Homeಅಂತರಾಷ್ಟ್ರೀಯಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ ಹುಟ್ಟಿದೆ: ಚೀನಾ ಆರೋಪ

ಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ ಹುಟ್ಟಿದೆ: ಚೀನಾ ಆರೋಪ

ಫೋರ್ಟ್ ಡೆಟ್ರಿಕ್‌‌ನ ಅಮೆರಿಕಾ ಮಿಲಿಟರಿ ಸಿಬ್ಬಂದಿ ಅಕ್ಟೋಬರ್‌‌ನಲ್ಲಿ ಚೀನಾದ ವುವಾನ್‌ನಲ್ಲಿ ನಡೆದ ವಿಶ್ವ ಮಿಲಿಟರಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅವರು ವುಹಾನ್‌‌‌ಗೆ ವೈರಸ್ ಅನ್ನು ಹರಡಿದ್ದಾರೆ ಎಂದು ಚೀನಾದ ಸರ್ಕಾರಿ ಅಧಿಕಾರಿಗಳು ಆರೋಪಿಸಿದ್ದಾರೆ.

- Advertisement -
- Advertisement -

ಇದುವರೆಗೂ ಕೊರೊನಾ ವೈರಸ್‌ ಚೀನಾದ ವುಹಾನ್‌ನಲ್ಲಿ ಹುಟ್ಟಿದೆ ಎಂಬ ಪ್ರಚಾರಗಳ ಮಧ್ಯೆ ಚೀನಾ ಬೇರೆಯೆ ವಿಚಾರವನ್ನು ವಿಶ್ವದ ಮುಂದಿಟ್ಟಿದೆ. ಪ್ರಪಂಚದೆಲ್ಲೆಡೆ ಏಕಾಏಕಿ ಎರಗಿದ ಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಿಂದ ಸೋರಿಕೆಯಾಗಿದೆ ಎಂಬ ಹೊಸ ಸಿದ್ಧಾಂತವನ್ನು ತೇಲಿ ಬಿಟ್ಟಿದೆ.

ಚೀನಾದ ಕಮ್ಯುನಿಸ್ಟ್ ಪಾರ್ಟಿ ನಿಯತಕಾಲಿಕೆ ಕ್ವಿಶಿಯಲ್ಲಿ ಪ್ರಕಟವಾದ ಲೇಖನದಲ್ಲಿ, ಕೊರೊನಾ ವೈರಸ್ ವಿರುದ್ಧ ಹೋರಾಡಲು “ಹೊಸ ಕರೋನ ವೈರಸ್‌ನ ಮೂಲ ಮತ್ತು ಪ್ರಸರಣ ಮಾರ್ಗವನ್ನು ಸ್ಪಷ್ಟಪಡಿಸುವುದು ಅತ್ಯಗತ್ಯ” ಎಂದು ಚೀನಾ ಸರ್ಕಾರ ಹೇಳಿದೆ.


ಓದಿ: ಕೊರೊನಾ ನಿಯಂತ್ರಣ: WHO ವಿರುದ್ಧದ ತನಿಖೆಗೆ ಭಾರತ ಸೇರಿ 62 ರಾಷ್ಟ್ರಗಳ ಒತ್ತಾಯ


ಲೇಖನವು ಭಾಗಶಃ ಮಾಹಿತಿಯನ್ನು ಉಲ್ಲೇಖಿಸಿ, ವುಹಾನ್ ನಗರದಲ್ಲಿ ಕರೋನವೈರಸ್ ಹುಟ್ಟಿಕೊಂಡಿಲ್ಲ ಎಂದು ಹೇಳಿದೆ. ಲೇಖನದಲ್ಲಿ ಅಮೇರಿಕದಲ್ಲಿನ ಪರಿಸ್ಥಿತಿಯನ್ನು ನಿರ್ದಿಷ್ಟವಾಗಿ ಎತ್ತಿ ತೋರಿಸಿದ್ದು, ಅಲ್ಲಿ ಸುಮಾರು 90,000 ಜನರು ಕೊರೊನಾ ವೈರಸ್‌ನಿಂದ ಸಾವನ್ನಪ್ಪಿದ್ದು ಏಕೆ ಎಂದು ಪ್ರಶ್ನಿಸಿದೆ.

ಫೋರ್ಟ್ ಡೆಟ್ರಿಕ್ ಜೈವಿಕ ಪ್ರಯೋಗಾಲಯವನ್ನು ಯಾಕೆ ಮುಚ್ಚಲಾಗಿದೆ ಮತ್ತು ಇದು ಕೊರೊನಾ ವೈರಸ್‌ ಬಗ್ಗೆ ಸಂಶೋಧನೆ ನಡೆಸಿದೆಯೇ ಹಾಗೂ ವೈರಸ್ ಪ್ರಯೋಗಾಲಯದಿಂದ ಸೋರಿಕೆಯಾಗಿದೆಯೇ ಎಂದು ಅನೇಕ ಜನರು ಪ್ರಶ್ನಿಸುತ್ತಿದ್ದಾರೆ ಎಂದು ಲೇಖನವು ಗಮನಸೆಳೆದೆ.

ಮೇರಿಲ್ಯಾಂಡ್‌‌ನಲ್ಲಿರುವ ಫೋರ್ಟ್ ಡೆಟ್ರಿಕ್, ಅಮೆರಿಕಾದ ಮಿಲಿಟರಿ ಸಾಂಕ್ರಾಮಿಕ ರೋಗಗಳ ಸಂಶೋಧನಾ ಸಂಸ್ಥೆಯಾಗಿದೆ. ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳಾದ ಇಲ್ಲಿ ಜೈವಿಕ ಸುರಕ್ಷತೆಯ ಕೊರತೆಯನ್ನು ಕಂಡುಕೊಂಡ ನಂತರ ಅದನ್ನು ಕಳೆದ ಆಗಸ್ಟ್‌ನಲ್ಲಿ ಮುಚ್ಚಲಾಗಿತ್ತು.

ಇದರ ಬಗ್ಗೆ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿತ್ತು. ಲ್ಯಾಬ್ “ತ್ಯಾಜ್ಯ ನೀರನ್ನು ಶುದ್ದೀಕರಿಸುವ ಸಾಕಷ್ಟು ವ್ಯವಸ್ಥೆಗಳನ್ನು ಹೊಂದಿಲ್ಲ” ಎಂದು ಪ್ರಯೋಗಾಲಯವನ್ನು ಸ್ಥಗಿತಗೊಳಿಸುವ ಆದೇಶ ಬಂದಿದೆ ಎಂದು ವರದಿಯಾಗಿತ್ತು. ಆದರೆ ರೋಗ-ಉಂಟುಮಾಡುವ ವಸ್ತುಗಳು ಪ್ರಯೋಗಾಲಯಗಳಿಂದ ಸೋರಿಕೆಯಾದ ಬಗ್ಗೆ ಯಾವುದೇ ಸುದ್ದಿ ಇರಲಿಲ್ಲ.

ಫೋರ್ಟ್ ಡೆಟ್ರಿಕ್‌‌ನ ಅಮೆರಿಕಾ ಮಿಲಿಟರಿ ಸಿಬ್ಬಂದಿ ಅಕ್ಟೋಬರ್‌‌ನಲ್ಲಿ ಚೀನಾದ ವುವಾನ್‌ನಲ್ಲಿ ನಡೆದ ವಿಶ್ವ ಮಿಲಿಟರಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅವರು ವುಹಾನ್‌‌‌ಗೆ ವೈರಸ್ ಅನ್ನು ಹರಡಿದ್ದಾರೆ ಎಂದು ಚೀನಾದ ಸರ್ಕಾರಿ ಅಧಿಕಾರಿಗಳು ಈ ಹಿಂದಿನಿಂದಲೂ ಹೇಳಿಕೊಂಡು ಬರುತ್ತಿದ್ದಾರೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಆಡಳಿತವು ವುಹಾನ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯಿಂದ ವೈರಸ್‌ ಸೋರಿಕೆಯಾಗಿದೆ ಎಂದು ಹೇಳುತ್ತಲೇ ಬಂದಿದ್ದಾರೆ, ಆದರೆ ಇದನ್ನು ಹೆಚ್ಚಿನ ವಿಜ್ಞಾನಿಗಳು ನಿರಾಕರಿಸಿದ್ದಾರೆ.


ಓದಿ:  ಕೊರೊನಾ ವೈರಸನ್ನು ಚೀನಾದಲ್ಲಿ ಸೃಷ್ಟಿಸಲಾಗಿದೆ: ಡೊನಾಲ್ಡ್ ಟ್ರಂಪ್ ಆರೋಪ


ಆದಾಗ್ಯೂ, ಕಳೆದವಾರ ರಾಜ್ಯ ಕಾರ್ಯದರ್ಶಿ ಮೈಕ್ ಪೊಂಪಿಯೊ ಅವರು ಕರೋನ ವೈರಸ್ ವುಹಾನ್ ಲ್ಯಾಬ್‌ನಲ್ಲಿ ಹುಟ್ಟಿಕೊಂಡಿದೆ ಎಂಬ ಈ ಹಿಂದಿನ ಕೆಲವು ಹೇಳಿಕೆಗಳನ್ನು ಹಿಂದಕ್ಕೆ ಪಡೆದುಕೊಂಡಿದ್ದು “ಇದು ವುಹಾನ್‌ನಲ್ಲಿ ಪ್ರಾರಂಭವಾಯಿತು ಎಂದು ನಮಗೆ ತಿಳಿದಿದೆ, ಆದರೆ ಎಲ್ಲಿಂದ ಅಥವಾ ಯಾರಿಂದ ಎಂಬುದು ನಮಗೆ ಗೊತ್ತಿಲ್ಲ, ಇದು ಮುಖ್ಯ ವಿಷಯವಾಗಿದೆ” ಎಂದು ಹೇಳಿದ್ದಾರೆ.

ವೈರಸ್ ಮೂಲ ಚೀನಾವಲ್ಲ ಎಂದು ಡಿಸೆಂಬರ್ 27 ರಂದು ಫ್ರಾನ್ಸ್‌ನಲ್ಲಿ ದೃಡೀಕರಿಸಿದ ಕೊರೊನಾ ವೈರಸ್ ಪ್ರಕರಣವನ್ನು ಸಹ ಪತ್ರಿಕೆ ಕ್ವಿಶಿ ಉಲ್ಲೇಖಿಸಿ, ಸೋಂಕಿಗೆ ಒಳಗಾಗುವ ಮೊದಲು ಮನುಷ್ಯನಿಗೆ ಚೀನಾದೊಂದಿಗೆ ಯಾವುದೇ ಸಂಪರ್ಕವಿರಲಿಲ್ಲ ಹಾಗೂ ಪ್ರಯಾಣ ಮಾಡಿರಲಿಲ್ಲ ಎಂದು ಹೇಳಿದೆ.

ಆದರೆ, ರೋಗಿಯ ಪತ್ನಿ ಪ್ಯಾರಿಸ್‌ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದ ಸಮೀಪವಿರುವ ಸೂಪರ್‌ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇದರಿಂದಾಗಿ ಇತ್ತೀಚೆಗೆ ಚೀನಾದಿಂದ ಆಗಮಿಸಿದ ಜನರೊಂದಿಗೆ ಸಂಪರ್ಕಕ್ಕೆ ಒಳಗಾಗಿರಬಹುದಾದ ಸಂಭವವಿದೆ ಎಂದು ಹೇಳಲಾಗಿದೆ, ಇದರ ಬಗ್ಗೆ ಕ್ವಿಶಿಯ ಲೇಖನವೂ ಸೂಚಿಸಿಲ್ಲ.

ಒಟ್ಟಿನಲ್ಲಿ ಕೊರೊನಾ ವೈರಸ್‌ ಉಗಮದ ಬಗ್ಗೆ ಅಮೆರಿಕಾ ಮತ್ತು ಚೀನಾ ಪರಸ್ಪರ ದೋಷಾರೋಪಣೆಯಲ್ಲಿ ಮುಳುಗಿದೆ.

ಈ ಎರಡು ರಾಷ್ಟ್ರಗಳ ಕಚ್ಚಾಟ ಹಾಗೂ ಕೊರೊನಾ ವೈರಸ್ ಹೇಗೆ ಹರಡಿತು ಎಂಬುದನ್ನು ಸ್ಥಾಪಿಸಲು ಸಮಗ್ರವಾದ ತನಿಖೆ ನಡೆಸಲು ವಿಶ್ವ ಆರೋಗ್ಯ ಸಂಸ್ಥೆಯ  ಆಡಳಿತ ಮಂಡಳಿಯಾದ WHA ಯೂ ಕರಡು ತಯಾರಿಸಿದೆ.

ಈ ಸಭೆಯಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿ, “ನಾವೆಲ್ಲರೂ ಮುಕ್ತತೆ, ಪಾರದರ್ಶಕತೆ ಮತ್ತು ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸಿದ್ದೇವೆ” ಎಂದು ಹೇಳಿದ್ದಾರೆ.

ಈಗಾಗಲೇ, ಯುರೋಪಿಯನ್ ಯೂನಿಯನ್ ದೇಶಗಳು, ಆಸ್ಟ್ರೇಲಿಯಾದ ಸೇರಿದಂತೆ 120 ಕ್ಕೂ ಹೆಚ್ಚು ದೇಶಗಳು ಕರಡು ನಿರ್ಣಯವನ್ನು ಬೆಂಬಲಿಸಿ, ಕೊರೊನಾದ ಮೂಲದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. WHA ಯ 194 ಸದಸ್ಯ ರಾಷ್ಟ್ರಗಳಲ್ಲಿ ಮೂರನೇ ಎರಡರಷ್ಟು ಬೆಂಬಲವನ್ನು ಪಡೆಯಲು ಸಾಧ್ಯವಾದರೆ ಈ ನಿರ್ಣಯವನ್ನು ಇಂದು (ಮಂಗಳವಾರ) ಮಂಡಿಸುವ ಸಾಧ್ಯತೆಯಿದೆ.

ಮೂಲ: ದಿ ವೈಸ್‌.ಕಾಂ


ಓದಿ:  ಕೊರೊನಾ ಮಾನವ ನಿರ್ಮಿತ ವೈರಸ್ ಎಂದು ಜಪಾನ್‌ನ ನೊಬೆಲ್ ಪ್ರಶಸ್ತಿ ವಿಜೇತ ಹೇಳಿದ್ದಾರೆಯೇ?; ಪ್ಯಾಕ್ಟ್ ಚೆಕ್


ವಿಡಿಯೊ ನೋಡಿ: ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...