ್ಲಾ ರೋಗಿಗಳನ್ನು ಪರೀಕ್ಷಿಸುವಂತಹ ನೀತಿಯನ್ನು ತಂದಾಗ ಮಾರ್ಚ್ 15 ಮತ್ತು ಮಾರ್ಚ್ 21 ರ ನಡುವೆ 106 ರೋಗಿಗಳಲ್ಲಿ ಇಬ್ಬರಲ್ಲಿ ವೈರಸ್ ಇರುವುದು ಕಂಡುಬಂದಿದೆ.

ಅದರ ನಂತರ ತುಂಬಾ ಬದಲಾವಣೆಗಳು ಆಗಿದೆ. ಮಾರ್ಚ್ 22 ಮತ್ತು ಮಾರ್ಚ್ 28 ರ ನಡುವೆ ಯಾದೃಚಿಕವಾಗಿ ಪರೀಕ್ಷಿಸಲ್ಪಟ್ಟ 2,877 ರೋಗಿಗಳಲ್ಲಿ 48 (ಶೇಕಡಾ 1.7) ರೋಗಿಗಳು ಕೊರೊನಾ ಪಾಸಿಟಿವ್ ಆಗಿದ್ದಾರೆ. ಮಾರ್ಚ್ 29 ಮತ್ತು ಏಪ್ರಿಲ್ 2 ರ ನಡುವೆ 2,069 ತೀವ್ರ ಉಸಿರಾಟದ ಕಾಯಿಲೆಯ ರೋಗಿಗಳಲ್ಲಿ 54 (ಶೇಕಡಾ 2.6) ರೋಗಿಗಳಿಗೆ ಕೊರೊನ ವೈರಸ್ ಇರುವುದು ಪತ್ತೆಯಾಗಿದೆ.

ಒಟ್ಟಾರೆಯಾಗಿ 5,911 ತೀವ್ರ ಉಸಿರಾಟದ ಕಾಯಿಲೆಯ ರೋಗಿಗಳಲ್ಲಿ 104 (ಶೇಕಡಾ 1.8) ರೋಗಿಗಳಿಗೆ ಕೊರೊನ ವೈರಸ್ ಇರುವುದು ಪತ್ತೆಯಾಗಿದೆ .

ಇದರಲ್ಲಿ ನಲವತ್ತು ರೋಗಿಗಳು ಯಾವುದೇ ಅಂತರರಾಷ್ಟ್ರೀಯ ಪ್ರಯಾಣ ಅಥವಾ ಪ್ರಯಾಣಿಸಿದವರ ಸಂಪರ್ಕವನ್ನು ಹೊಂದಿಲ್ಲ. ಭಾರತದ 15 ರಾಜ್ಯಗಳ 36 ಜಿಲ್ಲೆಗಳಿಂದ ಇಂತಹ ಪ್ರಕರಣಗಳು ವರದಿಯಾಗಿವೆ. ICMR ತನ್ನ ವರದಿಯಲ್ಲಿ ” ಕೊರೊನ ವೈರಸ್ ವಿರುದ್ದ ಚಟುವಟಿಕೆಗಳನ್ನು ಗುರಿಯಾಗಿಸಲು ಈ ಜಿಲ್ಲೆಗಳಿಗೆ ಆದ್ಯತೆ ನೀಡಬೇಕಾಗಿದೆ” ಎಂದು ಹೇಳಿದೆ.

ಇದರಲ್ಲಿ ಪುರುಷರಲ್ಲೇ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಕಂಡುಬಂದಿದೆ. ಅದರಲ್ಲೂ 40 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳಲ್ಲಿ 85 ಪ್ರಕರಣಗಳು (ಶೇಕಡಾ 83.3) ಪುರುಷರಾಗಿದ್ದಾರೆ. ಎಂಭತ್ತಮೂರು ರೋಗಿಗಳು (ಶೇಕಡಾ 81.4) 40 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...