Homeಮುಖಪುಟಅತೃಪ್ತ ಸೈನಿಕರಿಂದ ಕೊರೊನಾ ಗೆಲ್ಲಲು ಸಾಧ್ಯವಿಲ್ಲ: ಕೇಂದ್ರಕ್ಕೆ ಸುಪ್ರೀಂ ತಪರಾಕಿ

ಅತೃಪ್ತ ಸೈನಿಕರಿಂದ ಕೊರೊನಾ ಗೆಲ್ಲಲು ಸಾಧ್ಯವಿಲ್ಲ: ಕೇಂದ್ರಕ್ಕೆ ಸುಪ್ರೀಂ ತಪರಾಕಿ

- Advertisement -
- Advertisement -

ಕೊರೊನಾ ವಿರುದ್ಧ ಮುನ್ನಲೆಯಲ್ಲಿ ನಿಂತು ಹೋರಾಡುತ್ತಿರುವ ವೈದ್ಯರು, ದಾದಿಯರು ಸೇರಿದಂತೆ ಇತರ ವಾರಿಯರ್‌ಗಳಿಗೆ ಸಮರ್ಪಕ ಸುರಕ್ಷತೆ ಮತ್ತು ಸೂಕ್ತ ಭತ್ಯೆ ನೀಡಲು ವಿಫಲವಾಗಿರುವುದಕ್ಕೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕುಟುಕಿದೆ. ಅರ್ಜಿದಾರರು ಕೂಡಲೇ ತಮ್ಮ ಹಕ್ಕೊತ್ತಾಯಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ನ್ಯಾಯಾಲಯ ತಿಳಿಸಿದೆ.

ಜಸ್ಟೀಸ್‌ ಅಶೋಕ್‌ ಭೂಷಣ್, ಎಸ್‌.ಕೆ ಕೌಲ್ ಮತ್ತು ಎಂ.ಆರ್ ಶಾ ಅವರನ್ನು ಒಳಗೊಂಡ ನ್ಯಾಯಪೀಠವು ಅರ್ಜಿಯ ವಿಚಾರಣೆ ನಡೆಸುತ್ತಿದ್ದು, ವೈದ್ಯರ ಆರೋಗ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರವೇ ಕಾಳಜಿ ವಹಿಸಬೇಕೆ ಹೊರತು ಇದರಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ಅಗತ್ಯವಿರಲ್ಲ ಎಂದಿದ್ದು, ಈ ಕುರಿತು ಮಾಹಿತಿ ಒದಗಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.

ಅತೃಪ್ತ ಸೈನಿಕರನ್ನಿಟ್ಟುಕೊಂಡು ನಾವು ಕೊರೊನಾ ಯುದ್ದ ಗೆಲ್ಲಲಾಗುವುದಿಲ್ಲ. ವೈದ್ಯರುಗಳಿಗೆ ಸರಿಯಾಗಿ ಸಂಬಳ ಕೊಟ್ಟಿಲ್ಲ ಎಂದರೆ ಏನರ್ಥ? ಎಂದು ಕೋರ್ಟ್‌ ಪ್ರಶ್ನಿಸಿದೆ.

ಡಾ.ಜೆರ್‍ರಿ ಬಾನೈತ್‌ ಮತ್ತು ಡಾ.ಅರುಶಿ ಜೈನ್‌ ಸಲ್ಲಿಸಿರುವ ಸಾರ್ವಜನಿಕ ಹಿತರಕ್ಷಣ ಅರ್ಜಿಯ ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ವಕೀಲರಾದ ಅಮಿತ್‌ ಸಹಾನಿಯವರು “ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ಕಾರ್ಯಕರ್ತರಿಗೆ ಸೂಕ್ತ ಕ್ವಾರಂಟೈನ್‌ ಸೌಲಭ್ಯಗಳನ್ನು ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು” ಒತ್ತಾಯಿಸಿದರು.

ಅಲ್ಲದೇ ವೈದ್ಯರು, ದಾದಿಯರು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಆಂಬುಲೆನ್ಸ್‌ ಚಾಲಕರು ಸೇರಿದಂತೆ ಇತರರು ದಿನದ 24 ಗಂಟೆಯೂ ತಮ್ಮ ಹಾಗೂ ತಮ್ಮ ಕುಟುಂಬದವರ ಆರೋಗ್ಯವನ್ನು ಲೆಕ್ಕಿಸದೇ ದುಡಿಯುತ್ತಿದ್ದಾರೆ. ಇಂತವರಿಗೆ ಸಕಾಲದಲ್ಲಿ ವೇತನ ಸೇರಿದಂತೆ ಇತ್ಯಾದಿ ಸೌಲಭ್ಯಗಳು ದೊರೆಯುತ್ತಿಲ್ಲ. ಈ ವಿಚಾರಕ್ಕೆ ಕೋರ್ಟ್‌ ಮಧ್ಯಪ್ರವೇಶಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಆರೋಗ್ಯ ಕಾರ್ಯಕರ್ತರಿಗಾಗಲಿ, ಅವರ ಕುಟುಂಬದವರಿಗಾಗಲಿ ಸೋಂಕು ಹರಡದಂತೆ ತಡೆಯುವ ಜವಾಬ್ದಾರಿ ಇನ್ಫೆಕ್ಷನ್‌ ಪ್ರಿವೆಂಟಿಂಗ್‌ ಅಂಡ್‌ ಕಂಟ್ರೋಲ್‌ ಸಮಿತಿಯದಾಗಿರುತ್ತದೆ. ಆದರೆ ಸೋಂಕು ಹರಡದಂತೆ ತಡೆಗಟ್ಟುವಲ್ಲಿ ಸಮಿತಿ ಕಾರ್ಯವೈಖರಿ ತೃಪ್ತಿದಾಯಕವಾಗಿಲ್ಲ. ಅಲ್ಲದೇ ಇಂತಹ ಸಮಯದಲ್ಲಿ ಸಮುದಾಯ ಆರೋಗ್ಯ ಕಾರ್ಯಕರ್ತರ ವೇತನದಲ್ಲಿ ಕಡಿತವಾಗುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ವೇತನ ಕಡಿತ, ಸಮರ್ಪಕ ಸಂಬಳ ನೀಡದಿರುವುದು ಸಮಸ್ಯೆಯನ್ನು ಹೆಚ್ಚಿಸುತ್ತದೆ. ವೈದ್ಯರಿಗೆ ಸಂಬಳವಿಲ್ಲ ಎಂದರೆ ಏನರ್ಥ? ಇದು ಮತ್ತೆ ಸಂಭವಿಸುತ್ತದೆ ಎಂದು ನಾವು ಭಾವಿಸುವುದಿಲ್ಲ. ನೀವು ಹೆಚ್ಚಿನದನ್ನು ಮಾಡಬೇಕಾಗುತ್ತದೆ. ಅವರ ಮನವಿಗಳನ್ನು ಸೂಕ್ತವಾಗಿ ಆಲಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಚಾಟಿ ಬೀಸಿದೆ. ಮುಂದಿನ ವಿಚಾರಣೆಯನ್ನು ಜೂನ್‌ 17ಕ್ಕೆ ಮುಂದೂಡಿದೆ.

ಕೃಪೆ: ಲೈವ್‌ಲಾ


ಇದನ್ನೂ ಓದಿ: ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...