Homeಮುಖಪುಟಅತೃಪ್ತ ಸೈನಿಕರಿಂದ ಕೊರೊನಾ ಗೆಲ್ಲಲು ಸಾಧ್ಯವಿಲ್ಲ: ಕೇಂದ್ರಕ್ಕೆ ಸುಪ್ರೀಂ ತಪರಾಕಿ

ಅತೃಪ್ತ ಸೈನಿಕರಿಂದ ಕೊರೊನಾ ಗೆಲ್ಲಲು ಸಾಧ್ಯವಿಲ್ಲ: ಕೇಂದ್ರಕ್ಕೆ ಸುಪ್ರೀಂ ತಪರಾಕಿ

- Advertisement -
- Advertisement -

ಕೊರೊನಾ ವಿರುದ್ಧ ಮುನ್ನಲೆಯಲ್ಲಿ ನಿಂತು ಹೋರಾಡುತ್ತಿರುವ ವೈದ್ಯರು, ದಾದಿಯರು ಸೇರಿದಂತೆ ಇತರ ವಾರಿಯರ್‌ಗಳಿಗೆ ಸಮರ್ಪಕ ಸುರಕ್ಷತೆ ಮತ್ತು ಸೂಕ್ತ ಭತ್ಯೆ ನೀಡಲು ವಿಫಲವಾಗಿರುವುದಕ್ಕೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕುಟುಕಿದೆ. ಅರ್ಜಿದಾರರು ಕೂಡಲೇ ತಮ್ಮ ಹಕ್ಕೊತ್ತಾಯಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ನ್ಯಾಯಾಲಯ ತಿಳಿಸಿದೆ.

ಜಸ್ಟೀಸ್‌ ಅಶೋಕ್‌ ಭೂಷಣ್, ಎಸ್‌.ಕೆ ಕೌಲ್ ಮತ್ತು ಎಂ.ಆರ್ ಶಾ ಅವರನ್ನು ಒಳಗೊಂಡ ನ್ಯಾಯಪೀಠವು ಅರ್ಜಿಯ ವಿಚಾರಣೆ ನಡೆಸುತ್ತಿದ್ದು, ವೈದ್ಯರ ಆರೋಗ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರವೇ ಕಾಳಜಿ ವಹಿಸಬೇಕೆ ಹೊರತು ಇದರಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ಅಗತ್ಯವಿರಲ್ಲ ಎಂದಿದ್ದು, ಈ ಕುರಿತು ಮಾಹಿತಿ ಒದಗಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.

ಅತೃಪ್ತ ಸೈನಿಕರನ್ನಿಟ್ಟುಕೊಂಡು ನಾವು ಕೊರೊನಾ ಯುದ್ದ ಗೆಲ್ಲಲಾಗುವುದಿಲ್ಲ. ವೈದ್ಯರುಗಳಿಗೆ ಸರಿಯಾಗಿ ಸಂಬಳ ಕೊಟ್ಟಿಲ್ಲ ಎಂದರೆ ಏನರ್ಥ? ಎಂದು ಕೋರ್ಟ್‌ ಪ್ರಶ್ನಿಸಿದೆ.

ಡಾ.ಜೆರ್‍ರಿ ಬಾನೈತ್‌ ಮತ್ತು ಡಾ.ಅರುಶಿ ಜೈನ್‌ ಸಲ್ಲಿಸಿರುವ ಸಾರ್ವಜನಿಕ ಹಿತರಕ್ಷಣ ಅರ್ಜಿಯ ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ವಕೀಲರಾದ ಅಮಿತ್‌ ಸಹಾನಿಯವರು “ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ಕಾರ್ಯಕರ್ತರಿಗೆ ಸೂಕ್ತ ಕ್ವಾರಂಟೈನ್‌ ಸೌಲಭ್ಯಗಳನ್ನು ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು” ಒತ್ತಾಯಿಸಿದರು.

ಅಲ್ಲದೇ ವೈದ್ಯರು, ದಾದಿಯರು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಆಂಬುಲೆನ್ಸ್‌ ಚಾಲಕರು ಸೇರಿದಂತೆ ಇತರರು ದಿನದ 24 ಗಂಟೆಯೂ ತಮ್ಮ ಹಾಗೂ ತಮ್ಮ ಕುಟುಂಬದವರ ಆರೋಗ್ಯವನ್ನು ಲೆಕ್ಕಿಸದೇ ದುಡಿಯುತ್ತಿದ್ದಾರೆ. ಇಂತವರಿಗೆ ಸಕಾಲದಲ್ಲಿ ವೇತನ ಸೇರಿದಂತೆ ಇತ್ಯಾದಿ ಸೌಲಭ್ಯಗಳು ದೊರೆಯುತ್ತಿಲ್ಲ. ಈ ವಿಚಾರಕ್ಕೆ ಕೋರ್ಟ್‌ ಮಧ್ಯಪ್ರವೇಶಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಆರೋಗ್ಯ ಕಾರ್ಯಕರ್ತರಿಗಾಗಲಿ, ಅವರ ಕುಟುಂಬದವರಿಗಾಗಲಿ ಸೋಂಕು ಹರಡದಂತೆ ತಡೆಯುವ ಜವಾಬ್ದಾರಿ ಇನ್ಫೆಕ್ಷನ್‌ ಪ್ರಿವೆಂಟಿಂಗ್‌ ಅಂಡ್‌ ಕಂಟ್ರೋಲ್‌ ಸಮಿತಿಯದಾಗಿರುತ್ತದೆ. ಆದರೆ ಸೋಂಕು ಹರಡದಂತೆ ತಡೆಗಟ್ಟುವಲ್ಲಿ ಸಮಿತಿ ಕಾರ್ಯವೈಖರಿ ತೃಪ್ತಿದಾಯಕವಾಗಿಲ್ಲ. ಅಲ್ಲದೇ ಇಂತಹ ಸಮಯದಲ್ಲಿ ಸಮುದಾಯ ಆರೋಗ್ಯ ಕಾರ್ಯಕರ್ತರ ವೇತನದಲ್ಲಿ ಕಡಿತವಾಗುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ವೇತನ ಕಡಿತ, ಸಮರ್ಪಕ ಸಂಬಳ ನೀಡದಿರುವುದು ಸಮಸ್ಯೆಯನ್ನು ಹೆಚ್ಚಿಸುತ್ತದೆ. ವೈದ್ಯರಿಗೆ ಸಂಬಳವಿಲ್ಲ ಎಂದರೆ ಏನರ್ಥ? ಇದು ಮತ್ತೆ ಸಂಭವಿಸುತ್ತದೆ ಎಂದು ನಾವು ಭಾವಿಸುವುದಿಲ್ಲ. ನೀವು ಹೆಚ್ಚಿನದನ್ನು ಮಾಡಬೇಕಾಗುತ್ತದೆ. ಅವರ ಮನವಿಗಳನ್ನು ಸೂಕ್ತವಾಗಿ ಆಲಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಚಾಟಿ ಬೀಸಿದೆ. ಮುಂದಿನ ವಿಚಾರಣೆಯನ್ನು ಜೂನ್‌ 17ಕ್ಕೆ ಮುಂದೂಡಿದೆ.

ಕೃಪೆ: ಲೈವ್‌ಲಾ


ಇದನ್ನೂ ಓದಿ: ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...