Homeಮುಖಪುಟಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಹರಡುವಿಕೆ ಪ್ರಾರಂಭಿಸಿದೆ: ICMR

ಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಹರಡುವಿಕೆ ಪ್ರಾರಂಭಿಸಿದೆ: ICMR

- Advertisement -
- Advertisement -

ಯಾವುದೇ ವಿದೇಶಿ ಪ್ರಯಾಣದ ಇತಿಹಾಸ ಅಥವಾ ಕೊರೊನಾ ಸೋಂಕಿತರ ಸಂಪರ್ಕವಿಲ್ಲದೆಯೂ ಸಹ ಹೆಚ್ಚು ಹೆಚ್ಚು ಜನರು ಕೊರೊನ ವೈರಸ್‌ಗೆ ತುತ್ತಾಗುತ್ತಿದ್ದಾರೆ ಎಂಬುದು ಯಾದೃಚ್ಛಿಕ ಪರೀಕ್ಷೆಗಳಿಂದ (Random coronavirus tests) ದೃಢಪಟ್ಟಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ICMR) ಸಂಗ್ರಹಿಸಿದ ಮಾಹಿತಿಯು ಈ ಅಂಶವನ್ನು ಹೊರಹಾಕಿದ್ದು, ಜ್ವರ ಮತ್ತು ತೀವ್ರವಾದ ಉಸಿರಾಟದ ಕಾಯಿಲೆಗಳಿರುವ ರೋಗಿಗಳ ಮೇಲೆ ನಡೆಸಿದ ಯಾದೃಚ್ಛಿಕ ಕೊರೊನಾ ವೈರಸ್ ಪರೀಕ್ಷೆಗಳಿಂದ ಶೇಕಡಾ 38 ರಷ್ಟು ರೋಗಿಗಳಿಗೆ ಪ್ರಯಾಣದ ಇತಿಹಾಸವಿಲ್ಲದಿದ್ದರೂ ಸೋಂಕು ಹರಡಿದೆ ಎಂದು ತಿಳಿದುಬಂದಿದೆ.

ಎರಡು ವಾರಗಳ ಹಿಂದೆ ಕೊರೊನ ವೈರಸ್ ಸಮುದಾಯಿಕವಾಗಿ ಹರಡುತ್ತಿಲ್ಲ ಎಂದು ICMR ಪ್ರತಿಕ್ರಿಯಿಸಿತ್ತು. ಆದರೆ ICMR ತೀವ್ರ ಉಸಿರಾಟದ ಕಾಯಿಲೆಯ ವೈರಸ್ ಸಮುದಾಯಿಕವಾಗಿ ಹರಡುತ್ತಿದೆಯೇ ಎಂದು ತಿಳಿಯಲು ಯಾದೃಚ್ಛಿಕ ಪರೀಕ್ಷೆಗಳನ್ನು (Random coronavirus tests)  ನಡೆಸುತ್ತಿದೆ ನಂತರ ಅವರ ಡಾಟಾದಲ್ಲಿ ಮಹತ್ತರ ಬದಲಾವಣೆಗಳು ಕಂಡಿಬಂದಿವೆ.

ಇತ್ತೀಚಿಗಿನವರೆಗೆ ಭಾರತದ ಹೆಚ್ಚಿನ ರೋಗಿಗಳು ತಮ್ಮ ವಿದೇಶ ಪ್ರವಾಸದಿಂದ ಅಥವಾ ವಿದೇಶಕ್ಕೆ ಪ್ರಯಾಣಿಸಿದ ವ್ಯಕ್ತಿಯಿಂದ ಸೋಂಕು ತಗುಲಿಸಿಕೊಂಡಿದ್ದರು. ಇದರಿಂದಾಗಿ ಅವರನ್ನು ಪ್ರತ್ಯೇಕಗೊಳಿಸಿ ರೋಗಿಗಳ ಸಂಖ್ಯೆ ಶೂನ್ಯವಾಗುವಂತೆ ಮಾಡಬಹುದಾಗಿತ್ತು. ಆದರೆ ಈಗಿನ ಸ್ಥಿತಿಯನ್ನು 3 ನೇ ಹಂತ ಅಥವಾ ಸಮುದಾಯ ಹರಡುವಿಕೆ ಎಂದು ಕರೆಯಲಾಗುತ್ತದೆ.

SARI (Severe Acute Respiratory Illness) ತೀವ್ರ ಉಸಿರಾಟದ ಕಾಯಿಲೆ, ಮತ್ತು ಐಸಿಎಂಆರ್ ವೈರಸ್ನ ಯಾವುದೇ ಸಮುದಾಯ ಹರಡುವಿಕೆ ನಡೆಯುತ್ತಿದೆಯೇ ಎಂದು ಪರೀಕ್ಷಿಸಲು ಅವರ ಮೇಲೆ ಯಾದೃಚ್ಛಿಕ ಪರೀಕ್ಷೆಗಳನ್ನು ನಡೆಸುತ್ತಿದೆ.

ಆದರೆ ಯಾದೃಚಿಕ ಪರೀಕ್ಷೆಗಳ ಬದಲು ತೀವ್ರ ಉಸಿರಾಟದ ಕಾಯಿಲೆಯಿರುವ ಎಲ್ಲಾ ರೋಗಿಗಳನ್ನು ಪರೀಕ್ಷಿಸುವಂತಹ ನೀತಿಯನ್ನು ತಂದಾಗ ಮಾರ್ಚ್ 15 ಮತ್ತು ಮಾರ್ಚ್ 21 ರ ನಡುವೆ 106 ರೋಗಿಗಳಲ್ಲಿ ಇಬ್ಬರಲ್ಲಿ ವೈರಸ್ ಇರುವುದು ಕಂಡುಬಂದಿದೆ.

ಅದರ ನಂತರ ತುಂಬಾ ಬದಲಾವಣೆಗಳು ಆಗಿದೆ. ಮಾರ್ಚ್ 22 ಮತ್ತು ಮಾರ್ಚ್ 28 ರ ನಡುವೆ ಯಾದೃಚಿಕವಾಗಿ ಪರೀಕ್ಷಿಸಲ್ಪಟ್ಟ 2,877 ರೋಗಿಗಳಲ್ಲಿ 48 (ಶೇಕಡಾ 1.7) ರೋಗಿಗಳು ಕೊರೊನಾ ಪಾಸಿಟಿವ್ ಆಗಿದ್ದಾರೆ. ಮಾರ್ಚ್ 29 ಮತ್ತು ಏಪ್ರಿಲ್ 2 ರ ನಡುವೆ 2,069 ತೀವ್ರ ಉಸಿರಾಟದ ಕಾಯಿಲೆಯ ರೋಗಿಗಳಲ್ಲಿ 54 (ಶೇಕಡಾ 2.6) ರೋಗಿಗಳಿಗೆ ಕೊರೊನ ವೈರಸ್ ಇರುವುದು ಪತ್ತೆಯಾಗಿದೆ.

ಒಟ್ಟಾರೆಯಾಗಿ 5,911 ತೀವ್ರ ಉಸಿರಾಟದ ಕಾಯಿಲೆಯ ರೋಗಿಗಳಲ್ಲಿ 104 (ಶೇಕಡಾ 1.8) ರೋಗಿಗಳಿಗೆ ಕೊರೊನ ವೈರಸ್ ಇರುವುದು ಪತ್ತೆಯಾಗಿದೆ .

ಇದರಲ್ಲಿ ನಲವತ್ತು ರೋಗಿಗಳು ಯಾವುದೇ ಅಂತರರಾಷ್ಟ್ರೀಯ ಪ್ರಯಾಣ ಅಥವಾ ಪ್ರಯಾಣಿಸಿದವರ ಸಂಪರ್ಕವನ್ನು ಹೊಂದಿಲ್ಲ. ಭಾರತದ 15 ರಾಜ್ಯಗಳ 36 ಜಿಲ್ಲೆಗಳಿಂದ ಇಂತಹ ಪ್ರಕರಣಗಳು ವರದಿಯಾಗಿವೆ. ICMR ತನ್ನ ವರದಿಯಲ್ಲಿ ” ಕೊರೊನ ವೈರಸ್ ವಿರುದ್ದ ಚಟುವಟಿಕೆಗಳನ್ನು ಗುರಿಯಾಗಿಸಲು ಈ ಜಿಲ್ಲೆಗಳಿಗೆ ಆದ್ಯತೆ ನೀಡಬೇಕಾಗಿದೆ” ಎಂದು ಹೇಳಿದೆ.

ಇದರಲ್ಲಿ ಪುರುಷರಲ್ಲೇ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಕಂಡುಬಂದಿದೆ. ಅದರಲ್ಲೂ 40 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳಲ್ಲಿ 85 ಪ್ರಕರಣಗಳು (ಶೇಕಡಾ 83.3) ಪುರುಷರಾಗಿದ್ದಾರೆ. ಎಂಭತ್ತಮೂರು ರೋಗಿಗಳು (ಶೇಕಡಾ 81.4) 40 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...