Homeಕರ್ನಾಟಕಎಲ್ಲೆಡೆ ಕೊರೋನ ಭೀತಿ : ಮಾಸ್ಕ್ ಸಿಗದೆ ಜನರ ಪರದಾಟ

ಎಲ್ಲೆಡೆ ಕೊರೋನ ಭೀತಿ : ಮಾಸ್ಕ್ ಸಿಗದೆ ಜನರ ಪರದಾಟ

- Advertisement -
- Advertisement -

ಭಾರತದಲ್ಲಿ 31 ಜನರಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಇದು ಜನರ ಆತಂಕಕ್ಕೆ ಕಾರಣವಾಗಿದ್ದು, ಜನ ಸಂದಣಿ ಇರುವ ಕಡೆಗೆ ಹೋಗಲು ಹೆದರಿಕೊಳ್ಳುತ್ತಿದ್ದಾರೆ. ಒಂದೊಮ್ಮೆ ಹೋಗಲೇ ಬೇಕಾದರೆ ಮಾಸ್ಕ್ ಧರಿಸಿ ಹೋಗುತ್ತಿರುವುದು ಸಾಮಾನ್ಯ ಸಂಗತಿಯಾಗಿದೆ. ಕೊರೋನ ವೈರಸ್ ಹರಡುವ ಮತ್ತು ಜನರು ವಹಿಸಬೇಕಾದ ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆ ಸಾಕಷ್ಟು ಪ್ರಚಾರವನ್ನು ನಡೆಸುತ್ತಿದೆ. ಹೀಗಾಗಿ ಜನರು ಎಚ್ಚರ ವಹಿಸುವ ಜೊತೆಗೆ ಸ್ವಲ್ಪಮಟ್ಟಿನ ಭೀತಿಗೂ ಒಳಗಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್‌ ಶಾ ಈ ಬಾರಿ ಹೋಳಿ ಹಬ್ಬದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಕೊರೋನಾ ವೈರಸ್ ಕುರಿತು ವದಂತಿ ಹಬ್ಬಿಸಿದರೆ ಶಿಕ್ಷೆ ಅನುಭವಿಸಬೇಕು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ  ನೀಡಿದೆ. ಹೀಗಾಗಿ ಜನರು ಜಾಗೃತಿಗೊಳ್ಳಲು ಮತ್ತು ಭೀತಿಗೊಳ್ಳಲು ಪುಷ್ಟಿ ನೀಡಿದೆ. ಸರ್ಕಾರಗಳು ಮತ್ತು ಆರೋಗ್ಯ ಇಲಾಖೆಯ ಕಾಳಜಿಯನ್ನು ಯಾರೂ ಪ್ರಶ್ನಿಸುವಂತಿಲ್ಲ. ಯಾವುದೇ ಸರ್ಕಾರ ಇದ್ದರೂ ಜನರು ವಹಿಸಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಜಾಗೃತಿ ಮೂಡಿಸಲೇಬೇಕು. ಆದರೆ ಇದೇ ಜನರ ಭೀತಿಗೆ ಕಾರಣವೂ ಆಗಬಾರದು ಅಲ್ಲವೇ?

ಮುಖ್ಯ ಸಂಗತಿಯೆಂದರೆ ತುಮಕೂರಿನಲ್ಲಿ ಕೊರೋನ ವೈರಸ್ ಭೀತಿ ಹೆಚ್ಚಾದಂತೆ ಕಂಡುಬರುತ್ತಿದೆ. ಇದೇ ಉದ್ದೇಶದಿಂದ ಮಾಸ್ಕ್ ಧರಿಸುವವರ ಸಂಖ್ಯೆ ಹೆಚ್ಚಾಗತೊಡಗಿದೆ. ಶಾಲೆಗೆ ಹೋಗುವ  ಮಕ್ಕಳಿಗೆ ಮಾಸ್ಕ್ ಹಾಕದೆ ಕಳಿಸುತ್ತಿಲ್ಲ. ಅಷ್ಟರಮಟ್ಟಿಗೆ ಜಾಗೃತಿ ಮತ್ತು ಭೀತಿ ಜಯರನ್ನು ಕಾಡತೊಡಗಿದೆ. ತುಮಕೂರು ನಗರದಲ್ಲಿ ಎಲ್ಲೆಂದರಲ್ಲಿ ರಸ್ತೆಗಳನ್ನು ಬಗೆದಿರುವುದರಿಂದ ಧೂಳು ಕೂಡ ಹೆಚ್ಚಾಗಿದೆ. ವಾಹನಗಳು ಮುಂದೆ ಸಾಗಿದರೆ ಸಾಕು ಸುಯ್ ಅಂತ ಧೂಳು ಮೆತ್ತಿಕೊಳ್ಳುತ್ತದೆ. ಧೂಳಿನಿಂದ ರಕ್ಷಣೆ ಪಡೆಯಲು ಜನರು ಮಾಸ್ಕ್ ಧರಿಸುವಂತಹ ಪರಿಸ್ಥಿತಿ ಬಂದಿದೆ. ಕೊರೋನ ಭೀತಿ ಒಂದು ಕಡೆಯಾದರೆ ಧೂಳಿನ ಭೀತಿ ಮತ್ತೊಂದು ಕಡೆ.  ಇಲ್ಲಿನ ಆರೋಗ್ಯ ಇಲಾಖೆ ಕೊರೋನ ವೈರಸ್ ಬಂದವರಿಗಾಗಿ ಚಿಕಿತ್ಸೆ ನೀಡಲು ಹತ್ತು ಹಾಸಿಗೆಯ ಕೊಠಡಿ ಸಿದ್ದಮಾಡಿಟ್ಟುಕೊಂಡಿದೆ. ಆದರೆ ಧೂಳಿನ ಬಗ್ಗೆ ಜಾಗೃತಿ ಮೂಡಿಸುವ ಗೋಜಿಗೆ ಹೋಗಿಲ್ಲ.

ಕೊರೋನ ವೈರಸ್ ಮತ್ತು ಧೂಳಿನಿಂದ ರಕ್ಷಣೆ ಪಡೆಯಲು ಜನರು ಕಳೆದೊಂದು ವಾರದಿಂದಲೂ ಮಾಸ್ಕ್ ಖರೀದಿಸಿತ್ತಿದ್ದು ಈಗ ತುಮಕೂರಿನಲ್ಲಿ ಮಾಸ್ಕ್ ಗಳ ಕೊರತೆ ಉಂಟಾಗಿದೆ. ಮೆಡಿಕಲ್ ಶಾಪ್ ಗಳಲ್ಲಿ ಮಾಸ್ಕ್ ಕೇಳಿದರೆ ಸ್ಟಾಕ್ ಇಲ್ಲ ಎಂಬ ಉತ್ತರ ಬರುತ್ತದೆ. ಕೊರೋನಾ ವೈರಸ್ ಹರಡುತ್ತದೆ ಎಂಬ ಕಾರಣಕ್ಕೆ ಜನರು ಮಾಸ್ಕ್ ಗಳನ್ನು ಖರೀದಿಸಿದರು. ನಮ್ಮ ಅಂಗಡಿಯಲ್ಲಿದ್ದ ಮಾಸ್ಕ್ ನ್ನು 20 ರೂ. 60 ರೂ. 150 ರೂಗಳಿಗೆ ಮಾರಾಟ ಮಾಡಿದೆವು. ಈಗ ಇಡೀ ತುಮಕೂರಿನಲ್ಲಿ ಮಾಸ್ಕ್ ಗಳ ಕೊರತೆ ಇದೆ. ಜನರು ಬಂದು ಕೇಳಿ ವಾಪಸ್ ಹೋಗುತ್ತಿದ್ದಾರೆ. ಇರೋವರಿಗೂ ಮಾರಾಟ ಮಾಡಿದೆ. ಈಗ ಸಿಗುತ್ತಿಲ್ಲ. ಎಲ್ಲಾ ಕಡೇನೂ ಇದೇ ಪರಿಸ್ಥಿತಿ ಇದೆ. ನೀವೇ ನೋಡ್ತಾ ಇದ್ದೀರಲ್ಲ. ಅಂಗಡಿನಲ್ಲಿ ಕುಳಿತಿರೋಕೆ ಆಗುತ್ತಿಲ್ಲ. ಧೂಳು. ನಗರಪಾಲಿಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬೇಸಿಗೆ ಬೇರೆ. ಧೂಳಿನಿಂದ ಹಲವು ರೋಗಗಳು ಬರುತ್ತವೆ ಜೊತೆಗೆ ಕೊರೋನಾ ಭೀತಿ ಬೇರೆ. ಏನ್ ಮಾಡೋದು ಹೇಳಿ ಎನ್ನುತ್ತಾರೆ ವಾಸವಿ ಮೆಡಿಕಲ್‌ನ ಕುಮಾರ್.

ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲೂ ಮಾಸ್ಕ್ ಗಳಿಗೆ ಬೇಡಿಕೆ ಹೆಚ್ಚಾಗಿದೆ. ಅವುಗಳ ಬೆಲೆ ಗಗನಕ್ಕೇರಿದೆ. ಕೆಲವು ಶಾಲೆಗಳು ಪ್ರತಿಯೊಂದು ಮಗುವಿಗೂ ಮಾಸ್ಕ್ ಧರಿಸಿ ಬರುವುದನ್ನು ಕಡ್ಡಾಯ ಮಾಡಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಮಾಸ್ಕ್ ಗಳಿಗೆ ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಬಳ್ಳಾಪುರದಲ್ಲಿ ಖಾಸಗಿ ಶಾಲೆಗಳು ಮಕ್ಕಳಿಗೆ ಮಾಸ್ಕ್ ಕೊಡುತ್ತಿವೆ. ಹೀಗಾಗಿ ಮಾಸ್ಕ್ ಗಳು ಸಿಗುತ್ತಿಲ್ಲ. ಕೊರೋನಾ ವೈರಸ್ ಹರಡುವುದನ್ನು ತಪ್ಪಿಸಲು ಮಾಸ್ಕ್ ಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದರೆ ಮಾಸ್ಕ್ ಗಳ ಕೊರತೆ ಉಂಟಾಗಿದ್ದು ಇದಕ್ಕೆ ಆಯಾ ಜಿಲ್ಲಾಡಳಿತಗಳು ಮತ್ತು ಆರೋಗ್ಯ ಇಲಾಖೆಗಳು ಕ್ರಮ ಕೈಗೊಂಡಂತೆ ಕಂಡುಬರುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...