Homeಕರ್ನಾಟಕಎಲ್ಲೆಡೆ ಕೊರೋನ ಭೀತಿ : ಮಾಸ್ಕ್ ಸಿಗದೆ ಜನರ ಪರದಾಟ

ಎಲ್ಲೆಡೆ ಕೊರೋನ ಭೀತಿ : ಮಾಸ್ಕ್ ಸಿಗದೆ ಜನರ ಪರದಾಟ

- Advertisement -
- Advertisement -

ಭಾರತದಲ್ಲಿ 31 ಜನರಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಇದು ಜನರ ಆತಂಕಕ್ಕೆ ಕಾರಣವಾಗಿದ್ದು, ಜನ ಸಂದಣಿ ಇರುವ ಕಡೆಗೆ ಹೋಗಲು ಹೆದರಿಕೊಳ್ಳುತ್ತಿದ್ದಾರೆ. ಒಂದೊಮ್ಮೆ ಹೋಗಲೇ ಬೇಕಾದರೆ ಮಾಸ್ಕ್ ಧರಿಸಿ ಹೋಗುತ್ತಿರುವುದು ಸಾಮಾನ್ಯ ಸಂಗತಿಯಾಗಿದೆ. ಕೊರೋನ ವೈರಸ್ ಹರಡುವ ಮತ್ತು ಜನರು ವಹಿಸಬೇಕಾದ ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆ ಸಾಕಷ್ಟು ಪ್ರಚಾರವನ್ನು ನಡೆಸುತ್ತಿದೆ. ಹೀಗಾಗಿ ಜನರು ಎಚ್ಚರ ವಹಿಸುವ ಜೊತೆಗೆ ಸ್ವಲ್ಪಮಟ್ಟಿನ ಭೀತಿಗೂ ಒಳಗಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್‌ ಶಾ ಈ ಬಾರಿ ಹೋಳಿ ಹಬ್ಬದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಕೊರೋನಾ ವೈರಸ್ ಕುರಿತು ವದಂತಿ ಹಬ್ಬಿಸಿದರೆ ಶಿಕ್ಷೆ ಅನುಭವಿಸಬೇಕು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ  ನೀಡಿದೆ. ಹೀಗಾಗಿ ಜನರು ಜಾಗೃತಿಗೊಳ್ಳಲು ಮತ್ತು ಭೀತಿಗೊಳ್ಳಲು ಪುಷ್ಟಿ ನೀಡಿದೆ. ಸರ್ಕಾರಗಳು ಮತ್ತು ಆರೋಗ್ಯ ಇಲಾಖೆಯ ಕಾಳಜಿಯನ್ನು ಯಾರೂ ಪ್ರಶ್ನಿಸುವಂತಿಲ್ಲ. ಯಾವುದೇ ಸರ್ಕಾರ ಇದ್ದರೂ ಜನರು ವಹಿಸಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಜಾಗೃತಿ ಮೂಡಿಸಲೇಬೇಕು. ಆದರೆ ಇದೇ ಜನರ ಭೀತಿಗೆ ಕಾರಣವೂ ಆಗಬಾರದು ಅಲ್ಲವೇ?

ಮುಖ್ಯ ಸಂಗತಿಯೆಂದರೆ ತುಮಕೂರಿನಲ್ಲಿ ಕೊರೋನ ವೈರಸ್ ಭೀತಿ ಹೆಚ್ಚಾದಂತೆ ಕಂಡುಬರುತ್ತಿದೆ. ಇದೇ ಉದ್ದೇಶದಿಂದ ಮಾಸ್ಕ್ ಧರಿಸುವವರ ಸಂಖ್ಯೆ ಹೆಚ್ಚಾಗತೊಡಗಿದೆ. ಶಾಲೆಗೆ ಹೋಗುವ  ಮಕ್ಕಳಿಗೆ ಮಾಸ್ಕ್ ಹಾಕದೆ ಕಳಿಸುತ್ತಿಲ್ಲ. ಅಷ್ಟರಮಟ್ಟಿಗೆ ಜಾಗೃತಿ ಮತ್ತು ಭೀತಿ ಜಯರನ್ನು ಕಾಡತೊಡಗಿದೆ. ತುಮಕೂರು ನಗರದಲ್ಲಿ ಎಲ್ಲೆಂದರಲ್ಲಿ ರಸ್ತೆಗಳನ್ನು ಬಗೆದಿರುವುದರಿಂದ ಧೂಳು ಕೂಡ ಹೆಚ್ಚಾಗಿದೆ. ವಾಹನಗಳು ಮುಂದೆ ಸಾಗಿದರೆ ಸಾಕು ಸುಯ್ ಅಂತ ಧೂಳು ಮೆತ್ತಿಕೊಳ್ಳುತ್ತದೆ. ಧೂಳಿನಿಂದ ರಕ್ಷಣೆ ಪಡೆಯಲು ಜನರು ಮಾಸ್ಕ್ ಧರಿಸುವಂತಹ ಪರಿಸ್ಥಿತಿ ಬಂದಿದೆ. ಕೊರೋನ ಭೀತಿ ಒಂದು ಕಡೆಯಾದರೆ ಧೂಳಿನ ಭೀತಿ ಮತ್ತೊಂದು ಕಡೆ.  ಇಲ್ಲಿನ ಆರೋಗ್ಯ ಇಲಾಖೆ ಕೊರೋನ ವೈರಸ್ ಬಂದವರಿಗಾಗಿ ಚಿಕಿತ್ಸೆ ನೀಡಲು ಹತ್ತು ಹಾಸಿಗೆಯ ಕೊಠಡಿ ಸಿದ್ದಮಾಡಿಟ್ಟುಕೊಂಡಿದೆ. ಆದರೆ ಧೂಳಿನ ಬಗ್ಗೆ ಜಾಗೃತಿ ಮೂಡಿಸುವ ಗೋಜಿಗೆ ಹೋಗಿಲ್ಲ.

ಕೊರೋನ ವೈರಸ್ ಮತ್ತು ಧೂಳಿನಿಂದ ರಕ್ಷಣೆ ಪಡೆಯಲು ಜನರು ಕಳೆದೊಂದು ವಾರದಿಂದಲೂ ಮಾಸ್ಕ್ ಖರೀದಿಸಿತ್ತಿದ್ದು ಈಗ ತುಮಕೂರಿನಲ್ಲಿ ಮಾಸ್ಕ್ ಗಳ ಕೊರತೆ ಉಂಟಾಗಿದೆ. ಮೆಡಿಕಲ್ ಶಾಪ್ ಗಳಲ್ಲಿ ಮಾಸ್ಕ್ ಕೇಳಿದರೆ ಸ್ಟಾಕ್ ಇಲ್ಲ ಎಂಬ ಉತ್ತರ ಬರುತ್ತದೆ. ಕೊರೋನಾ ವೈರಸ್ ಹರಡುತ್ತದೆ ಎಂಬ ಕಾರಣಕ್ಕೆ ಜನರು ಮಾಸ್ಕ್ ಗಳನ್ನು ಖರೀದಿಸಿದರು. ನಮ್ಮ ಅಂಗಡಿಯಲ್ಲಿದ್ದ ಮಾಸ್ಕ್ ನ್ನು 20 ರೂ. 60 ರೂ. 150 ರೂಗಳಿಗೆ ಮಾರಾಟ ಮಾಡಿದೆವು. ಈಗ ಇಡೀ ತುಮಕೂರಿನಲ್ಲಿ ಮಾಸ್ಕ್ ಗಳ ಕೊರತೆ ಇದೆ. ಜನರು ಬಂದು ಕೇಳಿ ವಾಪಸ್ ಹೋಗುತ್ತಿದ್ದಾರೆ. ಇರೋವರಿಗೂ ಮಾರಾಟ ಮಾಡಿದೆ. ಈಗ ಸಿಗುತ್ತಿಲ್ಲ. ಎಲ್ಲಾ ಕಡೇನೂ ಇದೇ ಪರಿಸ್ಥಿತಿ ಇದೆ. ನೀವೇ ನೋಡ್ತಾ ಇದ್ದೀರಲ್ಲ. ಅಂಗಡಿನಲ್ಲಿ ಕುಳಿತಿರೋಕೆ ಆಗುತ್ತಿಲ್ಲ. ಧೂಳು. ನಗರಪಾಲಿಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬೇಸಿಗೆ ಬೇರೆ. ಧೂಳಿನಿಂದ ಹಲವು ರೋಗಗಳು ಬರುತ್ತವೆ ಜೊತೆಗೆ ಕೊರೋನಾ ಭೀತಿ ಬೇರೆ. ಏನ್ ಮಾಡೋದು ಹೇಳಿ ಎನ್ನುತ್ತಾರೆ ವಾಸವಿ ಮೆಡಿಕಲ್‌ನ ಕುಮಾರ್.

ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲೂ ಮಾಸ್ಕ್ ಗಳಿಗೆ ಬೇಡಿಕೆ ಹೆಚ್ಚಾಗಿದೆ. ಅವುಗಳ ಬೆಲೆ ಗಗನಕ್ಕೇರಿದೆ. ಕೆಲವು ಶಾಲೆಗಳು ಪ್ರತಿಯೊಂದು ಮಗುವಿಗೂ ಮಾಸ್ಕ್ ಧರಿಸಿ ಬರುವುದನ್ನು ಕಡ್ಡಾಯ ಮಾಡಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಮಾಸ್ಕ್ ಗಳಿಗೆ ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಬಳ್ಳಾಪುರದಲ್ಲಿ ಖಾಸಗಿ ಶಾಲೆಗಳು ಮಕ್ಕಳಿಗೆ ಮಾಸ್ಕ್ ಕೊಡುತ್ತಿವೆ. ಹೀಗಾಗಿ ಮಾಸ್ಕ್ ಗಳು ಸಿಗುತ್ತಿಲ್ಲ. ಕೊರೋನಾ ವೈರಸ್ ಹರಡುವುದನ್ನು ತಪ್ಪಿಸಲು ಮಾಸ್ಕ್ ಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದರೆ ಮಾಸ್ಕ್ ಗಳ ಕೊರತೆ ಉಂಟಾಗಿದ್ದು ಇದಕ್ಕೆ ಆಯಾ ಜಿಲ್ಲಾಡಳಿತಗಳು ಮತ್ತು ಆರೋಗ್ಯ ಇಲಾಖೆಗಳು ಕ್ರಮ ಕೈಗೊಂಡಂತೆ ಕಂಡುಬರುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...