Homeಅಂಕಣಗಳುಕೊರೊನಾ ಅಲೆ ಬಿಜೆಪಿ ಒಂದೇ ತರ ಕಾಣುತ್ತಿವೆಯಲ್ಲಾ

ಕೊರೊನಾ ಅಲೆ ಬಿಜೆಪಿ ಒಂದೇ ತರ ಕಾಣುತ್ತಿವೆಯಲ್ಲಾ

- Advertisement -
- Advertisement -

ಮತ್ತೆ ಕೊರೊನಾ ಬೆದರುಬೊಂಬೆಯನ್ನು ತೋರಹೊರಟಿರುವ ಬಿಜೆಪಿ ನಡವಳಿಕೆಯನ್ನ ನೋಡಿದ ಕರ್ನಾಟಕದ ಜನ ಕೊರೊನಾಕ್ಕೂ ಬಿಜೆಪಿಗೂ ಶಾನೆ ಹೋಲಿಕೆ ಇದೆ ಎನ್ನತೊಡಗಿದ್ದಾರಲ್ಲಾ. ಕೊರೊನಾ ಅಲೆಗಳಂತೆಯೇ ಬಿಜೆಪಿ ಪಾರ್ಟಿಯ ಕಾರ್ಯಕ್ರಮಗಳು ಅಲೆಅಲೆಯಾಗಿ ಬಂದು ಮುಸ್ಲಿಮರ ಮೇಲೆ ಅಪ್ಪಳಿಸಿದವು. ಅದರ ಪರಿಣಾಮ ಮುಸ್ಲಿಮರು ಮತ್ತು ಹಿಂದೂಗಳೂ ತತ್ತರಿಸಿಹೋದರು. ಮುಸ್ಲಿಮರನ್ನು ಗುರಿಯಾಗಿಸಿ ಬಿಟ್ಟ ಬಾಣಗಳು ಹಿಂದೂಗಳಿಗೂ ತಾಗಿ, ರಂಜಾನ್ ಟೈಮಿನಲ್ಲಿ ಮುಸ್ಲಿಮರು ಕೂಡ ಹಿಂದೂ ಬಡವರಿಗೆ ಸಹಾಯ ಮಾಡುತ್ತ ಇಫ್ತಾರ್ ಕೂಟಗಳಿಗೆ ಹಿಂದೂಗಳನ್ನು ಕರೆಯುತ್ತ ಸಾಮರಸ್ಯಕ್ಕೆ ಕರೆಕೊಟ್ಟಿದ್ದನ್ನ ನೋಡಿದ ಬಿಜೆಪಿಗಳು ಬೇರೆ ತಂತ್ರ ಆಲೋಚಿಸುತ್ತಿರುವಾಗ ಕೊರೊನಾವೂ ಕೂಡ ಛದ್ಮವೇಶದಲ್ಲಿ ರೆಡಿಯಾಗುತ್ತಿದೆಯಂತಲ್ಲಾ. ಸಾಂಕ್ರಾಮಿಕ ಕಾಯಿಲೆಯೊಂದು ರಾಜಕೀಯ ಪಾರ್ಟಿಯ ಜೊತೆ ಕೈಜೋಡಿಸಿ ಕೆಲಸ ಮಾಡಿದ್ದು ಚರಿತ್ರೆಯಲ್ಲೇ ಇಲ್ಲವಂತಲ್ಲಾ. ಆದರೆ ಕರ್ನಾಟಕದ ಮಟ್ಟಿಗೆ ಆಡಳಿತವನ್ನೆ ನಡೆಸದೆ ದಿಕ್ಕು ದೆಸೆಯಿಲ್ಲದೆ ಮುನ್ನಡೆಯುತ್ತಿರುವ ಪಾರ್ಟಿಯ ಆಸರೆಗೆ ಕೊರೊನಾ ಬಂದಿರುವುದು ಅಚ್ಚರಿಯ ಸಂಗತಿಯಾಗಿದೆಯಲ್ಲಾ, ಥೂತ್ತೇರಿ.

******

ಮುಸ್ಲಿಂ ಧರ್ಮದ ಮೇಲೆ ಎಲ್ಲಾ ಬಗೆಯ ಹಗೆಯ ಪ್ರಯೋಗ ನಡೆದ ಮೇಲೆ ಈಗ ಮಸೀದಿಗಳಲ್ಲಿನ ಧ್ವನಿವರ್ಧಕದ ಮೇಲೆ ಮುತಾಲಿಕ್ ಬಿದ್ದಿದ್ದಾರಲ್ಲಾ. ಮುತಾಲಿಕ್ ಮತಿಗೆಟ್ಟು ಮಾತನಾಡುತ್ತಿದ್ದಾರೆಂದು ಪರಿಗಣಿಸುವಂತಿಲ್ಲ. ಆತನ ಒತ್ತಾಯದ ಹಿಂದೆ ಬಿಜೆಪಿ ದನಿ ಅಡಗಿದೆ. ಹಾಗೆ ನೋಡಿದರೆ ಈ ಹಿಂದೆ ಅನಂತಕುಮಾರ ಹೆಗಡೆ ಎಂಬಾತ ಪುರೋಹಿತಶಾಹಿ ಪಿತ್ತ ನೆತ್ತಿಗೇರಿಸಿಕೊಂಡು ನಾವು ಅಂಬೇಡ್ಕರ್ ಸಂವಿಧಾನವನ್ನು ಬದಲಿಸುತ್ತೇವೆ, ಅದಕ್ಕಾಗಿಯೇ ಬಂದಿರುವುದು ಎಂದಾಗ ಇಡೀ ದೇಶದ ಯಾವ ಬಿಜೆಪಿಗನೂ ಇದನ್ನ ಖಂಡಿಸಲಿಲ್ಲ. ಅಂತೆಯೇ ಕೆಂಪುಕೋಟೆಯ ಮೇಲೆ ಭಗವಾಧ್ವಜವನ್ನ ಮುಂದೆ ಹಾರಿಸುತ್ತೇವೆ ಎಂದು ಈಶ್ವರಪ್ಪ ಹೇಳಿದಾಗ ಯಾವ ಬಿಜೆಪಿ ’ದೇಶಪ್ರೇಮಿ’ಯೂ ಪ್ರತಿಹೇಳಲಿಲ್ಲ. ಅಲ್ಲಿ ಈಶ್ವರಪ್ಪನ ಮಾತು ಬಿಜೆಪಿಯ ಮಾತಾಗಿ ಉಳಿಯಿತು. ಹಾಗೆಯೇ ಮುತಾಲಿಕ್ ಮಾತೂ ಕೂಡ ಬಿಜೆಪಿಯ ಅಧಿಕೃತ ಘೋಷಣೆಯಿರಬಹುದೆಂದು ಚಿಂತಿಸುತ್ತಿರುವಾಗ, ರಂಜಾನ್ ಸಮಯದಲ್ಲಿಯೇ ಈಶ್ವರಪ್ಪನವರ ದುನಿಯ ಖತಂ ಆಯಿತಂತಲ್ಲಾ, ಥೂತ್ತೇರಿ.

*****

ಬಿಜೆಪಿಯೊಳಗಿನ ಗರ್ಭಗುಡಿಯ ಸಂಸ್ಕೃತಿ ಕಾರ್ಯಾಚರಣೆಗಳ ಸೂಚನೆ ಸಂತೋಷ್ ಮುಖಾಂತರ ಹೊರಬರುವ ಕಾರಣಕ್ಕೆ ಸಂಘಿಗಳಲ್ಲದ ಬಿಜೆಪಿ ಜನನಾಯಕರ ಜಂಘಾಬಲವೇ ಉಡುಗಿ ಹೋಗಿದೆಯಂತಲ್ಲಾ. ಬಿಜೆಪಿ ಗರ್ಭಗುಡಿಯ ಮಹಿಮೆ ತಿಳಿಯದವರು ದೀಢಿರಂಥ ಬಿಜೆಪಿ ಸೇರಿ, ಅಲ್ಲಿನ ಪಡಸಾಲೆಯಲ್ಲಿ ಕುಳಿತು ಗರ್ಭಗುಡಿಯಲ್ಲಿನ ಪಿಸುಮಾತಿಗೆ ಹೆದರಿ ಓಡಿ ಬಂದ ನೂರಾರು ಉದಾಹರಣೆಗಳಿವೆ. ಆ ಗರ್ಭಗುಡಿಯ ಪ್ರವೇಶ ಪಡೆಯಬೇಕಾದರೆ ಟೋಪಿ ಲಾಟಿ ಗಾಳಿಯಾಡುವ ಚಡ್ಡಿಯೊಂದಿಗೆ, ಸುರಕ್ಷಿತವಾದ ಮೈದಾನದಲ್ಲಿ ನಿಂತು, ’ನಮಸ್ತೇ ಸದಾವತ್ಸಲೇ ಮಾತೃಭೂಮಿ’ ಎಂದು ಎದೆ ಮೇಲೆ ಕೈಯಿಟ್ಟು ಭಗವಾಧ್ವಜಕ್ಕೆ ವಂದಿಸಿರಬೇಕು. ಅದೂ ವರ್ಷಾನುಗಟ್ಟಲೆ ನಡೆಯಬೇಕು. ಈ ಬೈಟಕ್‌ನ ವಿಷಯ ಕರಗತವಾದ ಮೇಲೆಯೇ ಗರ್ಭಗುಡಿಯ ಪ್ರವೇಶ ದಕ್ಕುವುದು. ಸದರಿ ಸರಕಾರದಲ್ಲಿ ಕಾಂಗ್ರೆಸ್ ದಳದಿಂದ ತುಡುಗು ದನಗಳು ಓಡಿಬಂದು ಮೈಮೇಲೆ ನೆದರಿಲ್ಲದೆ ಮೇಯುತ್ತಿವೆ. ಅವುಗಳನ್ನೆಲ್ಲಾ ಪಿಂಜರಾಪೋಲು ದೊಡ್ಡಿಗೆ ದೂಡಬೇಕಾದರೆ ಕೆಲವು ಮಾನದಂಡಗಳನ್ನ ಕಿಡಿಮಾಡಿಕೊಳ್ಳಬೇಕಾಗುತ್ತದೆ. ಅಂತಹ ಹತಾರಗಳನ್ನಾಗಲೇ ಮಸೆಯುತ್ತಿರುವ ಸಂತೋಷ್ ಎಂಬ ಸಂಘವೀರನ ಮಾತಿನಿಂದ ಮುಮಂ ಬಸವರಾಜ ಬೊಮ್ಮಾಯಿ ಬಸವಳಿದು ಹೋಗಿದ್ದಾರಂತಲ್ಲಾ, ಥೂತ್ತೇರಿ.

*****

ಪಿಎಸ್‌ಐ ಅಕ್ರಮದಿಂದ ರಾಜ್ಯದ ಬಿಜೆಪಿ ಸರಕಾರ ಭ್ರಷ್ಟತೆಯಲ್ಲಿ ನೂರು ಪರಸೆಂಟ್ ಗಡಿಯನ್ನು ಮುಟ್ಟಿತಂತಲ್ಲಾ. ಕರ್ನಾಟಕದಲ್ಲಿ ಯಾವುದೂ ನ್ಯಾಯವಾಗಿ ಸಿಗುವುದಿಲ್ಲ, ಎಲ್ಲದಕ್ಕೂ ಲಂಚ ಕೊಡಲೇಬೇಕೆಂಬ ನಿಯಮ ಜಾರಿಯಾದುದಕ್ಕೆ ಕಾರಣ ಹುಡುಕುತ್ತ ಹೋದರೆ, ಒಂದು ಕಾಲದಲ್ಲಿ ಅಷ್ಟೋಇಷ್ಟೋ ಪ್ರಾಮಾಣಿಕವಾಗಿದ್ದ ಅಂದರೆ, ಎ.ಕೆ ಸುಬ್ಬಯ್ಯ ಶಿವಪ್ಪನವರ ಕಾಲದಲ್ಲಿ ಇದ್ದದ್ದಕ್ಕಿಂತ ಇಂದು ಭ್ರಷ್ಟತೆಯ ವಿಷವೃಕ್ಷವಾಗಿ ಬೆಳೆಯಲು ಪಾರ್ಟಿಯ ಅಜೆಂಡಾವೆ ಕಾರಣವಂತಲ್ಲಾ. ಅಂದು ನಾಗಪುರದಿಂದ ಹೊರಟ ಆದೇಶದಂತೆ ಬಿಜೆಪಿ ಈ ದೇಶದಲ್ಲಿ ಬಲಿಷ್ಟವಾಗಿ ಬೇರೂರಬೇಕಾದರೆ ಹಣ ಬೇಕು. ಆ ಹಣ ಸರಕಾರದ ಖಜಾನೆಯಿಂದಲೇ ಬರಬೇಕು ಮತ್ತು ಸರಕಾರದ ಕಾರ್ಯಕ್ರಮಗಳಿಂದಲೇ ಕಟಾವಾಗಬೇಕು, ಹುದ್ದೆ ನೀಡುವಲ್ಲಿ ವಸೂಲಾಗಬೇಕು, ಆದ್ದರಿಂದ ಪಾರ್ಟಿಯ ಕಾರ್ಯಕರ್ತರು ಪಾರ್ಟಿಯವರ ಮೇಲೆ ಭ್ರಷ್ಟತೆ ಆಪಾದನೆ ಮಾಡಬಾರದು, ತಮ್ಮ ಪಾಲನ್ನು ಪ್ರಸಾದದಂತೆ ಪಡೆದು ಪಾರ್ಟಿ ಬೆಳೆಯಲು ಅನುಕೂಲ ಮಾಡಿಕೊಡಬೇಕು ಎಂಬ ಮೌಖಿಕ ಕಾನೂನು ಜಾರಿಯಾದ್ದುದರಿಂದ ಅವ್ಯಾಹತವಾಗಿ ಸರಕಾರದಿಂದಲೇ ಭ್ರಷ್ಟತೆ ನಡೆದಿದ್ದರಿಂದ, ಸದ್ಯಕ್ಕೆ ಕರ್ನಾಟಕ ಹಂಡ್ರೆಡ್ ಪರಸೆಂಟ್ ಭ್ರಷ್ಟತೆಯಲ್ಲಿ ಮುಳುಗಿದೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಈಗ ಎತ್ತಿಗೆ ಲಾಳ ಕಟ್ಟೋರು ಯಾರು ಅಂತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...