Homeಆರೋಗ್ಯಬೆಂಗಳೂರಿನ ಗೂಗಲ್ ಉದ್ಯೋಗಿಗೆ ಕೊರೊನಾ ವೈರಸ್ ಸೋಂಕು: ಸಹೋದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚನೆ

ಬೆಂಗಳೂರಿನ ಗೂಗಲ್ ಉದ್ಯೋಗಿಗೆ ಕೊರೊನಾ ವೈರಸ್ ಸೋಂಕು: ಸಹೋದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚನೆ

- Advertisement -
- Advertisement -

ಬೆಂಗಳೂರಿನಲ್ಲಿನ ತನ್ನ ಉದ್ಯೋಗಿಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ ಎಂದು ಗೂಗಲ್ ತಿಳಿಸಿದೆ. 26 ವರ್ಷದ ಯುವಕ ಇತ್ತೀಚೆಗೆ ಗ್ರೀಸ್‌ನಿಂದ ಹಿಂದಿರುಗಿದ್ದು, ಬೆಂಗಳೂರಿನ ಹಲವಾರು ಸ್ಥಳಗಳಿಗೆ ಭೇಟಿ ನೀಡಿದ್ದ ಎಂದು ಹೇಳಲಾಗಿದೆ.

ಅವರನ್ನು ಬೆಂಗಳೂರು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಎಂದು ಕರ್ನಾಟಕ ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. ಅವರೊಂದಿಗೆ ಸಂಪರ್ಕಕ್ಕೆ ಬಂದಿರುವ ಜನರನ್ನು ಪತ್ತೆಹಚ್ಚಲಾಗುತ್ತಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಈ ವ್ಯಕ್ತಿ ಕೆಲವು ಗಂಟೆಗಳ ಕಾಲ ತನ್ನ ಕಚೇರಿಯಲ್ಲಿದ್ದನು ಎಂದು ಗೂಗಲ್ ಹೇಳಿದೆ. ಹಾಗಾಗಿ ಇತರ ಉದ್ಯೋಗಿಗಳನ್ನು ಮನೆಯಿಂದ ಕೆಲಸ ಮಾಡಲು ತಿಳಿಸಲಾಗಿದೆ ಮತ್ತು ರೋಗಿಯೊಂದಿಗೆ ನಿಕಟ ಸಂಪರ್ಕಕ್ಕೆ ಬಂದಿರುವವರು ತಮ್ಮನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ.

“ನಮ್ಮ ಬೆಂಗಳೂರು ಕಚೇರಿಯ ಉದ್ಯೋಗಿಗೆ ಕೋವಿಡ್‌-19 ಸೋಂಕು ತಗುಲಿದೆ ಎಂದು ದೃಢೀಕರಿಸಲ್ಪಟ್ಟಿದೆ. ಯಾವುದೇ ರೋಗಲಕ್ಷಣಗಳು ಕಾಣಿಸಿಕೊಳ್ಳುವ ಮೊದಲು ಅವರು ಕೆಲವು ಗಂಟೆಗಳ ಕಾಲ ನಮ್ಮ ಬೆಂಗಳೂರು ಕಚೇರಿಯಲ್ಲಿದ್ದರು. ಉದ್ಯೋಗಿ ಅಂದಿನಿಂದಲೂ ಸಂಪರ್ಕ ತಡೆಯಲ್ಲಿದ್ದಾರೆ ಎಂದು ಜಾಗತಿಕ ಸಾಫ್ಟ್‌ವೇರ್ ದೈತ್ಯ ಕಂಪನಿ ಗೂಗಲ್‌ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

“ಸಾಕಷ್ಟು ಎಚ್ಚರಿಕೆಯಿಂದ, ನಾವು ಆ ಬೆಂಗಳೂರು ಕಚೇರಿಯಲ್ಲಿರುವ ನೌಕರರನ್ನು ನಾಳೆ (ಶುಕ್ರವಾರ) ಮನೆಯಿಂದ ಕೆಲಸ ಮಾಡುವಂತೆ ಕೇಳುತ್ತಿದ್ದೇವೆ” ಎಂದು ಗೂಗಲ್ ಹೇಳಿದೆ.

ಡೆಲ್ ಇಂಡಿಯಾ ಮತ್ತು ಮೈಂಡ್‌ಟ್ರೀ ನಂತರ, ಗೂಗಲ್‌ ಉದ್ಯೋಗಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಭಾರತದಲ್ಲಿ ಇದು ಮೂರನೆಯ ಪ್ರಕರಣವಾಗಿದೆ.

ಭಾರತದ ಮೊದಲ ಕೊರೊನಾ ವೈರಸ್ ಸಾವು ಕರ್ನಾಟಕದಿಂದ ಗುರುವಾರ ವರದಿಯಾಗಿದೆ. ಇತ್ತೀಚೆಗೆ ಸೌದಿ ಅರೇಬಿಯಾದಿಂದ ಹಿಂದಿರುಗಿದ 76 ವರ್ಷದ ವ್ಯಕ್ತಿ ಮಂಗಳವಾರ ನಿಧನರಾದರು. ಅವನ ಮರಣದ ನಂತರ ಅವನ ಮಾದರಿಗಳು COVID-19 ಗೆ ಸಕಾರಾತ್ಮಕವೆಂದು ದೃಢಪಡಿಸಲಾಯಿತು.

ಆರನೇ ವೈರಸ್ ಪ್ರಕರಣ ಎಂದು ನಂಬಲಾದ ಗೂಗಲ್ ಸಿಬ್ಬಂದಿ ಸುತ್ತಲೂ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಪ್ರಾರಂಭಿಸಿದೆ. ಉದ್ಯೋಗಿಗೆ ಯಾವುದೇ ರೋಗಲಕ್ಷಣಗಳಿಲ್ಲ ಮತ್ತು ಜ್ವರವಿಲ್ಲದ ಕಾರಣ ಗೂಗಲ್ ಕಚೇರಿಯೊಳಗೆ ಅನುಮತಿಸಲಾಗಿದೆ. ಕೆಲವು ಗಂಟೆಗಳ ನಂತರ ಅವರಿಗೆ ಅನಾರೋಗ್ಯದ ಭಾವನೆ ಬಂದಾಗ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ವರದಿಯಾಗಿದೆ.

ಫೆಬ್ರವರಿಯಲ್ಲಿ ಮದುವೆಯಾದ ನಂತರ ಈ ವ್ಯಕ್ತಿ ಗ್ರೀಸ್‌ಗೆ ಪ್ರಯಾಣಿಸಿದ್ದ. ಅವರು ವಿಮಾನ ನಿಲ್ದಾಣದಿಂದ ಮನೆಗೆ ಹಿಂದಿರುಗಿದ ಕ್ಯಾಬ್ ಸಹ ಪತ್ತೆಯಾಗಿದ್ದು, ಚಾಲಕ ಮತ್ತು ಅವರ ಕುಟುಂಬವನ್ನು ಮನೆಯಲ್ಲಿಯೇ ನಿರ್ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...