Homeಅಂಕಣಗಳುಕೊರೊನಾ ಅಲೆ ಬಿಜೆಪಿ ಒಂದೇ ತರ ಕಾಣುತ್ತಿವೆಯಲ್ಲಾ

ಕೊರೊನಾ ಅಲೆ ಬಿಜೆಪಿ ಒಂದೇ ತರ ಕಾಣುತ್ತಿವೆಯಲ್ಲಾ

- Advertisement -
- Advertisement -

ಮತ್ತೆ ಕೊರೊನಾ ಬೆದರುಬೊಂಬೆಯನ್ನು ತೋರಹೊರಟಿರುವ ಬಿಜೆಪಿ ನಡವಳಿಕೆಯನ್ನ ನೋಡಿದ ಕರ್ನಾಟಕದ ಜನ ಕೊರೊನಾಕ್ಕೂ ಬಿಜೆಪಿಗೂ ಶಾನೆ ಹೋಲಿಕೆ ಇದೆ ಎನ್ನತೊಡಗಿದ್ದಾರಲ್ಲಾ. ಕೊರೊನಾ ಅಲೆಗಳಂತೆಯೇ ಬಿಜೆಪಿ ಪಾರ್ಟಿಯ ಕಾರ್ಯಕ್ರಮಗಳು ಅಲೆಅಲೆಯಾಗಿ ಬಂದು ಮುಸ್ಲಿಮರ ಮೇಲೆ ಅಪ್ಪಳಿಸಿದವು. ಅದರ ಪರಿಣಾಮ ಮುಸ್ಲಿಮರು ಮತ್ತು ಹಿಂದೂಗಳೂ ತತ್ತರಿಸಿಹೋದರು. ಮುಸ್ಲಿಮರನ್ನು ಗುರಿಯಾಗಿಸಿ ಬಿಟ್ಟ ಬಾಣಗಳು ಹಿಂದೂಗಳಿಗೂ ತಾಗಿ, ರಂಜಾನ್ ಟೈಮಿನಲ್ಲಿ ಮುಸ್ಲಿಮರು ಕೂಡ ಹಿಂದೂ ಬಡವರಿಗೆ ಸಹಾಯ ಮಾಡುತ್ತ ಇಫ್ತಾರ್ ಕೂಟಗಳಿಗೆ ಹಿಂದೂಗಳನ್ನು ಕರೆಯುತ್ತ ಸಾಮರಸ್ಯಕ್ಕೆ ಕರೆಕೊಟ್ಟಿದ್ದನ್ನ ನೋಡಿದ ಬಿಜೆಪಿಗಳು ಬೇರೆ ತಂತ್ರ ಆಲೋಚಿಸುತ್ತಿರುವಾಗ ಕೊರೊನಾವೂ ಕೂಡ ಛದ್ಮವೇಶದಲ್ಲಿ ರೆಡಿಯಾಗುತ್ತಿದೆಯಂತಲ್ಲಾ. ಸಾಂಕ್ರಾಮಿಕ ಕಾಯಿಲೆಯೊಂದು ರಾಜಕೀಯ ಪಾರ್ಟಿಯ ಜೊತೆ ಕೈಜೋಡಿಸಿ ಕೆಲಸ ಮಾಡಿದ್ದು ಚರಿತ್ರೆಯಲ್ಲೇ ಇಲ್ಲವಂತಲ್ಲಾ. ಆದರೆ ಕರ್ನಾಟಕದ ಮಟ್ಟಿಗೆ ಆಡಳಿತವನ್ನೆ ನಡೆಸದೆ ದಿಕ್ಕು ದೆಸೆಯಿಲ್ಲದೆ ಮುನ್ನಡೆಯುತ್ತಿರುವ ಪಾರ್ಟಿಯ ಆಸರೆಗೆ ಕೊರೊನಾ ಬಂದಿರುವುದು ಅಚ್ಚರಿಯ ಸಂಗತಿಯಾಗಿದೆಯಲ್ಲಾ, ಥೂತ್ತೇರಿ.

******

ಮುಸ್ಲಿಂ ಧರ್ಮದ ಮೇಲೆ ಎಲ್ಲಾ ಬಗೆಯ ಹಗೆಯ ಪ್ರಯೋಗ ನಡೆದ ಮೇಲೆ ಈಗ ಮಸೀದಿಗಳಲ್ಲಿನ ಧ್ವನಿವರ್ಧಕದ ಮೇಲೆ ಮುತಾಲಿಕ್ ಬಿದ್ದಿದ್ದಾರಲ್ಲಾ. ಮುತಾಲಿಕ್ ಮತಿಗೆಟ್ಟು ಮಾತನಾಡುತ್ತಿದ್ದಾರೆಂದು ಪರಿಗಣಿಸುವಂತಿಲ್ಲ. ಆತನ ಒತ್ತಾಯದ ಹಿಂದೆ ಬಿಜೆಪಿ ದನಿ ಅಡಗಿದೆ. ಹಾಗೆ ನೋಡಿದರೆ ಈ ಹಿಂದೆ ಅನಂತಕುಮಾರ ಹೆಗಡೆ ಎಂಬಾತ ಪುರೋಹಿತಶಾಹಿ ಪಿತ್ತ ನೆತ್ತಿಗೇರಿಸಿಕೊಂಡು ನಾವು ಅಂಬೇಡ್ಕರ್ ಸಂವಿಧಾನವನ್ನು ಬದಲಿಸುತ್ತೇವೆ, ಅದಕ್ಕಾಗಿಯೇ ಬಂದಿರುವುದು ಎಂದಾಗ ಇಡೀ ದೇಶದ ಯಾವ ಬಿಜೆಪಿಗನೂ ಇದನ್ನ ಖಂಡಿಸಲಿಲ್ಲ. ಅಂತೆಯೇ ಕೆಂಪುಕೋಟೆಯ ಮೇಲೆ ಭಗವಾಧ್ವಜವನ್ನ ಮುಂದೆ ಹಾರಿಸುತ್ತೇವೆ ಎಂದು ಈಶ್ವರಪ್ಪ ಹೇಳಿದಾಗ ಯಾವ ಬಿಜೆಪಿ ’ದೇಶಪ್ರೇಮಿ’ಯೂ ಪ್ರತಿಹೇಳಲಿಲ್ಲ. ಅಲ್ಲಿ ಈಶ್ವರಪ್ಪನ ಮಾತು ಬಿಜೆಪಿಯ ಮಾತಾಗಿ ಉಳಿಯಿತು. ಹಾಗೆಯೇ ಮುತಾಲಿಕ್ ಮಾತೂ ಕೂಡ ಬಿಜೆಪಿಯ ಅಧಿಕೃತ ಘೋಷಣೆಯಿರಬಹುದೆಂದು ಚಿಂತಿಸುತ್ತಿರುವಾಗ, ರಂಜಾನ್ ಸಮಯದಲ್ಲಿಯೇ ಈಶ್ವರಪ್ಪನವರ ದುನಿಯ ಖತಂ ಆಯಿತಂತಲ್ಲಾ, ಥೂತ್ತೇರಿ.

*****

ಬಿಜೆಪಿಯೊಳಗಿನ ಗರ್ಭಗುಡಿಯ ಸಂಸ್ಕೃತಿ ಕಾರ್ಯಾಚರಣೆಗಳ ಸೂಚನೆ ಸಂತೋಷ್ ಮುಖಾಂತರ ಹೊರಬರುವ ಕಾರಣಕ್ಕೆ ಸಂಘಿಗಳಲ್ಲದ ಬಿಜೆಪಿ ಜನನಾಯಕರ ಜಂಘಾಬಲವೇ ಉಡುಗಿ ಹೋಗಿದೆಯಂತಲ್ಲಾ. ಬಿಜೆಪಿ ಗರ್ಭಗುಡಿಯ ಮಹಿಮೆ ತಿಳಿಯದವರು ದೀಢಿರಂಥ ಬಿಜೆಪಿ ಸೇರಿ, ಅಲ್ಲಿನ ಪಡಸಾಲೆಯಲ್ಲಿ ಕುಳಿತು ಗರ್ಭಗುಡಿಯಲ್ಲಿನ ಪಿಸುಮಾತಿಗೆ ಹೆದರಿ ಓಡಿ ಬಂದ ನೂರಾರು ಉದಾಹರಣೆಗಳಿವೆ. ಆ ಗರ್ಭಗುಡಿಯ ಪ್ರವೇಶ ಪಡೆಯಬೇಕಾದರೆ ಟೋಪಿ ಲಾಟಿ ಗಾಳಿಯಾಡುವ ಚಡ್ಡಿಯೊಂದಿಗೆ, ಸುರಕ್ಷಿತವಾದ ಮೈದಾನದಲ್ಲಿ ನಿಂತು, ’ನಮಸ್ತೇ ಸದಾವತ್ಸಲೇ ಮಾತೃಭೂಮಿ’ ಎಂದು ಎದೆ ಮೇಲೆ ಕೈಯಿಟ್ಟು ಭಗವಾಧ್ವಜಕ್ಕೆ ವಂದಿಸಿರಬೇಕು. ಅದೂ ವರ್ಷಾನುಗಟ್ಟಲೆ ನಡೆಯಬೇಕು. ಈ ಬೈಟಕ್‌ನ ವಿಷಯ ಕರಗತವಾದ ಮೇಲೆಯೇ ಗರ್ಭಗುಡಿಯ ಪ್ರವೇಶ ದಕ್ಕುವುದು. ಸದರಿ ಸರಕಾರದಲ್ಲಿ ಕಾಂಗ್ರೆಸ್ ದಳದಿಂದ ತುಡುಗು ದನಗಳು ಓಡಿಬಂದು ಮೈಮೇಲೆ ನೆದರಿಲ್ಲದೆ ಮೇಯುತ್ತಿವೆ. ಅವುಗಳನ್ನೆಲ್ಲಾ ಪಿಂಜರಾಪೋಲು ದೊಡ್ಡಿಗೆ ದೂಡಬೇಕಾದರೆ ಕೆಲವು ಮಾನದಂಡಗಳನ್ನ ಕಿಡಿಮಾಡಿಕೊಳ್ಳಬೇಕಾಗುತ್ತದೆ. ಅಂತಹ ಹತಾರಗಳನ್ನಾಗಲೇ ಮಸೆಯುತ್ತಿರುವ ಸಂತೋಷ್ ಎಂಬ ಸಂಘವೀರನ ಮಾತಿನಿಂದ ಮುಮಂ ಬಸವರಾಜ ಬೊಮ್ಮಾಯಿ ಬಸವಳಿದು ಹೋಗಿದ್ದಾರಂತಲ್ಲಾ, ಥೂತ್ತೇರಿ.

*****

ಪಿಎಸ್‌ಐ ಅಕ್ರಮದಿಂದ ರಾಜ್ಯದ ಬಿಜೆಪಿ ಸರಕಾರ ಭ್ರಷ್ಟತೆಯಲ್ಲಿ ನೂರು ಪರಸೆಂಟ್ ಗಡಿಯನ್ನು ಮುಟ್ಟಿತಂತಲ್ಲಾ. ಕರ್ನಾಟಕದಲ್ಲಿ ಯಾವುದೂ ನ್ಯಾಯವಾಗಿ ಸಿಗುವುದಿಲ್ಲ, ಎಲ್ಲದಕ್ಕೂ ಲಂಚ ಕೊಡಲೇಬೇಕೆಂಬ ನಿಯಮ ಜಾರಿಯಾದುದಕ್ಕೆ ಕಾರಣ ಹುಡುಕುತ್ತ ಹೋದರೆ, ಒಂದು ಕಾಲದಲ್ಲಿ ಅಷ್ಟೋಇಷ್ಟೋ ಪ್ರಾಮಾಣಿಕವಾಗಿದ್ದ ಅಂದರೆ, ಎ.ಕೆ ಸುಬ್ಬಯ್ಯ ಶಿವಪ್ಪನವರ ಕಾಲದಲ್ಲಿ ಇದ್ದದ್ದಕ್ಕಿಂತ ಇಂದು ಭ್ರಷ್ಟತೆಯ ವಿಷವೃಕ್ಷವಾಗಿ ಬೆಳೆಯಲು ಪಾರ್ಟಿಯ ಅಜೆಂಡಾವೆ ಕಾರಣವಂತಲ್ಲಾ. ಅಂದು ನಾಗಪುರದಿಂದ ಹೊರಟ ಆದೇಶದಂತೆ ಬಿಜೆಪಿ ಈ ದೇಶದಲ್ಲಿ ಬಲಿಷ್ಟವಾಗಿ ಬೇರೂರಬೇಕಾದರೆ ಹಣ ಬೇಕು. ಆ ಹಣ ಸರಕಾರದ ಖಜಾನೆಯಿಂದಲೇ ಬರಬೇಕು ಮತ್ತು ಸರಕಾರದ ಕಾರ್ಯಕ್ರಮಗಳಿಂದಲೇ ಕಟಾವಾಗಬೇಕು, ಹುದ್ದೆ ನೀಡುವಲ್ಲಿ ವಸೂಲಾಗಬೇಕು, ಆದ್ದರಿಂದ ಪಾರ್ಟಿಯ ಕಾರ್ಯಕರ್ತರು ಪಾರ್ಟಿಯವರ ಮೇಲೆ ಭ್ರಷ್ಟತೆ ಆಪಾದನೆ ಮಾಡಬಾರದು, ತಮ್ಮ ಪಾಲನ್ನು ಪ್ರಸಾದದಂತೆ ಪಡೆದು ಪಾರ್ಟಿ ಬೆಳೆಯಲು ಅನುಕೂಲ ಮಾಡಿಕೊಡಬೇಕು ಎಂಬ ಮೌಖಿಕ ಕಾನೂನು ಜಾರಿಯಾದ್ದುದರಿಂದ ಅವ್ಯಾಹತವಾಗಿ ಸರಕಾರದಿಂದಲೇ ಭ್ರಷ್ಟತೆ ನಡೆದಿದ್ದರಿಂದ, ಸದ್ಯಕ್ಕೆ ಕರ್ನಾಟಕ ಹಂಡ್ರೆಡ್ ಪರಸೆಂಟ್ ಭ್ರಷ್ಟತೆಯಲ್ಲಿ ಮುಳುಗಿದೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಈಗ ಎತ್ತಿಗೆ ಲಾಳ ಕಟ್ಟೋರು ಯಾರು ಅಂತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...