Homeಆರೋಗ್ಯಕೊರೊನಾ ವೈರಸ್ ಹಾಸ್ಯಾಸ್ಪದ ಮತ್ತು ಅತಾರ್ಕಿಕ ಸಮೂಹ ಸನ್ನಿ

ಕೊರೊನಾ ವೈರಸ್ ಹಾಸ್ಯಾಸ್ಪದ ಮತ್ತು ಅತಾರ್ಕಿಕ ಸಮೂಹ ಸನ್ನಿ

- Advertisement -
- Advertisement -

ವೆಲ್ಲೂರಿನ ಸಿಎಂಸಿ ಆಸ್ಪತ್ರೆಯ ಪ್ರೊಫೆಸರ್ ಗಗನ್‍ದೀಪ್ ಕಾಂಗ್ ಅವರು ಅಂತರ್ರಾಷ್ಟ್ರೀಯ ಸಾಂಕ್ರಾಮಿಕ ರೋಗಗಳನ್ನೆದುರಿಸುವ ಸಿದ್ಧತೆಗಳ ಆವಿಷ್ಕಾರ ಕೇಂದ್ರದ ಉಪ ಮುಖ್ಯಸ್ಥರೂ ಆಗಿದ್ದಾರೆ. ಅಂತಹವರೂ ಸೇರಿದಂತೆ ಜಗತ್ತಿನ ಹಲವು ತಜ್ಞರು ಈ ಸಮೂಹ ಸನ್ನಿ ಹಾಸ್ಯಾಸ್ಪದವೆಂಬುದನ್ನು ಬೇರೆ ಬೇರೆ ಮಾತುಗಳಲ್ಲಿ ಹೇಳುತ್ತಿದ್ದಾರೆ. ಆದರೆ, ಎಲ್ಲಾ ಮಾತುಗಳಾಚೆ ಹೇಳುವ ಎಚ್ಚರಿಕೆಯ ಸೂಚನೆಗಳನ್ನೇ ಜನರು ಹೆಚ್ಚೆಚ್ಚು ಪ್ರಚಾರಕ್ಕೆ ತರುತ್ತಾರೆ; ಅದನ್ನು ಉತ್ಪ್ರೇಕ್ಷಿಸಿ ಹರಡಲು ಮಾಧ್ಯಮಗಳು ಕಾಯುತ್ತಿರುತ್ತವೆ.

ಈ ಲೇಖನ ಬರೆಯಲು ಶುರು ಮಾಡುವ ಹೊತ್ತಿಗೆ ಕೊರೊನಾ ವೈರಸ್ ಎಂಬುದು ಒಂದು ಅತ್ಯಂತ ಮಾರಣಾಂತಿಕ ಕಾಯಿಲೆಯೇನೋ ಎಂಬ ಭಾವನೆ ಹೆಚ್ಚಾಗುತ್ತಿದೆ. ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯು 5ನೇ ತರಗತಿಯವರೆಗಿನ ಮಕ್ಕಳಿಗೆ ಈ ಶೈಕ್ಷಣಿಕ ವರ್ಷದ ಉಳಿದ ಅವಧಿಗೆ ರಜೆ ಘೋಷಿಸಿದೆ. ದೇಶದ ಯಾವುದೇ ಕಂಪೆನಿಯ ಮೊಬೈಲ್‍ಗೆ ಯಾರೇ ಫೋನ್ ಮಾಡಿದರೂ ಕೆಮ್ಮಿನ ಶಬ್ದ ಕೇಳುತ್ತಿದೆ. ಫೋನ್ ರಿಸೀವ್ ಮಾಡಿದವರದ್ದಲ್ಲ; ಕೊರೊನಾ ವೈರಸ್‍ನ ಕುರಿತು ಜಾಗೃತಿ ಮೂಡಿಸುವ ಸಂದೇಶದ ಭಾಗವಾಗಿ! ನಿನ್ನೆ ಮುಂಬೈ ಷೇರುಪೇಟೆ ದಾಖಲೆ ಪ್ರಮಾಣದ ಕುಸಿತ ಕಂಡಿದ್ದು, ಅದಕ್ಕೆ ಸೌದಿ ಅರೇಬಿಯಾ ಸರ್ಕಾರದ ನೀತಿಯಿಂದ ತೈಲ ಬೆಲೆ ಕುಸಿದಿದ್ದಕ್ಕಿಂತ ಕೊರೊನಾ ವೈರಸ್‍ನಿಂದ ಪ್ರಪಂಚದ ಆರ್ಥಿಕತೆಯೇ ಕುಸಿಯುವ ಭೀತಿ ಉಂಟಾಗಿರುವುದು ಕಾರಣ ಎಂದು ಬಹುತೇಕ ಪತ್ರಿಕೆಗಳು ಮುಖಪುಟದ ವರದಿ ಪ್ರಕಟಿಸಿವೆ.

ಸದ್ಯದ ಹೊತ್ತಿನಲ್ಲಿ ಇದಕ್ಕಿಂತ ಹಾಸ್ಯಾಸ್ಪದವಾದ ಮತ್ತೊಂದು ಸಂಗತಿ ಪ್ರಪಂಚದಲ್ಲಿ ಸಂಭವಿಸುತ್ತಿಲ್ಲ ಎಂದು ಕನಿಷ್ಠ ವೈದ್ಯಕೀಯ ಜ್ಞಾನ ಇರುವ ಯಾರು ಬೇಕಾದರೂ ಹೇಳಬಹುದಿತ್ತು. ಆದರೆ ವೈದ್ಯಕೀಯ ಮಾಹಿತಿಯನ್ನೂ ಮುಂದಿಟ್ಟುಕೊಂಡು ಹೆಚ್ಚೆಚ್ಚು ಆತಂಕವನ್ನು ಸೃಷ್ಟಿ ಮಾಡುವ ಕೆಲಸವನ್ನು ಮಾಧ್ಯಮಗಳು ಮಾತ್ರವಲ್ಲದೇ ಸರ್ಕಾರವೂ ಮಾಡುತ್ತಿದೆ.

ನಿಜವಾಗಲೂ ಈ ಸಂದರ್ಭದಲ್ಲಿ ಕೊರೊನಾ ವೈರಸ್‍ಗೆ ಸಂಬಂಧಿಸಿದ ದೊಡ್ಡದೊಂದು ರೋಗ ಪ್ರಪಂಚವನ್ನು ಆವರಿಸಿದೆ. ಅದು ಆತಂಕವನ್ನು ಹರಡುವ ರೋಗ. ವೈರಸ್ ಇದೆ; ನೆಗಡಿಯ ವೈರಸ್. ಇದುವರೆಗೆ ಇದ್ದ ಕೊರೊನಾ ವೈರಸ್ಸೇ ಸ್ವಲ್ಪ ಮ್ಯುಟೇಷನ್ ಆಗಿ (ಅಂದರೆ ಅದರ ಜೀನ್‍ನಲ್ಲಿ ವ್ಯತ್ಯಾಸ ಆಗಿ) ಹೊಸದೊಂದು ವೈರಸ್ ಸೃಷ್ಟಿಯಾಗಿದೆ. ಅದನ್ನು ಕೋವಿದ್ 19 ಎಂದು ಕರೆಯಲಾಗಿದೆ. ಹೊಸಾ ವೈರಸ್ ಆದ್ದರಿಂದ ಅದಕ್ಕೆ ಶಕ್ತಿ ಹೆಚ್ಚು. ಮನುಷ್ಯರು ಅದನ್ನು ಎದುರಿಸಲು ಸ್ವಲ್ಪ ಸಮಯ ಬೇಕು. ಹಾಗಂತ ಇದು ಬಹಳ ಮಾರಣಾಂತಿಕ ವೈರಸ್ ಅಲ್ಲ. ನಿಜ ಹೇಳಬೇಕೆಂದರೆ ಸಾರ್ಸ್, ಎಬೋಲಾಗಳಿಗಿಂತ ಕಡಿಮೆ ಶಕ್ತಿಯ ವೈರಸ್. ಶೇ.80ಕ್ಕೂ ಹೆಚ್ಚು ಸಾವುಗಳು ಆಗಿರುವುದು ಬಹಳ ವಯಸ್ಸಾದವರು, ಅದರಲ್ಲೂ ಬೇರೇನೋ ಕಾಯಿಲೆ ಇದ್ದವರು. ಫೆಬ್ರವರಿ ಕೊನೆಯ ಭಾಗದವರೆಗೆ ಸಣ್ಣ ಮಕ್ಕಳು ಈ ವೈರಸ್ ಸೋಂಕಿನಿಂದ ಸತ್ತ ಒಂದೂ ಪ್ರಕರಣ ವರದಿಯಾಗಿರಲಿಲ್ಲ.

ಆತಂಕವನ್ನು ಹರಡುವ ರೋಗದ ಕುರಿತು ಹೋಗುವ ಮುನ್ನ ಒಂದು ಮಾತನ್ನು ಹೇಳಬೇಕು. ನೆಗಡಿ, ಕೆಮ್ಮು ಇತ್ಯಾದಿ ಸಮಸ್ಯೆ ಮನೆಯಲ್ಲಿ ಅಥವಾ ಕೆಲಸ ಮಾಡುವ ಜಾಗದಲ್ಲಿ ಯಾರಿಗಾದರೂ ಬಂದಿದೆ ಎಂದಿಟ್ಟುಕೊಳ್ಳಿ. ಆಗ ನೀವು ಇದು ಒಬ್ಬರಿಂದ ಇನ್ನೊಬ್ಬರಿಗೆ ಹರಡದಂತೆ ತಡೆಯಲು ಏನು ಮಾಡಬೇಕೆಂದು ವೈದ್ಯರನ್ನು ಕೇಳಿದರೆ ಅವರೇನು ಹೇಳುತ್ತಾರೆ? ಸೀನುವಾಗ ಎಚ್ಚರವಹಿಸಿ; ಬೇರೆಯವರಿಗೂ ಬಂದೀತು. ಅಕ್ಕಪಕ್ಕ ನೆಗಡಿ ಸೀನು ಇರುವವರಿದ್ದರೆ ಹುಷಾರು. ಸ್ವಲ್ಪ ದೂರ ನಿಲ್ಲಿ. ಅಕಸ್ಮಾತ್ತಾಗಿ ಅವರು ಸೀನಿರುವ ಜಾಗದಲ್ಲಿ ನೀವು ಮುಟ್ಟಿರುವ ಸಾಧ್ಯತೆ ಇರುತ್ತದೆ. ಹಾಗಾಗಿ ನಿಮ್ಮ ಕೈಗಳನ್ನು ಮೂಗು, ಬಾಯಿ, ಕಣ್ಣು ಒಟ್ಟಾರೆ ಮುಖದ ಸಮೀಪ ತೆಗೆದುಕೊಂಡು ಹೋಗಬೇಡಿ. ಕೈಗಳನ್ನು ಸರಿಯಾಗಿ ತೊಳೆದರೆ ವೈರಸ್ ಹೋಗಿಬಿಡುತ್ತದೆ. ಏನಾದರೂ ಒಳ್ಳೇ ಸೋಪಿನಿಂದ ತೊಳೆದರೆ ಉತ್ತಮ.
ಗಮನಿಸಿ, ಬಹುತೇಕ ಪರಿಣಿತ ವೈದ್ಯರು ಕೊರೊನಾ ವೈರಸ್ ಬಗ್ಗೆ ಹೇಳುತ್ತಿರುವುದು ಇಷ್ಟೇ. ಅಂದರೆ ಸಾಮಾನ್ಯ ನೆಗಡಿ, ಫ್ಲೂ ಬರದೇ ಇರಲು ಏನು ಮಾಡಬೇಕೋ ಅದನ್ನೇ. ಜೊತೆಗೆ ಏನೋ ಆಗಬಾರದ್ದು ಆಗಿ ಹೋಗಿದೆ ಎಂಬಂತೆ ಯಾವ ವೈದ್ಯರೂ ಹೇಳುತ್ತಿಲ್ಲ. ಹಾಗಾದರೆ ಆಗಬಾರದ್ದು ಆಗಿರುವುದು ಎಲ್ಲಿ? ಮಾಧ್ಯಮಗಳು ಮತ್ತು ಸೋಷಿಯಲ್ ಮೀಡಿಯಾದಲ್ಲಿ.

ಇನ್ನೂ ಕೆಲವು ಅಂಕಿಅಂಶಗಳನ್ನು ಗಮನಿಸೋಣ. ಇದುವರೆಗೆ ಜಗತ್ತಿನಲ್ಲಿ ಈ ಸೋಂಕು ಪತ್ತೆಯಾಗಿರುವುದು 1,16,871 ಜನರಲ್ಲಿ. ಅವರಲ್ಲಿ ಸತ್ತಿರುವುದು 4,095 ಜನರಲ್ಲಿ. ಒಂದು ವಿಚಾರ ನೆನಪಿನಲ್ಲಿಡಿ. ಕೋವಿದ್ 19 ವೈರಸ್ ಪ್ರವೇಶ ಮಾಡಿರಬಹುದಾದ ಜನರು ಒಂದು ಲಕ್ಷ + ಅಷ್ಟೇನಾ? ಖಂಡಿತಾ ಅಲ್ಲವೇ ಅಲ್ಲ. ಕನಿಷ್ಠ ಇದರ 6-7ಪಟ್ಟು ಜನರಾದರೂ ಇದ್ದಾರು. 5ರಲ್ಲಿ ನಾಲ್ಕು ಜನಕ್ಕೆ ಸಣ್ಣ ನೆಗಡಿಗಿಂತ ಹೆಚ್ಚೇನೂ ಆಗದೇ ಸರಿ ಹೋಗಿಬಿಟ್ಟಿದ್ದಾರೆ. ಬಹಳ ಹೆಚ್ಚಾದವರಲ್ಲಿ ಕೆಲವರಿಗೆ ಗಂಟಲು ಅಥವಾ ಮೂಗಿನಲ್ಲಿ ಹತ್ತಿಯಿಂದ ಉಜ್ಜಿ (swab) ಪರೀಕ್ಷೆಗೆ (PCR/RTPCR) ಕಳಿಸಿದ್ದಾರೆ. ಅವರಲ್ಲಿ ಇಷ್ಟು ಜನರಲ್ಲಿ ಇದೆ ಎಂದು ಪತ್ತೆಯಾಗಿದೆ. ಇವುಗಳಲ್ಲಿ ಶೇ.98 ಕೇವಲ ನಾಲ್ಕು ದೇಶಗಳಲ್ಲಿ (ಚೈನಾ, ಇಟಲಿ, ಇರಾನ್, ದಕ್ಷಿಣ ಕೊರಿಯಾ) ಆಗಿದೆ.

ಭಾರತದಲ್ಲಿ ಈ ಲೇಖನ ಬರೆಯುವ ಹೊತ್ತಿಗೆ 56 ಕೇಸುಗಳು ಪತ್ತೆಯಾಗಿದ್ದು, ಒಂದೂ ಸಾವಾಗಿಲ್ಲ. ಆದರೆ, ದಿನದ 24 ಗಂಟೆ ಒಂದಲ್ಲಾ ಒಂದು ಚಾನೆಲ್ ಇದನ್ನು ಕಿಲ್ಲರ್ ವೈರಸ್ ಎಂದು ಕಿರುಚುತ್ತಿರುತ್ತದೆ. ಈ ಸಂದರ್ಭದಲ್ಲಿ ಮೀಡಿಯಾಗಳು ನಡೆದುಕೊಂಡ ರೀತಿಯ ಬಗ್ಗೆಯೇ ಕೆಲವು ಅಧ್ಯಯನಗಳಾಗಿವೆ. ಅವುಗಳ ಪ್ರಕಾರ ಬಿಬಿಸಿಯು ಪ್ರಕಟಿಸಿದ ‘ಕೊರೊನಾ ವೈರಸ್ ಸೋಂಕನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಲಾಗಿದೆ’ ಎಂಬುದು ಫೇಸ್‍ಬುಕ್‍ನಲ್ಲಿ ಅತ್ಯಂತ ಹೆಚ್ಚು ಷೇರ್ ಆದ ವರದಿಯಂತೆ. ಟೈಂ ಮ್ಯಾಗಜೀನ್ ನಡೆಸಿದ ಅಧ್ಯಯನದ ಪ್ರಕಾರ 2019ರಲ್ಲಿ ಎಬೋಲಾ ಸೋಂಕು ಹರಡಿದಾಗ ಬಂದ ಲೇಖನಗಳಿಗಿಂತ 23 ಪಟ್ಟು ಹೆಚ್ಚು ಲೇಖನಗಳು ಈ ಸಾರಿ ಬಂದಿವೆ. ಜಗತ್ತಿನಲ್ಲಿ ಅತೀ ಹೆಚ್ಚು ಪ್ರಸಾರವುಳ್ಳ 100 ಪತ್ರಿಕೆಗಳ ಅಧ್ಯಯನದಲ್ಲಿ ಕಂಡುಬಂದಿರುವುದೇನೆಂದರೆ 9,387 ವರದಿಗಳು ಇದರ ಬಗ್ಗೆ ಈ ಅವಧಿಯಲ್ಲಿ ಬಂದಿದ್ದು, ಅವುಗಳಲ್ಲಿ 1,066 ವರದಿಗಳು ‘ಭಯ, ಆತಂಕ’ ಎಂದು ಪದೇ ಪದೇ ಹೇಳಿವೆ. ಅದರಲ್ಲೂ 50 ಬರಹಗಳು ‘ಕಿಲ್ಲರ್ ವೈರಸ್’ ಎಂಬ ಪದಗಳನ್ನು ಬಳಸಿವೆ. ಡೆಡ್ಲಿ ಡಿಸೀಸ್ ಎಂಬುದು ಅಂತಹುದೇ ಇನ್ನೊಂದು ಹೆಚ್ಚು ಬಳಕೆಯಾದ ಪದ.

ಭಾರತದ ಸುಮಾರು 135 ಕೋಟಿ ಜನರಲ್ಲಿ 56 ಜನರಿಗೆ ನೆಗಡಿಗಿಂತ ಹೆಚ್ಚು ಗಂಭೀರವಾದ ಖಾಯಿಲೆಯೊಂದು ಬಂದಿರುವ ಕುರಿತು ಖಾತರಿಯಾಗಿದೆ. ಕೆಲವರಿಗೆ ಮಾತ್ರ ಸಮಸ್ಯೆ ತೀವ್ರವಾಗಿದ್ದು, ಹಲವರು ಈಗಾಗಲೇ ಗುಣಮುಖರಾಗಿದ್ದು ಒಬ್ಬರೂ ಸತ್ತಿಲ್ಲ ಎಂಬುದು ಖಚಿತವಿದ್ದರೂ ನಮ್ಮಲ್ಲೂ ಕಿಲ್ಲರ್ ವೈರಸ್ ಎಂಬ ಪದ ಧಾರಾಳವಾಗಿ ಬಳಕೆಯಾಗುತ್ತಿದೆ.

ಎರಡು ದಿನಗಳ ಹಿಂದೆ ಸ್ವತಃ ಪ್ರಧಾನಮಂತ್ರಿಯವರೇ ಈ ಕುರಿತು ಮಾತನಾಡಿದರು. ಪಾಶ್ಚಾತ್ಯ ದೇಶಗಳಲ್ಲಿಯಂತೆ ಕೈಕುಲುಕುವುದು ಬೇಡ; ಕೈ ಮುಗಿಯೋಣ ಎಂದೂ ಹೇಳಿದರು. ಅದರ ಜೊತೆಗೆ ಯಾರೂ ಆತಂಕ ಹುಟ್ಟಿಸುವುದು, ಸುಳ್ಳು ಸುದ್ದಿ ಹರಡುವುದು ಬೇಡ ಎಂದರು. ಅವರು ಅದನ್ನು ಹೇಳುತ್ತಿರುವಾಗಲೇ ಅದೇ ಟಿವಿಯಲ್ಲಿ ಕೆಳಗೆ ‘ಕಿಲ್ಲರ್ ವೈರಸ್‍ಗೆ ಇನ್ನೆಷ್ಟು ಬಲಿ?’ ಎಂದು ಸ್ಕ್ರೋಲ್ ಆಗುತ್ತಿತ್ತು. ಕರ್ನಾಟಕದ ಆರೋಗ್ಯ ಇಲಾಖೆಯ ಆಯುಕ್ತರಾದ ಅಮರ್‍ಕುಮಾರ್ ಪಾಂಡೆಯವರು ಈ ವೈರಸ್ ಕುರಿತು ಸುಳ್ಳು ಸುದ್ದಿ ಹರಡಿ ಆತಂಕ ಸೃಷ್ಟಿಸುವವರ ಮೇಲೆ ಕ್ರಿಮಿನಲ್‍ಕೇಸು ಹಾಕುತ್ತೇನೆಂದು ಹೇಳಿರುವುದು ಒಂದೆಡೆ ವರದಿಯಾಗಿದೆ. ಆದರೆ ಯಾವ ಮಾಧ್ಯಮದವರ ಮೇಲೂ ಕೇಸು ಹಾಕಿದ್ದು ಇದುವರೆಗೆ ಗೊತ್ತಾಗಿಲ್ಲ.

ಮಾಧ್ಯಮಗಳ ಸ್ಥಿತಿ ಹೀಗಿರುವಾಗ ಇನ್ನು ಸೋಷಿಯಲ್ ಮೀಡಿಯಾದ ಕಥೆಯಂತೂ ಕೇಳುವುದೇ ಬೇಡ. ಅದರಲ್ಲಿ ಭೀಕರ ವೈರಸ್ ಬಗ್ಗೆ ಮಾತ್ರವಲ್ಲದೇ, ಜನರ ಪರೋಪಕಾರದ ಭಾಗವಾಗಿ ಅದಕ್ಕೆ ಮನೆ ಮದ್ದುಗಳೂ ಧಾರಾಳವಾಗಿ ಸಿಗುತ್ತವೆ. ‘ನಿಮ್ಮ ಸ್ನೇಹಿತರು ಅಥವಾ ಕುಟುಂಬದವರಲ್ಲಿ ಯಾರಿಗಾದರೂ ಉಪಯೋಗಕ್ಕೆ ಬರುತ್ತದೆ. ತಪ್ಪದೇ ಷೇರ್ ಮಾಡಿ. ಜೀವ ಉಳಿಸಿ’ ಅಂತ ಒಕ್ಕಣೆಯ ಜೊತೆಗೆ ಷೇರ್ ಆಗುತ್ತವೆ. ನಿಮ್ಮ ಸ್ನೇಹಿತರು ಅಥವಾ ಕುಟುಂಬದವರ ಜೀವ ಉಳಿಸಲು ಕನಿಷ್ಠ ಷೇರ್ ಸಹಾ ಮಾಡದಷ್ಟು ಉಪಕಾರಿ ಗುಣದವರು ನೀವಾಗದಿದ್ದರೆ ಹೇಗೆ? ಷೇರ್ ಮಾಡಿ. ಅದರಲ್ಲಿ ಅಂತಹ ಅಪಾಯಕಾರಿಯಾದ ಮದ್ದೂ ಇಲ್ಲ, ಯಾರಿಗೂ ಹಣ ಮಾಡುವ ಉದ್ದೇಶವೂ ಇಲ್ಲ ಎಂದೇ ಇಟ್ಟುಕೊಳ್ಳೋಣ. ಆದರೆ, ಭಯವನ್ನು ಹರಡುವ ಕೆಲಸವಂತೂ ಆಗಿಯೇ ತೀರುತ್ತದೆ.

ಅಂತಿಮವಾಗಿ ವಿಶ್ವ ಆರೋಗ್ಯ ಸಂಸ್ಥೆಯೇ ಇದನ್ನೊಂದು ಜಾಗತಿಕ ತುರ್ತುಸ್ಥಿತಿ ಎಂದುಬಿಟ್ಟಿದೆ. ವೆಲ್ಲೂರಿನ ಸಿಎಂಸಿ ಆಸ್ಪತ್ರೆಯ ಪ್ರೊಫೆಸರ್ ಗಗನ್‍ದೀಪ್ ಕಾಂಗ್ ಅವರು ಅಂತರ್ರಾಷ್ಟ್ರೀಯ ಸಾಂಕ್ರಾಮಿಕ ರೋಗಗಳನ್ನೆದುರಿಸುವ ಸಿದ್ಧತೆಗಳ ಆವಿಷ್ಕಾರ ಕೇಂದ್ರದ ಉಪ ಮುಖ್ಯಸ್ಥರೂ ಆಗಿದ್ದಾರೆ. ಅಂತಹವರೂ ಸೇರಿದಂತೆ ಜಗತ್ತಿನ ಹಲವು ತಜ್ಞರು ಈ ಸಮೂಹ ಸನ್ನಿ ಹಾಸ್ಯಾಸ್ಪದವೆಂಬುದನ್ನು ಬೇರೆ ಬೇರೆ ಮಾತುಗಳಲ್ಲಿ ಹೇಳುತ್ತಿದ್ದಾರೆ. ಆದರೆ, ಎಲ್ಲಾ ಮಾತುಗಳಾಚೆ ಹೇಳುವ ಎಚ್ಚರಿಕೆಯ ಸೂಚನೆಗಳನ್ನೇ ಜನರು ಹೆಚ್ಚೆಚ್ಚು ಪ್ರಚಾರಕ್ಕೆ ತರುತ್ತಾರೆ; ಅದನ್ನು ಉತ್ಪ್ರೇಕ್ಷಿಸಿ ಹರಡಲು ಮಾಧ್ಯಮಗಳು ಕಾಯುತ್ತಿರುತ್ತವೆ. ಎಲ್ಲವನ್ನೂ ಉತ್ಪ್ರೇಕ್ಷಿಸಿ (ಹಲವು ಸಾರಿ ಸುಳ್ಳುಗಳನ್ನೇ) ಪ್ರಸಾರ ಮಾಡುವ ಐಟಿ ಸೆಲ್‍ಗಳು ಸಾಮಾಜಿಕ ಜಾಲತಾಣಗಳ ನೀತಿ ಸಂಹಿತೆ ರೂಪಿಸಿರುವ ಕಾಲದಲ್ಲಿ ನಾವಿದ್ದೇವೆ. ಹಾಗಾಗಿ ಅಪಾಯ ಇನ್ನೂ ಹೆಚ್ಚಾಗಿದೆ.
ಈ ರೋಗಕ್ಕೆ ಮದ್ದು ಸುಲಭಕ್ಕೆ ಸಿಕ್ಕುವಂತೆ ಕಾಣುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...