Homeಆರೋಗ್ಯಕೊರೊನಾ ಬಗ್ಗೆ ಭಯ ಬಿಡಿ - ತುರ್ತುಪರಿಸ್ಥಿತಿಯ ಅಗತ್ಯವಿಲ್ಲವೆಂದು ಸಿಎಂ ಪತ್ರ ಬರೆದ ಡಾ. ಶ್ರೀನಿವಾಸ...

ಕೊರೊನಾ ಬಗ್ಗೆ ಭಯ ಬಿಡಿ – ತುರ್ತುಪರಿಸ್ಥಿತಿಯ ಅಗತ್ಯವಿಲ್ಲವೆಂದು ಸಿಎಂ ಪತ್ರ ಬರೆದ ಡಾ. ಶ್ರೀನಿವಾಸ ಕಕ್ಕಿಲ್ಲಾಯ

ಸೋಂಕುಳ್ಳವರನ್ನು ನಿರ್ಬಂಧಿಸಿದರೆ ಸಾಕು, ಇಡೀ ರಾಜ್ಯವನ್ನು ನಿರ್ಬಂಧಿಸುವ ಅಗತ್ಯ ಈಗಂತೂ ಇಲ್ಲ.

- Advertisement -
- Advertisement -

ಕೊರೊನಾ ಬೀತಿಯಿಂದಾಗಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಒಂದು ವಾರಗಳ ಕಾಲ ಸಿನಿಮಾ ಮಂದಿರ, ಮದುವೆ, ನಾಮಕರಣ ಸೇರಿದಂತೆ ಬಹುತೇಕ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಇದು ಜನರನ್ನು ಜಾಗೃತಿ ಉಂಟು ಮಾಡುವ ಬದಲು ಮತ್ತಷ್ಟು ಭಯವನ್ನುಉಂಟುಮಾಡುತ್ತದೆ, ಇದರ ಅಗತ್ಯವಿಲ್ಲ ಎಂದು ಬಹುತೇಕರು ಅಭಿಪ್ರಾಯಪಟ್ಟಿದ್ದಾರೆ. ಈ ವಿಷಯದ ಕುರಿತು ಜನಪರ ವೈದ್ಯರಾದ ಡಾ. ಶ್ರೀನಿವಾಸ ಕಕ್ಕಿಲ್ಲಾಯರವರು ಕರ್ನಾಟಕದ ಮುಖ್ಯಮಂತ್ರಿ ಮತ್ತು ಆರೋಗ್ಯ ಮಂತ್ರಿಗಳಿಗೆ ಪತ್ರವೊಂದನ್ನು ಬರೆದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅದರ ಪೂರ್ಣ ವಿವರ ಕೆಳಗಿನಂತಿದೆ.

ಮಾನ್ಯ ಮುಖ್ಯಮಂತ್ರಿಗಳೇ,

ಕೊರೊನಾ ತಡೆಯುವುದಕ್ಕೆ ಇಡೀ ರಾಜ್ಯದ ಎಲ್ಲಾ ಸಾರ್ವಜನಿಕ ಸ್ಥಳಗಳನ್ನು ಮುಚ್ಚುವ ನಿರ್ಧಾರವನ್ನು ದಯವಿಟ್ಟು ಹಿಂಪಡೆಯಿರಿ. ಈಗಾಗಲೇ ನಮ್ಮ ಜನರು ಕೆಲಸವಿಲ್ಲದೆ ಕಷ್ಟದಲ್ಲಿದ್ದಾರೆ, ಅಂತದ್ದರಲ್ಲಿ ಇಡೀ ರಾಜ್ಯದ ಆರ್ಥಿಕ ಚಟುವಟಿಕೆಗಳಿಗೆ ಭಾರೀ ಹೊಡೆತ ನೀಡುವ ಈ ನಿರ್ಧಾರ ಸಾಧುವಲ್ಲ, ಅಗತ್ಯವೂ ಇಲ್ಲ.

ಅದರ ಬದಲಿಗೆ, ಕೊರೊನಾ ಅಂದರೆ ಏನು, ಅದರ ಲಕ್ಷಣಗಳೇನು, ಹರಡುವುದು ಹೇಗೆ, ರೋಗ ತಗಲಿದವರನ್ನು ಹೇಗೆ ಆರೈಕೆ ಮಾಡಬೇಕು, ಯಾರನ್ನು ಮನೆಯಲ್ಲೇ ನೋಡಿಕೊಳ್ಳಬೇಕು(ಬಹುದು), ಯಾರನ್ನು ಆಸ್ಪತ್ರೆಗೆ ತರಬೇಕು, ಮನೆಯಲ್ಲಿ ಆರೈಕೆ ಮಾಡುವುದಿದ್ದರೆ ರೋಗಿ ಹಾಗೂ ಮನೆಯವರು ಯಾವ ಜಾಗ್ರತೆ ವಹಿಸಬೇಕು ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿಯನ್ನು ರಾಜ್ಯದ ಜನರಿಗೆ ಈ ಕೂಡಲೇ ತಲುಪಿಸಲು ವ್ಯವಸ್ಥೆ ಮಾಡಿ.

ಜೊತೆಗೆ, ಸೋಂಕು ಹರಡಿದಾಗ ಹಲವರು ಆಸ್ಪತ್ರೆಗಳಿಗೆ ದಾಖಲಾಗಬೇಕಾದ ಅಗತ್ಯವುಂಟಾಗಬಹುದು, ಕೆಲವರಿಗೆ ಕೃತಕ ಉಸಿರಾಟದ ಅಗತ್ಯವೂ ಬರಬಹುದು. ಅದನ್ನು ನಿಭಾಯಿಸಲು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಸೂಕ್ತ ವ್ಯವಸ್ಥೆಗಳನ್ನು ಈ ಕೂಡಲೇ ಒದಗಿಸಿ, ಹಾಗೂ ಅಂತಹ ರೋಗಿಗಳ ಚಿಕಿತ್ಸೆಗಾಗಿಯೇ ಕೆಲವು ಆಸ್ಪತ್ರೆಗಳನ್ನು ಪ್ರತ್ಯೇಕವಾಗಿಡುವುದು ಒಳ್ಳೆಯದು.

ಸೋಂಕು ತಗಲಿದವರ ಸಂಪರ್ಕಕ್ಕೆ ಬಂದ, ಸೋಂಕಿನ ಲಕ್ಷಣಗಳಿದ್ದವರು ಸಮೀಪದ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಿರಿ. ಮನೆಯ ಸದಸ್ಯರಿಗಾಗಲೀ, ಇತರರಿಗಾಗಲೀ ಅದು ಹರಡದಂತೆ ತಾವೇ ಜವಾಬ್ದಾರಿಯಿಂದ ಎಚ್ಚರಿಕೆ ವಹಿಸಬೇಕು.

ಆದಷ್ಟು ಮಟ್ಟಿಗೆ ಮನೆಯೊಳಗೆ ಒಂದೇ ಕೋಣೆಯಲ್ಲಿ ಇದ್ದು, ಆದಷ್ಟು ಕಡಿಮೆ ಜನರ ಸಂಪರ್ಕವಿರಬೇಕು, ಇತರರೊಂದಿಗೆ ಸಂಪರ್ಕದಿಂದ ಕನಿಷ್ಠ 1 ಮೀಟರ್ ದೂರವನ್ನು ಕಾಯಬೇಕು. ಕೋಣೆಯನ್ನು ದಿನಕ್ಕೊಮ್ಮೆಯಾದರೂ ಶುಚಿಕಾರಕ ಬಳಸಿ ಸ್ವಚ್ಛಗೊಳಿಸಬೇಕು. ಬಟ್ಟೆಗಳನ್ನು ಪ್ರತ್ಯೇಕವಾಗಿಟ್ಟು, 60 ಡಿಗ್ರಿ ಬಿಸಿಯಿರುವ ನೀರಲ್ಲಿ ತೊಳೆದು ಒಣಗಿಸಿಕೊಳ್ಳಬೇಕು. ಅವರ ಸಂಪರ್ಕಕ್ಕೆ ಬಂದವರು 14 ದಿನಗಳ ಕಾಲ ತಮ್ಮ ಮೇಲೆ ನಿಗಾ ವಹಿಸಿಕೊಳ್ಳಬೇಕು, ರೋಗಲಕ್ಷಣಗಳಿದ್ದರೆ ತಾವೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ ಎಲ್ಲಾ ಜಾಗ್ರತೆಗಳನ್ನೂ ವಹಿಸಬೇಕು. ಉಸಿರಾಟದ ಸಮಸ್ಯೆಯುಂಟಾದವರು ಕೂಡಲೇ ಆಸ್ಪತ್ರೆಗೆ ಹೋಗಬೇಕು.

ಸೋಂಕುಳ್ಳವರನ್ನು ನಿರ್ಬಂಧಿಸಿದರೆ ಸಾಕು, ಇಡೀ ರಾಜ್ಯವನ್ನು ನಿರ್ಬಂಧಿಸುವ ಅಗತ್ಯ ಈಗಂತೂ ಇಲ್ಲ.

ಶ್ರೀನಿವಾಸ ಕಕ್ಕಿಲ್ಲಾಯ


ಇದನ್ನೂ ಓದಿ: Good News: ಕೊರೊನಾ ವಿರುದ್ಧ ಸಮರ – ಭಾರತದಲ್ಲಿ 7 ರೋಗಿಗಳು ಗುಣಮುಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...