Homeಆರೋಗ್ಯಕೊರೊನಾ ಬಗ್ಗೆ ಭಯ ಬಿಡಿ - ತುರ್ತುಪರಿಸ್ಥಿತಿಯ ಅಗತ್ಯವಿಲ್ಲವೆಂದು ಸಿಎಂ ಪತ್ರ ಬರೆದ ಡಾ. ಶ್ರೀನಿವಾಸ...

ಕೊರೊನಾ ಬಗ್ಗೆ ಭಯ ಬಿಡಿ – ತುರ್ತುಪರಿಸ್ಥಿತಿಯ ಅಗತ್ಯವಿಲ್ಲವೆಂದು ಸಿಎಂ ಪತ್ರ ಬರೆದ ಡಾ. ಶ್ರೀನಿವಾಸ ಕಕ್ಕಿಲ್ಲಾಯ

ಸೋಂಕುಳ್ಳವರನ್ನು ನಿರ್ಬಂಧಿಸಿದರೆ ಸಾಕು, ಇಡೀ ರಾಜ್ಯವನ್ನು ನಿರ್ಬಂಧಿಸುವ ಅಗತ್ಯ ಈಗಂತೂ ಇಲ್ಲ.

- Advertisement -
- Advertisement -

ಕೊರೊನಾ ಬೀತಿಯಿಂದಾಗಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಒಂದು ವಾರಗಳ ಕಾಲ ಸಿನಿಮಾ ಮಂದಿರ, ಮದುವೆ, ನಾಮಕರಣ ಸೇರಿದಂತೆ ಬಹುತೇಕ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಇದು ಜನರನ್ನು ಜಾಗೃತಿ ಉಂಟು ಮಾಡುವ ಬದಲು ಮತ್ತಷ್ಟು ಭಯವನ್ನುಉಂಟುಮಾಡುತ್ತದೆ, ಇದರ ಅಗತ್ಯವಿಲ್ಲ ಎಂದು ಬಹುತೇಕರು ಅಭಿಪ್ರಾಯಪಟ್ಟಿದ್ದಾರೆ. ಈ ವಿಷಯದ ಕುರಿತು ಜನಪರ ವೈದ್ಯರಾದ ಡಾ. ಶ್ರೀನಿವಾಸ ಕಕ್ಕಿಲ್ಲಾಯರವರು ಕರ್ನಾಟಕದ ಮುಖ್ಯಮಂತ್ರಿ ಮತ್ತು ಆರೋಗ್ಯ ಮಂತ್ರಿಗಳಿಗೆ ಪತ್ರವೊಂದನ್ನು ಬರೆದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅದರ ಪೂರ್ಣ ವಿವರ ಕೆಳಗಿನಂತಿದೆ.

ಮಾನ್ಯ ಮುಖ್ಯಮಂತ್ರಿಗಳೇ,

ಕೊರೊನಾ ತಡೆಯುವುದಕ್ಕೆ ಇಡೀ ರಾಜ್ಯದ ಎಲ್ಲಾ ಸಾರ್ವಜನಿಕ ಸ್ಥಳಗಳನ್ನು ಮುಚ್ಚುವ ನಿರ್ಧಾರವನ್ನು ದಯವಿಟ್ಟು ಹಿಂಪಡೆಯಿರಿ. ಈಗಾಗಲೇ ನಮ್ಮ ಜನರು ಕೆಲಸವಿಲ್ಲದೆ ಕಷ್ಟದಲ್ಲಿದ್ದಾರೆ, ಅಂತದ್ದರಲ್ಲಿ ಇಡೀ ರಾಜ್ಯದ ಆರ್ಥಿಕ ಚಟುವಟಿಕೆಗಳಿಗೆ ಭಾರೀ ಹೊಡೆತ ನೀಡುವ ಈ ನಿರ್ಧಾರ ಸಾಧುವಲ್ಲ, ಅಗತ್ಯವೂ ಇಲ್ಲ.

ಅದರ ಬದಲಿಗೆ, ಕೊರೊನಾ ಅಂದರೆ ಏನು, ಅದರ ಲಕ್ಷಣಗಳೇನು, ಹರಡುವುದು ಹೇಗೆ, ರೋಗ ತಗಲಿದವರನ್ನು ಹೇಗೆ ಆರೈಕೆ ಮಾಡಬೇಕು, ಯಾರನ್ನು ಮನೆಯಲ್ಲೇ ನೋಡಿಕೊಳ್ಳಬೇಕು(ಬಹುದು), ಯಾರನ್ನು ಆಸ್ಪತ್ರೆಗೆ ತರಬೇಕು, ಮನೆಯಲ್ಲಿ ಆರೈಕೆ ಮಾಡುವುದಿದ್ದರೆ ರೋಗಿ ಹಾಗೂ ಮನೆಯವರು ಯಾವ ಜಾಗ್ರತೆ ವಹಿಸಬೇಕು ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿಯನ್ನು ರಾಜ್ಯದ ಜನರಿಗೆ ಈ ಕೂಡಲೇ ತಲುಪಿಸಲು ವ್ಯವಸ್ಥೆ ಮಾಡಿ.

ಜೊತೆಗೆ, ಸೋಂಕು ಹರಡಿದಾಗ ಹಲವರು ಆಸ್ಪತ್ರೆಗಳಿಗೆ ದಾಖಲಾಗಬೇಕಾದ ಅಗತ್ಯವುಂಟಾಗಬಹುದು, ಕೆಲವರಿಗೆ ಕೃತಕ ಉಸಿರಾಟದ ಅಗತ್ಯವೂ ಬರಬಹುದು. ಅದನ್ನು ನಿಭಾಯಿಸಲು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಸೂಕ್ತ ವ್ಯವಸ್ಥೆಗಳನ್ನು ಈ ಕೂಡಲೇ ಒದಗಿಸಿ, ಹಾಗೂ ಅಂತಹ ರೋಗಿಗಳ ಚಿಕಿತ್ಸೆಗಾಗಿಯೇ ಕೆಲವು ಆಸ್ಪತ್ರೆಗಳನ್ನು ಪ್ರತ್ಯೇಕವಾಗಿಡುವುದು ಒಳ್ಳೆಯದು.

ಸೋಂಕು ತಗಲಿದವರ ಸಂಪರ್ಕಕ್ಕೆ ಬಂದ, ಸೋಂಕಿನ ಲಕ್ಷಣಗಳಿದ್ದವರು ಸಮೀಪದ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಿರಿ. ಮನೆಯ ಸದಸ್ಯರಿಗಾಗಲೀ, ಇತರರಿಗಾಗಲೀ ಅದು ಹರಡದಂತೆ ತಾವೇ ಜವಾಬ್ದಾರಿಯಿಂದ ಎಚ್ಚರಿಕೆ ವಹಿಸಬೇಕು.

ಆದಷ್ಟು ಮಟ್ಟಿಗೆ ಮನೆಯೊಳಗೆ ಒಂದೇ ಕೋಣೆಯಲ್ಲಿ ಇದ್ದು, ಆದಷ್ಟು ಕಡಿಮೆ ಜನರ ಸಂಪರ್ಕವಿರಬೇಕು, ಇತರರೊಂದಿಗೆ ಸಂಪರ್ಕದಿಂದ ಕನಿಷ್ಠ 1 ಮೀಟರ್ ದೂರವನ್ನು ಕಾಯಬೇಕು. ಕೋಣೆಯನ್ನು ದಿನಕ್ಕೊಮ್ಮೆಯಾದರೂ ಶುಚಿಕಾರಕ ಬಳಸಿ ಸ್ವಚ್ಛಗೊಳಿಸಬೇಕು. ಬಟ್ಟೆಗಳನ್ನು ಪ್ರತ್ಯೇಕವಾಗಿಟ್ಟು, 60 ಡಿಗ್ರಿ ಬಿಸಿಯಿರುವ ನೀರಲ್ಲಿ ತೊಳೆದು ಒಣಗಿಸಿಕೊಳ್ಳಬೇಕು. ಅವರ ಸಂಪರ್ಕಕ್ಕೆ ಬಂದವರು 14 ದಿನಗಳ ಕಾಲ ತಮ್ಮ ಮೇಲೆ ನಿಗಾ ವಹಿಸಿಕೊಳ್ಳಬೇಕು, ರೋಗಲಕ್ಷಣಗಳಿದ್ದರೆ ತಾವೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ ಎಲ್ಲಾ ಜಾಗ್ರತೆಗಳನ್ನೂ ವಹಿಸಬೇಕು. ಉಸಿರಾಟದ ಸಮಸ್ಯೆಯುಂಟಾದವರು ಕೂಡಲೇ ಆಸ್ಪತ್ರೆಗೆ ಹೋಗಬೇಕು.

ಸೋಂಕುಳ್ಳವರನ್ನು ನಿರ್ಬಂಧಿಸಿದರೆ ಸಾಕು, ಇಡೀ ರಾಜ್ಯವನ್ನು ನಿರ್ಬಂಧಿಸುವ ಅಗತ್ಯ ಈಗಂತೂ ಇಲ್ಲ.

ಶ್ರೀನಿವಾಸ ಕಕ್ಕಿಲ್ಲಾಯ


ಇದನ್ನೂ ಓದಿ: Good News: ಕೊರೊನಾ ವಿರುದ್ಧ ಸಮರ – ಭಾರತದಲ್ಲಿ 7 ರೋಗಿಗಳು ಗುಣಮುಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...