Homeಕರ್ನಾಟಕಎಲ್ಲೆಡೆ ಕೊರೋನ ಭೀತಿ : ಮಾಸ್ಕ್ ಸಿಗದೆ ಜನರ ಪರದಾಟ

ಎಲ್ಲೆಡೆ ಕೊರೋನ ಭೀತಿ : ಮಾಸ್ಕ್ ಸಿಗದೆ ಜನರ ಪರದಾಟ

- Advertisement -
- Advertisement -

ಭಾರತದಲ್ಲಿ 31 ಜನರಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಇದು ಜನರ ಆತಂಕಕ್ಕೆ ಕಾರಣವಾಗಿದ್ದು, ಜನ ಸಂದಣಿ ಇರುವ ಕಡೆಗೆ ಹೋಗಲು ಹೆದರಿಕೊಳ್ಳುತ್ತಿದ್ದಾರೆ. ಒಂದೊಮ್ಮೆ ಹೋಗಲೇ ಬೇಕಾದರೆ ಮಾಸ್ಕ್ ಧರಿಸಿ ಹೋಗುತ್ತಿರುವುದು ಸಾಮಾನ್ಯ ಸಂಗತಿಯಾಗಿದೆ. ಕೊರೋನ ವೈರಸ್ ಹರಡುವ ಮತ್ತು ಜನರು ವಹಿಸಬೇಕಾದ ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆ ಸಾಕಷ್ಟು ಪ್ರಚಾರವನ್ನು ನಡೆಸುತ್ತಿದೆ. ಹೀಗಾಗಿ ಜನರು ಎಚ್ಚರ ವಹಿಸುವ ಜೊತೆಗೆ ಸ್ವಲ್ಪಮಟ್ಟಿನ ಭೀತಿಗೂ ಒಳಗಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್‌ ಶಾ ಈ ಬಾರಿ ಹೋಳಿ ಹಬ್ಬದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಕೊರೋನಾ ವೈರಸ್ ಕುರಿತು ವದಂತಿ ಹಬ್ಬಿಸಿದರೆ ಶಿಕ್ಷೆ ಅನುಭವಿಸಬೇಕು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ  ನೀಡಿದೆ. ಹೀಗಾಗಿ ಜನರು ಜಾಗೃತಿಗೊಳ್ಳಲು ಮತ್ತು ಭೀತಿಗೊಳ್ಳಲು ಪುಷ್ಟಿ ನೀಡಿದೆ. ಸರ್ಕಾರಗಳು ಮತ್ತು ಆರೋಗ್ಯ ಇಲಾಖೆಯ ಕಾಳಜಿಯನ್ನು ಯಾರೂ ಪ್ರಶ್ನಿಸುವಂತಿಲ್ಲ. ಯಾವುದೇ ಸರ್ಕಾರ ಇದ್ದರೂ ಜನರು ವಹಿಸಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಜಾಗೃತಿ ಮೂಡಿಸಲೇಬೇಕು. ಆದರೆ ಇದೇ ಜನರ ಭೀತಿಗೆ ಕಾರಣವೂ ಆಗಬಾರದು ಅಲ್ಲವೇ?

ಮುಖ್ಯ ಸಂಗತಿಯೆಂದರೆ ತುಮಕೂರಿನಲ್ಲಿ ಕೊರೋನ ವೈರಸ್ ಭೀತಿ ಹೆಚ್ಚಾದಂತೆ ಕಂಡುಬರುತ್ತಿದೆ. ಇದೇ ಉದ್ದೇಶದಿಂದ ಮಾಸ್ಕ್ ಧರಿಸುವವರ ಸಂಖ್ಯೆ ಹೆಚ್ಚಾಗತೊಡಗಿದೆ. ಶಾಲೆಗೆ ಹೋಗುವ  ಮಕ್ಕಳಿಗೆ ಮಾಸ್ಕ್ ಹಾಕದೆ ಕಳಿಸುತ್ತಿಲ್ಲ. ಅಷ್ಟರಮಟ್ಟಿಗೆ ಜಾಗೃತಿ ಮತ್ತು ಭೀತಿ ಜಯರನ್ನು ಕಾಡತೊಡಗಿದೆ. ತುಮಕೂರು ನಗರದಲ್ಲಿ ಎಲ್ಲೆಂದರಲ್ಲಿ ರಸ್ತೆಗಳನ್ನು ಬಗೆದಿರುವುದರಿಂದ ಧೂಳು ಕೂಡ ಹೆಚ್ಚಾಗಿದೆ. ವಾಹನಗಳು ಮುಂದೆ ಸಾಗಿದರೆ ಸಾಕು ಸುಯ್ ಅಂತ ಧೂಳು ಮೆತ್ತಿಕೊಳ್ಳುತ್ತದೆ. ಧೂಳಿನಿಂದ ರಕ್ಷಣೆ ಪಡೆಯಲು ಜನರು ಮಾಸ್ಕ್ ಧರಿಸುವಂತಹ ಪರಿಸ್ಥಿತಿ ಬಂದಿದೆ. ಕೊರೋನ ಭೀತಿ ಒಂದು ಕಡೆಯಾದರೆ ಧೂಳಿನ ಭೀತಿ ಮತ್ತೊಂದು ಕಡೆ.  ಇಲ್ಲಿನ ಆರೋಗ್ಯ ಇಲಾಖೆ ಕೊರೋನ ವೈರಸ್ ಬಂದವರಿಗಾಗಿ ಚಿಕಿತ್ಸೆ ನೀಡಲು ಹತ್ತು ಹಾಸಿಗೆಯ ಕೊಠಡಿ ಸಿದ್ದಮಾಡಿಟ್ಟುಕೊಂಡಿದೆ. ಆದರೆ ಧೂಳಿನ ಬಗ್ಗೆ ಜಾಗೃತಿ ಮೂಡಿಸುವ ಗೋಜಿಗೆ ಹೋಗಿಲ್ಲ.

ಕೊರೋನ ವೈರಸ್ ಮತ್ತು ಧೂಳಿನಿಂದ ರಕ್ಷಣೆ ಪಡೆಯಲು ಜನರು ಕಳೆದೊಂದು ವಾರದಿಂದಲೂ ಮಾಸ್ಕ್ ಖರೀದಿಸಿತ್ತಿದ್ದು ಈಗ ತುಮಕೂರಿನಲ್ಲಿ ಮಾಸ್ಕ್ ಗಳ ಕೊರತೆ ಉಂಟಾಗಿದೆ. ಮೆಡಿಕಲ್ ಶಾಪ್ ಗಳಲ್ಲಿ ಮಾಸ್ಕ್ ಕೇಳಿದರೆ ಸ್ಟಾಕ್ ಇಲ್ಲ ಎಂಬ ಉತ್ತರ ಬರುತ್ತದೆ. ಕೊರೋನಾ ವೈರಸ್ ಹರಡುತ್ತದೆ ಎಂಬ ಕಾರಣಕ್ಕೆ ಜನರು ಮಾಸ್ಕ್ ಗಳನ್ನು ಖರೀದಿಸಿದರು. ನಮ್ಮ ಅಂಗಡಿಯಲ್ಲಿದ್ದ ಮಾಸ್ಕ್ ನ್ನು 20 ರೂ. 60 ರೂ. 150 ರೂಗಳಿಗೆ ಮಾರಾಟ ಮಾಡಿದೆವು. ಈಗ ಇಡೀ ತುಮಕೂರಿನಲ್ಲಿ ಮಾಸ್ಕ್ ಗಳ ಕೊರತೆ ಇದೆ. ಜನರು ಬಂದು ಕೇಳಿ ವಾಪಸ್ ಹೋಗುತ್ತಿದ್ದಾರೆ. ಇರೋವರಿಗೂ ಮಾರಾಟ ಮಾಡಿದೆ. ಈಗ ಸಿಗುತ್ತಿಲ್ಲ. ಎಲ್ಲಾ ಕಡೇನೂ ಇದೇ ಪರಿಸ್ಥಿತಿ ಇದೆ. ನೀವೇ ನೋಡ್ತಾ ಇದ್ದೀರಲ್ಲ. ಅಂಗಡಿನಲ್ಲಿ ಕುಳಿತಿರೋಕೆ ಆಗುತ್ತಿಲ್ಲ. ಧೂಳು. ನಗರಪಾಲಿಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬೇಸಿಗೆ ಬೇರೆ. ಧೂಳಿನಿಂದ ಹಲವು ರೋಗಗಳು ಬರುತ್ತವೆ ಜೊತೆಗೆ ಕೊರೋನಾ ಭೀತಿ ಬೇರೆ. ಏನ್ ಮಾಡೋದು ಹೇಳಿ ಎನ್ನುತ್ತಾರೆ ವಾಸವಿ ಮೆಡಿಕಲ್‌ನ ಕುಮಾರ್.

ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲೂ ಮಾಸ್ಕ್ ಗಳಿಗೆ ಬೇಡಿಕೆ ಹೆಚ್ಚಾಗಿದೆ. ಅವುಗಳ ಬೆಲೆ ಗಗನಕ್ಕೇರಿದೆ. ಕೆಲವು ಶಾಲೆಗಳು ಪ್ರತಿಯೊಂದು ಮಗುವಿಗೂ ಮಾಸ್ಕ್ ಧರಿಸಿ ಬರುವುದನ್ನು ಕಡ್ಡಾಯ ಮಾಡಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಮಾಸ್ಕ್ ಗಳಿಗೆ ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಬಳ್ಳಾಪುರದಲ್ಲಿ ಖಾಸಗಿ ಶಾಲೆಗಳು ಮಕ್ಕಳಿಗೆ ಮಾಸ್ಕ್ ಕೊಡುತ್ತಿವೆ. ಹೀಗಾಗಿ ಮಾಸ್ಕ್ ಗಳು ಸಿಗುತ್ತಿಲ್ಲ. ಕೊರೋನಾ ವೈರಸ್ ಹರಡುವುದನ್ನು ತಪ್ಪಿಸಲು ಮಾಸ್ಕ್ ಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದರೆ ಮಾಸ್ಕ್ ಗಳ ಕೊರತೆ ಉಂಟಾಗಿದ್ದು ಇದಕ್ಕೆ ಆಯಾ ಜಿಲ್ಲಾಡಳಿತಗಳು ಮತ್ತು ಆರೋಗ್ಯ ಇಲಾಖೆಗಳು ಕ್ರಮ ಕೈಗೊಂಡಂತೆ ಕಂಡುಬರುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...

ಮಾದಕ ವ್ಯಸನ : 10 ವರ್ಷದಲ್ಲಿ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ವೃದ್ಧ ದಂಪತಿ

ಡ್ರಗ್ ಕಾರಣದಿಂದ ವೃದ್ದ ದಂಪತಿ ತನ್ನ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ಹೃದಯ ವಿದ್ರಾವಕ ಮತ್ತು ಆಘಾತಕಾರಿ ವರದಿ ಪಂಜಾಬ್‌ನ ಕಪುರ್ಥಲಾ ಜಿಲ್ಲೆಯ ಸುಲ್ತಾನ್‌ಪುರ ಲೋಧಿಯಿಂದ ಬಂದಿದೆ. ಸುಲ್ತಾನ್‌ಪುರ ಲೋಧಿಯ ಪಂಡೋರಿ ಮೊಹಲ್ಲಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿರುವ...

ಜಮ್ಮು-ಕಾಶ್ಮೀರ: 28 ವರ್ಷಗಳ ಕಾಲ ಸೇನಾ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ ಶ್ರೀನಗರ ನ್ಯಾಯಾಲಯ

1997 ರಲ್ಲಿ ಸೇನಾ ಕಸ್ಟಡಿಗೆ ತೆಗೆದುಕೊಂಡ ಸುಮಾರು 28 ವರ್ಷಗಳ ನಂತರ ಶ್ರೀನಗರ ನ್ಯಾಯಾಲಯವು ಒಬ್ಬ ವ್ಯಕ್ತಿಯನ್ನು ಸತ್ತನೆಂದು ಘೋಷಿಸಿದೆ. ಬಂಧನದಲ್ಲಿದ್ದಾಗ ಕೊಲ್ಲಲ್ಪಟ್ಟಿದ್ದಾನೆ ಎಂಬ ತನಿಖಾ ಸಂಶೋಧನೆಗಳನ್ನು ಉಲ್ಲೇಖಿಸಿ ಮತ್ತು ಸಾವಿನ ಕಾನೂನುಬದ್ಧ...

ದೆಹಲಿ: ವೇತನ ಕೇಳಿದ್ದಕ್ಕೆ ಅಪಾಯಕಾರಿ ಚರಂಡಿ ಸ್ವಚ್ಛಗೊಳಿಸಲು ಒತ್ತಾಯ; ಸುರಕ್ಷತಾ ಸಾಧನಗಳಿಲ್ಲದೆ ಚರಂಡಿಗಿಳಿದ ನೈರ್ಮಲ್ಯ ಕಾರ್ಮಿಕ ಸಾವು

ವಾಲ್ಮೀಕಿ ಸಮುದಾಯದ ಗುತ್ತಿಗೆ ನೈರ್ಮಲ್ಯ ಕಾರ್ಮಿಕ ರಾಹುಲ್ (32) ಮಾರ್ಚ್ 30 ರಂದು ದಿಲ್ಶಾದ್ ಗಾರ್ಡನ್‌ನ ತಹಿರ್‌ಪುರದಲ್ಲಿ 8 ರಿಂದ 10 ಅಡಿ ಆಳದ ಚರಂಡಿಯನ್ನು ಹಸ್ತಚಾಲಿತವಾಗಿ ಹೂಳು ತೆಗೆಯುವಾಗ ಯಾವುದೇ ಸುರಕ್ಷತಾ...