Homeಸಿನಿಮಾಕ್ರೀಡೆಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ಕೊರೊನಾ ವಾರಿಯರ್ಸ್ ಶ್ರಮ ಮತ್ತು ತ್ಯಾಗವನ್ನು ಗೌರವಿಸುವುದಾಗಿ ಆರ್‌ಸಿಬಿ ಘೋಷಿಸಿತ್ತು. ಹಾಗೇಯೇ ತಮ್ಮ ಜರ್ಸಿಯ ಹಿಂಭಾಗದಲ್ಲಿ ‘ಮೈ ಕೋವಿಡ್ ಹೀರೋಸ್’ ಎಂದು ಬರೆದ ಸಾಲುಗಳೊಂದಿಗೆ ಪಂದ್ಯಗಳಲ್ಲಿ ಕಣಕ್ಕೆ ಇಳಿಯುತ್ತಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ಜನರ ಸಹಾಯಕ್ಕೆ ನಿಂತ ಕೊರೊನಾ ವಾರಿಯರ್ಸ್‌ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ವಿಶೇಷ ಗೌರವ ಸಲ್ಲಿಸುತ್ತಿದೆ. ತಂಡದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮತ್ತು ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ತಮ್ಮ ತಮ್ಮ ಹೆಸರಿಗೆ ಬದಲಾಗಿ ಕೊರೊನಾ ವಾರಿಯರ್ಸ್ ಹೆಸರಿರುವ ಜೆರ್ಸಿಗಳನ್ನು ತೊಟ್ಟು ಕಣಕ್ಕಿಳಿದಿದ್ದಾರೆ.

ಆರ್‌ಸಿಬಿ ತಂಡ ಈ ಬಾರಿಯ ಐಪಿಎಲ್ ಪ್ರಾರಂಭವಾಗುವ ಮೊದಲೇ, ಕೊರೊನಾ ಯೋಧರ ಶ್ರಮ ಮತ್ತು ತ್ಯಾಗವನ್ನು ಗೌರವಿಸುವುದಾಗಿ ಘೋಷಿಸಿತ್ತು. ಹಾಗೇಯೇ ತರಬೇತಿ ಸಮಯದಲ್ಲಿ ಮತ್ತು ಪಂದ್ಯಗಳ ಸಮಯದಲ್ಲೂ ತಮ್ಮ ಜರ್ಸಿಯ ಹಿಂಭಾಗದಲ್ಲಿ ‘ಮೈ ಕೋವಿಡ್ ಹೀರೋಸ್’ ಎಂಬ ಸಾಲುಗಳು ಇರಲಿವೆ ಎಂದು ಆರ್‌ಸಿಬಿ ಹೇಳಿತ್ತು.

ಇದನ್ನೂ ಓದಿ: ಕ್ರಿಕೆಟ್‌ ದಕ್ಷಿಣ ಆಫ್ರಿಕಾವನ್ನು ಅಮಾನತು ಮಾಡಿದ ದಕ್ಷಿಣ ಆಫ್ರಿಕಾ ಸರ್ಕಾರ

ಆರ್‌ಸಿಬಿ ಅಭಿಯಾನದ ಭಾಗವಾಗಿ ಸ್ಪೋಟಕ ಬ್ಯಾಟ್ಸ್‌ಮನ್ ಎಬಿಡಿ ಕೊರೊನಾ ವಾರಿಯರ್‌ ಪಾರಿತೋಶ್ ಪಂತ್ ಜೊತೆ ಮಾತನಾಡಿ ಅವರ ಕೆಲಸವನ್ನು ಗೌರವಿಸಲು, ತಮ್ಮ ಜರ್ಸಿ ಮೇಲೆ ಪಾರಿತೋಶ್ ಎಂದು ಮತ್ತು ತಮ್ಮ ಟ್ವಿಟ್ಟರ್‌ ಖಾತೆ, ಇನ್ಸ್‌ಸ್ಟ್ರಾಗ್ರಾಮ್ ಖಾತೆಯ ಹೆಸರನ್ನು ಪಾರಿತೋಷ್ ಪಂತ್ ಎಂದು ಬದಲಿಸಿದ್ದಾರೆ.

PC:DNA India

29 ವರ್ಷದ ಪಾರಿತೋಶ್ ಪಂತ್ ಮುಂಬೈನಲ್ಲಿ ಬಾರ್ಬಿಕ್ಯೂ ಕೆಫೆ ನಡೆಸುತ್ತಾರೆ. ಲಾಕ್‌ಡೌನ್ ಸಮಯದಲ್ಲಿ ಫೀಡಿಂಗ್ ಫ್ರಮ್ ಫಾರ್ ಮೂಲಕ ಬಡವರಿಗೆ ಮತ್ತು ಕೊರೊನಾದಿಂದ ಕೆಲಸ ಕಳೆದುಕೊಂಡ ಸಾವಿರಾರು ನಿರುದ್ಯೋಗಿಗಳಿಗೆ ಆಹಾರ ಒದಗಿಸಿದ್ದರು. ಇವರಿಗೆ ಗೌರವ ಸಲ್ಲಿಸಲು ಎಬಿಡಿ ತಮ್ಮ ಜರ್ಸಿ ಮೇಲೆ ಪಾರಿತೋಶ್ ಎಂದು ಬದಲಿಸಿದ್ದಾರೆ. ಜೊತೆಗೆ ಜರ್ಸಿ ಧರಿಸಿದ ಪೋಟೋ ಮತ್ತು ಪಾರಿತೋಶ್‌ಗೆ ಗೌರವ ಸಲ್ಲಿಸುವ ಸಾಲುಗಳನ್ನು ಬರೆದು ಟ್ವೀಟ್ ಮಾಡಿದ್ದಾರೆ

PC:Telegraph India
(ಕೊರೊನಾ ವಾರಿಯರ್‌ ಪಾರಿತೋಶ್ ಪಂತ್)

ಇದನ್ನೂ ಓದಿ:  ಬ್ಯಾಟ್ಸ್‌ಮನ್ ಎಬಿಡಿ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ ಕೆಫೆ ಮಾಲೀಕ ಪಾರಿತೋಶ್ ಪಂತ್ ಧನ್ಯವಾದ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

’ಈ ತಿಂಗಳ ಆರಂಭದಲ್ಲಿ ನಾನು ಎಬಿಡಿ ಅವರ ಜೊತೆಗೆ ವಿಡಿಯೋ ಮುಖಾಂತರ ಮಾತನಾಡಿದೆ. ಅವರು ನಮ್ಮ ಕೆಲಸವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರು. ನಾವು ಮಾಡಿದ ಕೆಲಸವನ್ನು ವಿವರವಾಗಿ ಕೇಳಿದರು’ ಎಂದು ಪಾರಿತೋಶ್ ದಿ ಟೆಲಿಗ್ರಾಫ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

ನಮ್ಮ ಕೆಲಸದಲ್ಲಿ ಬಂದ ಸವಾಲುಗಳ ಬಗ್ಗೆ , ಅವುಗಳನ್ನು ನಾವು ಎದುರಿಸಿದ ಬಗ್ಗೆ ಕೇಳಿದರು. ನಾನು ಮತ್ತು ನಮ್ಮ ವಾಲೆಂಟಿಯರ್ಸ್ ಗೋವಂಡಿ ಕೊಳೆಗೆರಿಯಲ್ಲಿ ಕೆಲಸ ಮಾಡಿದ ರೀತಿಯನ್ನು ವಿವರಿಸಿದೆ. ಎಲ್ಲವನ್ನು ಕೇಳಿದ ಎಬಿಡಿ ನಿಮ್ಮ ಕಾರ್ಯ ಸ್ಪೂರ್ತಿದಾಯಕ ಮತ್ತು ಅದ್ಭುತ ಎಂದರು ಎಂದು ಪಾರಿತೋಶ್ ವಿವರಿಸಿದ್ದಾರೆ.

ಇನ್ನು ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ  ಶ್ರವಣದೋಷಿಯಾಗಿದ್ದರೂ ಜನರ ನೆರವಿಗಾಗಿ ನಿಂತ ಸಿಮ್ರನ್‌ಜೀತ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದ್ದಾರೆ. ಸಿಮ್ರನ್‌ಜೀತ್ ಎಂಬ ಜರ್ಸಿ ತೊಟ್ಟು ಪಂದ್ಯ ಆಡಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯ ಹೆಸರನ್ನು ಸಿಮ್ರನ್‌ಜೀತ್ ಸಿಂಗ್ ಎಂದು ಬದಲಿಸಿದ್ದರು.

PC:Hindustan

ಸಿಮ್ರನ್‌ಜೀತ್ ಸಿಂಗ್ ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದವರಿಗಾಗಿ ದೇಣಿಗೆ ಸಂಗ್ರಹಿಸಿದ್ದರು. ತಮ್ಮ ಇತರ ಶ್ರವಣದೋಷಿ ಸ್ನೇಹಿತರ ಜೊತೆಗೂಡಿ 98 ಸಾವಿರ ದೇಣಿಗೆ ಸಂಗ್ರಹಿಸಿ ಬಡವರಿಗೆ ನೆರವಾಗಿದ್ದರು ಎಂದು ಆರ್‌ಸಿಬಿ ಹೇಳಿದೆ.

ಆರ್‌ಸಿಬಿಯು ಈ ಬಾರಿಯ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ಎದುರು 10 ರನ್‌ಗಳಿಂದ ಜಯಿಸಿದೆ.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...