Homeಅಂಕಣಗಳುಕೊರೊನಾ ಅಲೆ ಬಿಜೆಪಿ ಒಂದೇ ತರ ಕಾಣುತ್ತಿವೆಯಲ್ಲಾ

ಕೊರೊನಾ ಅಲೆ ಬಿಜೆಪಿ ಒಂದೇ ತರ ಕಾಣುತ್ತಿವೆಯಲ್ಲಾ

- Advertisement -
- Advertisement -

ಮತ್ತೆ ಕೊರೊನಾ ಬೆದರುಬೊಂಬೆಯನ್ನು ತೋರಹೊರಟಿರುವ ಬಿಜೆಪಿ ನಡವಳಿಕೆಯನ್ನ ನೋಡಿದ ಕರ್ನಾಟಕದ ಜನ ಕೊರೊನಾಕ್ಕೂ ಬಿಜೆಪಿಗೂ ಶಾನೆ ಹೋಲಿಕೆ ಇದೆ ಎನ್ನತೊಡಗಿದ್ದಾರಲ್ಲಾ. ಕೊರೊನಾ ಅಲೆಗಳಂತೆಯೇ ಬಿಜೆಪಿ ಪಾರ್ಟಿಯ ಕಾರ್ಯಕ್ರಮಗಳು ಅಲೆಅಲೆಯಾಗಿ ಬಂದು ಮುಸ್ಲಿಮರ ಮೇಲೆ ಅಪ್ಪಳಿಸಿದವು. ಅದರ ಪರಿಣಾಮ ಮುಸ್ಲಿಮರು ಮತ್ತು ಹಿಂದೂಗಳೂ ತತ್ತರಿಸಿಹೋದರು. ಮುಸ್ಲಿಮರನ್ನು ಗುರಿಯಾಗಿಸಿ ಬಿಟ್ಟ ಬಾಣಗಳು ಹಿಂದೂಗಳಿಗೂ ತಾಗಿ, ರಂಜಾನ್ ಟೈಮಿನಲ್ಲಿ ಮುಸ್ಲಿಮರು ಕೂಡ ಹಿಂದೂ ಬಡವರಿಗೆ ಸಹಾಯ ಮಾಡುತ್ತ ಇಫ್ತಾರ್ ಕೂಟಗಳಿಗೆ ಹಿಂದೂಗಳನ್ನು ಕರೆಯುತ್ತ ಸಾಮರಸ್ಯಕ್ಕೆ ಕರೆಕೊಟ್ಟಿದ್ದನ್ನ ನೋಡಿದ ಬಿಜೆಪಿಗಳು ಬೇರೆ ತಂತ್ರ ಆಲೋಚಿಸುತ್ತಿರುವಾಗ ಕೊರೊನಾವೂ ಕೂಡ ಛದ್ಮವೇಶದಲ್ಲಿ ರೆಡಿಯಾಗುತ್ತಿದೆಯಂತಲ್ಲಾ. ಸಾಂಕ್ರಾಮಿಕ ಕಾಯಿಲೆಯೊಂದು ರಾಜಕೀಯ ಪಾರ್ಟಿಯ ಜೊತೆ ಕೈಜೋಡಿಸಿ ಕೆಲಸ ಮಾಡಿದ್ದು ಚರಿತ್ರೆಯಲ್ಲೇ ಇಲ್ಲವಂತಲ್ಲಾ. ಆದರೆ ಕರ್ನಾಟಕದ ಮಟ್ಟಿಗೆ ಆಡಳಿತವನ್ನೆ ನಡೆಸದೆ ದಿಕ್ಕು ದೆಸೆಯಿಲ್ಲದೆ ಮುನ್ನಡೆಯುತ್ತಿರುವ ಪಾರ್ಟಿಯ ಆಸರೆಗೆ ಕೊರೊನಾ ಬಂದಿರುವುದು ಅಚ್ಚರಿಯ ಸಂಗತಿಯಾಗಿದೆಯಲ್ಲಾ, ಥೂತ್ತೇರಿ.

******

ಮುಸ್ಲಿಂ ಧರ್ಮದ ಮೇಲೆ ಎಲ್ಲಾ ಬಗೆಯ ಹಗೆಯ ಪ್ರಯೋಗ ನಡೆದ ಮೇಲೆ ಈಗ ಮಸೀದಿಗಳಲ್ಲಿನ ಧ್ವನಿವರ್ಧಕದ ಮೇಲೆ ಮುತಾಲಿಕ್ ಬಿದ್ದಿದ್ದಾರಲ್ಲಾ. ಮುತಾಲಿಕ್ ಮತಿಗೆಟ್ಟು ಮಾತನಾಡುತ್ತಿದ್ದಾರೆಂದು ಪರಿಗಣಿಸುವಂತಿಲ್ಲ. ಆತನ ಒತ್ತಾಯದ ಹಿಂದೆ ಬಿಜೆಪಿ ದನಿ ಅಡಗಿದೆ. ಹಾಗೆ ನೋಡಿದರೆ ಈ ಹಿಂದೆ ಅನಂತಕುಮಾರ ಹೆಗಡೆ ಎಂಬಾತ ಪುರೋಹಿತಶಾಹಿ ಪಿತ್ತ ನೆತ್ತಿಗೇರಿಸಿಕೊಂಡು ನಾವು ಅಂಬೇಡ್ಕರ್ ಸಂವಿಧಾನವನ್ನು ಬದಲಿಸುತ್ತೇವೆ, ಅದಕ್ಕಾಗಿಯೇ ಬಂದಿರುವುದು ಎಂದಾಗ ಇಡೀ ದೇಶದ ಯಾವ ಬಿಜೆಪಿಗನೂ ಇದನ್ನ ಖಂಡಿಸಲಿಲ್ಲ. ಅಂತೆಯೇ ಕೆಂಪುಕೋಟೆಯ ಮೇಲೆ ಭಗವಾಧ್ವಜವನ್ನ ಮುಂದೆ ಹಾರಿಸುತ್ತೇವೆ ಎಂದು ಈಶ್ವರಪ್ಪ ಹೇಳಿದಾಗ ಯಾವ ಬಿಜೆಪಿ ’ದೇಶಪ್ರೇಮಿ’ಯೂ ಪ್ರತಿಹೇಳಲಿಲ್ಲ. ಅಲ್ಲಿ ಈಶ್ವರಪ್ಪನ ಮಾತು ಬಿಜೆಪಿಯ ಮಾತಾಗಿ ಉಳಿಯಿತು. ಹಾಗೆಯೇ ಮುತಾಲಿಕ್ ಮಾತೂ ಕೂಡ ಬಿಜೆಪಿಯ ಅಧಿಕೃತ ಘೋಷಣೆಯಿರಬಹುದೆಂದು ಚಿಂತಿಸುತ್ತಿರುವಾಗ, ರಂಜಾನ್ ಸಮಯದಲ್ಲಿಯೇ ಈಶ್ವರಪ್ಪನವರ ದುನಿಯ ಖತಂ ಆಯಿತಂತಲ್ಲಾ, ಥೂತ್ತೇರಿ.

*****

ಬಿಜೆಪಿಯೊಳಗಿನ ಗರ್ಭಗುಡಿಯ ಸಂಸ್ಕೃತಿ ಕಾರ್ಯಾಚರಣೆಗಳ ಸೂಚನೆ ಸಂತೋಷ್ ಮುಖಾಂತರ ಹೊರಬರುವ ಕಾರಣಕ್ಕೆ ಸಂಘಿಗಳಲ್ಲದ ಬಿಜೆಪಿ ಜನನಾಯಕರ ಜಂಘಾಬಲವೇ ಉಡುಗಿ ಹೋಗಿದೆಯಂತಲ್ಲಾ. ಬಿಜೆಪಿ ಗರ್ಭಗುಡಿಯ ಮಹಿಮೆ ತಿಳಿಯದವರು ದೀಢಿರಂಥ ಬಿಜೆಪಿ ಸೇರಿ, ಅಲ್ಲಿನ ಪಡಸಾಲೆಯಲ್ಲಿ ಕುಳಿತು ಗರ್ಭಗುಡಿಯಲ್ಲಿನ ಪಿಸುಮಾತಿಗೆ ಹೆದರಿ ಓಡಿ ಬಂದ ನೂರಾರು ಉದಾಹರಣೆಗಳಿವೆ. ಆ ಗರ್ಭಗುಡಿಯ ಪ್ರವೇಶ ಪಡೆಯಬೇಕಾದರೆ ಟೋಪಿ ಲಾಟಿ ಗಾಳಿಯಾಡುವ ಚಡ್ಡಿಯೊಂದಿಗೆ, ಸುರಕ್ಷಿತವಾದ ಮೈದಾನದಲ್ಲಿ ನಿಂತು, ’ನಮಸ್ತೇ ಸದಾವತ್ಸಲೇ ಮಾತೃಭೂಮಿ’ ಎಂದು ಎದೆ ಮೇಲೆ ಕೈಯಿಟ್ಟು ಭಗವಾಧ್ವಜಕ್ಕೆ ವಂದಿಸಿರಬೇಕು. ಅದೂ ವರ್ಷಾನುಗಟ್ಟಲೆ ನಡೆಯಬೇಕು. ಈ ಬೈಟಕ್‌ನ ವಿಷಯ ಕರಗತವಾದ ಮೇಲೆಯೇ ಗರ್ಭಗುಡಿಯ ಪ್ರವೇಶ ದಕ್ಕುವುದು. ಸದರಿ ಸರಕಾರದಲ್ಲಿ ಕಾಂಗ್ರೆಸ್ ದಳದಿಂದ ತುಡುಗು ದನಗಳು ಓಡಿಬಂದು ಮೈಮೇಲೆ ನೆದರಿಲ್ಲದೆ ಮೇಯುತ್ತಿವೆ. ಅವುಗಳನ್ನೆಲ್ಲಾ ಪಿಂಜರಾಪೋಲು ದೊಡ್ಡಿಗೆ ದೂಡಬೇಕಾದರೆ ಕೆಲವು ಮಾನದಂಡಗಳನ್ನ ಕಿಡಿಮಾಡಿಕೊಳ್ಳಬೇಕಾಗುತ್ತದೆ. ಅಂತಹ ಹತಾರಗಳನ್ನಾಗಲೇ ಮಸೆಯುತ್ತಿರುವ ಸಂತೋಷ್ ಎಂಬ ಸಂಘವೀರನ ಮಾತಿನಿಂದ ಮುಮಂ ಬಸವರಾಜ ಬೊಮ್ಮಾಯಿ ಬಸವಳಿದು ಹೋಗಿದ್ದಾರಂತಲ್ಲಾ, ಥೂತ್ತೇರಿ.

*****

ಪಿಎಸ್‌ಐ ಅಕ್ರಮದಿಂದ ರಾಜ್ಯದ ಬಿಜೆಪಿ ಸರಕಾರ ಭ್ರಷ್ಟತೆಯಲ್ಲಿ ನೂರು ಪರಸೆಂಟ್ ಗಡಿಯನ್ನು ಮುಟ್ಟಿತಂತಲ್ಲಾ. ಕರ್ನಾಟಕದಲ್ಲಿ ಯಾವುದೂ ನ್ಯಾಯವಾಗಿ ಸಿಗುವುದಿಲ್ಲ, ಎಲ್ಲದಕ್ಕೂ ಲಂಚ ಕೊಡಲೇಬೇಕೆಂಬ ನಿಯಮ ಜಾರಿಯಾದುದಕ್ಕೆ ಕಾರಣ ಹುಡುಕುತ್ತ ಹೋದರೆ, ಒಂದು ಕಾಲದಲ್ಲಿ ಅಷ್ಟೋಇಷ್ಟೋ ಪ್ರಾಮಾಣಿಕವಾಗಿದ್ದ ಅಂದರೆ, ಎ.ಕೆ ಸುಬ್ಬಯ್ಯ ಶಿವಪ್ಪನವರ ಕಾಲದಲ್ಲಿ ಇದ್ದದ್ದಕ್ಕಿಂತ ಇಂದು ಭ್ರಷ್ಟತೆಯ ವಿಷವೃಕ್ಷವಾಗಿ ಬೆಳೆಯಲು ಪಾರ್ಟಿಯ ಅಜೆಂಡಾವೆ ಕಾರಣವಂತಲ್ಲಾ. ಅಂದು ನಾಗಪುರದಿಂದ ಹೊರಟ ಆದೇಶದಂತೆ ಬಿಜೆಪಿ ಈ ದೇಶದಲ್ಲಿ ಬಲಿಷ್ಟವಾಗಿ ಬೇರೂರಬೇಕಾದರೆ ಹಣ ಬೇಕು. ಆ ಹಣ ಸರಕಾರದ ಖಜಾನೆಯಿಂದಲೇ ಬರಬೇಕು ಮತ್ತು ಸರಕಾರದ ಕಾರ್ಯಕ್ರಮಗಳಿಂದಲೇ ಕಟಾವಾಗಬೇಕು, ಹುದ್ದೆ ನೀಡುವಲ್ಲಿ ವಸೂಲಾಗಬೇಕು, ಆದ್ದರಿಂದ ಪಾರ್ಟಿಯ ಕಾರ್ಯಕರ್ತರು ಪಾರ್ಟಿಯವರ ಮೇಲೆ ಭ್ರಷ್ಟತೆ ಆಪಾದನೆ ಮಾಡಬಾರದು, ತಮ್ಮ ಪಾಲನ್ನು ಪ್ರಸಾದದಂತೆ ಪಡೆದು ಪಾರ್ಟಿ ಬೆಳೆಯಲು ಅನುಕೂಲ ಮಾಡಿಕೊಡಬೇಕು ಎಂಬ ಮೌಖಿಕ ಕಾನೂನು ಜಾರಿಯಾದ್ದುದರಿಂದ ಅವ್ಯಾಹತವಾಗಿ ಸರಕಾರದಿಂದಲೇ ಭ್ರಷ್ಟತೆ ನಡೆದಿದ್ದರಿಂದ, ಸದ್ಯಕ್ಕೆ ಕರ್ನಾಟಕ ಹಂಡ್ರೆಡ್ ಪರಸೆಂಟ್ ಭ್ರಷ್ಟತೆಯಲ್ಲಿ ಮುಳುಗಿದೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಈಗ ಎತ್ತಿಗೆ ಲಾಳ ಕಟ್ಟೋರು ಯಾರು ಅಂತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...