Homeಅಂತರಾಷ್ಟ್ರೀಯಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ ಹುಟ್ಟಿದೆ: ಚೀನಾ ಆರೋಪ

ಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ ಹುಟ್ಟಿದೆ: ಚೀನಾ ಆರೋಪ

ಫೋರ್ಟ್ ಡೆಟ್ರಿಕ್‌‌ನ ಅಮೆರಿಕಾ ಮಿಲಿಟರಿ ಸಿಬ್ಬಂದಿ ಅಕ್ಟೋಬರ್‌‌ನಲ್ಲಿ ಚೀನಾದ ವುವಾನ್‌ನಲ್ಲಿ ನಡೆದ ವಿಶ್ವ ಮಿಲಿಟರಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅವರು ವುಹಾನ್‌‌‌ಗೆ ವೈರಸ್ ಅನ್ನು ಹರಡಿದ್ದಾರೆ ಎಂದು ಚೀನಾದ ಸರ್ಕಾರಿ ಅಧಿಕಾರಿಗಳು ಆರೋಪಿಸಿದ್ದಾರೆ.

- Advertisement -
- Advertisement -

ಇದುವರೆಗೂ ಕೊರೊನಾ ವೈರಸ್‌ ಚೀನಾದ ವುಹಾನ್‌ನಲ್ಲಿ ಹುಟ್ಟಿದೆ ಎಂಬ ಪ್ರಚಾರಗಳ ಮಧ್ಯೆ ಚೀನಾ ಬೇರೆಯೆ ವಿಚಾರವನ್ನು ವಿಶ್ವದ ಮುಂದಿಟ್ಟಿದೆ. ಪ್ರಪಂಚದೆಲ್ಲೆಡೆ ಏಕಾಏಕಿ ಎರಗಿದ ಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಿಂದ ಸೋರಿಕೆಯಾಗಿದೆ ಎಂಬ ಹೊಸ ಸಿದ್ಧಾಂತವನ್ನು ತೇಲಿ ಬಿಟ್ಟಿದೆ.

ಚೀನಾದ ಕಮ್ಯುನಿಸ್ಟ್ ಪಾರ್ಟಿ ನಿಯತಕಾಲಿಕೆ ಕ್ವಿಶಿಯಲ್ಲಿ ಪ್ರಕಟವಾದ ಲೇಖನದಲ್ಲಿ, ಕೊರೊನಾ ವೈರಸ್ ವಿರುದ್ಧ ಹೋರಾಡಲು “ಹೊಸ ಕರೋನ ವೈರಸ್‌ನ ಮೂಲ ಮತ್ತು ಪ್ರಸರಣ ಮಾರ್ಗವನ್ನು ಸ್ಪಷ್ಟಪಡಿಸುವುದು ಅತ್ಯಗತ್ಯ” ಎಂದು ಚೀನಾ ಸರ್ಕಾರ ಹೇಳಿದೆ.


ಓದಿ: ಕೊರೊನಾ ನಿಯಂತ್ರಣ: WHO ವಿರುದ್ಧದ ತನಿಖೆಗೆ ಭಾರತ ಸೇರಿ 62 ರಾಷ್ಟ್ರಗಳ ಒತ್ತಾಯ


ಲೇಖನವು ಭಾಗಶಃ ಮಾಹಿತಿಯನ್ನು ಉಲ್ಲೇಖಿಸಿ, ವುಹಾನ್ ನಗರದಲ್ಲಿ ಕರೋನವೈರಸ್ ಹುಟ್ಟಿಕೊಂಡಿಲ್ಲ ಎಂದು ಹೇಳಿದೆ. ಲೇಖನದಲ್ಲಿ ಅಮೇರಿಕದಲ್ಲಿನ ಪರಿಸ್ಥಿತಿಯನ್ನು ನಿರ್ದಿಷ್ಟವಾಗಿ ಎತ್ತಿ ತೋರಿಸಿದ್ದು, ಅಲ್ಲಿ ಸುಮಾರು 90,000 ಜನರು ಕೊರೊನಾ ವೈರಸ್‌ನಿಂದ ಸಾವನ್ನಪ್ಪಿದ್ದು ಏಕೆ ಎಂದು ಪ್ರಶ್ನಿಸಿದೆ.

ಫೋರ್ಟ್ ಡೆಟ್ರಿಕ್ ಜೈವಿಕ ಪ್ರಯೋಗಾಲಯವನ್ನು ಯಾಕೆ ಮುಚ್ಚಲಾಗಿದೆ ಮತ್ತು ಇದು ಕೊರೊನಾ ವೈರಸ್‌ ಬಗ್ಗೆ ಸಂಶೋಧನೆ ನಡೆಸಿದೆಯೇ ಹಾಗೂ ವೈರಸ್ ಪ್ರಯೋಗಾಲಯದಿಂದ ಸೋರಿಕೆಯಾಗಿದೆಯೇ ಎಂದು ಅನೇಕ ಜನರು ಪ್ರಶ್ನಿಸುತ್ತಿದ್ದಾರೆ ಎಂದು ಲೇಖನವು ಗಮನಸೆಳೆದೆ.

ಮೇರಿಲ್ಯಾಂಡ್‌‌ನಲ್ಲಿರುವ ಫೋರ್ಟ್ ಡೆಟ್ರಿಕ್, ಅಮೆರಿಕಾದ ಮಿಲಿಟರಿ ಸಾಂಕ್ರಾಮಿಕ ರೋಗಗಳ ಸಂಶೋಧನಾ ಸಂಸ್ಥೆಯಾಗಿದೆ. ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳಾದ ಇಲ್ಲಿ ಜೈವಿಕ ಸುರಕ್ಷತೆಯ ಕೊರತೆಯನ್ನು ಕಂಡುಕೊಂಡ ನಂತರ ಅದನ್ನು ಕಳೆದ ಆಗಸ್ಟ್‌ನಲ್ಲಿ ಮುಚ್ಚಲಾಗಿತ್ತು.

ಇದರ ಬಗ್ಗೆ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿತ್ತು. ಲ್ಯಾಬ್ “ತ್ಯಾಜ್ಯ ನೀರನ್ನು ಶುದ್ದೀಕರಿಸುವ ಸಾಕಷ್ಟು ವ್ಯವಸ್ಥೆಗಳನ್ನು ಹೊಂದಿಲ್ಲ” ಎಂದು ಪ್ರಯೋಗಾಲಯವನ್ನು ಸ್ಥಗಿತಗೊಳಿಸುವ ಆದೇಶ ಬಂದಿದೆ ಎಂದು ವರದಿಯಾಗಿತ್ತು. ಆದರೆ ರೋಗ-ಉಂಟುಮಾಡುವ ವಸ್ತುಗಳು ಪ್ರಯೋಗಾಲಯಗಳಿಂದ ಸೋರಿಕೆಯಾದ ಬಗ್ಗೆ ಯಾವುದೇ ಸುದ್ದಿ ಇರಲಿಲ್ಲ.

ಫೋರ್ಟ್ ಡೆಟ್ರಿಕ್‌‌ನ ಅಮೆರಿಕಾ ಮಿಲಿಟರಿ ಸಿಬ್ಬಂದಿ ಅಕ್ಟೋಬರ್‌‌ನಲ್ಲಿ ಚೀನಾದ ವುವಾನ್‌ನಲ್ಲಿ ನಡೆದ ವಿಶ್ವ ಮಿಲಿಟರಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅವರು ವುಹಾನ್‌‌‌ಗೆ ವೈರಸ್ ಅನ್ನು ಹರಡಿದ್ದಾರೆ ಎಂದು ಚೀನಾದ ಸರ್ಕಾರಿ ಅಧಿಕಾರಿಗಳು ಈ ಹಿಂದಿನಿಂದಲೂ ಹೇಳಿಕೊಂಡು ಬರುತ್ತಿದ್ದಾರೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಆಡಳಿತವು ವುಹಾನ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯಿಂದ ವೈರಸ್‌ ಸೋರಿಕೆಯಾಗಿದೆ ಎಂದು ಹೇಳುತ್ತಲೇ ಬಂದಿದ್ದಾರೆ, ಆದರೆ ಇದನ್ನು ಹೆಚ್ಚಿನ ವಿಜ್ಞಾನಿಗಳು ನಿರಾಕರಿಸಿದ್ದಾರೆ.


ಓದಿ:  ಕೊರೊನಾ ವೈರಸನ್ನು ಚೀನಾದಲ್ಲಿ ಸೃಷ್ಟಿಸಲಾಗಿದೆ: ಡೊನಾಲ್ಡ್ ಟ್ರಂಪ್ ಆರೋಪ


ಆದಾಗ್ಯೂ, ಕಳೆದವಾರ ರಾಜ್ಯ ಕಾರ್ಯದರ್ಶಿ ಮೈಕ್ ಪೊಂಪಿಯೊ ಅವರು ಕರೋನ ವೈರಸ್ ವುಹಾನ್ ಲ್ಯಾಬ್‌ನಲ್ಲಿ ಹುಟ್ಟಿಕೊಂಡಿದೆ ಎಂಬ ಈ ಹಿಂದಿನ ಕೆಲವು ಹೇಳಿಕೆಗಳನ್ನು ಹಿಂದಕ್ಕೆ ಪಡೆದುಕೊಂಡಿದ್ದು “ಇದು ವುಹಾನ್‌ನಲ್ಲಿ ಪ್ರಾರಂಭವಾಯಿತು ಎಂದು ನಮಗೆ ತಿಳಿದಿದೆ, ಆದರೆ ಎಲ್ಲಿಂದ ಅಥವಾ ಯಾರಿಂದ ಎಂಬುದು ನಮಗೆ ಗೊತ್ತಿಲ್ಲ, ಇದು ಮುಖ್ಯ ವಿಷಯವಾಗಿದೆ” ಎಂದು ಹೇಳಿದ್ದಾರೆ.

ವೈರಸ್ ಮೂಲ ಚೀನಾವಲ್ಲ ಎಂದು ಡಿಸೆಂಬರ್ 27 ರಂದು ಫ್ರಾನ್ಸ್‌ನಲ್ಲಿ ದೃಡೀಕರಿಸಿದ ಕೊರೊನಾ ವೈರಸ್ ಪ್ರಕರಣವನ್ನು ಸಹ ಪತ್ರಿಕೆ ಕ್ವಿಶಿ ಉಲ್ಲೇಖಿಸಿ, ಸೋಂಕಿಗೆ ಒಳಗಾಗುವ ಮೊದಲು ಮನುಷ್ಯನಿಗೆ ಚೀನಾದೊಂದಿಗೆ ಯಾವುದೇ ಸಂಪರ್ಕವಿರಲಿಲ್ಲ ಹಾಗೂ ಪ್ರಯಾಣ ಮಾಡಿರಲಿಲ್ಲ ಎಂದು ಹೇಳಿದೆ.

ಆದರೆ, ರೋಗಿಯ ಪತ್ನಿ ಪ್ಯಾರಿಸ್‌ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದ ಸಮೀಪವಿರುವ ಸೂಪರ್‌ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇದರಿಂದಾಗಿ ಇತ್ತೀಚೆಗೆ ಚೀನಾದಿಂದ ಆಗಮಿಸಿದ ಜನರೊಂದಿಗೆ ಸಂಪರ್ಕಕ್ಕೆ ಒಳಗಾಗಿರಬಹುದಾದ ಸಂಭವವಿದೆ ಎಂದು ಹೇಳಲಾಗಿದೆ, ಇದರ ಬಗ್ಗೆ ಕ್ವಿಶಿಯ ಲೇಖನವೂ ಸೂಚಿಸಿಲ್ಲ.

ಒಟ್ಟಿನಲ್ಲಿ ಕೊರೊನಾ ವೈರಸ್‌ ಉಗಮದ ಬಗ್ಗೆ ಅಮೆರಿಕಾ ಮತ್ತು ಚೀನಾ ಪರಸ್ಪರ ದೋಷಾರೋಪಣೆಯಲ್ಲಿ ಮುಳುಗಿದೆ.

ಈ ಎರಡು ರಾಷ್ಟ್ರಗಳ ಕಚ್ಚಾಟ ಹಾಗೂ ಕೊರೊನಾ ವೈರಸ್ ಹೇಗೆ ಹರಡಿತು ಎಂಬುದನ್ನು ಸ್ಥಾಪಿಸಲು ಸಮಗ್ರವಾದ ತನಿಖೆ ನಡೆಸಲು ವಿಶ್ವ ಆರೋಗ್ಯ ಸಂಸ್ಥೆಯ  ಆಡಳಿತ ಮಂಡಳಿಯಾದ WHA ಯೂ ಕರಡು ತಯಾರಿಸಿದೆ.

ಈ ಸಭೆಯಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿ, “ನಾವೆಲ್ಲರೂ ಮುಕ್ತತೆ, ಪಾರದರ್ಶಕತೆ ಮತ್ತು ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸಿದ್ದೇವೆ” ಎಂದು ಹೇಳಿದ್ದಾರೆ.

ಈಗಾಗಲೇ, ಯುರೋಪಿಯನ್ ಯೂನಿಯನ್ ದೇಶಗಳು, ಆಸ್ಟ್ರೇಲಿಯಾದ ಸೇರಿದಂತೆ 120 ಕ್ಕೂ ಹೆಚ್ಚು ದೇಶಗಳು ಕರಡು ನಿರ್ಣಯವನ್ನು ಬೆಂಬಲಿಸಿ, ಕೊರೊನಾದ ಮೂಲದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. WHA ಯ 194 ಸದಸ್ಯ ರಾಷ್ಟ್ರಗಳಲ್ಲಿ ಮೂರನೇ ಎರಡರಷ್ಟು ಬೆಂಬಲವನ್ನು ಪಡೆಯಲು ಸಾಧ್ಯವಾದರೆ ಈ ನಿರ್ಣಯವನ್ನು ಇಂದು (ಮಂಗಳವಾರ) ಮಂಡಿಸುವ ಸಾಧ್ಯತೆಯಿದೆ.

ಮೂಲ: ದಿ ವೈಸ್‌.ಕಾಂ


ಓದಿ:  ಕೊರೊನಾ ಮಾನವ ನಿರ್ಮಿತ ವೈರಸ್ ಎಂದು ಜಪಾನ್‌ನ ನೊಬೆಲ್ ಪ್ರಶಸ್ತಿ ವಿಜೇತ ಹೇಳಿದ್ದಾರೆಯೇ?; ಪ್ಯಾಕ್ಟ್ ಚೆಕ್


ವಿಡಿಯೊ ನೋಡಿ: ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...