Homeಕರ್ನಾಟಕಎಲ್ಲೆಡೆ ಕೊರೋನ ಭೀತಿ : ಮಾಸ್ಕ್ ಸಿಗದೆ ಜನರ ಪರದಾಟ

ಎಲ್ಲೆಡೆ ಕೊರೋನ ಭೀತಿ : ಮಾಸ್ಕ್ ಸಿಗದೆ ಜನರ ಪರದಾಟ

- Advertisement -
- Advertisement -

ಭಾರತದಲ್ಲಿ 31 ಜನರಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಇದು ಜನರ ಆತಂಕಕ್ಕೆ ಕಾರಣವಾಗಿದ್ದು, ಜನ ಸಂದಣಿ ಇರುವ ಕಡೆಗೆ ಹೋಗಲು ಹೆದರಿಕೊಳ್ಳುತ್ತಿದ್ದಾರೆ. ಒಂದೊಮ್ಮೆ ಹೋಗಲೇ ಬೇಕಾದರೆ ಮಾಸ್ಕ್ ಧರಿಸಿ ಹೋಗುತ್ತಿರುವುದು ಸಾಮಾನ್ಯ ಸಂಗತಿಯಾಗಿದೆ. ಕೊರೋನ ವೈರಸ್ ಹರಡುವ ಮತ್ತು ಜನರು ವಹಿಸಬೇಕಾದ ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆ ಸಾಕಷ್ಟು ಪ್ರಚಾರವನ್ನು ನಡೆಸುತ್ತಿದೆ. ಹೀಗಾಗಿ ಜನರು ಎಚ್ಚರ ವಹಿಸುವ ಜೊತೆಗೆ ಸ್ವಲ್ಪಮಟ್ಟಿನ ಭೀತಿಗೂ ಒಳಗಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್‌ ಶಾ ಈ ಬಾರಿ ಹೋಳಿ ಹಬ್ಬದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಕೊರೋನಾ ವೈರಸ್ ಕುರಿತು ವದಂತಿ ಹಬ್ಬಿಸಿದರೆ ಶಿಕ್ಷೆ ಅನುಭವಿಸಬೇಕು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ  ನೀಡಿದೆ. ಹೀಗಾಗಿ ಜನರು ಜಾಗೃತಿಗೊಳ್ಳಲು ಮತ್ತು ಭೀತಿಗೊಳ್ಳಲು ಪುಷ್ಟಿ ನೀಡಿದೆ. ಸರ್ಕಾರಗಳು ಮತ್ತು ಆರೋಗ್ಯ ಇಲಾಖೆಯ ಕಾಳಜಿಯನ್ನು ಯಾರೂ ಪ್ರಶ್ನಿಸುವಂತಿಲ್ಲ. ಯಾವುದೇ ಸರ್ಕಾರ ಇದ್ದರೂ ಜನರು ವಹಿಸಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಜಾಗೃತಿ ಮೂಡಿಸಲೇಬೇಕು. ಆದರೆ ಇದೇ ಜನರ ಭೀತಿಗೆ ಕಾರಣವೂ ಆಗಬಾರದು ಅಲ್ಲವೇ?

ಮುಖ್ಯ ಸಂಗತಿಯೆಂದರೆ ತುಮಕೂರಿನಲ್ಲಿ ಕೊರೋನ ವೈರಸ್ ಭೀತಿ ಹೆಚ್ಚಾದಂತೆ ಕಂಡುಬರುತ್ತಿದೆ. ಇದೇ ಉದ್ದೇಶದಿಂದ ಮಾಸ್ಕ್ ಧರಿಸುವವರ ಸಂಖ್ಯೆ ಹೆಚ್ಚಾಗತೊಡಗಿದೆ. ಶಾಲೆಗೆ ಹೋಗುವ  ಮಕ್ಕಳಿಗೆ ಮಾಸ್ಕ್ ಹಾಕದೆ ಕಳಿಸುತ್ತಿಲ್ಲ. ಅಷ್ಟರಮಟ್ಟಿಗೆ ಜಾಗೃತಿ ಮತ್ತು ಭೀತಿ ಜಯರನ್ನು ಕಾಡತೊಡಗಿದೆ. ತುಮಕೂರು ನಗರದಲ್ಲಿ ಎಲ್ಲೆಂದರಲ್ಲಿ ರಸ್ತೆಗಳನ್ನು ಬಗೆದಿರುವುದರಿಂದ ಧೂಳು ಕೂಡ ಹೆಚ್ಚಾಗಿದೆ. ವಾಹನಗಳು ಮುಂದೆ ಸಾಗಿದರೆ ಸಾಕು ಸುಯ್ ಅಂತ ಧೂಳು ಮೆತ್ತಿಕೊಳ್ಳುತ್ತದೆ. ಧೂಳಿನಿಂದ ರಕ್ಷಣೆ ಪಡೆಯಲು ಜನರು ಮಾಸ್ಕ್ ಧರಿಸುವಂತಹ ಪರಿಸ್ಥಿತಿ ಬಂದಿದೆ. ಕೊರೋನ ಭೀತಿ ಒಂದು ಕಡೆಯಾದರೆ ಧೂಳಿನ ಭೀತಿ ಮತ್ತೊಂದು ಕಡೆ.  ಇಲ್ಲಿನ ಆರೋಗ್ಯ ಇಲಾಖೆ ಕೊರೋನ ವೈರಸ್ ಬಂದವರಿಗಾಗಿ ಚಿಕಿತ್ಸೆ ನೀಡಲು ಹತ್ತು ಹಾಸಿಗೆಯ ಕೊಠಡಿ ಸಿದ್ದಮಾಡಿಟ್ಟುಕೊಂಡಿದೆ. ಆದರೆ ಧೂಳಿನ ಬಗ್ಗೆ ಜಾಗೃತಿ ಮೂಡಿಸುವ ಗೋಜಿಗೆ ಹೋಗಿಲ್ಲ.

ಕೊರೋನ ವೈರಸ್ ಮತ್ತು ಧೂಳಿನಿಂದ ರಕ್ಷಣೆ ಪಡೆಯಲು ಜನರು ಕಳೆದೊಂದು ವಾರದಿಂದಲೂ ಮಾಸ್ಕ್ ಖರೀದಿಸಿತ್ತಿದ್ದು ಈಗ ತುಮಕೂರಿನಲ್ಲಿ ಮಾಸ್ಕ್ ಗಳ ಕೊರತೆ ಉಂಟಾಗಿದೆ. ಮೆಡಿಕಲ್ ಶಾಪ್ ಗಳಲ್ಲಿ ಮಾಸ್ಕ್ ಕೇಳಿದರೆ ಸ್ಟಾಕ್ ಇಲ್ಲ ಎಂಬ ಉತ್ತರ ಬರುತ್ತದೆ. ಕೊರೋನಾ ವೈರಸ್ ಹರಡುತ್ತದೆ ಎಂಬ ಕಾರಣಕ್ಕೆ ಜನರು ಮಾಸ್ಕ್ ಗಳನ್ನು ಖರೀದಿಸಿದರು. ನಮ್ಮ ಅಂಗಡಿಯಲ್ಲಿದ್ದ ಮಾಸ್ಕ್ ನ್ನು 20 ರೂ. 60 ರೂ. 150 ರೂಗಳಿಗೆ ಮಾರಾಟ ಮಾಡಿದೆವು. ಈಗ ಇಡೀ ತುಮಕೂರಿನಲ್ಲಿ ಮಾಸ್ಕ್ ಗಳ ಕೊರತೆ ಇದೆ. ಜನರು ಬಂದು ಕೇಳಿ ವಾಪಸ್ ಹೋಗುತ್ತಿದ್ದಾರೆ. ಇರೋವರಿಗೂ ಮಾರಾಟ ಮಾಡಿದೆ. ಈಗ ಸಿಗುತ್ತಿಲ್ಲ. ಎಲ್ಲಾ ಕಡೇನೂ ಇದೇ ಪರಿಸ್ಥಿತಿ ಇದೆ. ನೀವೇ ನೋಡ್ತಾ ಇದ್ದೀರಲ್ಲ. ಅಂಗಡಿನಲ್ಲಿ ಕುಳಿತಿರೋಕೆ ಆಗುತ್ತಿಲ್ಲ. ಧೂಳು. ನಗರಪಾಲಿಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬೇಸಿಗೆ ಬೇರೆ. ಧೂಳಿನಿಂದ ಹಲವು ರೋಗಗಳು ಬರುತ್ತವೆ ಜೊತೆಗೆ ಕೊರೋನಾ ಭೀತಿ ಬೇರೆ. ಏನ್ ಮಾಡೋದು ಹೇಳಿ ಎನ್ನುತ್ತಾರೆ ವಾಸವಿ ಮೆಡಿಕಲ್‌ನ ಕುಮಾರ್.

ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲೂ ಮಾಸ್ಕ್ ಗಳಿಗೆ ಬೇಡಿಕೆ ಹೆಚ್ಚಾಗಿದೆ. ಅವುಗಳ ಬೆಲೆ ಗಗನಕ್ಕೇರಿದೆ. ಕೆಲವು ಶಾಲೆಗಳು ಪ್ರತಿಯೊಂದು ಮಗುವಿಗೂ ಮಾಸ್ಕ್ ಧರಿಸಿ ಬರುವುದನ್ನು ಕಡ್ಡಾಯ ಮಾಡಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಮಾಸ್ಕ್ ಗಳಿಗೆ ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಬಳ್ಳಾಪುರದಲ್ಲಿ ಖಾಸಗಿ ಶಾಲೆಗಳು ಮಕ್ಕಳಿಗೆ ಮಾಸ್ಕ್ ಕೊಡುತ್ತಿವೆ. ಹೀಗಾಗಿ ಮಾಸ್ಕ್ ಗಳು ಸಿಗುತ್ತಿಲ್ಲ. ಕೊರೋನಾ ವೈರಸ್ ಹರಡುವುದನ್ನು ತಪ್ಪಿಸಲು ಮಾಸ್ಕ್ ಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದರೆ ಮಾಸ್ಕ್ ಗಳ ಕೊರತೆ ಉಂಟಾಗಿದ್ದು ಇದಕ್ಕೆ ಆಯಾ ಜಿಲ್ಲಾಡಳಿತಗಳು ಮತ್ತು ಆರೋಗ್ಯ ಇಲಾಖೆಗಳು ಕ್ರಮ ಕೈಗೊಂಡಂತೆ ಕಂಡುಬರುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...