Homeಅಂಕಣಗಳುಕೊರೊನಾ ಅಲೆ ಬಿಜೆಪಿ ಒಂದೇ ತರ ಕಾಣುತ್ತಿವೆಯಲ್ಲಾ

ಕೊರೊನಾ ಅಲೆ ಬಿಜೆಪಿ ಒಂದೇ ತರ ಕಾಣುತ್ತಿವೆಯಲ್ಲಾ

- Advertisement -
- Advertisement -

ಮತ್ತೆ ಕೊರೊನಾ ಬೆದರುಬೊಂಬೆಯನ್ನು ತೋರಹೊರಟಿರುವ ಬಿಜೆಪಿ ನಡವಳಿಕೆಯನ್ನ ನೋಡಿದ ಕರ್ನಾಟಕದ ಜನ ಕೊರೊನಾಕ್ಕೂ ಬಿಜೆಪಿಗೂ ಶಾನೆ ಹೋಲಿಕೆ ಇದೆ ಎನ್ನತೊಡಗಿದ್ದಾರಲ್ಲಾ. ಕೊರೊನಾ ಅಲೆಗಳಂತೆಯೇ ಬಿಜೆಪಿ ಪಾರ್ಟಿಯ ಕಾರ್ಯಕ್ರಮಗಳು ಅಲೆಅಲೆಯಾಗಿ ಬಂದು ಮುಸ್ಲಿಮರ ಮೇಲೆ ಅಪ್ಪಳಿಸಿದವು. ಅದರ ಪರಿಣಾಮ ಮುಸ್ಲಿಮರು ಮತ್ತು ಹಿಂದೂಗಳೂ ತತ್ತರಿಸಿಹೋದರು. ಮುಸ್ಲಿಮರನ್ನು ಗುರಿಯಾಗಿಸಿ ಬಿಟ್ಟ ಬಾಣಗಳು ಹಿಂದೂಗಳಿಗೂ ತಾಗಿ, ರಂಜಾನ್ ಟೈಮಿನಲ್ಲಿ ಮುಸ್ಲಿಮರು ಕೂಡ ಹಿಂದೂ ಬಡವರಿಗೆ ಸಹಾಯ ಮಾಡುತ್ತ ಇಫ್ತಾರ್ ಕೂಟಗಳಿಗೆ ಹಿಂದೂಗಳನ್ನು ಕರೆಯುತ್ತ ಸಾಮರಸ್ಯಕ್ಕೆ ಕರೆಕೊಟ್ಟಿದ್ದನ್ನ ನೋಡಿದ ಬಿಜೆಪಿಗಳು ಬೇರೆ ತಂತ್ರ ಆಲೋಚಿಸುತ್ತಿರುವಾಗ ಕೊರೊನಾವೂ ಕೂಡ ಛದ್ಮವೇಶದಲ್ಲಿ ರೆಡಿಯಾಗುತ್ತಿದೆಯಂತಲ್ಲಾ. ಸಾಂಕ್ರಾಮಿಕ ಕಾಯಿಲೆಯೊಂದು ರಾಜಕೀಯ ಪಾರ್ಟಿಯ ಜೊತೆ ಕೈಜೋಡಿಸಿ ಕೆಲಸ ಮಾಡಿದ್ದು ಚರಿತ್ರೆಯಲ್ಲೇ ಇಲ್ಲವಂತಲ್ಲಾ. ಆದರೆ ಕರ್ನಾಟಕದ ಮಟ್ಟಿಗೆ ಆಡಳಿತವನ್ನೆ ನಡೆಸದೆ ದಿಕ್ಕು ದೆಸೆಯಿಲ್ಲದೆ ಮುನ್ನಡೆಯುತ್ತಿರುವ ಪಾರ್ಟಿಯ ಆಸರೆಗೆ ಕೊರೊನಾ ಬಂದಿರುವುದು ಅಚ್ಚರಿಯ ಸಂಗತಿಯಾಗಿದೆಯಲ್ಲಾ, ಥೂತ್ತೇರಿ.

******

ಮುಸ್ಲಿಂ ಧರ್ಮದ ಮೇಲೆ ಎಲ್ಲಾ ಬಗೆಯ ಹಗೆಯ ಪ್ರಯೋಗ ನಡೆದ ಮೇಲೆ ಈಗ ಮಸೀದಿಗಳಲ್ಲಿನ ಧ್ವನಿವರ್ಧಕದ ಮೇಲೆ ಮುತಾಲಿಕ್ ಬಿದ್ದಿದ್ದಾರಲ್ಲಾ. ಮುತಾಲಿಕ್ ಮತಿಗೆಟ್ಟು ಮಾತನಾಡುತ್ತಿದ್ದಾರೆಂದು ಪರಿಗಣಿಸುವಂತಿಲ್ಲ. ಆತನ ಒತ್ತಾಯದ ಹಿಂದೆ ಬಿಜೆಪಿ ದನಿ ಅಡಗಿದೆ. ಹಾಗೆ ನೋಡಿದರೆ ಈ ಹಿಂದೆ ಅನಂತಕುಮಾರ ಹೆಗಡೆ ಎಂಬಾತ ಪುರೋಹಿತಶಾಹಿ ಪಿತ್ತ ನೆತ್ತಿಗೇರಿಸಿಕೊಂಡು ನಾವು ಅಂಬೇಡ್ಕರ್ ಸಂವಿಧಾನವನ್ನು ಬದಲಿಸುತ್ತೇವೆ, ಅದಕ್ಕಾಗಿಯೇ ಬಂದಿರುವುದು ಎಂದಾಗ ಇಡೀ ದೇಶದ ಯಾವ ಬಿಜೆಪಿಗನೂ ಇದನ್ನ ಖಂಡಿಸಲಿಲ್ಲ. ಅಂತೆಯೇ ಕೆಂಪುಕೋಟೆಯ ಮೇಲೆ ಭಗವಾಧ್ವಜವನ್ನ ಮುಂದೆ ಹಾರಿಸುತ್ತೇವೆ ಎಂದು ಈಶ್ವರಪ್ಪ ಹೇಳಿದಾಗ ಯಾವ ಬಿಜೆಪಿ ’ದೇಶಪ್ರೇಮಿ’ಯೂ ಪ್ರತಿಹೇಳಲಿಲ್ಲ. ಅಲ್ಲಿ ಈಶ್ವರಪ್ಪನ ಮಾತು ಬಿಜೆಪಿಯ ಮಾತಾಗಿ ಉಳಿಯಿತು. ಹಾಗೆಯೇ ಮುತಾಲಿಕ್ ಮಾತೂ ಕೂಡ ಬಿಜೆಪಿಯ ಅಧಿಕೃತ ಘೋಷಣೆಯಿರಬಹುದೆಂದು ಚಿಂತಿಸುತ್ತಿರುವಾಗ, ರಂಜಾನ್ ಸಮಯದಲ್ಲಿಯೇ ಈಶ್ವರಪ್ಪನವರ ದುನಿಯ ಖತಂ ಆಯಿತಂತಲ್ಲಾ, ಥೂತ್ತೇರಿ.

*****

ಬಿಜೆಪಿಯೊಳಗಿನ ಗರ್ಭಗುಡಿಯ ಸಂಸ್ಕೃತಿ ಕಾರ್ಯಾಚರಣೆಗಳ ಸೂಚನೆ ಸಂತೋಷ್ ಮುಖಾಂತರ ಹೊರಬರುವ ಕಾರಣಕ್ಕೆ ಸಂಘಿಗಳಲ್ಲದ ಬಿಜೆಪಿ ಜನನಾಯಕರ ಜಂಘಾಬಲವೇ ಉಡುಗಿ ಹೋಗಿದೆಯಂತಲ್ಲಾ. ಬಿಜೆಪಿ ಗರ್ಭಗುಡಿಯ ಮಹಿಮೆ ತಿಳಿಯದವರು ದೀಢಿರಂಥ ಬಿಜೆಪಿ ಸೇರಿ, ಅಲ್ಲಿನ ಪಡಸಾಲೆಯಲ್ಲಿ ಕುಳಿತು ಗರ್ಭಗುಡಿಯಲ್ಲಿನ ಪಿಸುಮಾತಿಗೆ ಹೆದರಿ ಓಡಿ ಬಂದ ನೂರಾರು ಉದಾಹರಣೆಗಳಿವೆ. ಆ ಗರ್ಭಗುಡಿಯ ಪ್ರವೇಶ ಪಡೆಯಬೇಕಾದರೆ ಟೋಪಿ ಲಾಟಿ ಗಾಳಿಯಾಡುವ ಚಡ್ಡಿಯೊಂದಿಗೆ, ಸುರಕ್ಷಿತವಾದ ಮೈದಾನದಲ್ಲಿ ನಿಂತು, ’ನಮಸ್ತೇ ಸದಾವತ್ಸಲೇ ಮಾತೃಭೂಮಿ’ ಎಂದು ಎದೆ ಮೇಲೆ ಕೈಯಿಟ್ಟು ಭಗವಾಧ್ವಜಕ್ಕೆ ವಂದಿಸಿರಬೇಕು. ಅದೂ ವರ್ಷಾನುಗಟ್ಟಲೆ ನಡೆಯಬೇಕು. ಈ ಬೈಟಕ್‌ನ ವಿಷಯ ಕರಗತವಾದ ಮೇಲೆಯೇ ಗರ್ಭಗುಡಿಯ ಪ್ರವೇಶ ದಕ್ಕುವುದು. ಸದರಿ ಸರಕಾರದಲ್ಲಿ ಕಾಂಗ್ರೆಸ್ ದಳದಿಂದ ತುಡುಗು ದನಗಳು ಓಡಿಬಂದು ಮೈಮೇಲೆ ನೆದರಿಲ್ಲದೆ ಮೇಯುತ್ತಿವೆ. ಅವುಗಳನ್ನೆಲ್ಲಾ ಪಿಂಜರಾಪೋಲು ದೊಡ್ಡಿಗೆ ದೂಡಬೇಕಾದರೆ ಕೆಲವು ಮಾನದಂಡಗಳನ್ನ ಕಿಡಿಮಾಡಿಕೊಳ್ಳಬೇಕಾಗುತ್ತದೆ. ಅಂತಹ ಹತಾರಗಳನ್ನಾಗಲೇ ಮಸೆಯುತ್ತಿರುವ ಸಂತೋಷ್ ಎಂಬ ಸಂಘವೀರನ ಮಾತಿನಿಂದ ಮುಮಂ ಬಸವರಾಜ ಬೊಮ್ಮಾಯಿ ಬಸವಳಿದು ಹೋಗಿದ್ದಾರಂತಲ್ಲಾ, ಥೂತ್ತೇರಿ.

*****

ಪಿಎಸ್‌ಐ ಅಕ್ರಮದಿಂದ ರಾಜ್ಯದ ಬಿಜೆಪಿ ಸರಕಾರ ಭ್ರಷ್ಟತೆಯಲ್ಲಿ ನೂರು ಪರಸೆಂಟ್ ಗಡಿಯನ್ನು ಮುಟ್ಟಿತಂತಲ್ಲಾ. ಕರ್ನಾಟಕದಲ್ಲಿ ಯಾವುದೂ ನ್ಯಾಯವಾಗಿ ಸಿಗುವುದಿಲ್ಲ, ಎಲ್ಲದಕ್ಕೂ ಲಂಚ ಕೊಡಲೇಬೇಕೆಂಬ ನಿಯಮ ಜಾರಿಯಾದುದಕ್ಕೆ ಕಾರಣ ಹುಡುಕುತ್ತ ಹೋದರೆ, ಒಂದು ಕಾಲದಲ್ಲಿ ಅಷ್ಟೋಇಷ್ಟೋ ಪ್ರಾಮಾಣಿಕವಾಗಿದ್ದ ಅಂದರೆ, ಎ.ಕೆ ಸುಬ್ಬಯ್ಯ ಶಿವಪ್ಪನವರ ಕಾಲದಲ್ಲಿ ಇದ್ದದ್ದಕ್ಕಿಂತ ಇಂದು ಭ್ರಷ್ಟತೆಯ ವಿಷವೃಕ್ಷವಾಗಿ ಬೆಳೆಯಲು ಪಾರ್ಟಿಯ ಅಜೆಂಡಾವೆ ಕಾರಣವಂತಲ್ಲಾ. ಅಂದು ನಾಗಪುರದಿಂದ ಹೊರಟ ಆದೇಶದಂತೆ ಬಿಜೆಪಿ ಈ ದೇಶದಲ್ಲಿ ಬಲಿಷ್ಟವಾಗಿ ಬೇರೂರಬೇಕಾದರೆ ಹಣ ಬೇಕು. ಆ ಹಣ ಸರಕಾರದ ಖಜಾನೆಯಿಂದಲೇ ಬರಬೇಕು ಮತ್ತು ಸರಕಾರದ ಕಾರ್ಯಕ್ರಮಗಳಿಂದಲೇ ಕಟಾವಾಗಬೇಕು, ಹುದ್ದೆ ನೀಡುವಲ್ಲಿ ವಸೂಲಾಗಬೇಕು, ಆದ್ದರಿಂದ ಪಾರ್ಟಿಯ ಕಾರ್ಯಕರ್ತರು ಪಾರ್ಟಿಯವರ ಮೇಲೆ ಭ್ರಷ್ಟತೆ ಆಪಾದನೆ ಮಾಡಬಾರದು, ತಮ್ಮ ಪಾಲನ್ನು ಪ್ರಸಾದದಂತೆ ಪಡೆದು ಪಾರ್ಟಿ ಬೆಳೆಯಲು ಅನುಕೂಲ ಮಾಡಿಕೊಡಬೇಕು ಎಂಬ ಮೌಖಿಕ ಕಾನೂನು ಜಾರಿಯಾದ್ದುದರಿಂದ ಅವ್ಯಾಹತವಾಗಿ ಸರಕಾರದಿಂದಲೇ ಭ್ರಷ್ಟತೆ ನಡೆದಿದ್ದರಿಂದ, ಸದ್ಯಕ್ಕೆ ಕರ್ನಾಟಕ ಹಂಡ್ರೆಡ್ ಪರಸೆಂಟ್ ಭ್ರಷ್ಟತೆಯಲ್ಲಿ ಮುಳುಗಿದೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಈಗ ಎತ್ತಿಗೆ ಲಾಳ ಕಟ್ಟೋರು ಯಾರು ಅಂತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...