Homeಸಿನಿಮಾಕ್ರೀಡೆಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ಕೊರೊನಾ ವಾರಿಯರ್ಸ್ ಶ್ರಮ ಮತ್ತು ತ್ಯಾಗವನ್ನು ಗೌರವಿಸುವುದಾಗಿ ಆರ್‌ಸಿಬಿ ಘೋಷಿಸಿತ್ತು. ಹಾಗೇಯೇ ತಮ್ಮ ಜರ್ಸಿಯ ಹಿಂಭಾಗದಲ್ಲಿ ‘ಮೈ ಕೋವಿಡ್ ಹೀರೋಸ್’ ಎಂದು ಬರೆದ ಸಾಲುಗಳೊಂದಿಗೆ ಪಂದ್ಯಗಳಲ್ಲಿ ಕಣಕ್ಕೆ ಇಳಿಯುತ್ತಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ಜನರ ಸಹಾಯಕ್ಕೆ ನಿಂತ ಕೊರೊನಾ ವಾರಿಯರ್ಸ್‌ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ವಿಶೇಷ ಗೌರವ ಸಲ್ಲಿಸುತ್ತಿದೆ. ತಂಡದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮತ್ತು ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ತಮ್ಮ ತಮ್ಮ ಹೆಸರಿಗೆ ಬದಲಾಗಿ ಕೊರೊನಾ ವಾರಿಯರ್ಸ್ ಹೆಸರಿರುವ ಜೆರ್ಸಿಗಳನ್ನು ತೊಟ್ಟು ಕಣಕ್ಕಿಳಿದಿದ್ದಾರೆ.

ಆರ್‌ಸಿಬಿ ತಂಡ ಈ ಬಾರಿಯ ಐಪಿಎಲ್ ಪ್ರಾರಂಭವಾಗುವ ಮೊದಲೇ, ಕೊರೊನಾ ಯೋಧರ ಶ್ರಮ ಮತ್ತು ತ್ಯಾಗವನ್ನು ಗೌರವಿಸುವುದಾಗಿ ಘೋಷಿಸಿತ್ತು. ಹಾಗೇಯೇ ತರಬೇತಿ ಸಮಯದಲ್ಲಿ ಮತ್ತು ಪಂದ್ಯಗಳ ಸಮಯದಲ್ಲೂ ತಮ್ಮ ಜರ್ಸಿಯ ಹಿಂಭಾಗದಲ್ಲಿ ‘ಮೈ ಕೋವಿಡ್ ಹೀರೋಸ್’ ಎಂಬ ಸಾಲುಗಳು ಇರಲಿವೆ ಎಂದು ಆರ್‌ಸಿಬಿ ಹೇಳಿತ್ತು.

ಇದನ್ನೂ ಓದಿ: ಕ್ರಿಕೆಟ್‌ ದಕ್ಷಿಣ ಆಫ್ರಿಕಾವನ್ನು ಅಮಾನತು ಮಾಡಿದ ದಕ್ಷಿಣ ಆಫ್ರಿಕಾ ಸರ್ಕಾರ

ಆರ್‌ಸಿಬಿ ಅಭಿಯಾನದ ಭಾಗವಾಗಿ ಸ್ಪೋಟಕ ಬ್ಯಾಟ್ಸ್‌ಮನ್ ಎಬಿಡಿ ಕೊರೊನಾ ವಾರಿಯರ್‌ ಪಾರಿತೋಶ್ ಪಂತ್ ಜೊತೆ ಮಾತನಾಡಿ ಅವರ ಕೆಲಸವನ್ನು ಗೌರವಿಸಲು, ತಮ್ಮ ಜರ್ಸಿ ಮೇಲೆ ಪಾರಿತೋಶ್ ಎಂದು ಮತ್ತು ತಮ್ಮ ಟ್ವಿಟ್ಟರ್‌ ಖಾತೆ, ಇನ್ಸ್‌ಸ್ಟ್ರಾಗ್ರಾಮ್ ಖಾತೆಯ ಹೆಸರನ್ನು ಪಾರಿತೋಷ್ ಪಂತ್ ಎಂದು ಬದಲಿಸಿದ್ದಾರೆ.

PC:DNA India

29 ವರ್ಷದ ಪಾರಿತೋಶ್ ಪಂತ್ ಮುಂಬೈನಲ್ಲಿ ಬಾರ್ಬಿಕ್ಯೂ ಕೆಫೆ ನಡೆಸುತ್ತಾರೆ. ಲಾಕ್‌ಡೌನ್ ಸಮಯದಲ್ಲಿ ಫೀಡಿಂಗ್ ಫ್ರಮ್ ಫಾರ್ ಮೂಲಕ ಬಡವರಿಗೆ ಮತ್ತು ಕೊರೊನಾದಿಂದ ಕೆಲಸ ಕಳೆದುಕೊಂಡ ಸಾವಿರಾರು ನಿರುದ್ಯೋಗಿಗಳಿಗೆ ಆಹಾರ ಒದಗಿಸಿದ್ದರು. ಇವರಿಗೆ ಗೌರವ ಸಲ್ಲಿಸಲು ಎಬಿಡಿ ತಮ್ಮ ಜರ್ಸಿ ಮೇಲೆ ಪಾರಿತೋಶ್ ಎಂದು ಬದಲಿಸಿದ್ದಾರೆ. ಜೊತೆಗೆ ಜರ್ಸಿ ಧರಿಸಿದ ಪೋಟೋ ಮತ್ತು ಪಾರಿತೋಶ್‌ಗೆ ಗೌರವ ಸಲ್ಲಿಸುವ ಸಾಲುಗಳನ್ನು ಬರೆದು ಟ್ವೀಟ್ ಮಾಡಿದ್ದಾರೆ

PC:Telegraph India
(ಕೊರೊನಾ ವಾರಿಯರ್‌ ಪಾರಿತೋಶ್ ಪಂತ್)

ಇದನ್ನೂ ಓದಿ:  ಬ್ಯಾಟ್ಸ್‌ಮನ್ ಎಬಿಡಿ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ ಕೆಫೆ ಮಾಲೀಕ ಪಾರಿತೋಶ್ ಪಂತ್ ಧನ್ಯವಾದ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

’ಈ ತಿಂಗಳ ಆರಂಭದಲ್ಲಿ ನಾನು ಎಬಿಡಿ ಅವರ ಜೊತೆಗೆ ವಿಡಿಯೋ ಮುಖಾಂತರ ಮಾತನಾಡಿದೆ. ಅವರು ನಮ್ಮ ಕೆಲಸವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರು. ನಾವು ಮಾಡಿದ ಕೆಲಸವನ್ನು ವಿವರವಾಗಿ ಕೇಳಿದರು’ ಎಂದು ಪಾರಿತೋಶ್ ದಿ ಟೆಲಿಗ್ರಾಫ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

ನಮ್ಮ ಕೆಲಸದಲ್ಲಿ ಬಂದ ಸವಾಲುಗಳ ಬಗ್ಗೆ , ಅವುಗಳನ್ನು ನಾವು ಎದುರಿಸಿದ ಬಗ್ಗೆ ಕೇಳಿದರು. ನಾನು ಮತ್ತು ನಮ್ಮ ವಾಲೆಂಟಿಯರ್ಸ್ ಗೋವಂಡಿ ಕೊಳೆಗೆರಿಯಲ್ಲಿ ಕೆಲಸ ಮಾಡಿದ ರೀತಿಯನ್ನು ವಿವರಿಸಿದೆ. ಎಲ್ಲವನ್ನು ಕೇಳಿದ ಎಬಿಡಿ ನಿಮ್ಮ ಕಾರ್ಯ ಸ್ಪೂರ್ತಿದಾಯಕ ಮತ್ತು ಅದ್ಭುತ ಎಂದರು ಎಂದು ಪಾರಿತೋಶ್ ವಿವರಿಸಿದ್ದಾರೆ.

ಇನ್ನು ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ  ಶ್ರವಣದೋಷಿಯಾಗಿದ್ದರೂ ಜನರ ನೆರವಿಗಾಗಿ ನಿಂತ ಸಿಮ್ರನ್‌ಜೀತ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದ್ದಾರೆ. ಸಿಮ್ರನ್‌ಜೀತ್ ಎಂಬ ಜರ್ಸಿ ತೊಟ್ಟು ಪಂದ್ಯ ಆಡಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯ ಹೆಸರನ್ನು ಸಿಮ್ರನ್‌ಜೀತ್ ಸಿಂಗ್ ಎಂದು ಬದಲಿಸಿದ್ದರು.

PC:Hindustan

ಸಿಮ್ರನ್‌ಜೀತ್ ಸಿಂಗ್ ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದವರಿಗಾಗಿ ದೇಣಿಗೆ ಸಂಗ್ರಹಿಸಿದ್ದರು. ತಮ್ಮ ಇತರ ಶ್ರವಣದೋಷಿ ಸ್ನೇಹಿತರ ಜೊತೆಗೂಡಿ 98 ಸಾವಿರ ದೇಣಿಗೆ ಸಂಗ್ರಹಿಸಿ ಬಡವರಿಗೆ ನೆರವಾಗಿದ್ದರು ಎಂದು ಆರ್‌ಸಿಬಿ ಹೇಳಿದೆ.

ಆರ್‌ಸಿಬಿಯು ಈ ಬಾರಿಯ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ಎದುರು 10 ರನ್‌ಗಳಿಂದ ಜಯಿಸಿದೆ.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...