Homeಮುಖಪುಟಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಹರಡುವಿಕೆ ಪ್ರಾರಂಭಿಸಿದೆ: ICMR

ಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಹರಡುವಿಕೆ ಪ್ರಾರಂಭಿಸಿದೆ: ICMR

- Advertisement -
- Advertisement -

ಯಾವುದೇ ವಿದೇಶಿ ಪ್ರಯಾಣದ ಇತಿಹಾಸ ಅಥವಾ ಕೊರೊನಾ ಸೋಂಕಿತರ ಸಂಪರ್ಕವಿಲ್ಲದೆಯೂ ಸಹ ಹೆಚ್ಚು ಹೆಚ್ಚು ಜನರು ಕೊರೊನ ವೈರಸ್‌ಗೆ ತುತ್ತಾಗುತ್ತಿದ್ದಾರೆ ಎಂಬುದು ಯಾದೃಚ್ಛಿಕ ಪರೀಕ್ಷೆಗಳಿಂದ (Random coronavirus tests) ದೃಢಪಟ್ಟಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ICMR) ಸಂಗ್ರಹಿಸಿದ ಮಾಹಿತಿಯು ಈ ಅಂಶವನ್ನು ಹೊರಹಾಕಿದ್ದು, ಜ್ವರ ಮತ್ತು ತೀವ್ರವಾದ ಉಸಿರಾಟದ ಕಾಯಿಲೆಗಳಿರುವ ರೋಗಿಗಳ ಮೇಲೆ ನಡೆಸಿದ ಯಾದೃಚ್ಛಿಕ ಕೊರೊನಾ ವೈರಸ್ ಪರೀಕ್ಷೆಗಳಿಂದ ಶೇಕಡಾ 38 ರಷ್ಟು ರೋಗಿಗಳಿಗೆ ಪ್ರಯಾಣದ ಇತಿಹಾಸವಿಲ್ಲದಿದ್ದರೂ ಸೋಂಕು ಹರಡಿದೆ ಎಂದು ತಿಳಿದುಬಂದಿದೆ.

ಎರಡು ವಾರಗಳ ಹಿಂದೆ ಕೊರೊನ ವೈರಸ್ ಸಮುದಾಯಿಕವಾಗಿ ಹರಡುತ್ತಿಲ್ಲ ಎಂದು ICMR ಪ್ರತಿಕ್ರಿಯಿಸಿತ್ತು. ಆದರೆ ICMR ತೀವ್ರ ಉಸಿರಾಟದ ಕಾಯಿಲೆಯ ವೈರಸ್ ಸಮುದಾಯಿಕವಾಗಿ ಹರಡುತ್ತಿದೆಯೇ ಎಂದು ತಿಳಿಯಲು ಯಾದೃಚ್ಛಿಕ ಪರೀಕ್ಷೆಗಳನ್ನು (Random coronavirus tests)  ನಡೆಸುತ್ತಿದೆ ನಂತರ ಅವರ ಡಾಟಾದಲ್ಲಿ ಮಹತ್ತರ ಬದಲಾವಣೆಗಳು ಕಂಡಿಬಂದಿವೆ.

ಇತ್ತೀಚಿಗಿನವರೆಗೆ ಭಾರತದ ಹೆಚ್ಚಿನ ರೋಗಿಗಳು ತಮ್ಮ ವಿದೇಶ ಪ್ರವಾಸದಿಂದ ಅಥವಾ ವಿದೇಶಕ್ಕೆ ಪ್ರಯಾಣಿಸಿದ ವ್ಯಕ್ತಿಯಿಂದ ಸೋಂಕು ತಗುಲಿಸಿಕೊಂಡಿದ್ದರು. ಇದರಿಂದಾಗಿ ಅವರನ್ನು ಪ್ರತ್ಯೇಕಗೊಳಿಸಿ ರೋಗಿಗಳ ಸಂಖ್ಯೆ ಶೂನ್ಯವಾಗುವಂತೆ ಮಾಡಬಹುದಾಗಿತ್ತು. ಆದರೆ ಈಗಿನ ಸ್ಥಿತಿಯನ್ನು 3 ನೇ ಹಂತ ಅಥವಾ ಸಮುದಾಯ ಹರಡುವಿಕೆ ಎಂದು ಕರೆಯಲಾಗುತ್ತದೆ.

SARI (Severe Acute Respiratory Illness) ತೀವ್ರ ಉಸಿರಾಟದ ಕಾಯಿಲೆ, ಮತ್ತು ಐಸಿಎಂಆರ್ ವೈರಸ್ನ ಯಾವುದೇ ಸಮುದಾಯ ಹರಡುವಿಕೆ ನಡೆಯುತ್ತಿದೆಯೇ ಎಂದು ಪರೀಕ್ಷಿಸಲು ಅವರ ಮೇಲೆ ಯಾದೃಚ್ಛಿಕ ಪರೀಕ್ಷೆಗಳನ್ನು ನಡೆಸುತ್ತಿದೆ.

ಆದರೆ ಯಾದೃಚಿಕ ಪರೀಕ್ಷೆಗಳ ಬದಲು ತೀವ್ರ ಉಸಿರಾಟದ ಕಾಯಿಲೆಯಿರುವ ಎಲ್ಲಾ ರೋಗಿಗಳನ್ನು ಪರೀಕ್ಷಿಸುವಂತಹ ನೀತಿಯನ್ನು ತಂದಾಗ ಮಾರ್ಚ್ 15 ಮತ್ತು ಮಾರ್ಚ್ 21 ರ ನಡುವೆ 106 ರೋಗಿಗಳಲ್ಲಿ ಇಬ್ಬರಲ್ಲಿ ವೈರಸ್ ಇರುವುದು ಕಂಡುಬಂದಿದೆ.

ಅದರ ನಂತರ ತುಂಬಾ ಬದಲಾವಣೆಗಳು ಆಗಿದೆ. ಮಾರ್ಚ್ 22 ಮತ್ತು ಮಾರ್ಚ್ 28 ರ ನಡುವೆ ಯಾದೃಚಿಕವಾಗಿ ಪರೀಕ್ಷಿಸಲ್ಪಟ್ಟ 2,877 ರೋಗಿಗಳಲ್ಲಿ 48 (ಶೇಕಡಾ 1.7) ರೋಗಿಗಳು ಕೊರೊನಾ ಪಾಸಿಟಿವ್ ಆಗಿದ್ದಾರೆ. ಮಾರ್ಚ್ 29 ಮತ್ತು ಏಪ್ರಿಲ್ 2 ರ ನಡುವೆ 2,069 ತೀವ್ರ ಉಸಿರಾಟದ ಕಾಯಿಲೆಯ ರೋಗಿಗಳಲ್ಲಿ 54 (ಶೇಕಡಾ 2.6) ರೋಗಿಗಳಿಗೆ ಕೊರೊನ ವೈರಸ್ ಇರುವುದು ಪತ್ತೆಯಾಗಿದೆ.

ಒಟ್ಟಾರೆಯಾಗಿ 5,911 ತೀವ್ರ ಉಸಿರಾಟದ ಕಾಯಿಲೆಯ ರೋಗಿಗಳಲ್ಲಿ 104 (ಶೇಕಡಾ 1.8) ರೋಗಿಗಳಿಗೆ ಕೊರೊನ ವೈರಸ್ ಇರುವುದು ಪತ್ತೆಯಾಗಿದೆ .

ಇದರಲ್ಲಿ ನಲವತ್ತು ರೋಗಿಗಳು ಯಾವುದೇ ಅಂತರರಾಷ್ಟ್ರೀಯ ಪ್ರಯಾಣ ಅಥವಾ ಪ್ರಯಾಣಿಸಿದವರ ಸಂಪರ್ಕವನ್ನು ಹೊಂದಿಲ್ಲ. ಭಾರತದ 15 ರಾಜ್ಯಗಳ 36 ಜಿಲ್ಲೆಗಳಿಂದ ಇಂತಹ ಪ್ರಕರಣಗಳು ವರದಿಯಾಗಿವೆ. ICMR ತನ್ನ ವರದಿಯಲ್ಲಿ ” ಕೊರೊನ ವೈರಸ್ ವಿರುದ್ದ ಚಟುವಟಿಕೆಗಳನ್ನು ಗುರಿಯಾಗಿಸಲು ಈ ಜಿಲ್ಲೆಗಳಿಗೆ ಆದ್ಯತೆ ನೀಡಬೇಕಾಗಿದೆ” ಎಂದು ಹೇಳಿದೆ.

ಇದರಲ್ಲಿ ಪುರುಷರಲ್ಲೇ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಕಂಡುಬಂದಿದೆ. ಅದರಲ್ಲೂ 40 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳಲ್ಲಿ 85 ಪ್ರಕರಣಗಳು (ಶೇಕಡಾ 83.3) ಪುರುಷರಾಗಿದ್ದಾರೆ. ಎಂಭತ್ತಮೂರು ರೋಗಿಗಳು (ಶೇಕಡಾ 81.4) 40 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...