Homeಸಿನಿಮಾಕ್ರೀಡೆಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ಕೊರೊನಾ ವಾರಿಯರ್ಸ್ ಶ್ರಮ ಮತ್ತು ತ್ಯಾಗವನ್ನು ಗೌರವಿಸುವುದಾಗಿ ಆರ್‌ಸಿಬಿ ಘೋಷಿಸಿತ್ತು. ಹಾಗೇಯೇ ತಮ್ಮ ಜರ್ಸಿಯ ಹಿಂಭಾಗದಲ್ಲಿ ‘ಮೈ ಕೋವಿಡ್ ಹೀರೋಸ್’ ಎಂದು ಬರೆದ ಸಾಲುಗಳೊಂದಿಗೆ ಪಂದ್ಯಗಳಲ್ಲಿ ಕಣಕ್ಕೆ ಇಳಿಯುತ್ತಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ಜನರ ಸಹಾಯಕ್ಕೆ ನಿಂತ ಕೊರೊನಾ ವಾರಿಯರ್ಸ್‌ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ವಿಶೇಷ ಗೌರವ ಸಲ್ಲಿಸುತ್ತಿದೆ. ತಂಡದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮತ್ತು ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ತಮ್ಮ ತಮ್ಮ ಹೆಸರಿಗೆ ಬದಲಾಗಿ ಕೊರೊನಾ ವಾರಿಯರ್ಸ್ ಹೆಸರಿರುವ ಜೆರ್ಸಿಗಳನ್ನು ತೊಟ್ಟು ಕಣಕ್ಕಿಳಿದಿದ್ದಾರೆ.

ಆರ್‌ಸಿಬಿ ತಂಡ ಈ ಬಾರಿಯ ಐಪಿಎಲ್ ಪ್ರಾರಂಭವಾಗುವ ಮೊದಲೇ, ಕೊರೊನಾ ಯೋಧರ ಶ್ರಮ ಮತ್ತು ತ್ಯಾಗವನ್ನು ಗೌರವಿಸುವುದಾಗಿ ಘೋಷಿಸಿತ್ತು. ಹಾಗೇಯೇ ತರಬೇತಿ ಸಮಯದಲ್ಲಿ ಮತ್ತು ಪಂದ್ಯಗಳ ಸಮಯದಲ್ಲೂ ತಮ್ಮ ಜರ್ಸಿಯ ಹಿಂಭಾಗದಲ್ಲಿ ‘ಮೈ ಕೋವಿಡ್ ಹೀರೋಸ್’ ಎಂಬ ಸಾಲುಗಳು ಇರಲಿವೆ ಎಂದು ಆರ್‌ಸಿಬಿ ಹೇಳಿತ್ತು.

ಇದನ್ನೂ ಓದಿ: ಕ್ರಿಕೆಟ್‌ ದಕ್ಷಿಣ ಆಫ್ರಿಕಾವನ್ನು ಅಮಾನತು ಮಾಡಿದ ದಕ್ಷಿಣ ಆಫ್ರಿಕಾ ಸರ್ಕಾರ

ಆರ್‌ಸಿಬಿ ಅಭಿಯಾನದ ಭಾಗವಾಗಿ ಸ್ಪೋಟಕ ಬ್ಯಾಟ್ಸ್‌ಮನ್ ಎಬಿಡಿ ಕೊರೊನಾ ವಾರಿಯರ್‌ ಪಾರಿತೋಶ್ ಪಂತ್ ಜೊತೆ ಮಾತನಾಡಿ ಅವರ ಕೆಲಸವನ್ನು ಗೌರವಿಸಲು, ತಮ್ಮ ಜರ್ಸಿ ಮೇಲೆ ಪಾರಿತೋಶ್ ಎಂದು ಮತ್ತು ತಮ್ಮ ಟ್ವಿಟ್ಟರ್‌ ಖಾತೆ, ಇನ್ಸ್‌ಸ್ಟ್ರಾಗ್ರಾಮ್ ಖಾತೆಯ ಹೆಸರನ್ನು ಪಾರಿತೋಷ್ ಪಂತ್ ಎಂದು ಬದಲಿಸಿದ್ದಾರೆ.

PC:DNA India

29 ವರ್ಷದ ಪಾರಿತೋಶ್ ಪಂತ್ ಮುಂಬೈನಲ್ಲಿ ಬಾರ್ಬಿಕ್ಯೂ ಕೆಫೆ ನಡೆಸುತ್ತಾರೆ. ಲಾಕ್‌ಡೌನ್ ಸಮಯದಲ್ಲಿ ಫೀಡಿಂಗ್ ಫ್ರಮ್ ಫಾರ್ ಮೂಲಕ ಬಡವರಿಗೆ ಮತ್ತು ಕೊರೊನಾದಿಂದ ಕೆಲಸ ಕಳೆದುಕೊಂಡ ಸಾವಿರಾರು ನಿರುದ್ಯೋಗಿಗಳಿಗೆ ಆಹಾರ ಒದಗಿಸಿದ್ದರು. ಇವರಿಗೆ ಗೌರವ ಸಲ್ಲಿಸಲು ಎಬಿಡಿ ತಮ್ಮ ಜರ್ಸಿ ಮೇಲೆ ಪಾರಿತೋಶ್ ಎಂದು ಬದಲಿಸಿದ್ದಾರೆ. ಜೊತೆಗೆ ಜರ್ಸಿ ಧರಿಸಿದ ಪೋಟೋ ಮತ್ತು ಪಾರಿತೋಶ್‌ಗೆ ಗೌರವ ಸಲ್ಲಿಸುವ ಸಾಲುಗಳನ್ನು ಬರೆದು ಟ್ವೀಟ್ ಮಾಡಿದ್ದಾರೆ

PC:Telegraph India
(ಕೊರೊನಾ ವಾರಿಯರ್‌ ಪಾರಿತೋಶ್ ಪಂತ್)

ಇದನ್ನೂ ಓದಿ:  ಬ್ಯಾಟ್ಸ್‌ಮನ್ ಎಬಿಡಿ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ ಕೆಫೆ ಮಾಲೀಕ ಪಾರಿತೋಶ್ ಪಂತ್ ಧನ್ಯವಾದ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

’ಈ ತಿಂಗಳ ಆರಂಭದಲ್ಲಿ ನಾನು ಎಬಿಡಿ ಅವರ ಜೊತೆಗೆ ವಿಡಿಯೋ ಮುಖಾಂತರ ಮಾತನಾಡಿದೆ. ಅವರು ನಮ್ಮ ಕೆಲಸವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರು. ನಾವು ಮಾಡಿದ ಕೆಲಸವನ್ನು ವಿವರವಾಗಿ ಕೇಳಿದರು’ ಎಂದು ಪಾರಿತೋಶ್ ದಿ ಟೆಲಿಗ್ರಾಫ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

ನಮ್ಮ ಕೆಲಸದಲ್ಲಿ ಬಂದ ಸವಾಲುಗಳ ಬಗ್ಗೆ , ಅವುಗಳನ್ನು ನಾವು ಎದುರಿಸಿದ ಬಗ್ಗೆ ಕೇಳಿದರು. ನಾನು ಮತ್ತು ನಮ್ಮ ವಾಲೆಂಟಿಯರ್ಸ್ ಗೋವಂಡಿ ಕೊಳೆಗೆರಿಯಲ್ಲಿ ಕೆಲಸ ಮಾಡಿದ ರೀತಿಯನ್ನು ವಿವರಿಸಿದೆ. ಎಲ್ಲವನ್ನು ಕೇಳಿದ ಎಬಿಡಿ ನಿಮ್ಮ ಕಾರ್ಯ ಸ್ಪೂರ್ತಿದಾಯಕ ಮತ್ತು ಅದ್ಭುತ ಎಂದರು ಎಂದು ಪಾರಿತೋಶ್ ವಿವರಿಸಿದ್ದಾರೆ.

ಇನ್ನು ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ  ಶ್ರವಣದೋಷಿಯಾಗಿದ್ದರೂ ಜನರ ನೆರವಿಗಾಗಿ ನಿಂತ ಸಿಮ್ರನ್‌ಜೀತ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದ್ದಾರೆ. ಸಿಮ್ರನ್‌ಜೀತ್ ಎಂಬ ಜರ್ಸಿ ತೊಟ್ಟು ಪಂದ್ಯ ಆಡಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯ ಹೆಸರನ್ನು ಸಿಮ್ರನ್‌ಜೀತ್ ಸಿಂಗ್ ಎಂದು ಬದಲಿಸಿದ್ದರು.

PC:Hindustan

ಸಿಮ್ರನ್‌ಜೀತ್ ಸಿಂಗ್ ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದವರಿಗಾಗಿ ದೇಣಿಗೆ ಸಂಗ್ರಹಿಸಿದ್ದರು. ತಮ್ಮ ಇತರ ಶ್ರವಣದೋಷಿ ಸ್ನೇಹಿತರ ಜೊತೆಗೂಡಿ 98 ಸಾವಿರ ದೇಣಿಗೆ ಸಂಗ್ರಹಿಸಿ ಬಡವರಿಗೆ ನೆರವಾಗಿದ್ದರು ಎಂದು ಆರ್‌ಸಿಬಿ ಹೇಳಿದೆ.

ಆರ್‌ಸಿಬಿಯು ಈ ಬಾರಿಯ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ಎದುರು 10 ರನ್‌ಗಳಿಂದ ಜಯಿಸಿದೆ.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...