Homeಅಂತರಾಷ್ಟ್ರೀಯಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ ಹುಟ್ಟಿದೆ: ಚೀನಾ ಆರೋಪ

ಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ ಹುಟ್ಟಿದೆ: ಚೀನಾ ಆರೋಪ

ಫೋರ್ಟ್ ಡೆಟ್ರಿಕ್‌‌ನ ಅಮೆರಿಕಾ ಮಿಲಿಟರಿ ಸಿಬ್ಬಂದಿ ಅಕ್ಟೋಬರ್‌‌ನಲ್ಲಿ ಚೀನಾದ ವುವಾನ್‌ನಲ್ಲಿ ನಡೆದ ವಿಶ್ವ ಮಿಲಿಟರಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅವರು ವುಹಾನ್‌‌‌ಗೆ ವೈರಸ್ ಅನ್ನು ಹರಡಿದ್ದಾರೆ ಎಂದು ಚೀನಾದ ಸರ್ಕಾರಿ ಅಧಿಕಾರಿಗಳು ಆರೋಪಿಸಿದ್ದಾರೆ.

- Advertisement -
- Advertisement -

ಇದುವರೆಗೂ ಕೊರೊನಾ ವೈರಸ್‌ ಚೀನಾದ ವುಹಾನ್‌ನಲ್ಲಿ ಹುಟ್ಟಿದೆ ಎಂಬ ಪ್ರಚಾರಗಳ ಮಧ್ಯೆ ಚೀನಾ ಬೇರೆಯೆ ವಿಚಾರವನ್ನು ವಿಶ್ವದ ಮುಂದಿಟ್ಟಿದೆ. ಪ್ರಪಂಚದೆಲ್ಲೆಡೆ ಏಕಾಏಕಿ ಎರಗಿದ ಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಿಂದ ಸೋರಿಕೆಯಾಗಿದೆ ಎಂಬ ಹೊಸ ಸಿದ್ಧಾಂತವನ್ನು ತೇಲಿ ಬಿಟ್ಟಿದೆ.

ಚೀನಾದ ಕಮ್ಯುನಿಸ್ಟ್ ಪಾರ್ಟಿ ನಿಯತಕಾಲಿಕೆ ಕ್ವಿಶಿಯಲ್ಲಿ ಪ್ರಕಟವಾದ ಲೇಖನದಲ್ಲಿ, ಕೊರೊನಾ ವೈರಸ್ ವಿರುದ್ಧ ಹೋರಾಡಲು “ಹೊಸ ಕರೋನ ವೈರಸ್‌ನ ಮೂಲ ಮತ್ತು ಪ್ರಸರಣ ಮಾರ್ಗವನ್ನು ಸ್ಪಷ್ಟಪಡಿಸುವುದು ಅತ್ಯಗತ್ಯ” ಎಂದು ಚೀನಾ ಸರ್ಕಾರ ಹೇಳಿದೆ.


ಓದಿ: ಕೊರೊನಾ ನಿಯಂತ್ರಣ: WHO ವಿರುದ್ಧದ ತನಿಖೆಗೆ ಭಾರತ ಸೇರಿ 62 ರಾಷ್ಟ್ರಗಳ ಒತ್ತಾಯ


ಲೇಖನವು ಭಾಗಶಃ ಮಾಹಿತಿಯನ್ನು ಉಲ್ಲೇಖಿಸಿ, ವುಹಾನ್ ನಗರದಲ್ಲಿ ಕರೋನವೈರಸ್ ಹುಟ್ಟಿಕೊಂಡಿಲ್ಲ ಎಂದು ಹೇಳಿದೆ. ಲೇಖನದಲ್ಲಿ ಅಮೇರಿಕದಲ್ಲಿನ ಪರಿಸ್ಥಿತಿಯನ್ನು ನಿರ್ದಿಷ್ಟವಾಗಿ ಎತ್ತಿ ತೋರಿಸಿದ್ದು, ಅಲ್ಲಿ ಸುಮಾರು 90,000 ಜನರು ಕೊರೊನಾ ವೈರಸ್‌ನಿಂದ ಸಾವನ್ನಪ್ಪಿದ್ದು ಏಕೆ ಎಂದು ಪ್ರಶ್ನಿಸಿದೆ.

ಫೋರ್ಟ್ ಡೆಟ್ರಿಕ್ ಜೈವಿಕ ಪ್ರಯೋಗಾಲಯವನ್ನು ಯಾಕೆ ಮುಚ್ಚಲಾಗಿದೆ ಮತ್ತು ಇದು ಕೊರೊನಾ ವೈರಸ್‌ ಬಗ್ಗೆ ಸಂಶೋಧನೆ ನಡೆಸಿದೆಯೇ ಹಾಗೂ ವೈರಸ್ ಪ್ರಯೋಗಾಲಯದಿಂದ ಸೋರಿಕೆಯಾಗಿದೆಯೇ ಎಂದು ಅನೇಕ ಜನರು ಪ್ರಶ್ನಿಸುತ್ತಿದ್ದಾರೆ ಎಂದು ಲೇಖನವು ಗಮನಸೆಳೆದೆ.

ಮೇರಿಲ್ಯಾಂಡ್‌‌ನಲ್ಲಿರುವ ಫೋರ್ಟ್ ಡೆಟ್ರಿಕ್, ಅಮೆರಿಕಾದ ಮಿಲಿಟರಿ ಸಾಂಕ್ರಾಮಿಕ ರೋಗಗಳ ಸಂಶೋಧನಾ ಸಂಸ್ಥೆಯಾಗಿದೆ. ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳಾದ ಇಲ್ಲಿ ಜೈವಿಕ ಸುರಕ್ಷತೆಯ ಕೊರತೆಯನ್ನು ಕಂಡುಕೊಂಡ ನಂತರ ಅದನ್ನು ಕಳೆದ ಆಗಸ್ಟ್‌ನಲ್ಲಿ ಮುಚ್ಚಲಾಗಿತ್ತು.

ಇದರ ಬಗ್ಗೆ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿತ್ತು. ಲ್ಯಾಬ್ “ತ್ಯಾಜ್ಯ ನೀರನ್ನು ಶುದ್ದೀಕರಿಸುವ ಸಾಕಷ್ಟು ವ್ಯವಸ್ಥೆಗಳನ್ನು ಹೊಂದಿಲ್ಲ” ಎಂದು ಪ್ರಯೋಗಾಲಯವನ್ನು ಸ್ಥಗಿತಗೊಳಿಸುವ ಆದೇಶ ಬಂದಿದೆ ಎಂದು ವರದಿಯಾಗಿತ್ತು. ಆದರೆ ರೋಗ-ಉಂಟುಮಾಡುವ ವಸ್ತುಗಳು ಪ್ರಯೋಗಾಲಯಗಳಿಂದ ಸೋರಿಕೆಯಾದ ಬಗ್ಗೆ ಯಾವುದೇ ಸುದ್ದಿ ಇರಲಿಲ್ಲ.

ಫೋರ್ಟ್ ಡೆಟ್ರಿಕ್‌‌ನ ಅಮೆರಿಕಾ ಮಿಲಿಟರಿ ಸಿಬ್ಬಂದಿ ಅಕ್ಟೋಬರ್‌‌ನಲ್ಲಿ ಚೀನಾದ ವುವಾನ್‌ನಲ್ಲಿ ನಡೆದ ವಿಶ್ವ ಮಿಲಿಟರಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅವರು ವುಹಾನ್‌‌‌ಗೆ ವೈರಸ್ ಅನ್ನು ಹರಡಿದ್ದಾರೆ ಎಂದು ಚೀನಾದ ಸರ್ಕಾರಿ ಅಧಿಕಾರಿಗಳು ಈ ಹಿಂದಿನಿಂದಲೂ ಹೇಳಿಕೊಂಡು ಬರುತ್ತಿದ್ದಾರೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಆಡಳಿತವು ವುಹಾನ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯಿಂದ ವೈರಸ್‌ ಸೋರಿಕೆಯಾಗಿದೆ ಎಂದು ಹೇಳುತ್ತಲೇ ಬಂದಿದ್ದಾರೆ, ಆದರೆ ಇದನ್ನು ಹೆಚ್ಚಿನ ವಿಜ್ಞಾನಿಗಳು ನಿರಾಕರಿಸಿದ್ದಾರೆ.


ಓದಿ:  ಕೊರೊನಾ ವೈರಸನ್ನು ಚೀನಾದಲ್ಲಿ ಸೃಷ್ಟಿಸಲಾಗಿದೆ: ಡೊನಾಲ್ಡ್ ಟ್ರಂಪ್ ಆರೋಪ


ಆದಾಗ್ಯೂ, ಕಳೆದವಾರ ರಾಜ್ಯ ಕಾರ್ಯದರ್ಶಿ ಮೈಕ್ ಪೊಂಪಿಯೊ ಅವರು ಕರೋನ ವೈರಸ್ ವುಹಾನ್ ಲ್ಯಾಬ್‌ನಲ್ಲಿ ಹುಟ್ಟಿಕೊಂಡಿದೆ ಎಂಬ ಈ ಹಿಂದಿನ ಕೆಲವು ಹೇಳಿಕೆಗಳನ್ನು ಹಿಂದಕ್ಕೆ ಪಡೆದುಕೊಂಡಿದ್ದು “ಇದು ವುಹಾನ್‌ನಲ್ಲಿ ಪ್ರಾರಂಭವಾಯಿತು ಎಂದು ನಮಗೆ ತಿಳಿದಿದೆ, ಆದರೆ ಎಲ್ಲಿಂದ ಅಥವಾ ಯಾರಿಂದ ಎಂಬುದು ನಮಗೆ ಗೊತ್ತಿಲ್ಲ, ಇದು ಮುಖ್ಯ ವಿಷಯವಾಗಿದೆ” ಎಂದು ಹೇಳಿದ್ದಾರೆ.

ವೈರಸ್ ಮೂಲ ಚೀನಾವಲ್ಲ ಎಂದು ಡಿಸೆಂಬರ್ 27 ರಂದು ಫ್ರಾನ್ಸ್‌ನಲ್ಲಿ ದೃಡೀಕರಿಸಿದ ಕೊರೊನಾ ವೈರಸ್ ಪ್ರಕರಣವನ್ನು ಸಹ ಪತ್ರಿಕೆ ಕ್ವಿಶಿ ಉಲ್ಲೇಖಿಸಿ, ಸೋಂಕಿಗೆ ಒಳಗಾಗುವ ಮೊದಲು ಮನುಷ್ಯನಿಗೆ ಚೀನಾದೊಂದಿಗೆ ಯಾವುದೇ ಸಂಪರ್ಕವಿರಲಿಲ್ಲ ಹಾಗೂ ಪ್ರಯಾಣ ಮಾಡಿರಲಿಲ್ಲ ಎಂದು ಹೇಳಿದೆ.

ಆದರೆ, ರೋಗಿಯ ಪತ್ನಿ ಪ್ಯಾರಿಸ್‌ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದ ಸಮೀಪವಿರುವ ಸೂಪರ್‌ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇದರಿಂದಾಗಿ ಇತ್ತೀಚೆಗೆ ಚೀನಾದಿಂದ ಆಗಮಿಸಿದ ಜನರೊಂದಿಗೆ ಸಂಪರ್ಕಕ್ಕೆ ಒಳಗಾಗಿರಬಹುದಾದ ಸಂಭವವಿದೆ ಎಂದು ಹೇಳಲಾಗಿದೆ, ಇದರ ಬಗ್ಗೆ ಕ್ವಿಶಿಯ ಲೇಖನವೂ ಸೂಚಿಸಿಲ್ಲ.

ಒಟ್ಟಿನಲ್ಲಿ ಕೊರೊನಾ ವೈರಸ್‌ ಉಗಮದ ಬಗ್ಗೆ ಅಮೆರಿಕಾ ಮತ್ತು ಚೀನಾ ಪರಸ್ಪರ ದೋಷಾರೋಪಣೆಯಲ್ಲಿ ಮುಳುಗಿದೆ.

ಈ ಎರಡು ರಾಷ್ಟ್ರಗಳ ಕಚ್ಚಾಟ ಹಾಗೂ ಕೊರೊನಾ ವೈರಸ್ ಹೇಗೆ ಹರಡಿತು ಎಂಬುದನ್ನು ಸ್ಥಾಪಿಸಲು ಸಮಗ್ರವಾದ ತನಿಖೆ ನಡೆಸಲು ವಿಶ್ವ ಆರೋಗ್ಯ ಸಂಸ್ಥೆಯ  ಆಡಳಿತ ಮಂಡಳಿಯಾದ WHA ಯೂ ಕರಡು ತಯಾರಿಸಿದೆ.

ಈ ಸಭೆಯಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿ, “ನಾವೆಲ್ಲರೂ ಮುಕ್ತತೆ, ಪಾರದರ್ಶಕತೆ ಮತ್ತು ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸಿದ್ದೇವೆ” ಎಂದು ಹೇಳಿದ್ದಾರೆ.

ಈಗಾಗಲೇ, ಯುರೋಪಿಯನ್ ಯೂನಿಯನ್ ದೇಶಗಳು, ಆಸ್ಟ್ರೇಲಿಯಾದ ಸೇರಿದಂತೆ 120 ಕ್ಕೂ ಹೆಚ್ಚು ದೇಶಗಳು ಕರಡು ನಿರ್ಣಯವನ್ನು ಬೆಂಬಲಿಸಿ, ಕೊರೊನಾದ ಮೂಲದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. WHA ಯ 194 ಸದಸ್ಯ ರಾಷ್ಟ್ರಗಳಲ್ಲಿ ಮೂರನೇ ಎರಡರಷ್ಟು ಬೆಂಬಲವನ್ನು ಪಡೆಯಲು ಸಾಧ್ಯವಾದರೆ ಈ ನಿರ್ಣಯವನ್ನು ಇಂದು (ಮಂಗಳವಾರ) ಮಂಡಿಸುವ ಸಾಧ್ಯತೆಯಿದೆ.

ಮೂಲ: ದಿ ವೈಸ್‌.ಕಾಂ


ಓದಿ:  ಕೊರೊನಾ ಮಾನವ ನಿರ್ಮಿತ ವೈರಸ್ ಎಂದು ಜಪಾನ್‌ನ ನೊಬೆಲ್ ಪ್ರಶಸ್ತಿ ವಿಜೇತ ಹೇಳಿದ್ದಾರೆಯೇ?; ಪ್ಯಾಕ್ಟ್ ಚೆಕ್


ವಿಡಿಯೊ ನೋಡಿ: ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...