Homeಸಿನಿಮಾಕ್ರೀಡೆಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ಕೊರೊನಾ ವಾರಿಯರ್ಸ್ ಶ್ರಮ ಮತ್ತು ತ್ಯಾಗವನ್ನು ಗೌರವಿಸುವುದಾಗಿ ಆರ್‌ಸಿಬಿ ಘೋಷಿಸಿತ್ತು. ಹಾಗೇಯೇ ತಮ್ಮ ಜರ್ಸಿಯ ಹಿಂಭಾಗದಲ್ಲಿ ‘ಮೈ ಕೋವಿಡ್ ಹೀರೋಸ್’ ಎಂದು ಬರೆದ ಸಾಲುಗಳೊಂದಿಗೆ ಪಂದ್ಯಗಳಲ್ಲಿ ಕಣಕ್ಕೆ ಇಳಿಯುತ್ತಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ಜನರ ಸಹಾಯಕ್ಕೆ ನಿಂತ ಕೊರೊನಾ ವಾರಿಯರ್ಸ್‌ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ವಿಶೇಷ ಗೌರವ ಸಲ್ಲಿಸುತ್ತಿದೆ. ತಂಡದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮತ್ತು ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ತಮ್ಮ ತಮ್ಮ ಹೆಸರಿಗೆ ಬದಲಾಗಿ ಕೊರೊನಾ ವಾರಿಯರ್ಸ್ ಹೆಸರಿರುವ ಜೆರ್ಸಿಗಳನ್ನು ತೊಟ್ಟು ಕಣಕ್ಕಿಳಿದಿದ್ದಾರೆ.

ಆರ್‌ಸಿಬಿ ತಂಡ ಈ ಬಾರಿಯ ಐಪಿಎಲ್ ಪ್ರಾರಂಭವಾಗುವ ಮೊದಲೇ, ಕೊರೊನಾ ಯೋಧರ ಶ್ರಮ ಮತ್ತು ತ್ಯಾಗವನ್ನು ಗೌರವಿಸುವುದಾಗಿ ಘೋಷಿಸಿತ್ತು. ಹಾಗೇಯೇ ತರಬೇತಿ ಸಮಯದಲ್ಲಿ ಮತ್ತು ಪಂದ್ಯಗಳ ಸಮಯದಲ್ಲೂ ತಮ್ಮ ಜರ್ಸಿಯ ಹಿಂಭಾಗದಲ್ಲಿ ‘ಮೈ ಕೋವಿಡ್ ಹೀರೋಸ್’ ಎಂಬ ಸಾಲುಗಳು ಇರಲಿವೆ ಎಂದು ಆರ್‌ಸಿಬಿ ಹೇಳಿತ್ತು.

ಇದನ್ನೂ ಓದಿ: ಕ್ರಿಕೆಟ್‌ ದಕ್ಷಿಣ ಆಫ್ರಿಕಾವನ್ನು ಅಮಾನತು ಮಾಡಿದ ದಕ್ಷಿಣ ಆಫ್ರಿಕಾ ಸರ್ಕಾರ

ಆರ್‌ಸಿಬಿ ಅಭಿಯಾನದ ಭಾಗವಾಗಿ ಸ್ಪೋಟಕ ಬ್ಯಾಟ್ಸ್‌ಮನ್ ಎಬಿಡಿ ಕೊರೊನಾ ವಾರಿಯರ್‌ ಪಾರಿತೋಶ್ ಪಂತ್ ಜೊತೆ ಮಾತನಾಡಿ ಅವರ ಕೆಲಸವನ್ನು ಗೌರವಿಸಲು, ತಮ್ಮ ಜರ್ಸಿ ಮೇಲೆ ಪಾರಿತೋಶ್ ಎಂದು ಮತ್ತು ತಮ್ಮ ಟ್ವಿಟ್ಟರ್‌ ಖಾತೆ, ಇನ್ಸ್‌ಸ್ಟ್ರಾಗ್ರಾಮ್ ಖಾತೆಯ ಹೆಸರನ್ನು ಪಾರಿತೋಷ್ ಪಂತ್ ಎಂದು ಬದಲಿಸಿದ್ದಾರೆ.

PC:DNA India

29 ವರ್ಷದ ಪಾರಿತೋಶ್ ಪಂತ್ ಮುಂಬೈನಲ್ಲಿ ಬಾರ್ಬಿಕ್ಯೂ ಕೆಫೆ ನಡೆಸುತ್ತಾರೆ. ಲಾಕ್‌ಡೌನ್ ಸಮಯದಲ್ಲಿ ಫೀಡಿಂಗ್ ಫ್ರಮ್ ಫಾರ್ ಮೂಲಕ ಬಡವರಿಗೆ ಮತ್ತು ಕೊರೊನಾದಿಂದ ಕೆಲಸ ಕಳೆದುಕೊಂಡ ಸಾವಿರಾರು ನಿರುದ್ಯೋಗಿಗಳಿಗೆ ಆಹಾರ ಒದಗಿಸಿದ್ದರು. ಇವರಿಗೆ ಗೌರವ ಸಲ್ಲಿಸಲು ಎಬಿಡಿ ತಮ್ಮ ಜರ್ಸಿ ಮೇಲೆ ಪಾರಿತೋಶ್ ಎಂದು ಬದಲಿಸಿದ್ದಾರೆ. ಜೊತೆಗೆ ಜರ್ಸಿ ಧರಿಸಿದ ಪೋಟೋ ಮತ್ತು ಪಾರಿತೋಶ್‌ಗೆ ಗೌರವ ಸಲ್ಲಿಸುವ ಸಾಲುಗಳನ್ನು ಬರೆದು ಟ್ವೀಟ್ ಮಾಡಿದ್ದಾರೆ

PC:Telegraph India
(ಕೊರೊನಾ ವಾರಿಯರ್‌ ಪಾರಿತೋಶ್ ಪಂತ್)

ಇದನ್ನೂ ಓದಿ:  ಬ್ಯಾಟ್ಸ್‌ಮನ್ ಎಬಿಡಿ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ ಕೆಫೆ ಮಾಲೀಕ ಪಾರಿತೋಶ್ ಪಂತ್ ಧನ್ಯವಾದ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

’ಈ ತಿಂಗಳ ಆರಂಭದಲ್ಲಿ ನಾನು ಎಬಿಡಿ ಅವರ ಜೊತೆಗೆ ವಿಡಿಯೋ ಮುಖಾಂತರ ಮಾತನಾಡಿದೆ. ಅವರು ನಮ್ಮ ಕೆಲಸವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರು. ನಾವು ಮಾಡಿದ ಕೆಲಸವನ್ನು ವಿವರವಾಗಿ ಕೇಳಿದರು’ ಎಂದು ಪಾರಿತೋಶ್ ದಿ ಟೆಲಿಗ್ರಾಫ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

ನಮ್ಮ ಕೆಲಸದಲ್ಲಿ ಬಂದ ಸವಾಲುಗಳ ಬಗ್ಗೆ , ಅವುಗಳನ್ನು ನಾವು ಎದುರಿಸಿದ ಬಗ್ಗೆ ಕೇಳಿದರು. ನಾನು ಮತ್ತು ನಮ್ಮ ವಾಲೆಂಟಿಯರ್ಸ್ ಗೋವಂಡಿ ಕೊಳೆಗೆರಿಯಲ್ಲಿ ಕೆಲಸ ಮಾಡಿದ ರೀತಿಯನ್ನು ವಿವರಿಸಿದೆ. ಎಲ್ಲವನ್ನು ಕೇಳಿದ ಎಬಿಡಿ ನಿಮ್ಮ ಕಾರ್ಯ ಸ್ಪೂರ್ತಿದಾಯಕ ಮತ್ತು ಅದ್ಭುತ ಎಂದರು ಎಂದು ಪಾರಿತೋಶ್ ವಿವರಿಸಿದ್ದಾರೆ.

ಇನ್ನು ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ  ಶ್ರವಣದೋಷಿಯಾಗಿದ್ದರೂ ಜನರ ನೆರವಿಗಾಗಿ ನಿಂತ ಸಿಮ್ರನ್‌ಜೀತ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದ್ದಾರೆ. ಸಿಮ್ರನ್‌ಜೀತ್ ಎಂಬ ಜರ್ಸಿ ತೊಟ್ಟು ಪಂದ್ಯ ಆಡಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯ ಹೆಸರನ್ನು ಸಿಮ್ರನ್‌ಜೀತ್ ಸಿಂಗ್ ಎಂದು ಬದಲಿಸಿದ್ದರು.

PC:Hindustan

ಸಿಮ್ರನ್‌ಜೀತ್ ಸಿಂಗ್ ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದವರಿಗಾಗಿ ದೇಣಿಗೆ ಸಂಗ್ರಹಿಸಿದ್ದರು. ತಮ್ಮ ಇತರ ಶ್ರವಣದೋಷಿ ಸ್ನೇಹಿತರ ಜೊತೆಗೂಡಿ 98 ಸಾವಿರ ದೇಣಿಗೆ ಸಂಗ್ರಹಿಸಿ ಬಡವರಿಗೆ ನೆರವಾಗಿದ್ದರು ಎಂದು ಆರ್‌ಸಿಬಿ ಹೇಳಿದೆ.

ಆರ್‌ಸಿಬಿಯು ಈ ಬಾರಿಯ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ಎದುರು 10 ರನ್‌ಗಳಿಂದ ಜಯಿಸಿದೆ.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...