Homeಅಂತರಾಷ್ಟ್ರೀಯಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ ಹುಟ್ಟಿದೆ: ಚೀನಾ ಆರೋಪ

ಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ ಹುಟ್ಟಿದೆ: ಚೀನಾ ಆರೋಪ

ಫೋರ್ಟ್ ಡೆಟ್ರಿಕ್‌‌ನ ಅಮೆರಿಕಾ ಮಿಲಿಟರಿ ಸಿಬ್ಬಂದಿ ಅಕ್ಟೋಬರ್‌‌ನಲ್ಲಿ ಚೀನಾದ ವುವಾನ್‌ನಲ್ಲಿ ನಡೆದ ವಿಶ್ವ ಮಿಲಿಟರಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅವರು ವುಹಾನ್‌‌‌ಗೆ ವೈರಸ್ ಅನ್ನು ಹರಡಿದ್ದಾರೆ ಎಂದು ಚೀನಾದ ಸರ್ಕಾರಿ ಅಧಿಕಾರಿಗಳು ಆರೋಪಿಸಿದ್ದಾರೆ.

- Advertisement -
- Advertisement -

ಇದುವರೆಗೂ ಕೊರೊನಾ ವೈರಸ್‌ ಚೀನಾದ ವುಹಾನ್‌ನಲ್ಲಿ ಹುಟ್ಟಿದೆ ಎಂಬ ಪ್ರಚಾರಗಳ ಮಧ್ಯೆ ಚೀನಾ ಬೇರೆಯೆ ವಿಚಾರವನ್ನು ವಿಶ್ವದ ಮುಂದಿಟ್ಟಿದೆ. ಪ್ರಪಂಚದೆಲ್ಲೆಡೆ ಏಕಾಏಕಿ ಎರಗಿದ ಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಿಂದ ಸೋರಿಕೆಯಾಗಿದೆ ಎಂಬ ಹೊಸ ಸಿದ್ಧಾಂತವನ್ನು ತೇಲಿ ಬಿಟ್ಟಿದೆ.

ಚೀನಾದ ಕಮ್ಯುನಿಸ್ಟ್ ಪಾರ್ಟಿ ನಿಯತಕಾಲಿಕೆ ಕ್ವಿಶಿಯಲ್ಲಿ ಪ್ರಕಟವಾದ ಲೇಖನದಲ್ಲಿ, ಕೊರೊನಾ ವೈರಸ್ ವಿರುದ್ಧ ಹೋರಾಡಲು “ಹೊಸ ಕರೋನ ವೈರಸ್‌ನ ಮೂಲ ಮತ್ತು ಪ್ರಸರಣ ಮಾರ್ಗವನ್ನು ಸ್ಪಷ್ಟಪಡಿಸುವುದು ಅತ್ಯಗತ್ಯ” ಎಂದು ಚೀನಾ ಸರ್ಕಾರ ಹೇಳಿದೆ.


ಓದಿ: ಕೊರೊನಾ ನಿಯಂತ್ರಣ: WHO ವಿರುದ್ಧದ ತನಿಖೆಗೆ ಭಾರತ ಸೇರಿ 62 ರಾಷ್ಟ್ರಗಳ ಒತ್ತಾಯ


ಲೇಖನವು ಭಾಗಶಃ ಮಾಹಿತಿಯನ್ನು ಉಲ್ಲೇಖಿಸಿ, ವುಹಾನ್ ನಗರದಲ್ಲಿ ಕರೋನವೈರಸ್ ಹುಟ್ಟಿಕೊಂಡಿಲ್ಲ ಎಂದು ಹೇಳಿದೆ. ಲೇಖನದಲ್ಲಿ ಅಮೇರಿಕದಲ್ಲಿನ ಪರಿಸ್ಥಿತಿಯನ್ನು ನಿರ್ದಿಷ್ಟವಾಗಿ ಎತ್ತಿ ತೋರಿಸಿದ್ದು, ಅಲ್ಲಿ ಸುಮಾರು 90,000 ಜನರು ಕೊರೊನಾ ವೈರಸ್‌ನಿಂದ ಸಾವನ್ನಪ್ಪಿದ್ದು ಏಕೆ ಎಂದು ಪ್ರಶ್ನಿಸಿದೆ.

ಫೋರ್ಟ್ ಡೆಟ್ರಿಕ್ ಜೈವಿಕ ಪ್ರಯೋಗಾಲಯವನ್ನು ಯಾಕೆ ಮುಚ್ಚಲಾಗಿದೆ ಮತ್ತು ಇದು ಕೊರೊನಾ ವೈರಸ್‌ ಬಗ್ಗೆ ಸಂಶೋಧನೆ ನಡೆಸಿದೆಯೇ ಹಾಗೂ ವೈರಸ್ ಪ್ರಯೋಗಾಲಯದಿಂದ ಸೋರಿಕೆಯಾಗಿದೆಯೇ ಎಂದು ಅನೇಕ ಜನರು ಪ್ರಶ್ನಿಸುತ್ತಿದ್ದಾರೆ ಎಂದು ಲೇಖನವು ಗಮನಸೆಳೆದೆ.

ಮೇರಿಲ್ಯಾಂಡ್‌‌ನಲ್ಲಿರುವ ಫೋರ್ಟ್ ಡೆಟ್ರಿಕ್, ಅಮೆರಿಕಾದ ಮಿಲಿಟರಿ ಸಾಂಕ್ರಾಮಿಕ ರೋಗಗಳ ಸಂಶೋಧನಾ ಸಂಸ್ಥೆಯಾಗಿದೆ. ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳಾದ ಇಲ್ಲಿ ಜೈವಿಕ ಸುರಕ್ಷತೆಯ ಕೊರತೆಯನ್ನು ಕಂಡುಕೊಂಡ ನಂತರ ಅದನ್ನು ಕಳೆದ ಆಗಸ್ಟ್‌ನಲ್ಲಿ ಮುಚ್ಚಲಾಗಿತ್ತು.

ಇದರ ಬಗ್ಗೆ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿತ್ತು. ಲ್ಯಾಬ್ “ತ್ಯಾಜ್ಯ ನೀರನ್ನು ಶುದ್ದೀಕರಿಸುವ ಸಾಕಷ್ಟು ವ್ಯವಸ್ಥೆಗಳನ್ನು ಹೊಂದಿಲ್ಲ” ಎಂದು ಪ್ರಯೋಗಾಲಯವನ್ನು ಸ್ಥಗಿತಗೊಳಿಸುವ ಆದೇಶ ಬಂದಿದೆ ಎಂದು ವರದಿಯಾಗಿತ್ತು. ಆದರೆ ರೋಗ-ಉಂಟುಮಾಡುವ ವಸ್ತುಗಳು ಪ್ರಯೋಗಾಲಯಗಳಿಂದ ಸೋರಿಕೆಯಾದ ಬಗ್ಗೆ ಯಾವುದೇ ಸುದ್ದಿ ಇರಲಿಲ್ಲ.

ಫೋರ್ಟ್ ಡೆಟ್ರಿಕ್‌‌ನ ಅಮೆರಿಕಾ ಮಿಲಿಟರಿ ಸಿಬ್ಬಂದಿ ಅಕ್ಟೋಬರ್‌‌ನಲ್ಲಿ ಚೀನಾದ ವುವಾನ್‌ನಲ್ಲಿ ನಡೆದ ವಿಶ್ವ ಮಿಲಿಟರಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅವರು ವುಹಾನ್‌‌‌ಗೆ ವೈರಸ್ ಅನ್ನು ಹರಡಿದ್ದಾರೆ ಎಂದು ಚೀನಾದ ಸರ್ಕಾರಿ ಅಧಿಕಾರಿಗಳು ಈ ಹಿಂದಿನಿಂದಲೂ ಹೇಳಿಕೊಂಡು ಬರುತ್ತಿದ್ದಾರೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಆಡಳಿತವು ವುಹಾನ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯಿಂದ ವೈರಸ್‌ ಸೋರಿಕೆಯಾಗಿದೆ ಎಂದು ಹೇಳುತ್ತಲೇ ಬಂದಿದ್ದಾರೆ, ಆದರೆ ಇದನ್ನು ಹೆಚ್ಚಿನ ವಿಜ್ಞಾನಿಗಳು ನಿರಾಕರಿಸಿದ್ದಾರೆ.


ಓದಿ:  ಕೊರೊನಾ ವೈರಸನ್ನು ಚೀನಾದಲ್ಲಿ ಸೃಷ್ಟಿಸಲಾಗಿದೆ: ಡೊನಾಲ್ಡ್ ಟ್ರಂಪ್ ಆರೋಪ


ಆದಾಗ್ಯೂ, ಕಳೆದವಾರ ರಾಜ್ಯ ಕಾರ್ಯದರ್ಶಿ ಮೈಕ್ ಪೊಂಪಿಯೊ ಅವರು ಕರೋನ ವೈರಸ್ ವುಹಾನ್ ಲ್ಯಾಬ್‌ನಲ್ಲಿ ಹುಟ್ಟಿಕೊಂಡಿದೆ ಎಂಬ ಈ ಹಿಂದಿನ ಕೆಲವು ಹೇಳಿಕೆಗಳನ್ನು ಹಿಂದಕ್ಕೆ ಪಡೆದುಕೊಂಡಿದ್ದು “ಇದು ವುಹಾನ್‌ನಲ್ಲಿ ಪ್ರಾರಂಭವಾಯಿತು ಎಂದು ನಮಗೆ ತಿಳಿದಿದೆ, ಆದರೆ ಎಲ್ಲಿಂದ ಅಥವಾ ಯಾರಿಂದ ಎಂಬುದು ನಮಗೆ ಗೊತ್ತಿಲ್ಲ, ಇದು ಮುಖ್ಯ ವಿಷಯವಾಗಿದೆ” ಎಂದು ಹೇಳಿದ್ದಾರೆ.

ವೈರಸ್ ಮೂಲ ಚೀನಾವಲ್ಲ ಎಂದು ಡಿಸೆಂಬರ್ 27 ರಂದು ಫ್ರಾನ್ಸ್‌ನಲ್ಲಿ ದೃಡೀಕರಿಸಿದ ಕೊರೊನಾ ವೈರಸ್ ಪ್ರಕರಣವನ್ನು ಸಹ ಪತ್ರಿಕೆ ಕ್ವಿಶಿ ಉಲ್ಲೇಖಿಸಿ, ಸೋಂಕಿಗೆ ಒಳಗಾಗುವ ಮೊದಲು ಮನುಷ್ಯನಿಗೆ ಚೀನಾದೊಂದಿಗೆ ಯಾವುದೇ ಸಂಪರ್ಕವಿರಲಿಲ್ಲ ಹಾಗೂ ಪ್ರಯಾಣ ಮಾಡಿರಲಿಲ್ಲ ಎಂದು ಹೇಳಿದೆ.

ಆದರೆ, ರೋಗಿಯ ಪತ್ನಿ ಪ್ಯಾರಿಸ್‌ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದ ಸಮೀಪವಿರುವ ಸೂಪರ್‌ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇದರಿಂದಾಗಿ ಇತ್ತೀಚೆಗೆ ಚೀನಾದಿಂದ ಆಗಮಿಸಿದ ಜನರೊಂದಿಗೆ ಸಂಪರ್ಕಕ್ಕೆ ಒಳಗಾಗಿರಬಹುದಾದ ಸಂಭವವಿದೆ ಎಂದು ಹೇಳಲಾಗಿದೆ, ಇದರ ಬಗ್ಗೆ ಕ್ವಿಶಿಯ ಲೇಖನವೂ ಸೂಚಿಸಿಲ್ಲ.

ಒಟ್ಟಿನಲ್ಲಿ ಕೊರೊನಾ ವೈರಸ್‌ ಉಗಮದ ಬಗ್ಗೆ ಅಮೆರಿಕಾ ಮತ್ತು ಚೀನಾ ಪರಸ್ಪರ ದೋಷಾರೋಪಣೆಯಲ್ಲಿ ಮುಳುಗಿದೆ.

ಈ ಎರಡು ರಾಷ್ಟ್ರಗಳ ಕಚ್ಚಾಟ ಹಾಗೂ ಕೊರೊನಾ ವೈರಸ್ ಹೇಗೆ ಹರಡಿತು ಎಂಬುದನ್ನು ಸ್ಥಾಪಿಸಲು ಸಮಗ್ರವಾದ ತನಿಖೆ ನಡೆಸಲು ವಿಶ್ವ ಆರೋಗ್ಯ ಸಂಸ್ಥೆಯ  ಆಡಳಿತ ಮಂಡಳಿಯಾದ WHA ಯೂ ಕರಡು ತಯಾರಿಸಿದೆ.

ಈ ಸಭೆಯಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿ, “ನಾವೆಲ್ಲರೂ ಮುಕ್ತತೆ, ಪಾರದರ್ಶಕತೆ ಮತ್ತು ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸಿದ್ದೇವೆ” ಎಂದು ಹೇಳಿದ್ದಾರೆ.

ಈಗಾಗಲೇ, ಯುರೋಪಿಯನ್ ಯೂನಿಯನ್ ದೇಶಗಳು, ಆಸ್ಟ್ರೇಲಿಯಾದ ಸೇರಿದಂತೆ 120 ಕ್ಕೂ ಹೆಚ್ಚು ದೇಶಗಳು ಕರಡು ನಿರ್ಣಯವನ್ನು ಬೆಂಬಲಿಸಿ, ಕೊರೊನಾದ ಮೂಲದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. WHA ಯ 194 ಸದಸ್ಯ ರಾಷ್ಟ್ರಗಳಲ್ಲಿ ಮೂರನೇ ಎರಡರಷ್ಟು ಬೆಂಬಲವನ್ನು ಪಡೆಯಲು ಸಾಧ್ಯವಾದರೆ ಈ ನಿರ್ಣಯವನ್ನು ಇಂದು (ಮಂಗಳವಾರ) ಮಂಡಿಸುವ ಸಾಧ್ಯತೆಯಿದೆ.

ಮೂಲ: ದಿ ವೈಸ್‌.ಕಾಂ


ಓದಿ:  ಕೊರೊನಾ ಮಾನವ ನಿರ್ಮಿತ ವೈರಸ್ ಎಂದು ಜಪಾನ್‌ನ ನೊಬೆಲ್ ಪ್ರಶಸ್ತಿ ವಿಜೇತ ಹೇಳಿದ್ದಾರೆಯೇ?; ಪ್ಯಾಕ್ಟ್ ಚೆಕ್


ವಿಡಿಯೊ ನೋಡಿ: ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...