Homeಕರ್ನಾಟಕಎಲ್ಲೆಡೆ ಕೊರೋನ ಭೀತಿ : ಮಾಸ್ಕ್ ಸಿಗದೆ ಜನರ ಪರದಾಟ

ಎಲ್ಲೆಡೆ ಕೊರೋನ ಭೀತಿ : ಮಾಸ್ಕ್ ಸಿಗದೆ ಜನರ ಪರದಾಟ

- Advertisement -
- Advertisement -

ಭಾರತದಲ್ಲಿ 31 ಜನರಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಇದು ಜನರ ಆತಂಕಕ್ಕೆ ಕಾರಣವಾಗಿದ್ದು, ಜನ ಸಂದಣಿ ಇರುವ ಕಡೆಗೆ ಹೋಗಲು ಹೆದರಿಕೊಳ್ಳುತ್ತಿದ್ದಾರೆ. ಒಂದೊಮ್ಮೆ ಹೋಗಲೇ ಬೇಕಾದರೆ ಮಾಸ್ಕ್ ಧರಿಸಿ ಹೋಗುತ್ತಿರುವುದು ಸಾಮಾನ್ಯ ಸಂಗತಿಯಾಗಿದೆ. ಕೊರೋನ ವೈರಸ್ ಹರಡುವ ಮತ್ತು ಜನರು ವಹಿಸಬೇಕಾದ ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆ ಸಾಕಷ್ಟು ಪ್ರಚಾರವನ್ನು ನಡೆಸುತ್ತಿದೆ. ಹೀಗಾಗಿ ಜನರು ಎಚ್ಚರ ವಹಿಸುವ ಜೊತೆಗೆ ಸ್ವಲ್ಪಮಟ್ಟಿನ ಭೀತಿಗೂ ಒಳಗಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್‌ ಶಾ ಈ ಬಾರಿ ಹೋಳಿ ಹಬ್ಬದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಕೊರೋನಾ ವೈರಸ್ ಕುರಿತು ವದಂತಿ ಹಬ್ಬಿಸಿದರೆ ಶಿಕ್ಷೆ ಅನುಭವಿಸಬೇಕು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ  ನೀಡಿದೆ. ಹೀಗಾಗಿ ಜನರು ಜಾಗೃತಿಗೊಳ್ಳಲು ಮತ್ತು ಭೀತಿಗೊಳ್ಳಲು ಪುಷ್ಟಿ ನೀಡಿದೆ. ಸರ್ಕಾರಗಳು ಮತ್ತು ಆರೋಗ್ಯ ಇಲಾಖೆಯ ಕಾಳಜಿಯನ್ನು ಯಾರೂ ಪ್ರಶ್ನಿಸುವಂತಿಲ್ಲ. ಯಾವುದೇ ಸರ್ಕಾರ ಇದ್ದರೂ ಜನರು ವಹಿಸಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಜಾಗೃತಿ ಮೂಡಿಸಲೇಬೇಕು. ಆದರೆ ಇದೇ ಜನರ ಭೀತಿಗೆ ಕಾರಣವೂ ಆಗಬಾರದು ಅಲ್ಲವೇ?

ಮುಖ್ಯ ಸಂಗತಿಯೆಂದರೆ ತುಮಕೂರಿನಲ್ಲಿ ಕೊರೋನ ವೈರಸ್ ಭೀತಿ ಹೆಚ್ಚಾದಂತೆ ಕಂಡುಬರುತ್ತಿದೆ. ಇದೇ ಉದ್ದೇಶದಿಂದ ಮಾಸ್ಕ್ ಧರಿಸುವವರ ಸಂಖ್ಯೆ ಹೆಚ್ಚಾಗತೊಡಗಿದೆ. ಶಾಲೆಗೆ ಹೋಗುವ  ಮಕ್ಕಳಿಗೆ ಮಾಸ್ಕ್ ಹಾಕದೆ ಕಳಿಸುತ್ತಿಲ್ಲ. ಅಷ್ಟರಮಟ್ಟಿಗೆ ಜಾಗೃತಿ ಮತ್ತು ಭೀತಿ ಜಯರನ್ನು ಕಾಡತೊಡಗಿದೆ. ತುಮಕೂರು ನಗರದಲ್ಲಿ ಎಲ್ಲೆಂದರಲ್ಲಿ ರಸ್ತೆಗಳನ್ನು ಬಗೆದಿರುವುದರಿಂದ ಧೂಳು ಕೂಡ ಹೆಚ್ಚಾಗಿದೆ. ವಾಹನಗಳು ಮುಂದೆ ಸಾಗಿದರೆ ಸಾಕು ಸುಯ್ ಅಂತ ಧೂಳು ಮೆತ್ತಿಕೊಳ್ಳುತ್ತದೆ. ಧೂಳಿನಿಂದ ರಕ್ಷಣೆ ಪಡೆಯಲು ಜನರು ಮಾಸ್ಕ್ ಧರಿಸುವಂತಹ ಪರಿಸ್ಥಿತಿ ಬಂದಿದೆ. ಕೊರೋನ ಭೀತಿ ಒಂದು ಕಡೆಯಾದರೆ ಧೂಳಿನ ಭೀತಿ ಮತ್ತೊಂದು ಕಡೆ.  ಇಲ್ಲಿನ ಆರೋಗ್ಯ ಇಲಾಖೆ ಕೊರೋನ ವೈರಸ್ ಬಂದವರಿಗಾಗಿ ಚಿಕಿತ್ಸೆ ನೀಡಲು ಹತ್ತು ಹಾಸಿಗೆಯ ಕೊಠಡಿ ಸಿದ್ದಮಾಡಿಟ್ಟುಕೊಂಡಿದೆ. ಆದರೆ ಧೂಳಿನ ಬಗ್ಗೆ ಜಾಗೃತಿ ಮೂಡಿಸುವ ಗೋಜಿಗೆ ಹೋಗಿಲ್ಲ.

ಕೊರೋನ ವೈರಸ್ ಮತ್ತು ಧೂಳಿನಿಂದ ರಕ್ಷಣೆ ಪಡೆಯಲು ಜನರು ಕಳೆದೊಂದು ವಾರದಿಂದಲೂ ಮಾಸ್ಕ್ ಖರೀದಿಸಿತ್ತಿದ್ದು ಈಗ ತುಮಕೂರಿನಲ್ಲಿ ಮಾಸ್ಕ್ ಗಳ ಕೊರತೆ ಉಂಟಾಗಿದೆ. ಮೆಡಿಕಲ್ ಶಾಪ್ ಗಳಲ್ಲಿ ಮಾಸ್ಕ್ ಕೇಳಿದರೆ ಸ್ಟಾಕ್ ಇಲ್ಲ ಎಂಬ ಉತ್ತರ ಬರುತ್ತದೆ. ಕೊರೋನಾ ವೈರಸ್ ಹರಡುತ್ತದೆ ಎಂಬ ಕಾರಣಕ್ಕೆ ಜನರು ಮಾಸ್ಕ್ ಗಳನ್ನು ಖರೀದಿಸಿದರು. ನಮ್ಮ ಅಂಗಡಿಯಲ್ಲಿದ್ದ ಮಾಸ್ಕ್ ನ್ನು 20 ರೂ. 60 ರೂ. 150 ರೂಗಳಿಗೆ ಮಾರಾಟ ಮಾಡಿದೆವು. ಈಗ ಇಡೀ ತುಮಕೂರಿನಲ್ಲಿ ಮಾಸ್ಕ್ ಗಳ ಕೊರತೆ ಇದೆ. ಜನರು ಬಂದು ಕೇಳಿ ವಾಪಸ್ ಹೋಗುತ್ತಿದ್ದಾರೆ. ಇರೋವರಿಗೂ ಮಾರಾಟ ಮಾಡಿದೆ. ಈಗ ಸಿಗುತ್ತಿಲ್ಲ. ಎಲ್ಲಾ ಕಡೇನೂ ಇದೇ ಪರಿಸ್ಥಿತಿ ಇದೆ. ನೀವೇ ನೋಡ್ತಾ ಇದ್ದೀರಲ್ಲ. ಅಂಗಡಿನಲ್ಲಿ ಕುಳಿತಿರೋಕೆ ಆಗುತ್ತಿಲ್ಲ. ಧೂಳು. ನಗರಪಾಲಿಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬೇಸಿಗೆ ಬೇರೆ. ಧೂಳಿನಿಂದ ಹಲವು ರೋಗಗಳು ಬರುತ್ತವೆ ಜೊತೆಗೆ ಕೊರೋನಾ ಭೀತಿ ಬೇರೆ. ಏನ್ ಮಾಡೋದು ಹೇಳಿ ಎನ್ನುತ್ತಾರೆ ವಾಸವಿ ಮೆಡಿಕಲ್‌ನ ಕುಮಾರ್.

ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲೂ ಮಾಸ್ಕ್ ಗಳಿಗೆ ಬೇಡಿಕೆ ಹೆಚ್ಚಾಗಿದೆ. ಅವುಗಳ ಬೆಲೆ ಗಗನಕ್ಕೇರಿದೆ. ಕೆಲವು ಶಾಲೆಗಳು ಪ್ರತಿಯೊಂದು ಮಗುವಿಗೂ ಮಾಸ್ಕ್ ಧರಿಸಿ ಬರುವುದನ್ನು ಕಡ್ಡಾಯ ಮಾಡಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಮಾಸ್ಕ್ ಗಳಿಗೆ ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಬಳ್ಳಾಪುರದಲ್ಲಿ ಖಾಸಗಿ ಶಾಲೆಗಳು ಮಕ್ಕಳಿಗೆ ಮಾಸ್ಕ್ ಕೊಡುತ್ತಿವೆ. ಹೀಗಾಗಿ ಮಾಸ್ಕ್ ಗಳು ಸಿಗುತ್ತಿಲ್ಲ. ಕೊರೋನಾ ವೈರಸ್ ಹರಡುವುದನ್ನು ತಪ್ಪಿಸಲು ಮಾಸ್ಕ್ ಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದರೆ ಮಾಸ್ಕ್ ಗಳ ಕೊರತೆ ಉಂಟಾಗಿದ್ದು ಇದಕ್ಕೆ ಆಯಾ ಜಿಲ್ಲಾಡಳಿತಗಳು ಮತ್ತು ಆರೋಗ್ಯ ಇಲಾಖೆಗಳು ಕ್ರಮ ಕೈಗೊಂಡಂತೆ ಕಂಡುಬರುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...