Homeಅಂತರಾಷ್ಟ್ರೀಯಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ ಹುಟ್ಟಿದೆ: ಚೀನಾ ಆರೋಪ

ಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ ಹುಟ್ಟಿದೆ: ಚೀನಾ ಆರೋಪ

ಫೋರ್ಟ್ ಡೆಟ್ರಿಕ್‌‌ನ ಅಮೆರಿಕಾ ಮಿಲಿಟರಿ ಸಿಬ್ಬಂದಿ ಅಕ್ಟೋಬರ್‌‌ನಲ್ಲಿ ಚೀನಾದ ವುವಾನ್‌ನಲ್ಲಿ ನಡೆದ ವಿಶ್ವ ಮಿಲಿಟರಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅವರು ವುಹಾನ್‌‌‌ಗೆ ವೈರಸ್ ಅನ್ನು ಹರಡಿದ್ದಾರೆ ಎಂದು ಚೀನಾದ ಸರ್ಕಾರಿ ಅಧಿಕಾರಿಗಳು ಆರೋಪಿಸಿದ್ದಾರೆ.

- Advertisement -
- Advertisement -

ಇದುವರೆಗೂ ಕೊರೊನಾ ವೈರಸ್‌ ಚೀನಾದ ವುಹಾನ್‌ನಲ್ಲಿ ಹುಟ್ಟಿದೆ ಎಂಬ ಪ್ರಚಾರಗಳ ಮಧ್ಯೆ ಚೀನಾ ಬೇರೆಯೆ ವಿಚಾರವನ್ನು ವಿಶ್ವದ ಮುಂದಿಟ್ಟಿದೆ. ಪ್ರಪಂಚದೆಲ್ಲೆಡೆ ಏಕಾಏಕಿ ಎರಗಿದ ಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಿಂದ ಸೋರಿಕೆಯಾಗಿದೆ ಎಂಬ ಹೊಸ ಸಿದ್ಧಾಂತವನ್ನು ತೇಲಿ ಬಿಟ್ಟಿದೆ.

ಚೀನಾದ ಕಮ್ಯುನಿಸ್ಟ್ ಪಾರ್ಟಿ ನಿಯತಕಾಲಿಕೆ ಕ್ವಿಶಿಯಲ್ಲಿ ಪ್ರಕಟವಾದ ಲೇಖನದಲ್ಲಿ, ಕೊರೊನಾ ವೈರಸ್ ವಿರುದ್ಧ ಹೋರಾಡಲು “ಹೊಸ ಕರೋನ ವೈರಸ್‌ನ ಮೂಲ ಮತ್ತು ಪ್ರಸರಣ ಮಾರ್ಗವನ್ನು ಸ್ಪಷ್ಟಪಡಿಸುವುದು ಅತ್ಯಗತ್ಯ” ಎಂದು ಚೀನಾ ಸರ್ಕಾರ ಹೇಳಿದೆ.


ಓದಿ: ಕೊರೊನಾ ನಿಯಂತ್ರಣ: WHO ವಿರುದ್ಧದ ತನಿಖೆಗೆ ಭಾರತ ಸೇರಿ 62 ರಾಷ್ಟ್ರಗಳ ಒತ್ತಾಯ


ಲೇಖನವು ಭಾಗಶಃ ಮಾಹಿತಿಯನ್ನು ಉಲ್ಲೇಖಿಸಿ, ವುಹಾನ್ ನಗರದಲ್ಲಿ ಕರೋನವೈರಸ್ ಹುಟ್ಟಿಕೊಂಡಿಲ್ಲ ಎಂದು ಹೇಳಿದೆ. ಲೇಖನದಲ್ಲಿ ಅಮೇರಿಕದಲ್ಲಿನ ಪರಿಸ್ಥಿತಿಯನ್ನು ನಿರ್ದಿಷ್ಟವಾಗಿ ಎತ್ತಿ ತೋರಿಸಿದ್ದು, ಅಲ್ಲಿ ಸುಮಾರು 90,000 ಜನರು ಕೊರೊನಾ ವೈರಸ್‌ನಿಂದ ಸಾವನ್ನಪ್ಪಿದ್ದು ಏಕೆ ಎಂದು ಪ್ರಶ್ನಿಸಿದೆ.

ಫೋರ್ಟ್ ಡೆಟ್ರಿಕ್ ಜೈವಿಕ ಪ್ರಯೋಗಾಲಯವನ್ನು ಯಾಕೆ ಮುಚ್ಚಲಾಗಿದೆ ಮತ್ತು ಇದು ಕೊರೊನಾ ವೈರಸ್‌ ಬಗ್ಗೆ ಸಂಶೋಧನೆ ನಡೆಸಿದೆಯೇ ಹಾಗೂ ವೈರಸ್ ಪ್ರಯೋಗಾಲಯದಿಂದ ಸೋರಿಕೆಯಾಗಿದೆಯೇ ಎಂದು ಅನೇಕ ಜನರು ಪ್ರಶ್ನಿಸುತ್ತಿದ್ದಾರೆ ಎಂದು ಲೇಖನವು ಗಮನಸೆಳೆದೆ.

ಮೇರಿಲ್ಯಾಂಡ್‌‌ನಲ್ಲಿರುವ ಫೋರ್ಟ್ ಡೆಟ್ರಿಕ್, ಅಮೆರಿಕಾದ ಮಿಲಿಟರಿ ಸಾಂಕ್ರಾಮಿಕ ರೋಗಗಳ ಸಂಶೋಧನಾ ಸಂಸ್ಥೆಯಾಗಿದೆ. ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳಾದ ಇಲ್ಲಿ ಜೈವಿಕ ಸುರಕ್ಷತೆಯ ಕೊರತೆಯನ್ನು ಕಂಡುಕೊಂಡ ನಂತರ ಅದನ್ನು ಕಳೆದ ಆಗಸ್ಟ್‌ನಲ್ಲಿ ಮುಚ್ಚಲಾಗಿತ್ತು.

ಇದರ ಬಗ್ಗೆ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿತ್ತು. ಲ್ಯಾಬ್ “ತ್ಯಾಜ್ಯ ನೀರನ್ನು ಶುದ್ದೀಕರಿಸುವ ಸಾಕಷ್ಟು ವ್ಯವಸ್ಥೆಗಳನ್ನು ಹೊಂದಿಲ್ಲ” ಎಂದು ಪ್ರಯೋಗಾಲಯವನ್ನು ಸ್ಥಗಿತಗೊಳಿಸುವ ಆದೇಶ ಬಂದಿದೆ ಎಂದು ವರದಿಯಾಗಿತ್ತು. ಆದರೆ ರೋಗ-ಉಂಟುಮಾಡುವ ವಸ್ತುಗಳು ಪ್ರಯೋಗಾಲಯಗಳಿಂದ ಸೋರಿಕೆಯಾದ ಬಗ್ಗೆ ಯಾವುದೇ ಸುದ್ದಿ ಇರಲಿಲ್ಲ.

ಫೋರ್ಟ್ ಡೆಟ್ರಿಕ್‌‌ನ ಅಮೆರಿಕಾ ಮಿಲಿಟರಿ ಸಿಬ್ಬಂದಿ ಅಕ್ಟೋಬರ್‌‌ನಲ್ಲಿ ಚೀನಾದ ವುವಾನ್‌ನಲ್ಲಿ ನಡೆದ ವಿಶ್ವ ಮಿಲಿಟರಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅವರು ವುಹಾನ್‌‌‌ಗೆ ವೈರಸ್ ಅನ್ನು ಹರಡಿದ್ದಾರೆ ಎಂದು ಚೀನಾದ ಸರ್ಕಾರಿ ಅಧಿಕಾರಿಗಳು ಈ ಹಿಂದಿನಿಂದಲೂ ಹೇಳಿಕೊಂಡು ಬರುತ್ತಿದ್ದಾರೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಆಡಳಿತವು ವುಹಾನ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯಿಂದ ವೈರಸ್‌ ಸೋರಿಕೆಯಾಗಿದೆ ಎಂದು ಹೇಳುತ್ತಲೇ ಬಂದಿದ್ದಾರೆ, ಆದರೆ ಇದನ್ನು ಹೆಚ್ಚಿನ ವಿಜ್ಞಾನಿಗಳು ನಿರಾಕರಿಸಿದ್ದಾರೆ.


ಓದಿ:  ಕೊರೊನಾ ವೈರಸನ್ನು ಚೀನಾದಲ್ಲಿ ಸೃಷ್ಟಿಸಲಾಗಿದೆ: ಡೊನಾಲ್ಡ್ ಟ್ರಂಪ್ ಆರೋಪ


ಆದಾಗ್ಯೂ, ಕಳೆದವಾರ ರಾಜ್ಯ ಕಾರ್ಯದರ್ಶಿ ಮೈಕ್ ಪೊಂಪಿಯೊ ಅವರು ಕರೋನ ವೈರಸ್ ವುಹಾನ್ ಲ್ಯಾಬ್‌ನಲ್ಲಿ ಹುಟ್ಟಿಕೊಂಡಿದೆ ಎಂಬ ಈ ಹಿಂದಿನ ಕೆಲವು ಹೇಳಿಕೆಗಳನ್ನು ಹಿಂದಕ್ಕೆ ಪಡೆದುಕೊಂಡಿದ್ದು “ಇದು ವುಹಾನ್‌ನಲ್ಲಿ ಪ್ರಾರಂಭವಾಯಿತು ಎಂದು ನಮಗೆ ತಿಳಿದಿದೆ, ಆದರೆ ಎಲ್ಲಿಂದ ಅಥವಾ ಯಾರಿಂದ ಎಂಬುದು ನಮಗೆ ಗೊತ್ತಿಲ್ಲ, ಇದು ಮುಖ್ಯ ವಿಷಯವಾಗಿದೆ” ಎಂದು ಹೇಳಿದ್ದಾರೆ.

ವೈರಸ್ ಮೂಲ ಚೀನಾವಲ್ಲ ಎಂದು ಡಿಸೆಂಬರ್ 27 ರಂದು ಫ್ರಾನ್ಸ್‌ನಲ್ಲಿ ದೃಡೀಕರಿಸಿದ ಕೊರೊನಾ ವೈರಸ್ ಪ್ರಕರಣವನ್ನು ಸಹ ಪತ್ರಿಕೆ ಕ್ವಿಶಿ ಉಲ್ಲೇಖಿಸಿ, ಸೋಂಕಿಗೆ ಒಳಗಾಗುವ ಮೊದಲು ಮನುಷ್ಯನಿಗೆ ಚೀನಾದೊಂದಿಗೆ ಯಾವುದೇ ಸಂಪರ್ಕವಿರಲಿಲ್ಲ ಹಾಗೂ ಪ್ರಯಾಣ ಮಾಡಿರಲಿಲ್ಲ ಎಂದು ಹೇಳಿದೆ.

ಆದರೆ, ರೋಗಿಯ ಪತ್ನಿ ಪ್ಯಾರಿಸ್‌ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದ ಸಮೀಪವಿರುವ ಸೂಪರ್‌ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇದರಿಂದಾಗಿ ಇತ್ತೀಚೆಗೆ ಚೀನಾದಿಂದ ಆಗಮಿಸಿದ ಜನರೊಂದಿಗೆ ಸಂಪರ್ಕಕ್ಕೆ ಒಳಗಾಗಿರಬಹುದಾದ ಸಂಭವವಿದೆ ಎಂದು ಹೇಳಲಾಗಿದೆ, ಇದರ ಬಗ್ಗೆ ಕ್ವಿಶಿಯ ಲೇಖನವೂ ಸೂಚಿಸಿಲ್ಲ.

ಒಟ್ಟಿನಲ್ಲಿ ಕೊರೊನಾ ವೈರಸ್‌ ಉಗಮದ ಬಗ್ಗೆ ಅಮೆರಿಕಾ ಮತ್ತು ಚೀನಾ ಪರಸ್ಪರ ದೋಷಾರೋಪಣೆಯಲ್ಲಿ ಮುಳುಗಿದೆ.

ಈ ಎರಡು ರಾಷ್ಟ್ರಗಳ ಕಚ್ಚಾಟ ಹಾಗೂ ಕೊರೊನಾ ವೈರಸ್ ಹೇಗೆ ಹರಡಿತು ಎಂಬುದನ್ನು ಸ್ಥಾಪಿಸಲು ಸಮಗ್ರವಾದ ತನಿಖೆ ನಡೆಸಲು ವಿಶ್ವ ಆರೋಗ್ಯ ಸಂಸ್ಥೆಯ  ಆಡಳಿತ ಮಂಡಳಿಯಾದ WHA ಯೂ ಕರಡು ತಯಾರಿಸಿದೆ.

ಈ ಸಭೆಯಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿ, “ನಾವೆಲ್ಲರೂ ಮುಕ್ತತೆ, ಪಾರದರ್ಶಕತೆ ಮತ್ತು ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸಿದ್ದೇವೆ” ಎಂದು ಹೇಳಿದ್ದಾರೆ.

ಈಗಾಗಲೇ, ಯುರೋಪಿಯನ್ ಯೂನಿಯನ್ ದೇಶಗಳು, ಆಸ್ಟ್ರೇಲಿಯಾದ ಸೇರಿದಂತೆ 120 ಕ್ಕೂ ಹೆಚ್ಚು ದೇಶಗಳು ಕರಡು ನಿರ್ಣಯವನ್ನು ಬೆಂಬಲಿಸಿ, ಕೊರೊನಾದ ಮೂಲದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. WHA ಯ 194 ಸದಸ್ಯ ರಾಷ್ಟ್ರಗಳಲ್ಲಿ ಮೂರನೇ ಎರಡರಷ್ಟು ಬೆಂಬಲವನ್ನು ಪಡೆಯಲು ಸಾಧ್ಯವಾದರೆ ಈ ನಿರ್ಣಯವನ್ನು ಇಂದು (ಮಂಗಳವಾರ) ಮಂಡಿಸುವ ಸಾಧ್ಯತೆಯಿದೆ.

ಮೂಲ: ದಿ ವೈಸ್‌.ಕಾಂ


ಓದಿ:  ಕೊರೊನಾ ಮಾನವ ನಿರ್ಮಿತ ವೈರಸ್ ಎಂದು ಜಪಾನ್‌ನ ನೊಬೆಲ್ ಪ್ರಶಸ್ತಿ ವಿಜೇತ ಹೇಳಿದ್ದಾರೆಯೇ?; ಪ್ಯಾಕ್ಟ್ ಚೆಕ್


ವಿಡಿಯೊ ನೋಡಿ: ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...