Homeಆರೋಗ್ಯಕೊರೊನಾ ವೈರಸ್ ಹಾಸ್ಯಾಸ್ಪದ ಮತ್ತು ಅತಾರ್ಕಿಕ ಸಮೂಹ ಸನ್ನಿ

ಕೊರೊನಾ ವೈರಸ್ ಹಾಸ್ಯಾಸ್ಪದ ಮತ್ತು ಅತಾರ್ಕಿಕ ಸಮೂಹ ಸನ್ನಿ

- Advertisement -
- Advertisement -

ವೆಲ್ಲೂರಿನ ಸಿಎಂಸಿ ಆಸ್ಪತ್ರೆಯ ಪ್ರೊಫೆಸರ್ ಗಗನ್‍ದೀಪ್ ಕಾಂಗ್ ಅವರು ಅಂತರ್ರಾಷ್ಟ್ರೀಯ ಸಾಂಕ್ರಾಮಿಕ ರೋಗಗಳನ್ನೆದುರಿಸುವ ಸಿದ್ಧತೆಗಳ ಆವಿಷ್ಕಾರ ಕೇಂದ್ರದ ಉಪ ಮುಖ್ಯಸ್ಥರೂ ಆಗಿದ್ದಾರೆ. ಅಂತಹವರೂ ಸೇರಿದಂತೆ ಜಗತ್ತಿನ ಹಲವು ತಜ್ಞರು ಈ ಸಮೂಹ ಸನ್ನಿ ಹಾಸ್ಯಾಸ್ಪದವೆಂಬುದನ್ನು ಬೇರೆ ಬೇರೆ ಮಾತುಗಳಲ್ಲಿ ಹೇಳುತ್ತಿದ್ದಾರೆ. ಆದರೆ, ಎಲ್ಲಾ ಮಾತುಗಳಾಚೆ ಹೇಳುವ ಎಚ್ಚರಿಕೆಯ ಸೂಚನೆಗಳನ್ನೇ ಜನರು ಹೆಚ್ಚೆಚ್ಚು ಪ್ರಚಾರಕ್ಕೆ ತರುತ್ತಾರೆ; ಅದನ್ನು ಉತ್ಪ್ರೇಕ್ಷಿಸಿ ಹರಡಲು ಮಾಧ್ಯಮಗಳು ಕಾಯುತ್ತಿರುತ್ತವೆ.

ಈ ಲೇಖನ ಬರೆಯಲು ಶುರು ಮಾಡುವ ಹೊತ್ತಿಗೆ ಕೊರೊನಾ ವೈರಸ್ ಎಂಬುದು ಒಂದು ಅತ್ಯಂತ ಮಾರಣಾಂತಿಕ ಕಾಯಿಲೆಯೇನೋ ಎಂಬ ಭಾವನೆ ಹೆಚ್ಚಾಗುತ್ತಿದೆ. ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯು 5ನೇ ತರಗತಿಯವರೆಗಿನ ಮಕ್ಕಳಿಗೆ ಈ ಶೈಕ್ಷಣಿಕ ವರ್ಷದ ಉಳಿದ ಅವಧಿಗೆ ರಜೆ ಘೋಷಿಸಿದೆ. ದೇಶದ ಯಾವುದೇ ಕಂಪೆನಿಯ ಮೊಬೈಲ್‍ಗೆ ಯಾರೇ ಫೋನ್ ಮಾಡಿದರೂ ಕೆಮ್ಮಿನ ಶಬ್ದ ಕೇಳುತ್ತಿದೆ. ಫೋನ್ ರಿಸೀವ್ ಮಾಡಿದವರದ್ದಲ್ಲ; ಕೊರೊನಾ ವೈರಸ್‍ನ ಕುರಿತು ಜಾಗೃತಿ ಮೂಡಿಸುವ ಸಂದೇಶದ ಭಾಗವಾಗಿ! ನಿನ್ನೆ ಮುಂಬೈ ಷೇರುಪೇಟೆ ದಾಖಲೆ ಪ್ರಮಾಣದ ಕುಸಿತ ಕಂಡಿದ್ದು, ಅದಕ್ಕೆ ಸೌದಿ ಅರೇಬಿಯಾ ಸರ್ಕಾರದ ನೀತಿಯಿಂದ ತೈಲ ಬೆಲೆ ಕುಸಿದಿದ್ದಕ್ಕಿಂತ ಕೊರೊನಾ ವೈರಸ್‍ನಿಂದ ಪ್ರಪಂಚದ ಆರ್ಥಿಕತೆಯೇ ಕುಸಿಯುವ ಭೀತಿ ಉಂಟಾಗಿರುವುದು ಕಾರಣ ಎಂದು ಬಹುತೇಕ ಪತ್ರಿಕೆಗಳು ಮುಖಪುಟದ ವರದಿ ಪ್ರಕಟಿಸಿವೆ.

ಸದ್ಯದ ಹೊತ್ತಿನಲ್ಲಿ ಇದಕ್ಕಿಂತ ಹಾಸ್ಯಾಸ್ಪದವಾದ ಮತ್ತೊಂದು ಸಂಗತಿ ಪ್ರಪಂಚದಲ್ಲಿ ಸಂಭವಿಸುತ್ತಿಲ್ಲ ಎಂದು ಕನಿಷ್ಠ ವೈದ್ಯಕೀಯ ಜ್ಞಾನ ಇರುವ ಯಾರು ಬೇಕಾದರೂ ಹೇಳಬಹುದಿತ್ತು. ಆದರೆ ವೈದ್ಯಕೀಯ ಮಾಹಿತಿಯನ್ನೂ ಮುಂದಿಟ್ಟುಕೊಂಡು ಹೆಚ್ಚೆಚ್ಚು ಆತಂಕವನ್ನು ಸೃಷ್ಟಿ ಮಾಡುವ ಕೆಲಸವನ್ನು ಮಾಧ್ಯಮಗಳು ಮಾತ್ರವಲ್ಲದೇ ಸರ್ಕಾರವೂ ಮಾಡುತ್ತಿದೆ.

ನಿಜವಾಗಲೂ ಈ ಸಂದರ್ಭದಲ್ಲಿ ಕೊರೊನಾ ವೈರಸ್‍ಗೆ ಸಂಬಂಧಿಸಿದ ದೊಡ್ಡದೊಂದು ರೋಗ ಪ್ರಪಂಚವನ್ನು ಆವರಿಸಿದೆ. ಅದು ಆತಂಕವನ್ನು ಹರಡುವ ರೋಗ. ವೈರಸ್ ಇದೆ; ನೆಗಡಿಯ ವೈರಸ್. ಇದುವರೆಗೆ ಇದ್ದ ಕೊರೊನಾ ವೈರಸ್ಸೇ ಸ್ವಲ್ಪ ಮ್ಯುಟೇಷನ್ ಆಗಿ (ಅಂದರೆ ಅದರ ಜೀನ್‍ನಲ್ಲಿ ವ್ಯತ್ಯಾಸ ಆಗಿ) ಹೊಸದೊಂದು ವೈರಸ್ ಸೃಷ್ಟಿಯಾಗಿದೆ. ಅದನ್ನು ಕೋವಿದ್ 19 ಎಂದು ಕರೆಯಲಾಗಿದೆ. ಹೊಸಾ ವೈರಸ್ ಆದ್ದರಿಂದ ಅದಕ್ಕೆ ಶಕ್ತಿ ಹೆಚ್ಚು. ಮನುಷ್ಯರು ಅದನ್ನು ಎದುರಿಸಲು ಸ್ವಲ್ಪ ಸಮಯ ಬೇಕು. ಹಾಗಂತ ಇದು ಬಹಳ ಮಾರಣಾಂತಿಕ ವೈರಸ್ ಅಲ್ಲ. ನಿಜ ಹೇಳಬೇಕೆಂದರೆ ಸಾರ್ಸ್, ಎಬೋಲಾಗಳಿಗಿಂತ ಕಡಿಮೆ ಶಕ್ತಿಯ ವೈರಸ್. ಶೇ.80ಕ್ಕೂ ಹೆಚ್ಚು ಸಾವುಗಳು ಆಗಿರುವುದು ಬಹಳ ವಯಸ್ಸಾದವರು, ಅದರಲ್ಲೂ ಬೇರೇನೋ ಕಾಯಿಲೆ ಇದ್ದವರು. ಫೆಬ್ರವರಿ ಕೊನೆಯ ಭಾಗದವರೆಗೆ ಸಣ್ಣ ಮಕ್ಕಳು ಈ ವೈರಸ್ ಸೋಂಕಿನಿಂದ ಸತ್ತ ಒಂದೂ ಪ್ರಕರಣ ವರದಿಯಾಗಿರಲಿಲ್ಲ.

ಆತಂಕವನ್ನು ಹರಡುವ ರೋಗದ ಕುರಿತು ಹೋಗುವ ಮುನ್ನ ಒಂದು ಮಾತನ್ನು ಹೇಳಬೇಕು. ನೆಗಡಿ, ಕೆಮ್ಮು ಇತ್ಯಾದಿ ಸಮಸ್ಯೆ ಮನೆಯಲ್ಲಿ ಅಥವಾ ಕೆಲಸ ಮಾಡುವ ಜಾಗದಲ್ಲಿ ಯಾರಿಗಾದರೂ ಬಂದಿದೆ ಎಂದಿಟ್ಟುಕೊಳ್ಳಿ. ಆಗ ನೀವು ಇದು ಒಬ್ಬರಿಂದ ಇನ್ನೊಬ್ಬರಿಗೆ ಹರಡದಂತೆ ತಡೆಯಲು ಏನು ಮಾಡಬೇಕೆಂದು ವೈದ್ಯರನ್ನು ಕೇಳಿದರೆ ಅವರೇನು ಹೇಳುತ್ತಾರೆ? ಸೀನುವಾಗ ಎಚ್ಚರವಹಿಸಿ; ಬೇರೆಯವರಿಗೂ ಬಂದೀತು. ಅಕ್ಕಪಕ್ಕ ನೆಗಡಿ ಸೀನು ಇರುವವರಿದ್ದರೆ ಹುಷಾರು. ಸ್ವಲ್ಪ ದೂರ ನಿಲ್ಲಿ. ಅಕಸ್ಮಾತ್ತಾಗಿ ಅವರು ಸೀನಿರುವ ಜಾಗದಲ್ಲಿ ನೀವು ಮುಟ್ಟಿರುವ ಸಾಧ್ಯತೆ ಇರುತ್ತದೆ. ಹಾಗಾಗಿ ನಿಮ್ಮ ಕೈಗಳನ್ನು ಮೂಗು, ಬಾಯಿ, ಕಣ್ಣು ಒಟ್ಟಾರೆ ಮುಖದ ಸಮೀಪ ತೆಗೆದುಕೊಂಡು ಹೋಗಬೇಡಿ. ಕೈಗಳನ್ನು ಸರಿಯಾಗಿ ತೊಳೆದರೆ ವೈರಸ್ ಹೋಗಿಬಿಡುತ್ತದೆ. ಏನಾದರೂ ಒಳ್ಳೇ ಸೋಪಿನಿಂದ ತೊಳೆದರೆ ಉತ್ತಮ.
ಗಮನಿಸಿ, ಬಹುತೇಕ ಪರಿಣಿತ ವೈದ್ಯರು ಕೊರೊನಾ ವೈರಸ್ ಬಗ್ಗೆ ಹೇಳುತ್ತಿರುವುದು ಇಷ್ಟೇ. ಅಂದರೆ ಸಾಮಾನ್ಯ ನೆಗಡಿ, ಫ್ಲೂ ಬರದೇ ಇರಲು ಏನು ಮಾಡಬೇಕೋ ಅದನ್ನೇ. ಜೊತೆಗೆ ಏನೋ ಆಗಬಾರದ್ದು ಆಗಿ ಹೋಗಿದೆ ಎಂಬಂತೆ ಯಾವ ವೈದ್ಯರೂ ಹೇಳುತ್ತಿಲ್ಲ. ಹಾಗಾದರೆ ಆಗಬಾರದ್ದು ಆಗಿರುವುದು ಎಲ್ಲಿ? ಮಾಧ್ಯಮಗಳು ಮತ್ತು ಸೋಷಿಯಲ್ ಮೀಡಿಯಾದಲ್ಲಿ.

ಇನ್ನೂ ಕೆಲವು ಅಂಕಿಅಂಶಗಳನ್ನು ಗಮನಿಸೋಣ. ಇದುವರೆಗೆ ಜಗತ್ತಿನಲ್ಲಿ ಈ ಸೋಂಕು ಪತ್ತೆಯಾಗಿರುವುದು 1,16,871 ಜನರಲ್ಲಿ. ಅವರಲ್ಲಿ ಸತ್ತಿರುವುದು 4,095 ಜನರಲ್ಲಿ. ಒಂದು ವಿಚಾರ ನೆನಪಿನಲ್ಲಿಡಿ. ಕೋವಿದ್ 19 ವೈರಸ್ ಪ್ರವೇಶ ಮಾಡಿರಬಹುದಾದ ಜನರು ಒಂದು ಲಕ್ಷ + ಅಷ್ಟೇನಾ? ಖಂಡಿತಾ ಅಲ್ಲವೇ ಅಲ್ಲ. ಕನಿಷ್ಠ ಇದರ 6-7ಪಟ್ಟು ಜನರಾದರೂ ಇದ್ದಾರು. 5ರಲ್ಲಿ ನಾಲ್ಕು ಜನಕ್ಕೆ ಸಣ್ಣ ನೆಗಡಿಗಿಂತ ಹೆಚ್ಚೇನೂ ಆಗದೇ ಸರಿ ಹೋಗಿಬಿಟ್ಟಿದ್ದಾರೆ. ಬಹಳ ಹೆಚ್ಚಾದವರಲ್ಲಿ ಕೆಲವರಿಗೆ ಗಂಟಲು ಅಥವಾ ಮೂಗಿನಲ್ಲಿ ಹತ್ತಿಯಿಂದ ಉಜ್ಜಿ (swab) ಪರೀಕ್ಷೆಗೆ (PCR/RTPCR) ಕಳಿಸಿದ್ದಾರೆ. ಅವರಲ್ಲಿ ಇಷ್ಟು ಜನರಲ್ಲಿ ಇದೆ ಎಂದು ಪತ್ತೆಯಾಗಿದೆ. ಇವುಗಳಲ್ಲಿ ಶೇ.98 ಕೇವಲ ನಾಲ್ಕು ದೇಶಗಳಲ್ಲಿ (ಚೈನಾ, ಇಟಲಿ, ಇರಾನ್, ದಕ್ಷಿಣ ಕೊರಿಯಾ) ಆಗಿದೆ.

ಭಾರತದಲ್ಲಿ ಈ ಲೇಖನ ಬರೆಯುವ ಹೊತ್ತಿಗೆ 56 ಕೇಸುಗಳು ಪತ್ತೆಯಾಗಿದ್ದು, ಒಂದೂ ಸಾವಾಗಿಲ್ಲ. ಆದರೆ, ದಿನದ 24 ಗಂಟೆ ಒಂದಲ್ಲಾ ಒಂದು ಚಾನೆಲ್ ಇದನ್ನು ಕಿಲ್ಲರ್ ವೈರಸ್ ಎಂದು ಕಿರುಚುತ್ತಿರುತ್ತದೆ. ಈ ಸಂದರ್ಭದಲ್ಲಿ ಮೀಡಿಯಾಗಳು ನಡೆದುಕೊಂಡ ರೀತಿಯ ಬಗ್ಗೆಯೇ ಕೆಲವು ಅಧ್ಯಯನಗಳಾಗಿವೆ. ಅವುಗಳ ಪ್ರಕಾರ ಬಿಬಿಸಿಯು ಪ್ರಕಟಿಸಿದ ‘ಕೊರೊನಾ ವೈರಸ್ ಸೋಂಕನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಲಾಗಿದೆ’ ಎಂಬುದು ಫೇಸ್‍ಬುಕ್‍ನಲ್ಲಿ ಅತ್ಯಂತ ಹೆಚ್ಚು ಷೇರ್ ಆದ ವರದಿಯಂತೆ. ಟೈಂ ಮ್ಯಾಗಜೀನ್ ನಡೆಸಿದ ಅಧ್ಯಯನದ ಪ್ರಕಾರ 2019ರಲ್ಲಿ ಎಬೋಲಾ ಸೋಂಕು ಹರಡಿದಾಗ ಬಂದ ಲೇಖನಗಳಿಗಿಂತ 23 ಪಟ್ಟು ಹೆಚ್ಚು ಲೇಖನಗಳು ಈ ಸಾರಿ ಬಂದಿವೆ. ಜಗತ್ತಿನಲ್ಲಿ ಅತೀ ಹೆಚ್ಚು ಪ್ರಸಾರವುಳ್ಳ 100 ಪತ್ರಿಕೆಗಳ ಅಧ್ಯಯನದಲ್ಲಿ ಕಂಡುಬಂದಿರುವುದೇನೆಂದರೆ 9,387 ವರದಿಗಳು ಇದರ ಬಗ್ಗೆ ಈ ಅವಧಿಯಲ್ಲಿ ಬಂದಿದ್ದು, ಅವುಗಳಲ್ಲಿ 1,066 ವರದಿಗಳು ‘ಭಯ, ಆತಂಕ’ ಎಂದು ಪದೇ ಪದೇ ಹೇಳಿವೆ. ಅದರಲ್ಲೂ 50 ಬರಹಗಳು ‘ಕಿಲ್ಲರ್ ವೈರಸ್’ ಎಂಬ ಪದಗಳನ್ನು ಬಳಸಿವೆ. ಡೆಡ್ಲಿ ಡಿಸೀಸ್ ಎಂಬುದು ಅಂತಹುದೇ ಇನ್ನೊಂದು ಹೆಚ್ಚು ಬಳಕೆಯಾದ ಪದ.

ಭಾರತದ ಸುಮಾರು 135 ಕೋಟಿ ಜನರಲ್ಲಿ 56 ಜನರಿಗೆ ನೆಗಡಿಗಿಂತ ಹೆಚ್ಚು ಗಂಭೀರವಾದ ಖಾಯಿಲೆಯೊಂದು ಬಂದಿರುವ ಕುರಿತು ಖಾತರಿಯಾಗಿದೆ. ಕೆಲವರಿಗೆ ಮಾತ್ರ ಸಮಸ್ಯೆ ತೀವ್ರವಾಗಿದ್ದು, ಹಲವರು ಈಗಾಗಲೇ ಗುಣಮುಖರಾಗಿದ್ದು ಒಬ್ಬರೂ ಸತ್ತಿಲ್ಲ ಎಂಬುದು ಖಚಿತವಿದ್ದರೂ ನಮ್ಮಲ್ಲೂ ಕಿಲ್ಲರ್ ವೈರಸ್ ಎಂಬ ಪದ ಧಾರಾಳವಾಗಿ ಬಳಕೆಯಾಗುತ್ತಿದೆ.

ಎರಡು ದಿನಗಳ ಹಿಂದೆ ಸ್ವತಃ ಪ್ರಧಾನಮಂತ್ರಿಯವರೇ ಈ ಕುರಿತು ಮಾತನಾಡಿದರು. ಪಾಶ್ಚಾತ್ಯ ದೇಶಗಳಲ್ಲಿಯಂತೆ ಕೈಕುಲುಕುವುದು ಬೇಡ; ಕೈ ಮುಗಿಯೋಣ ಎಂದೂ ಹೇಳಿದರು. ಅದರ ಜೊತೆಗೆ ಯಾರೂ ಆತಂಕ ಹುಟ್ಟಿಸುವುದು, ಸುಳ್ಳು ಸುದ್ದಿ ಹರಡುವುದು ಬೇಡ ಎಂದರು. ಅವರು ಅದನ್ನು ಹೇಳುತ್ತಿರುವಾಗಲೇ ಅದೇ ಟಿವಿಯಲ್ಲಿ ಕೆಳಗೆ ‘ಕಿಲ್ಲರ್ ವೈರಸ್‍ಗೆ ಇನ್ನೆಷ್ಟು ಬಲಿ?’ ಎಂದು ಸ್ಕ್ರೋಲ್ ಆಗುತ್ತಿತ್ತು. ಕರ್ನಾಟಕದ ಆರೋಗ್ಯ ಇಲಾಖೆಯ ಆಯುಕ್ತರಾದ ಅಮರ್‍ಕುಮಾರ್ ಪಾಂಡೆಯವರು ಈ ವೈರಸ್ ಕುರಿತು ಸುಳ್ಳು ಸುದ್ದಿ ಹರಡಿ ಆತಂಕ ಸೃಷ್ಟಿಸುವವರ ಮೇಲೆ ಕ್ರಿಮಿನಲ್‍ಕೇಸು ಹಾಕುತ್ತೇನೆಂದು ಹೇಳಿರುವುದು ಒಂದೆಡೆ ವರದಿಯಾಗಿದೆ. ಆದರೆ ಯಾವ ಮಾಧ್ಯಮದವರ ಮೇಲೂ ಕೇಸು ಹಾಕಿದ್ದು ಇದುವರೆಗೆ ಗೊತ್ತಾಗಿಲ್ಲ.

ಮಾಧ್ಯಮಗಳ ಸ್ಥಿತಿ ಹೀಗಿರುವಾಗ ಇನ್ನು ಸೋಷಿಯಲ್ ಮೀಡಿಯಾದ ಕಥೆಯಂತೂ ಕೇಳುವುದೇ ಬೇಡ. ಅದರಲ್ಲಿ ಭೀಕರ ವೈರಸ್ ಬಗ್ಗೆ ಮಾತ್ರವಲ್ಲದೇ, ಜನರ ಪರೋಪಕಾರದ ಭಾಗವಾಗಿ ಅದಕ್ಕೆ ಮನೆ ಮದ್ದುಗಳೂ ಧಾರಾಳವಾಗಿ ಸಿಗುತ್ತವೆ. ‘ನಿಮ್ಮ ಸ್ನೇಹಿತರು ಅಥವಾ ಕುಟುಂಬದವರಲ್ಲಿ ಯಾರಿಗಾದರೂ ಉಪಯೋಗಕ್ಕೆ ಬರುತ್ತದೆ. ತಪ್ಪದೇ ಷೇರ್ ಮಾಡಿ. ಜೀವ ಉಳಿಸಿ’ ಅಂತ ಒಕ್ಕಣೆಯ ಜೊತೆಗೆ ಷೇರ್ ಆಗುತ್ತವೆ. ನಿಮ್ಮ ಸ್ನೇಹಿತರು ಅಥವಾ ಕುಟುಂಬದವರ ಜೀವ ಉಳಿಸಲು ಕನಿಷ್ಠ ಷೇರ್ ಸಹಾ ಮಾಡದಷ್ಟು ಉಪಕಾರಿ ಗುಣದವರು ನೀವಾಗದಿದ್ದರೆ ಹೇಗೆ? ಷೇರ್ ಮಾಡಿ. ಅದರಲ್ಲಿ ಅಂತಹ ಅಪಾಯಕಾರಿಯಾದ ಮದ್ದೂ ಇಲ್ಲ, ಯಾರಿಗೂ ಹಣ ಮಾಡುವ ಉದ್ದೇಶವೂ ಇಲ್ಲ ಎಂದೇ ಇಟ್ಟುಕೊಳ್ಳೋಣ. ಆದರೆ, ಭಯವನ್ನು ಹರಡುವ ಕೆಲಸವಂತೂ ಆಗಿಯೇ ತೀರುತ್ತದೆ.

ಅಂತಿಮವಾಗಿ ವಿಶ್ವ ಆರೋಗ್ಯ ಸಂಸ್ಥೆಯೇ ಇದನ್ನೊಂದು ಜಾಗತಿಕ ತುರ್ತುಸ್ಥಿತಿ ಎಂದುಬಿಟ್ಟಿದೆ. ವೆಲ್ಲೂರಿನ ಸಿಎಂಸಿ ಆಸ್ಪತ್ರೆಯ ಪ್ರೊಫೆಸರ್ ಗಗನ್‍ದೀಪ್ ಕಾಂಗ್ ಅವರು ಅಂತರ್ರಾಷ್ಟ್ರೀಯ ಸಾಂಕ್ರಾಮಿಕ ರೋಗಗಳನ್ನೆದುರಿಸುವ ಸಿದ್ಧತೆಗಳ ಆವಿಷ್ಕಾರ ಕೇಂದ್ರದ ಉಪ ಮುಖ್ಯಸ್ಥರೂ ಆಗಿದ್ದಾರೆ. ಅಂತಹವರೂ ಸೇರಿದಂತೆ ಜಗತ್ತಿನ ಹಲವು ತಜ್ಞರು ಈ ಸಮೂಹ ಸನ್ನಿ ಹಾಸ್ಯಾಸ್ಪದವೆಂಬುದನ್ನು ಬೇರೆ ಬೇರೆ ಮಾತುಗಳಲ್ಲಿ ಹೇಳುತ್ತಿದ್ದಾರೆ. ಆದರೆ, ಎಲ್ಲಾ ಮಾತುಗಳಾಚೆ ಹೇಳುವ ಎಚ್ಚರಿಕೆಯ ಸೂಚನೆಗಳನ್ನೇ ಜನರು ಹೆಚ್ಚೆಚ್ಚು ಪ್ರಚಾರಕ್ಕೆ ತರುತ್ತಾರೆ; ಅದನ್ನು ಉತ್ಪ್ರೇಕ್ಷಿಸಿ ಹರಡಲು ಮಾಧ್ಯಮಗಳು ಕಾಯುತ್ತಿರುತ್ತವೆ. ಎಲ್ಲವನ್ನೂ ಉತ್ಪ್ರೇಕ್ಷಿಸಿ (ಹಲವು ಸಾರಿ ಸುಳ್ಳುಗಳನ್ನೇ) ಪ್ರಸಾರ ಮಾಡುವ ಐಟಿ ಸೆಲ್‍ಗಳು ಸಾಮಾಜಿಕ ಜಾಲತಾಣಗಳ ನೀತಿ ಸಂಹಿತೆ ರೂಪಿಸಿರುವ ಕಾಲದಲ್ಲಿ ನಾವಿದ್ದೇವೆ. ಹಾಗಾಗಿ ಅಪಾಯ ಇನ್ನೂ ಹೆಚ್ಚಾಗಿದೆ.
ಈ ರೋಗಕ್ಕೆ ಮದ್ದು ಸುಲಭಕ್ಕೆ ಸಿಕ್ಕುವಂತೆ ಕಾಣುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...