Homeಸಿನಿಮಾಕ್ರೀಡೆಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ಕೊರೊನಾ ವಾರಿಯರ್ಸ್ ಶ್ರಮ ಮತ್ತು ತ್ಯಾಗವನ್ನು ಗೌರವಿಸುವುದಾಗಿ ಆರ್‌ಸಿಬಿ ಘೋಷಿಸಿತ್ತು. ಹಾಗೇಯೇ ತಮ್ಮ ಜರ್ಸಿಯ ಹಿಂಭಾಗದಲ್ಲಿ ‘ಮೈ ಕೋವಿಡ್ ಹೀರೋಸ್’ ಎಂದು ಬರೆದ ಸಾಲುಗಳೊಂದಿಗೆ ಪಂದ್ಯಗಳಲ್ಲಿ ಕಣಕ್ಕೆ ಇಳಿಯುತ್ತಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ಜನರ ಸಹಾಯಕ್ಕೆ ನಿಂತ ಕೊರೊನಾ ವಾರಿಯರ್ಸ್‌ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ವಿಶೇಷ ಗೌರವ ಸಲ್ಲಿಸುತ್ತಿದೆ. ತಂಡದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮತ್ತು ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ತಮ್ಮ ತಮ್ಮ ಹೆಸರಿಗೆ ಬದಲಾಗಿ ಕೊರೊನಾ ವಾರಿಯರ್ಸ್ ಹೆಸರಿರುವ ಜೆರ್ಸಿಗಳನ್ನು ತೊಟ್ಟು ಕಣಕ್ಕಿಳಿದಿದ್ದಾರೆ.

ಆರ್‌ಸಿಬಿ ತಂಡ ಈ ಬಾರಿಯ ಐಪಿಎಲ್ ಪ್ರಾರಂಭವಾಗುವ ಮೊದಲೇ, ಕೊರೊನಾ ಯೋಧರ ಶ್ರಮ ಮತ್ತು ತ್ಯಾಗವನ್ನು ಗೌರವಿಸುವುದಾಗಿ ಘೋಷಿಸಿತ್ತು. ಹಾಗೇಯೇ ತರಬೇತಿ ಸಮಯದಲ್ಲಿ ಮತ್ತು ಪಂದ್ಯಗಳ ಸಮಯದಲ್ಲೂ ತಮ್ಮ ಜರ್ಸಿಯ ಹಿಂಭಾಗದಲ್ಲಿ ‘ಮೈ ಕೋವಿಡ್ ಹೀರೋಸ್’ ಎಂಬ ಸಾಲುಗಳು ಇರಲಿವೆ ಎಂದು ಆರ್‌ಸಿಬಿ ಹೇಳಿತ್ತು.

ಇದನ್ನೂ ಓದಿ: ಕ್ರಿಕೆಟ್‌ ದಕ್ಷಿಣ ಆಫ್ರಿಕಾವನ್ನು ಅಮಾನತು ಮಾಡಿದ ದಕ್ಷಿಣ ಆಫ್ರಿಕಾ ಸರ್ಕಾರ

ಆರ್‌ಸಿಬಿ ಅಭಿಯಾನದ ಭಾಗವಾಗಿ ಸ್ಪೋಟಕ ಬ್ಯಾಟ್ಸ್‌ಮನ್ ಎಬಿಡಿ ಕೊರೊನಾ ವಾರಿಯರ್‌ ಪಾರಿತೋಶ್ ಪಂತ್ ಜೊತೆ ಮಾತನಾಡಿ ಅವರ ಕೆಲಸವನ್ನು ಗೌರವಿಸಲು, ತಮ್ಮ ಜರ್ಸಿ ಮೇಲೆ ಪಾರಿತೋಶ್ ಎಂದು ಮತ್ತು ತಮ್ಮ ಟ್ವಿಟ್ಟರ್‌ ಖಾತೆ, ಇನ್ಸ್‌ಸ್ಟ್ರಾಗ್ರಾಮ್ ಖಾತೆಯ ಹೆಸರನ್ನು ಪಾರಿತೋಷ್ ಪಂತ್ ಎಂದು ಬದಲಿಸಿದ್ದಾರೆ.

PC:DNA India

29 ವರ್ಷದ ಪಾರಿತೋಶ್ ಪಂತ್ ಮುಂಬೈನಲ್ಲಿ ಬಾರ್ಬಿಕ್ಯೂ ಕೆಫೆ ನಡೆಸುತ್ತಾರೆ. ಲಾಕ್‌ಡೌನ್ ಸಮಯದಲ್ಲಿ ಫೀಡಿಂಗ್ ಫ್ರಮ್ ಫಾರ್ ಮೂಲಕ ಬಡವರಿಗೆ ಮತ್ತು ಕೊರೊನಾದಿಂದ ಕೆಲಸ ಕಳೆದುಕೊಂಡ ಸಾವಿರಾರು ನಿರುದ್ಯೋಗಿಗಳಿಗೆ ಆಹಾರ ಒದಗಿಸಿದ್ದರು. ಇವರಿಗೆ ಗೌರವ ಸಲ್ಲಿಸಲು ಎಬಿಡಿ ತಮ್ಮ ಜರ್ಸಿ ಮೇಲೆ ಪಾರಿತೋಶ್ ಎಂದು ಬದಲಿಸಿದ್ದಾರೆ. ಜೊತೆಗೆ ಜರ್ಸಿ ಧರಿಸಿದ ಪೋಟೋ ಮತ್ತು ಪಾರಿತೋಶ್‌ಗೆ ಗೌರವ ಸಲ್ಲಿಸುವ ಸಾಲುಗಳನ್ನು ಬರೆದು ಟ್ವೀಟ್ ಮಾಡಿದ್ದಾರೆ

PC:Telegraph India
(ಕೊರೊನಾ ವಾರಿಯರ್‌ ಪಾರಿತೋಶ್ ಪಂತ್)

ಇದನ್ನೂ ಓದಿ:  ಬ್ಯಾಟ್ಸ್‌ಮನ್ ಎಬಿಡಿ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ ಕೆಫೆ ಮಾಲೀಕ ಪಾರಿತೋಶ್ ಪಂತ್ ಧನ್ಯವಾದ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

’ಈ ತಿಂಗಳ ಆರಂಭದಲ್ಲಿ ನಾನು ಎಬಿಡಿ ಅವರ ಜೊತೆಗೆ ವಿಡಿಯೋ ಮುಖಾಂತರ ಮಾತನಾಡಿದೆ. ಅವರು ನಮ್ಮ ಕೆಲಸವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರು. ನಾವು ಮಾಡಿದ ಕೆಲಸವನ್ನು ವಿವರವಾಗಿ ಕೇಳಿದರು’ ಎಂದು ಪಾರಿತೋಶ್ ದಿ ಟೆಲಿಗ್ರಾಫ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

ನಮ್ಮ ಕೆಲಸದಲ್ಲಿ ಬಂದ ಸವಾಲುಗಳ ಬಗ್ಗೆ , ಅವುಗಳನ್ನು ನಾವು ಎದುರಿಸಿದ ಬಗ್ಗೆ ಕೇಳಿದರು. ನಾನು ಮತ್ತು ನಮ್ಮ ವಾಲೆಂಟಿಯರ್ಸ್ ಗೋವಂಡಿ ಕೊಳೆಗೆರಿಯಲ್ಲಿ ಕೆಲಸ ಮಾಡಿದ ರೀತಿಯನ್ನು ವಿವರಿಸಿದೆ. ಎಲ್ಲವನ್ನು ಕೇಳಿದ ಎಬಿಡಿ ನಿಮ್ಮ ಕಾರ್ಯ ಸ್ಪೂರ್ತಿದಾಯಕ ಮತ್ತು ಅದ್ಭುತ ಎಂದರು ಎಂದು ಪಾರಿತೋಶ್ ವಿವರಿಸಿದ್ದಾರೆ.

ಇನ್ನು ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ  ಶ್ರವಣದೋಷಿಯಾಗಿದ್ದರೂ ಜನರ ನೆರವಿಗಾಗಿ ನಿಂತ ಸಿಮ್ರನ್‌ಜೀತ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದ್ದಾರೆ. ಸಿಮ್ರನ್‌ಜೀತ್ ಎಂಬ ಜರ್ಸಿ ತೊಟ್ಟು ಪಂದ್ಯ ಆಡಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯ ಹೆಸರನ್ನು ಸಿಮ್ರನ್‌ಜೀತ್ ಸಿಂಗ್ ಎಂದು ಬದಲಿಸಿದ್ದರು.

PC:Hindustan

ಸಿಮ್ರನ್‌ಜೀತ್ ಸಿಂಗ್ ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದವರಿಗಾಗಿ ದೇಣಿಗೆ ಸಂಗ್ರಹಿಸಿದ್ದರು. ತಮ್ಮ ಇತರ ಶ್ರವಣದೋಷಿ ಸ್ನೇಹಿತರ ಜೊತೆಗೂಡಿ 98 ಸಾವಿರ ದೇಣಿಗೆ ಸಂಗ್ರಹಿಸಿ ಬಡವರಿಗೆ ನೆರವಾಗಿದ್ದರು ಎಂದು ಆರ್‌ಸಿಬಿ ಹೇಳಿದೆ.

ಆರ್‌ಸಿಬಿಯು ಈ ಬಾರಿಯ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ಎದುರು 10 ರನ್‌ಗಳಿಂದ ಜಯಿಸಿದೆ.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...