Homeಕರ್ನಾಟಕಎಲ್ಲೆಡೆ ಕೊರೋನ ಭೀತಿ : ಮಾಸ್ಕ್ ಸಿಗದೆ ಜನರ ಪರದಾಟ

ಎಲ್ಲೆಡೆ ಕೊರೋನ ಭೀತಿ : ಮಾಸ್ಕ್ ಸಿಗದೆ ಜನರ ಪರದಾಟ

- Advertisement -
- Advertisement -

ಭಾರತದಲ್ಲಿ 31 ಜನರಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಇದು ಜನರ ಆತಂಕಕ್ಕೆ ಕಾರಣವಾಗಿದ್ದು, ಜನ ಸಂದಣಿ ಇರುವ ಕಡೆಗೆ ಹೋಗಲು ಹೆದರಿಕೊಳ್ಳುತ್ತಿದ್ದಾರೆ. ಒಂದೊಮ್ಮೆ ಹೋಗಲೇ ಬೇಕಾದರೆ ಮಾಸ್ಕ್ ಧರಿಸಿ ಹೋಗುತ್ತಿರುವುದು ಸಾಮಾನ್ಯ ಸಂಗತಿಯಾಗಿದೆ. ಕೊರೋನ ವೈರಸ್ ಹರಡುವ ಮತ್ತು ಜನರು ವಹಿಸಬೇಕಾದ ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆ ಸಾಕಷ್ಟು ಪ್ರಚಾರವನ್ನು ನಡೆಸುತ್ತಿದೆ. ಹೀಗಾಗಿ ಜನರು ಎಚ್ಚರ ವಹಿಸುವ ಜೊತೆಗೆ ಸ್ವಲ್ಪಮಟ್ಟಿನ ಭೀತಿಗೂ ಒಳಗಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್‌ ಶಾ ಈ ಬಾರಿ ಹೋಳಿ ಹಬ್ಬದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಕೊರೋನಾ ವೈರಸ್ ಕುರಿತು ವದಂತಿ ಹಬ್ಬಿಸಿದರೆ ಶಿಕ್ಷೆ ಅನುಭವಿಸಬೇಕು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ  ನೀಡಿದೆ. ಹೀಗಾಗಿ ಜನರು ಜಾಗೃತಿಗೊಳ್ಳಲು ಮತ್ತು ಭೀತಿಗೊಳ್ಳಲು ಪುಷ್ಟಿ ನೀಡಿದೆ. ಸರ್ಕಾರಗಳು ಮತ್ತು ಆರೋಗ್ಯ ಇಲಾಖೆಯ ಕಾಳಜಿಯನ್ನು ಯಾರೂ ಪ್ರಶ್ನಿಸುವಂತಿಲ್ಲ. ಯಾವುದೇ ಸರ್ಕಾರ ಇದ್ದರೂ ಜನರು ವಹಿಸಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಜಾಗೃತಿ ಮೂಡಿಸಲೇಬೇಕು. ಆದರೆ ಇದೇ ಜನರ ಭೀತಿಗೆ ಕಾರಣವೂ ಆಗಬಾರದು ಅಲ್ಲವೇ?

ಮುಖ್ಯ ಸಂಗತಿಯೆಂದರೆ ತುಮಕೂರಿನಲ್ಲಿ ಕೊರೋನ ವೈರಸ್ ಭೀತಿ ಹೆಚ್ಚಾದಂತೆ ಕಂಡುಬರುತ್ತಿದೆ. ಇದೇ ಉದ್ದೇಶದಿಂದ ಮಾಸ್ಕ್ ಧರಿಸುವವರ ಸಂಖ್ಯೆ ಹೆಚ್ಚಾಗತೊಡಗಿದೆ. ಶಾಲೆಗೆ ಹೋಗುವ  ಮಕ್ಕಳಿಗೆ ಮಾಸ್ಕ್ ಹಾಕದೆ ಕಳಿಸುತ್ತಿಲ್ಲ. ಅಷ್ಟರಮಟ್ಟಿಗೆ ಜಾಗೃತಿ ಮತ್ತು ಭೀತಿ ಜಯರನ್ನು ಕಾಡತೊಡಗಿದೆ. ತುಮಕೂರು ನಗರದಲ್ಲಿ ಎಲ್ಲೆಂದರಲ್ಲಿ ರಸ್ತೆಗಳನ್ನು ಬಗೆದಿರುವುದರಿಂದ ಧೂಳು ಕೂಡ ಹೆಚ್ಚಾಗಿದೆ. ವಾಹನಗಳು ಮುಂದೆ ಸಾಗಿದರೆ ಸಾಕು ಸುಯ್ ಅಂತ ಧೂಳು ಮೆತ್ತಿಕೊಳ್ಳುತ್ತದೆ. ಧೂಳಿನಿಂದ ರಕ್ಷಣೆ ಪಡೆಯಲು ಜನರು ಮಾಸ್ಕ್ ಧರಿಸುವಂತಹ ಪರಿಸ್ಥಿತಿ ಬಂದಿದೆ. ಕೊರೋನ ಭೀತಿ ಒಂದು ಕಡೆಯಾದರೆ ಧೂಳಿನ ಭೀತಿ ಮತ್ತೊಂದು ಕಡೆ.  ಇಲ್ಲಿನ ಆರೋಗ್ಯ ಇಲಾಖೆ ಕೊರೋನ ವೈರಸ್ ಬಂದವರಿಗಾಗಿ ಚಿಕಿತ್ಸೆ ನೀಡಲು ಹತ್ತು ಹಾಸಿಗೆಯ ಕೊಠಡಿ ಸಿದ್ದಮಾಡಿಟ್ಟುಕೊಂಡಿದೆ. ಆದರೆ ಧೂಳಿನ ಬಗ್ಗೆ ಜಾಗೃತಿ ಮೂಡಿಸುವ ಗೋಜಿಗೆ ಹೋಗಿಲ್ಲ.

ಕೊರೋನ ವೈರಸ್ ಮತ್ತು ಧೂಳಿನಿಂದ ರಕ್ಷಣೆ ಪಡೆಯಲು ಜನರು ಕಳೆದೊಂದು ವಾರದಿಂದಲೂ ಮಾಸ್ಕ್ ಖರೀದಿಸಿತ್ತಿದ್ದು ಈಗ ತುಮಕೂರಿನಲ್ಲಿ ಮಾಸ್ಕ್ ಗಳ ಕೊರತೆ ಉಂಟಾಗಿದೆ. ಮೆಡಿಕಲ್ ಶಾಪ್ ಗಳಲ್ಲಿ ಮಾಸ್ಕ್ ಕೇಳಿದರೆ ಸ್ಟಾಕ್ ಇಲ್ಲ ಎಂಬ ಉತ್ತರ ಬರುತ್ತದೆ. ಕೊರೋನಾ ವೈರಸ್ ಹರಡುತ್ತದೆ ಎಂಬ ಕಾರಣಕ್ಕೆ ಜನರು ಮಾಸ್ಕ್ ಗಳನ್ನು ಖರೀದಿಸಿದರು. ನಮ್ಮ ಅಂಗಡಿಯಲ್ಲಿದ್ದ ಮಾಸ್ಕ್ ನ್ನು 20 ರೂ. 60 ರೂ. 150 ರೂಗಳಿಗೆ ಮಾರಾಟ ಮಾಡಿದೆವು. ಈಗ ಇಡೀ ತುಮಕೂರಿನಲ್ಲಿ ಮಾಸ್ಕ್ ಗಳ ಕೊರತೆ ಇದೆ. ಜನರು ಬಂದು ಕೇಳಿ ವಾಪಸ್ ಹೋಗುತ್ತಿದ್ದಾರೆ. ಇರೋವರಿಗೂ ಮಾರಾಟ ಮಾಡಿದೆ. ಈಗ ಸಿಗುತ್ತಿಲ್ಲ. ಎಲ್ಲಾ ಕಡೇನೂ ಇದೇ ಪರಿಸ್ಥಿತಿ ಇದೆ. ನೀವೇ ನೋಡ್ತಾ ಇದ್ದೀರಲ್ಲ. ಅಂಗಡಿನಲ್ಲಿ ಕುಳಿತಿರೋಕೆ ಆಗುತ್ತಿಲ್ಲ. ಧೂಳು. ನಗರಪಾಲಿಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬೇಸಿಗೆ ಬೇರೆ. ಧೂಳಿನಿಂದ ಹಲವು ರೋಗಗಳು ಬರುತ್ತವೆ ಜೊತೆಗೆ ಕೊರೋನಾ ಭೀತಿ ಬೇರೆ. ಏನ್ ಮಾಡೋದು ಹೇಳಿ ಎನ್ನುತ್ತಾರೆ ವಾಸವಿ ಮೆಡಿಕಲ್‌ನ ಕುಮಾರ್.

ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲೂ ಮಾಸ್ಕ್ ಗಳಿಗೆ ಬೇಡಿಕೆ ಹೆಚ್ಚಾಗಿದೆ. ಅವುಗಳ ಬೆಲೆ ಗಗನಕ್ಕೇರಿದೆ. ಕೆಲವು ಶಾಲೆಗಳು ಪ್ರತಿಯೊಂದು ಮಗುವಿಗೂ ಮಾಸ್ಕ್ ಧರಿಸಿ ಬರುವುದನ್ನು ಕಡ್ಡಾಯ ಮಾಡಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಮಾಸ್ಕ್ ಗಳಿಗೆ ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಬಳ್ಳಾಪುರದಲ್ಲಿ ಖಾಸಗಿ ಶಾಲೆಗಳು ಮಕ್ಕಳಿಗೆ ಮಾಸ್ಕ್ ಕೊಡುತ್ತಿವೆ. ಹೀಗಾಗಿ ಮಾಸ್ಕ್ ಗಳು ಸಿಗುತ್ತಿಲ್ಲ. ಕೊರೋನಾ ವೈರಸ್ ಹರಡುವುದನ್ನು ತಪ್ಪಿಸಲು ಮಾಸ್ಕ್ ಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದರೆ ಮಾಸ್ಕ್ ಗಳ ಕೊರತೆ ಉಂಟಾಗಿದ್ದು ಇದಕ್ಕೆ ಆಯಾ ಜಿಲ್ಲಾಡಳಿತಗಳು ಮತ್ತು ಆರೋಗ್ಯ ಇಲಾಖೆಗಳು ಕ್ರಮ ಕೈಗೊಂಡಂತೆ ಕಂಡುಬರುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...