Homeಅಂತರಾಷ್ಟ್ರೀಯಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ ಹುಟ್ಟಿದೆ: ಚೀನಾ ಆರೋಪ

ಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ ಹುಟ್ಟಿದೆ: ಚೀನಾ ಆರೋಪ

ಫೋರ್ಟ್ ಡೆಟ್ರಿಕ್‌‌ನ ಅಮೆರಿಕಾ ಮಿಲಿಟರಿ ಸಿಬ್ಬಂದಿ ಅಕ್ಟೋಬರ್‌‌ನಲ್ಲಿ ಚೀನಾದ ವುವಾನ್‌ನಲ್ಲಿ ನಡೆದ ವಿಶ್ವ ಮಿಲಿಟರಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅವರು ವುಹಾನ್‌‌‌ಗೆ ವೈರಸ್ ಅನ್ನು ಹರಡಿದ್ದಾರೆ ಎಂದು ಚೀನಾದ ಸರ್ಕಾರಿ ಅಧಿಕಾರಿಗಳು ಆರೋಪಿಸಿದ್ದಾರೆ.

- Advertisement -
- Advertisement -

ಇದುವರೆಗೂ ಕೊರೊನಾ ವೈರಸ್‌ ಚೀನಾದ ವುಹಾನ್‌ನಲ್ಲಿ ಹುಟ್ಟಿದೆ ಎಂಬ ಪ್ರಚಾರಗಳ ಮಧ್ಯೆ ಚೀನಾ ಬೇರೆಯೆ ವಿಚಾರವನ್ನು ವಿಶ್ವದ ಮುಂದಿಟ್ಟಿದೆ. ಪ್ರಪಂಚದೆಲ್ಲೆಡೆ ಏಕಾಏಕಿ ಎರಗಿದ ಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಿಂದ ಸೋರಿಕೆಯಾಗಿದೆ ಎಂಬ ಹೊಸ ಸಿದ್ಧಾಂತವನ್ನು ತೇಲಿ ಬಿಟ್ಟಿದೆ.

ಚೀನಾದ ಕಮ್ಯುನಿಸ್ಟ್ ಪಾರ್ಟಿ ನಿಯತಕಾಲಿಕೆ ಕ್ವಿಶಿಯಲ್ಲಿ ಪ್ರಕಟವಾದ ಲೇಖನದಲ್ಲಿ, ಕೊರೊನಾ ವೈರಸ್ ವಿರುದ್ಧ ಹೋರಾಡಲು “ಹೊಸ ಕರೋನ ವೈರಸ್‌ನ ಮೂಲ ಮತ್ತು ಪ್ರಸರಣ ಮಾರ್ಗವನ್ನು ಸ್ಪಷ್ಟಪಡಿಸುವುದು ಅತ್ಯಗತ್ಯ” ಎಂದು ಚೀನಾ ಸರ್ಕಾರ ಹೇಳಿದೆ.


ಓದಿ: ಕೊರೊನಾ ನಿಯಂತ್ರಣ: WHO ವಿರುದ್ಧದ ತನಿಖೆಗೆ ಭಾರತ ಸೇರಿ 62 ರಾಷ್ಟ್ರಗಳ ಒತ್ತಾಯ


ಲೇಖನವು ಭಾಗಶಃ ಮಾಹಿತಿಯನ್ನು ಉಲ್ಲೇಖಿಸಿ, ವುಹಾನ್ ನಗರದಲ್ಲಿ ಕರೋನವೈರಸ್ ಹುಟ್ಟಿಕೊಂಡಿಲ್ಲ ಎಂದು ಹೇಳಿದೆ. ಲೇಖನದಲ್ಲಿ ಅಮೇರಿಕದಲ್ಲಿನ ಪರಿಸ್ಥಿತಿಯನ್ನು ನಿರ್ದಿಷ್ಟವಾಗಿ ಎತ್ತಿ ತೋರಿಸಿದ್ದು, ಅಲ್ಲಿ ಸುಮಾರು 90,000 ಜನರು ಕೊರೊನಾ ವೈರಸ್‌ನಿಂದ ಸಾವನ್ನಪ್ಪಿದ್ದು ಏಕೆ ಎಂದು ಪ್ರಶ್ನಿಸಿದೆ.

ಫೋರ್ಟ್ ಡೆಟ್ರಿಕ್ ಜೈವಿಕ ಪ್ರಯೋಗಾಲಯವನ್ನು ಯಾಕೆ ಮುಚ್ಚಲಾಗಿದೆ ಮತ್ತು ಇದು ಕೊರೊನಾ ವೈರಸ್‌ ಬಗ್ಗೆ ಸಂಶೋಧನೆ ನಡೆಸಿದೆಯೇ ಹಾಗೂ ವೈರಸ್ ಪ್ರಯೋಗಾಲಯದಿಂದ ಸೋರಿಕೆಯಾಗಿದೆಯೇ ಎಂದು ಅನೇಕ ಜನರು ಪ್ರಶ್ನಿಸುತ್ತಿದ್ದಾರೆ ಎಂದು ಲೇಖನವು ಗಮನಸೆಳೆದೆ.

ಮೇರಿಲ್ಯಾಂಡ್‌‌ನಲ್ಲಿರುವ ಫೋರ್ಟ್ ಡೆಟ್ರಿಕ್, ಅಮೆರಿಕಾದ ಮಿಲಿಟರಿ ಸಾಂಕ್ರಾಮಿಕ ರೋಗಗಳ ಸಂಶೋಧನಾ ಸಂಸ್ಥೆಯಾಗಿದೆ. ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳಾದ ಇಲ್ಲಿ ಜೈವಿಕ ಸುರಕ್ಷತೆಯ ಕೊರತೆಯನ್ನು ಕಂಡುಕೊಂಡ ನಂತರ ಅದನ್ನು ಕಳೆದ ಆಗಸ್ಟ್‌ನಲ್ಲಿ ಮುಚ್ಚಲಾಗಿತ್ತು.

ಇದರ ಬಗ್ಗೆ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿತ್ತು. ಲ್ಯಾಬ್ “ತ್ಯಾಜ್ಯ ನೀರನ್ನು ಶುದ್ದೀಕರಿಸುವ ಸಾಕಷ್ಟು ವ್ಯವಸ್ಥೆಗಳನ್ನು ಹೊಂದಿಲ್ಲ” ಎಂದು ಪ್ರಯೋಗಾಲಯವನ್ನು ಸ್ಥಗಿತಗೊಳಿಸುವ ಆದೇಶ ಬಂದಿದೆ ಎಂದು ವರದಿಯಾಗಿತ್ತು. ಆದರೆ ರೋಗ-ಉಂಟುಮಾಡುವ ವಸ್ತುಗಳು ಪ್ರಯೋಗಾಲಯಗಳಿಂದ ಸೋರಿಕೆಯಾದ ಬಗ್ಗೆ ಯಾವುದೇ ಸುದ್ದಿ ಇರಲಿಲ್ಲ.

ಫೋರ್ಟ್ ಡೆಟ್ರಿಕ್‌‌ನ ಅಮೆರಿಕಾ ಮಿಲಿಟರಿ ಸಿಬ್ಬಂದಿ ಅಕ್ಟೋಬರ್‌‌ನಲ್ಲಿ ಚೀನಾದ ವುವಾನ್‌ನಲ್ಲಿ ನಡೆದ ವಿಶ್ವ ಮಿಲಿಟರಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅವರು ವುಹಾನ್‌‌‌ಗೆ ವೈರಸ್ ಅನ್ನು ಹರಡಿದ್ದಾರೆ ಎಂದು ಚೀನಾದ ಸರ್ಕಾರಿ ಅಧಿಕಾರಿಗಳು ಈ ಹಿಂದಿನಿಂದಲೂ ಹೇಳಿಕೊಂಡು ಬರುತ್ತಿದ್ದಾರೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಆಡಳಿತವು ವುಹಾನ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯಿಂದ ವೈರಸ್‌ ಸೋರಿಕೆಯಾಗಿದೆ ಎಂದು ಹೇಳುತ್ತಲೇ ಬಂದಿದ್ದಾರೆ, ಆದರೆ ಇದನ್ನು ಹೆಚ್ಚಿನ ವಿಜ್ಞಾನಿಗಳು ನಿರಾಕರಿಸಿದ್ದಾರೆ.


ಓದಿ:  ಕೊರೊನಾ ವೈರಸನ್ನು ಚೀನಾದಲ್ಲಿ ಸೃಷ್ಟಿಸಲಾಗಿದೆ: ಡೊನಾಲ್ಡ್ ಟ್ರಂಪ್ ಆರೋಪ


ಆದಾಗ್ಯೂ, ಕಳೆದವಾರ ರಾಜ್ಯ ಕಾರ್ಯದರ್ಶಿ ಮೈಕ್ ಪೊಂಪಿಯೊ ಅವರು ಕರೋನ ವೈರಸ್ ವುಹಾನ್ ಲ್ಯಾಬ್‌ನಲ್ಲಿ ಹುಟ್ಟಿಕೊಂಡಿದೆ ಎಂಬ ಈ ಹಿಂದಿನ ಕೆಲವು ಹೇಳಿಕೆಗಳನ್ನು ಹಿಂದಕ್ಕೆ ಪಡೆದುಕೊಂಡಿದ್ದು “ಇದು ವುಹಾನ್‌ನಲ್ಲಿ ಪ್ರಾರಂಭವಾಯಿತು ಎಂದು ನಮಗೆ ತಿಳಿದಿದೆ, ಆದರೆ ಎಲ್ಲಿಂದ ಅಥವಾ ಯಾರಿಂದ ಎಂಬುದು ನಮಗೆ ಗೊತ್ತಿಲ್ಲ, ಇದು ಮುಖ್ಯ ವಿಷಯವಾಗಿದೆ” ಎಂದು ಹೇಳಿದ್ದಾರೆ.

ವೈರಸ್ ಮೂಲ ಚೀನಾವಲ್ಲ ಎಂದು ಡಿಸೆಂಬರ್ 27 ರಂದು ಫ್ರಾನ್ಸ್‌ನಲ್ಲಿ ದೃಡೀಕರಿಸಿದ ಕೊರೊನಾ ವೈರಸ್ ಪ್ರಕರಣವನ್ನು ಸಹ ಪತ್ರಿಕೆ ಕ್ವಿಶಿ ಉಲ್ಲೇಖಿಸಿ, ಸೋಂಕಿಗೆ ಒಳಗಾಗುವ ಮೊದಲು ಮನುಷ್ಯನಿಗೆ ಚೀನಾದೊಂದಿಗೆ ಯಾವುದೇ ಸಂಪರ್ಕವಿರಲಿಲ್ಲ ಹಾಗೂ ಪ್ರಯಾಣ ಮಾಡಿರಲಿಲ್ಲ ಎಂದು ಹೇಳಿದೆ.

ಆದರೆ, ರೋಗಿಯ ಪತ್ನಿ ಪ್ಯಾರಿಸ್‌ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದ ಸಮೀಪವಿರುವ ಸೂಪರ್‌ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇದರಿಂದಾಗಿ ಇತ್ತೀಚೆಗೆ ಚೀನಾದಿಂದ ಆಗಮಿಸಿದ ಜನರೊಂದಿಗೆ ಸಂಪರ್ಕಕ್ಕೆ ಒಳಗಾಗಿರಬಹುದಾದ ಸಂಭವವಿದೆ ಎಂದು ಹೇಳಲಾಗಿದೆ, ಇದರ ಬಗ್ಗೆ ಕ್ವಿಶಿಯ ಲೇಖನವೂ ಸೂಚಿಸಿಲ್ಲ.

ಒಟ್ಟಿನಲ್ಲಿ ಕೊರೊನಾ ವೈರಸ್‌ ಉಗಮದ ಬಗ್ಗೆ ಅಮೆರಿಕಾ ಮತ್ತು ಚೀನಾ ಪರಸ್ಪರ ದೋಷಾರೋಪಣೆಯಲ್ಲಿ ಮುಳುಗಿದೆ.

ಈ ಎರಡು ರಾಷ್ಟ್ರಗಳ ಕಚ್ಚಾಟ ಹಾಗೂ ಕೊರೊನಾ ವೈರಸ್ ಹೇಗೆ ಹರಡಿತು ಎಂಬುದನ್ನು ಸ್ಥಾಪಿಸಲು ಸಮಗ್ರವಾದ ತನಿಖೆ ನಡೆಸಲು ವಿಶ್ವ ಆರೋಗ್ಯ ಸಂಸ್ಥೆಯ  ಆಡಳಿತ ಮಂಡಳಿಯಾದ WHA ಯೂ ಕರಡು ತಯಾರಿಸಿದೆ.

ಈ ಸಭೆಯಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿ, “ನಾವೆಲ್ಲರೂ ಮುಕ್ತತೆ, ಪಾರದರ್ಶಕತೆ ಮತ್ತು ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸಿದ್ದೇವೆ” ಎಂದು ಹೇಳಿದ್ದಾರೆ.

ಈಗಾಗಲೇ, ಯುರೋಪಿಯನ್ ಯೂನಿಯನ್ ದೇಶಗಳು, ಆಸ್ಟ್ರೇಲಿಯಾದ ಸೇರಿದಂತೆ 120 ಕ್ಕೂ ಹೆಚ್ಚು ದೇಶಗಳು ಕರಡು ನಿರ್ಣಯವನ್ನು ಬೆಂಬಲಿಸಿ, ಕೊರೊನಾದ ಮೂಲದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. WHA ಯ 194 ಸದಸ್ಯ ರಾಷ್ಟ್ರಗಳಲ್ಲಿ ಮೂರನೇ ಎರಡರಷ್ಟು ಬೆಂಬಲವನ್ನು ಪಡೆಯಲು ಸಾಧ್ಯವಾದರೆ ಈ ನಿರ್ಣಯವನ್ನು ಇಂದು (ಮಂಗಳವಾರ) ಮಂಡಿಸುವ ಸಾಧ್ಯತೆಯಿದೆ.

ಮೂಲ: ದಿ ವೈಸ್‌.ಕಾಂ


ಓದಿ:  ಕೊರೊನಾ ಮಾನವ ನಿರ್ಮಿತ ವೈರಸ್ ಎಂದು ಜಪಾನ್‌ನ ನೊಬೆಲ್ ಪ್ರಶಸ್ತಿ ವಿಜೇತ ಹೇಳಿದ್ದಾರೆಯೇ?; ಪ್ಯಾಕ್ಟ್ ಚೆಕ್


ವಿಡಿಯೊ ನೋಡಿ: ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...