Homeಮುಖಪುಟಅತೃಪ್ತ ಸೈನಿಕರಿಂದ ಕೊರೊನಾ ಗೆಲ್ಲಲು ಸಾಧ್ಯವಿಲ್ಲ: ಕೇಂದ್ರಕ್ಕೆ ಸುಪ್ರೀಂ ತಪರಾಕಿ

ಅತೃಪ್ತ ಸೈನಿಕರಿಂದ ಕೊರೊನಾ ಗೆಲ್ಲಲು ಸಾಧ್ಯವಿಲ್ಲ: ಕೇಂದ್ರಕ್ಕೆ ಸುಪ್ರೀಂ ತಪರಾಕಿ

- Advertisement -
- Advertisement -

ಕೊರೊನಾ ವಿರುದ್ಧ ಮುನ್ನಲೆಯಲ್ಲಿ ನಿಂತು ಹೋರಾಡುತ್ತಿರುವ ವೈದ್ಯರು, ದಾದಿಯರು ಸೇರಿದಂತೆ ಇತರ ವಾರಿಯರ್‌ಗಳಿಗೆ ಸಮರ್ಪಕ ಸುರಕ್ಷತೆ ಮತ್ತು ಸೂಕ್ತ ಭತ್ಯೆ ನೀಡಲು ವಿಫಲವಾಗಿರುವುದಕ್ಕೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕುಟುಕಿದೆ. ಅರ್ಜಿದಾರರು ಕೂಡಲೇ ತಮ್ಮ ಹಕ್ಕೊತ್ತಾಯಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ನ್ಯಾಯಾಲಯ ತಿಳಿಸಿದೆ.

ಜಸ್ಟೀಸ್‌ ಅಶೋಕ್‌ ಭೂಷಣ್, ಎಸ್‌.ಕೆ ಕೌಲ್ ಮತ್ತು ಎಂ.ಆರ್ ಶಾ ಅವರನ್ನು ಒಳಗೊಂಡ ನ್ಯಾಯಪೀಠವು ಅರ್ಜಿಯ ವಿಚಾರಣೆ ನಡೆಸುತ್ತಿದ್ದು, ವೈದ್ಯರ ಆರೋಗ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರವೇ ಕಾಳಜಿ ವಹಿಸಬೇಕೆ ಹೊರತು ಇದರಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ಅಗತ್ಯವಿರಲ್ಲ ಎಂದಿದ್ದು, ಈ ಕುರಿತು ಮಾಹಿತಿ ಒದಗಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.

ಅತೃಪ್ತ ಸೈನಿಕರನ್ನಿಟ್ಟುಕೊಂಡು ನಾವು ಕೊರೊನಾ ಯುದ್ದ ಗೆಲ್ಲಲಾಗುವುದಿಲ್ಲ. ವೈದ್ಯರುಗಳಿಗೆ ಸರಿಯಾಗಿ ಸಂಬಳ ಕೊಟ್ಟಿಲ್ಲ ಎಂದರೆ ಏನರ್ಥ? ಎಂದು ಕೋರ್ಟ್‌ ಪ್ರಶ್ನಿಸಿದೆ.

ಡಾ.ಜೆರ್‍ರಿ ಬಾನೈತ್‌ ಮತ್ತು ಡಾ.ಅರುಶಿ ಜೈನ್‌ ಸಲ್ಲಿಸಿರುವ ಸಾರ್ವಜನಿಕ ಹಿತರಕ್ಷಣ ಅರ್ಜಿಯ ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ವಕೀಲರಾದ ಅಮಿತ್‌ ಸಹಾನಿಯವರು “ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ಕಾರ್ಯಕರ್ತರಿಗೆ ಸೂಕ್ತ ಕ್ವಾರಂಟೈನ್‌ ಸೌಲಭ್ಯಗಳನ್ನು ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು” ಒತ್ತಾಯಿಸಿದರು.

ಅಲ್ಲದೇ ವೈದ್ಯರು, ದಾದಿಯರು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಆಂಬುಲೆನ್ಸ್‌ ಚಾಲಕರು ಸೇರಿದಂತೆ ಇತರರು ದಿನದ 24 ಗಂಟೆಯೂ ತಮ್ಮ ಹಾಗೂ ತಮ್ಮ ಕುಟುಂಬದವರ ಆರೋಗ್ಯವನ್ನು ಲೆಕ್ಕಿಸದೇ ದುಡಿಯುತ್ತಿದ್ದಾರೆ. ಇಂತವರಿಗೆ ಸಕಾಲದಲ್ಲಿ ವೇತನ ಸೇರಿದಂತೆ ಇತ್ಯಾದಿ ಸೌಲಭ್ಯಗಳು ದೊರೆಯುತ್ತಿಲ್ಲ. ಈ ವಿಚಾರಕ್ಕೆ ಕೋರ್ಟ್‌ ಮಧ್ಯಪ್ರವೇಶಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಆರೋಗ್ಯ ಕಾರ್ಯಕರ್ತರಿಗಾಗಲಿ, ಅವರ ಕುಟುಂಬದವರಿಗಾಗಲಿ ಸೋಂಕು ಹರಡದಂತೆ ತಡೆಯುವ ಜವಾಬ್ದಾರಿ ಇನ್ಫೆಕ್ಷನ್‌ ಪ್ರಿವೆಂಟಿಂಗ್‌ ಅಂಡ್‌ ಕಂಟ್ರೋಲ್‌ ಸಮಿತಿಯದಾಗಿರುತ್ತದೆ. ಆದರೆ ಸೋಂಕು ಹರಡದಂತೆ ತಡೆಗಟ್ಟುವಲ್ಲಿ ಸಮಿತಿ ಕಾರ್ಯವೈಖರಿ ತೃಪ್ತಿದಾಯಕವಾಗಿಲ್ಲ. ಅಲ್ಲದೇ ಇಂತಹ ಸಮಯದಲ್ಲಿ ಸಮುದಾಯ ಆರೋಗ್ಯ ಕಾರ್ಯಕರ್ತರ ವೇತನದಲ್ಲಿ ಕಡಿತವಾಗುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ವೇತನ ಕಡಿತ, ಸಮರ್ಪಕ ಸಂಬಳ ನೀಡದಿರುವುದು ಸಮಸ್ಯೆಯನ್ನು ಹೆಚ್ಚಿಸುತ್ತದೆ. ವೈದ್ಯರಿಗೆ ಸಂಬಳವಿಲ್ಲ ಎಂದರೆ ಏನರ್ಥ? ಇದು ಮತ್ತೆ ಸಂಭವಿಸುತ್ತದೆ ಎಂದು ನಾವು ಭಾವಿಸುವುದಿಲ್ಲ. ನೀವು ಹೆಚ್ಚಿನದನ್ನು ಮಾಡಬೇಕಾಗುತ್ತದೆ. ಅವರ ಮನವಿಗಳನ್ನು ಸೂಕ್ತವಾಗಿ ಆಲಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಚಾಟಿ ಬೀಸಿದೆ. ಮುಂದಿನ ವಿಚಾರಣೆಯನ್ನು ಜೂನ್‌ 17ಕ್ಕೆ ಮುಂದೂಡಿದೆ.

ಕೃಪೆ: ಲೈವ್‌ಲಾ


ಇದನ್ನೂ ಓದಿ: ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...