Homeಸಿನಿಮಾಕ್ರೀಡೆಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ಕೊರೊನಾ ವಾರಿಯರ್ಸ್ ಶ್ರಮ ಮತ್ತು ತ್ಯಾಗವನ್ನು ಗೌರವಿಸುವುದಾಗಿ ಆರ್‌ಸಿಬಿ ಘೋಷಿಸಿತ್ತು. ಹಾಗೇಯೇ ತಮ್ಮ ಜರ್ಸಿಯ ಹಿಂಭಾಗದಲ್ಲಿ ‘ಮೈ ಕೋವಿಡ್ ಹೀರೋಸ್’ ಎಂದು ಬರೆದ ಸಾಲುಗಳೊಂದಿಗೆ ಪಂದ್ಯಗಳಲ್ಲಿ ಕಣಕ್ಕೆ ಇಳಿಯುತ್ತಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ಜನರ ಸಹಾಯಕ್ಕೆ ನಿಂತ ಕೊರೊನಾ ವಾರಿಯರ್ಸ್‌ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ವಿಶೇಷ ಗೌರವ ಸಲ್ಲಿಸುತ್ತಿದೆ. ತಂಡದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮತ್ತು ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ತಮ್ಮ ತಮ್ಮ ಹೆಸರಿಗೆ ಬದಲಾಗಿ ಕೊರೊನಾ ವಾರಿಯರ್ಸ್ ಹೆಸರಿರುವ ಜೆರ್ಸಿಗಳನ್ನು ತೊಟ್ಟು ಕಣಕ್ಕಿಳಿದಿದ್ದಾರೆ.

ಆರ್‌ಸಿಬಿ ತಂಡ ಈ ಬಾರಿಯ ಐಪಿಎಲ್ ಪ್ರಾರಂಭವಾಗುವ ಮೊದಲೇ, ಕೊರೊನಾ ಯೋಧರ ಶ್ರಮ ಮತ್ತು ತ್ಯಾಗವನ್ನು ಗೌರವಿಸುವುದಾಗಿ ಘೋಷಿಸಿತ್ತು. ಹಾಗೇಯೇ ತರಬೇತಿ ಸಮಯದಲ್ಲಿ ಮತ್ತು ಪಂದ್ಯಗಳ ಸಮಯದಲ್ಲೂ ತಮ್ಮ ಜರ್ಸಿಯ ಹಿಂಭಾಗದಲ್ಲಿ ‘ಮೈ ಕೋವಿಡ್ ಹೀರೋಸ್’ ಎಂಬ ಸಾಲುಗಳು ಇರಲಿವೆ ಎಂದು ಆರ್‌ಸಿಬಿ ಹೇಳಿತ್ತು.

ಇದನ್ನೂ ಓದಿ: ಕ್ರಿಕೆಟ್‌ ದಕ್ಷಿಣ ಆಫ್ರಿಕಾವನ್ನು ಅಮಾನತು ಮಾಡಿದ ದಕ್ಷಿಣ ಆಫ್ರಿಕಾ ಸರ್ಕಾರ

ಆರ್‌ಸಿಬಿ ಅಭಿಯಾನದ ಭಾಗವಾಗಿ ಸ್ಪೋಟಕ ಬ್ಯಾಟ್ಸ್‌ಮನ್ ಎಬಿಡಿ ಕೊರೊನಾ ವಾರಿಯರ್‌ ಪಾರಿತೋಶ್ ಪಂತ್ ಜೊತೆ ಮಾತನಾಡಿ ಅವರ ಕೆಲಸವನ್ನು ಗೌರವಿಸಲು, ತಮ್ಮ ಜರ್ಸಿ ಮೇಲೆ ಪಾರಿತೋಶ್ ಎಂದು ಮತ್ತು ತಮ್ಮ ಟ್ವಿಟ್ಟರ್‌ ಖಾತೆ, ಇನ್ಸ್‌ಸ್ಟ್ರಾಗ್ರಾಮ್ ಖಾತೆಯ ಹೆಸರನ್ನು ಪಾರಿತೋಷ್ ಪಂತ್ ಎಂದು ಬದಲಿಸಿದ್ದಾರೆ.

PC:DNA India

29 ವರ್ಷದ ಪಾರಿತೋಶ್ ಪಂತ್ ಮುಂಬೈನಲ್ಲಿ ಬಾರ್ಬಿಕ್ಯೂ ಕೆಫೆ ನಡೆಸುತ್ತಾರೆ. ಲಾಕ್‌ಡೌನ್ ಸಮಯದಲ್ಲಿ ಫೀಡಿಂಗ್ ಫ್ರಮ್ ಫಾರ್ ಮೂಲಕ ಬಡವರಿಗೆ ಮತ್ತು ಕೊರೊನಾದಿಂದ ಕೆಲಸ ಕಳೆದುಕೊಂಡ ಸಾವಿರಾರು ನಿರುದ್ಯೋಗಿಗಳಿಗೆ ಆಹಾರ ಒದಗಿಸಿದ್ದರು. ಇವರಿಗೆ ಗೌರವ ಸಲ್ಲಿಸಲು ಎಬಿಡಿ ತಮ್ಮ ಜರ್ಸಿ ಮೇಲೆ ಪಾರಿತೋಶ್ ಎಂದು ಬದಲಿಸಿದ್ದಾರೆ. ಜೊತೆಗೆ ಜರ್ಸಿ ಧರಿಸಿದ ಪೋಟೋ ಮತ್ತು ಪಾರಿತೋಶ್‌ಗೆ ಗೌರವ ಸಲ್ಲಿಸುವ ಸಾಲುಗಳನ್ನು ಬರೆದು ಟ್ವೀಟ್ ಮಾಡಿದ್ದಾರೆ

PC:Telegraph India
(ಕೊರೊನಾ ವಾರಿಯರ್‌ ಪಾರಿತೋಶ್ ಪಂತ್)

ಇದನ್ನೂ ಓದಿ:  ಬ್ಯಾಟ್ಸ್‌ಮನ್ ಎಬಿಡಿ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ ಕೆಫೆ ಮಾಲೀಕ ಪಾರಿತೋಶ್ ಪಂತ್ ಧನ್ಯವಾದ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

’ಈ ತಿಂಗಳ ಆರಂಭದಲ್ಲಿ ನಾನು ಎಬಿಡಿ ಅವರ ಜೊತೆಗೆ ವಿಡಿಯೋ ಮುಖಾಂತರ ಮಾತನಾಡಿದೆ. ಅವರು ನಮ್ಮ ಕೆಲಸವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರು. ನಾವು ಮಾಡಿದ ಕೆಲಸವನ್ನು ವಿವರವಾಗಿ ಕೇಳಿದರು’ ಎಂದು ಪಾರಿತೋಶ್ ದಿ ಟೆಲಿಗ್ರಾಫ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

ನಮ್ಮ ಕೆಲಸದಲ್ಲಿ ಬಂದ ಸವಾಲುಗಳ ಬಗ್ಗೆ , ಅವುಗಳನ್ನು ನಾವು ಎದುರಿಸಿದ ಬಗ್ಗೆ ಕೇಳಿದರು. ನಾನು ಮತ್ತು ನಮ್ಮ ವಾಲೆಂಟಿಯರ್ಸ್ ಗೋವಂಡಿ ಕೊಳೆಗೆರಿಯಲ್ಲಿ ಕೆಲಸ ಮಾಡಿದ ರೀತಿಯನ್ನು ವಿವರಿಸಿದೆ. ಎಲ್ಲವನ್ನು ಕೇಳಿದ ಎಬಿಡಿ ನಿಮ್ಮ ಕಾರ್ಯ ಸ್ಪೂರ್ತಿದಾಯಕ ಮತ್ತು ಅದ್ಭುತ ಎಂದರು ಎಂದು ಪಾರಿತೋಶ್ ವಿವರಿಸಿದ್ದಾರೆ.

ಇನ್ನು ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ  ಶ್ರವಣದೋಷಿಯಾಗಿದ್ದರೂ ಜನರ ನೆರವಿಗಾಗಿ ನಿಂತ ಸಿಮ್ರನ್‌ಜೀತ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದ್ದಾರೆ. ಸಿಮ್ರನ್‌ಜೀತ್ ಎಂಬ ಜರ್ಸಿ ತೊಟ್ಟು ಪಂದ್ಯ ಆಡಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯ ಹೆಸರನ್ನು ಸಿಮ್ರನ್‌ಜೀತ್ ಸಿಂಗ್ ಎಂದು ಬದಲಿಸಿದ್ದರು.

PC:Hindustan

ಸಿಮ್ರನ್‌ಜೀತ್ ಸಿಂಗ್ ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದವರಿಗಾಗಿ ದೇಣಿಗೆ ಸಂಗ್ರಹಿಸಿದ್ದರು. ತಮ್ಮ ಇತರ ಶ್ರವಣದೋಷಿ ಸ್ನೇಹಿತರ ಜೊತೆಗೂಡಿ 98 ಸಾವಿರ ದೇಣಿಗೆ ಸಂಗ್ರಹಿಸಿ ಬಡವರಿಗೆ ನೆರವಾಗಿದ್ದರು ಎಂದು ಆರ್‌ಸಿಬಿ ಹೇಳಿದೆ.

ಆರ್‌ಸಿಬಿಯು ಈ ಬಾರಿಯ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ಎದುರು 10 ರನ್‌ಗಳಿಂದ ಜಯಿಸಿದೆ.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...