Homeಸಿನಿಮಾಕ್ರೀಡೆಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ಕೊರೊನಾ ವಾರಿಯರ್ಸ್ ಶ್ರಮ ಮತ್ತು ತ್ಯಾಗವನ್ನು ಗೌರವಿಸುವುದಾಗಿ ಆರ್‌ಸಿಬಿ ಘೋಷಿಸಿತ್ತು. ಹಾಗೇಯೇ ತಮ್ಮ ಜರ್ಸಿಯ ಹಿಂಭಾಗದಲ್ಲಿ ‘ಮೈ ಕೋವಿಡ್ ಹೀರೋಸ್’ ಎಂದು ಬರೆದ ಸಾಲುಗಳೊಂದಿಗೆ ಪಂದ್ಯಗಳಲ್ಲಿ ಕಣಕ್ಕೆ ಇಳಿಯುತ್ತಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ಜನರ ಸಹಾಯಕ್ಕೆ ನಿಂತ ಕೊರೊನಾ ವಾರಿಯರ್ಸ್‌ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ವಿಶೇಷ ಗೌರವ ಸಲ್ಲಿಸುತ್ತಿದೆ. ತಂಡದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮತ್ತು ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ತಮ್ಮ ತಮ್ಮ ಹೆಸರಿಗೆ ಬದಲಾಗಿ ಕೊರೊನಾ ವಾರಿಯರ್ಸ್ ಹೆಸರಿರುವ ಜೆರ್ಸಿಗಳನ್ನು ತೊಟ್ಟು ಕಣಕ್ಕಿಳಿದಿದ್ದಾರೆ.

ಆರ್‌ಸಿಬಿ ತಂಡ ಈ ಬಾರಿಯ ಐಪಿಎಲ್ ಪ್ರಾರಂಭವಾಗುವ ಮೊದಲೇ, ಕೊರೊನಾ ಯೋಧರ ಶ್ರಮ ಮತ್ತು ತ್ಯಾಗವನ್ನು ಗೌರವಿಸುವುದಾಗಿ ಘೋಷಿಸಿತ್ತು. ಹಾಗೇಯೇ ತರಬೇತಿ ಸಮಯದಲ್ಲಿ ಮತ್ತು ಪಂದ್ಯಗಳ ಸಮಯದಲ್ಲೂ ತಮ್ಮ ಜರ್ಸಿಯ ಹಿಂಭಾಗದಲ್ಲಿ ‘ಮೈ ಕೋವಿಡ್ ಹೀರೋಸ್’ ಎಂಬ ಸಾಲುಗಳು ಇರಲಿವೆ ಎಂದು ಆರ್‌ಸಿಬಿ ಹೇಳಿತ್ತು.

ಇದನ್ನೂ ಓದಿ: ಕ್ರಿಕೆಟ್‌ ದಕ್ಷಿಣ ಆಫ್ರಿಕಾವನ್ನು ಅಮಾನತು ಮಾಡಿದ ದಕ್ಷಿಣ ಆಫ್ರಿಕಾ ಸರ್ಕಾರ

ಆರ್‌ಸಿಬಿ ಅಭಿಯಾನದ ಭಾಗವಾಗಿ ಸ್ಪೋಟಕ ಬ್ಯಾಟ್ಸ್‌ಮನ್ ಎಬಿಡಿ ಕೊರೊನಾ ವಾರಿಯರ್‌ ಪಾರಿತೋಶ್ ಪಂತ್ ಜೊತೆ ಮಾತನಾಡಿ ಅವರ ಕೆಲಸವನ್ನು ಗೌರವಿಸಲು, ತಮ್ಮ ಜರ್ಸಿ ಮೇಲೆ ಪಾರಿತೋಶ್ ಎಂದು ಮತ್ತು ತಮ್ಮ ಟ್ವಿಟ್ಟರ್‌ ಖಾತೆ, ಇನ್ಸ್‌ಸ್ಟ್ರಾಗ್ರಾಮ್ ಖಾತೆಯ ಹೆಸರನ್ನು ಪಾರಿತೋಷ್ ಪಂತ್ ಎಂದು ಬದಲಿಸಿದ್ದಾರೆ.

PC:DNA India

29 ವರ್ಷದ ಪಾರಿತೋಶ್ ಪಂತ್ ಮುಂಬೈನಲ್ಲಿ ಬಾರ್ಬಿಕ್ಯೂ ಕೆಫೆ ನಡೆಸುತ್ತಾರೆ. ಲಾಕ್‌ಡೌನ್ ಸಮಯದಲ್ಲಿ ಫೀಡಿಂಗ್ ಫ್ರಮ್ ಫಾರ್ ಮೂಲಕ ಬಡವರಿಗೆ ಮತ್ತು ಕೊರೊನಾದಿಂದ ಕೆಲಸ ಕಳೆದುಕೊಂಡ ಸಾವಿರಾರು ನಿರುದ್ಯೋಗಿಗಳಿಗೆ ಆಹಾರ ಒದಗಿಸಿದ್ದರು. ಇವರಿಗೆ ಗೌರವ ಸಲ್ಲಿಸಲು ಎಬಿಡಿ ತಮ್ಮ ಜರ್ಸಿ ಮೇಲೆ ಪಾರಿತೋಶ್ ಎಂದು ಬದಲಿಸಿದ್ದಾರೆ. ಜೊತೆಗೆ ಜರ್ಸಿ ಧರಿಸಿದ ಪೋಟೋ ಮತ್ತು ಪಾರಿತೋಶ್‌ಗೆ ಗೌರವ ಸಲ್ಲಿಸುವ ಸಾಲುಗಳನ್ನು ಬರೆದು ಟ್ವೀಟ್ ಮಾಡಿದ್ದಾರೆ

PC:Telegraph India
(ಕೊರೊನಾ ವಾರಿಯರ್‌ ಪಾರಿತೋಶ್ ಪಂತ್)

ಇದನ್ನೂ ಓದಿ:  ಬ್ಯಾಟ್ಸ್‌ಮನ್ ಎಬಿಡಿ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ ಕೆಫೆ ಮಾಲೀಕ ಪಾರಿತೋಶ್ ಪಂತ್ ಧನ್ಯವಾದ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

’ಈ ತಿಂಗಳ ಆರಂಭದಲ್ಲಿ ನಾನು ಎಬಿಡಿ ಅವರ ಜೊತೆಗೆ ವಿಡಿಯೋ ಮುಖಾಂತರ ಮಾತನಾಡಿದೆ. ಅವರು ನಮ್ಮ ಕೆಲಸವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರು. ನಾವು ಮಾಡಿದ ಕೆಲಸವನ್ನು ವಿವರವಾಗಿ ಕೇಳಿದರು’ ಎಂದು ಪಾರಿತೋಶ್ ದಿ ಟೆಲಿಗ್ರಾಫ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

ನಮ್ಮ ಕೆಲಸದಲ್ಲಿ ಬಂದ ಸವಾಲುಗಳ ಬಗ್ಗೆ , ಅವುಗಳನ್ನು ನಾವು ಎದುರಿಸಿದ ಬಗ್ಗೆ ಕೇಳಿದರು. ನಾನು ಮತ್ತು ನಮ್ಮ ವಾಲೆಂಟಿಯರ್ಸ್ ಗೋವಂಡಿ ಕೊಳೆಗೆರಿಯಲ್ಲಿ ಕೆಲಸ ಮಾಡಿದ ರೀತಿಯನ್ನು ವಿವರಿಸಿದೆ. ಎಲ್ಲವನ್ನು ಕೇಳಿದ ಎಬಿಡಿ ನಿಮ್ಮ ಕಾರ್ಯ ಸ್ಪೂರ್ತಿದಾಯಕ ಮತ್ತು ಅದ್ಭುತ ಎಂದರು ಎಂದು ಪಾರಿತೋಶ್ ವಿವರಿಸಿದ್ದಾರೆ.

ಇನ್ನು ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ  ಶ್ರವಣದೋಷಿಯಾಗಿದ್ದರೂ ಜನರ ನೆರವಿಗಾಗಿ ನಿಂತ ಸಿಮ್ರನ್‌ಜೀತ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದ್ದಾರೆ. ಸಿಮ್ರನ್‌ಜೀತ್ ಎಂಬ ಜರ್ಸಿ ತೊಟ್ಟು ಪಂದ್ಯ ಆಡಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯ ಹೆಸರನ್ನು ಸಿಮ್ರನ್‌ಜೀತ್ ಸಿಂಗ್ ಎಂದು ಬದಲಿಸಿದ್ದರು.

PC:Hindustan

ಸಿಮ್ರನ್‌ಜೀತ್ ಸಿಂಗ್ ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದವರಿಗಾಗಿ ದೇಣಿಗೆ ಸಂಗ್ರಹಿಸಿದ್ದರು. ತಮ್ಮ ಇತರ ಶ್ರವಣದೋಷಿ ಸ್ನೇಹಿತರ ಜೊತೆಗೂಡಿ 98 ಸಾವಿರ ದೇಣಿಗೆ ಸಂಗ್ರಹಿಸಿ ಬಡವರಿಗೆ ನೆರವಾಗಿದ್ದರು ಎಂದು ಆರ್‌ಸಿಬಿ ಹೇಳಿದೆ.

ಆರ್‌ಸಿಬಿಯು ಈ ಬಾರಿಯ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ಎದುರು 10 ರನ್‌ಗಳಿಂದ ಜಯಿಸಿದೆ.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...