Homeಅಂಕಣಗಳುಕೊರೊನಾ ಅಲೆ ಬಿಜೆಪಿ ಒಂದೇ ತರ ಕಾಣುತ್ತಿವೆಯಲ್ಲಾ

ಕೊರೊನಾ ಅಲೆ ಬಿಜೆಪಿ ಒಂದೇ ತರ ಕಾಣುತ್ತಿವೆಯಲ್ಲಾ

- Advertisement -
- Advertisement -

ಮತ್ತೆ ಕೊರೊನಾ ಬೆದರುಬೊಂಬೆಯನ್ನು ತೋರಹೊರಟಿರುವ ಬಿಜೆಪಿ ನಡವಳಿಕೆಯನ್ನ ನೋಡಿದ ಕರ್ನಾಟಕದ ಜನ ಕೊರೊನಾಕ್ಕೂ ಬಿಜೆಪಿಗೂ ಶಾನೆ ಹೋಲಿಕೆ ಇದೆ ಎನ್ನತೊಡಗಿದ್ದಾರಲ್ಲಾ. ಕೊರೊನಾ ಅಲೆಗಳಂತೆಯೇ ಬಿಜೆಪಿ ಪಾರ್ಟಿಯ ಕಾರ್ಯಕ್ರಮಗಳು ಅಲೆಅಲೆಯಾಗಿ ಬಂದು ಮುಸ್ಲಿಮರ ಮೇಲೆ ಅಪ್ಪಳಿಸಿದವು. ಅದರ ಪರಿಣಾಮ ಮುಸ್ಲಿಮರು ಮತ್ತು ಹಿಂದೂಗಳೂ ತತ್ತರಿಸಿಹೋದರು. ಮುಸ್ಲಿಮರನ್ನು ಗುರಿಯಾಗಿಸಿ ಬಿಟ್ಟ ಬಾಣಗಳು ಹಿಂದೂಗಳಿಗೂ ತಾಗಿ, ರಂಜಾನ್ ಟೈಮಿನಲ್ಲಿ ಮುಸ್ಲಿಮರು ಕೂಡ ಹಿಂದೂ ಬಡವರಿಗೆ ಸಹಾಯ ಮಾಡುತ್ತ ಇಫ್ತಾರ್ ಕೂಟಗಳಿಗೆ ಹಿಂದೂಗಳನ್ನು ಕರೆಯುತ್ತ ಸಾಮರಸ್ಯಕ್ಕೆ ಕರೆಕೊಟ್ಟಿದ್ದನ್ನ ನೋಡಿದ ಬಿಜೆಪಿಗಳು ಬೇರೆ ತಂತ್ರ ಆಲೋಚಿಸುತ್ತಿರುವಾಗ ಕೊರೊನಾವೂ ಕೂಡ ಛದ್ಮವೇಶದಲ್ಲಿ ರೆಡಿಯಾಗುತ್ತಿದೆಯಂತಲ್ಲಾ. ಸಾಂಕ್ರಾಮಿಕ ಕಾಯಿಲೆಯೊಂದು ರಾಜಕೀಯ ಪಾರ್ಟಿಯ ಜೊತೆ ಕೈಜೋಡಿಸಿ ಕೆಲಸ ಮಾಡಿದ್ದು ಚರಿತ್ರೆಯಲ್ಲೇ ಇಲ್ಲವಂತಲ್ಲಾ. ಆದರೆ ಕರ್ನಾಟಕದ ಮಟ್ಟಿಗೆ ಆಡಳಿತವನ್ನೆ ನಡೆಸದೆ ದಿಕ್ಕು ದೆಸೆಯಿಲ್ಲದೆ ಮುನ್ನಡೆಯುತ್ತಿರುವ ಪಾರ್ಟಿಯ ಆಸರೆಗೆ ಕೊರೊನಾ ಬಂದಿರುವುದು ಅಚ್ಚರಿಯ ಸಂಗತಿಯಾಗಿದೆಯಲ್ಲಾ, ಥೂತ್ತೇರಿ.

******

ಮುಸ್ಲಿಂ ಧರ್ಮದ ಮೇಲೆ ಎಲ್ಲಾ ಬಗೆಯ ಹಗೆಯ ಪ್ರಯೋಗ ನಡೆದ ಮೇಲೆ ಈಗ ಮಸೀದಿಗಳಲ್ಲಿನ ಧ್ವನಿವರ್ಧಕದ ಮೇಲೆ ಮುತಾಲಿಕ್ ಬಿದ್ದಿದ್ದಾರಲ್ಲಾ. ಮುತಾಲಿಕ್ ಮತಿಗೆಟ್ಟು ಮಾತನಾಡುತ್ತಿದ್ದಾರೆಂದು ಪರಿಗಣಿಸುವಂತಿಲ್ಲ. ಆತನ ಒತ್ತಾಯದ ಹಿಂದೆ ಬಿಜೆಪಿ ದನಿ ಅಡಗಿದೆ. ಹಾಗೆ ನೋಡಿದರೆ ಈ ಹಿಂದೆ ಅನಂತಕುಮಾರ ಹೆಗಡೆ ಎಂಬಾತ ಪುರೋಹಿತಶಾಹಿ ಪಿತ್ತ ನೆತ್ತಿಗೇರಿಸಿಕೊಂಡು ನಾವು ಅಂಬೇಡ್ಕರ್ ಸಂವಿಧಾನವನ್ನು ಬದಲಿಸುತ್ತೇವೆ, ಅದಕ್ಕಾಗಿಯೇ ಬಂದಿರುವುದು ಎಂದಾಗ ಇಡೀ ದೇಶದ ಯಾವ ಬಿಜೆಪಿಗನೂ ಇದನ್ನ ಖಂಡಿಸಲಿಲ್ಲ. ಅಂತೆಯೇ ಕೆಂಪುಕೋಟೆಯ ಮೇಲೆ ಭಗವಾಧ್ವಜವನ್ನ ಮುಂದೆ ಹಾರಿಸುತ್ತೇವೆ ಎಂದು ಈಶ್ವರಪ್ಪ ಹೇಳಿದಾಗ ಯಾವ ಬಿಜೆಪಿ ’ದೇಶಪ್ರೇಮಿ’ಯೂ ಪ್ರತಿಹೇಳಲಿಲ್ಲ. ಅಲ್ಲಿ ಈಶ್ವರಪ್ಪನ ಮಾತು ಬಿಜೆಪಿಯ ಮಾತಾಗಿ ಉಳಿಯಿತು. ಹಾಗೆಯೇ ಮುತಾಲಿಕ್ ಮಾತೂ ಕೂಡ ಬಿಜೆಪಿಯ ಅಧಿಕೃತ ಘೋಷಣೆಯಿರಬಹುದೆಂದು ಚಿಂತಿಸುತ್ತಿರುವಾಗ, ರಂಜಾನ್ ಸಮಯದಲ್ಲಿಯೇ ಈಶ್ವರಪ್ಪನವರ ದುನಿಯ ಖತಂ ಆಯಿತಂತಲ್ಲಾ, ಥೂತ್ತೇರಿ.

*****

ಬಿಜೆಪಿಯೊಳಗಿನ ಗರ್ಭಗುಡಿಯ ಸಂಸ್ಕೃತಿ ಕಾರ್ಯಾಚರಣೆಗಳ ಸೂಚನೆ ಸಂತೋಷ್ ಮುಖಾಂತರ ಹೊರಬರುವ ಕಾರಣಕ್ಕೆ ಸಂಘಿಗಳಲ್ಲದ ಬಿಜೆಪಿ ಜನನಾಯಕರ ಜಂಘಾಬಲವೇ ಉಡುಗಿ ಹೋಗಿದೆಯಂತಲ್ಲಾ. ಬಿಜೆಪಿ ಗರ್ಭಗುಡಿಯ ಮಹಿಮೆ ತಿಳಿಯದವರು ದೀಢಿರಂಥ ಬಿಜೆಪಿ ಸೇರಿ, ಅಲ್ಲಿನ ಪಡಸಾಲೆಯಲ್ಲಿ ಕುಳಿತು ಗರ್ಭಗುಡಿಯಲ್ಲಿನ ಪಿಸುಮಾತಿಗೆ ಹೆದರಿ ಓಡಿ ಬಂದ ನೂರಾರು ಉದಾಹರಣೆಗಳಿವೆ. ಆ ಗರ್ಭಗುಡಿಯ ಪ್ರವೇಶ ಪಡೆಯಬೇಕಾದರೆ ಟೋಪಿ ಲಾಟಿ ಗಾಳಿಯಾಡುವ ಚಡ್ಡಿಯೊಂದಿಗೆ, ಸುರಕ್ಷಿತವಾದ ಮೈದಾನದಲ್ಲಿ ನಿಂತು, ’ನಮಸ್ತೇ ಸದಾವತ್ಸಲೇ ಮಾತೃಭೂಮಿ’ ಎಂದು ಎದೆ ಮೇಲೆ ಕೈಯಿಟ್ಟು ಭಗವಾಧ್ವಜಕ್ಕೆ ವಂದಿಸಿರಬೇಕು. ಅದೂ ವರ್ಷಾನುಗಟ್ಟಲೆ ನಡೆಯಬೇಕು. ಈ ಬೈಟಕ್‌ನ ವಿಷಯ ಕರಗತವಾದ ಮೇಲೆಯೇ ಗರ್ಭಗುಡಿಯ ಪ್ರವೇಶ ದಕ್ಕುವುದು. ಸದರಿ ಸರಕಾರದಲ್ಲಿ ಕಾಂಗ್ರೆಸ್ ದಳದಿಂದ ತುಡುಗು ದನಗಳು ಓಡಿಬಂದು ಮೈಮೇಲೆ ನೆದರಿಲ್ಲದೆ ಮೇಯುತ್ತಿವೆ. ಅವುಗಳನ್ನೆಲ್ಲಾ ಪಿಂಜರಾಪೋಲು ದೊಡ್ಡಿಗೆ ದೂಡಬೇಕಾದರೆ ಕೆಲವು ಮಾನದಂಡಗಳನ್ನ ಕಿಡಿಮಾಡಿಕೊಳ್ಳಬೇಕಾಗುತ್ತದೆ. ಅಂತಹ ಹತಾರಗಳನ್ನಾಗಲೇ ಮಸೆಯುತ್ತಿರುವ ಸಂತೋಷ್ ಎಂಬ ಸಂಘವೀರನ ಮಾತಿನಿಂದ ಮುಮಂ ಬಸವರಾಜ ಬೊಮ್ಮಾಯಿ ಬಸವಳಿದು ಹೋಗಿದ್ದಾರಂತಲ್ಲಾ, ಥೂತ್ತೇರಿ.

*****

ಪಿಎಸ್‌ಐ ಅಕ್ರಮದಿಂದ ರಾಜ್ಯದ ಬಿಜೆಪಿ ಸರಕಾರ ಭ್ರಷ್ಟತೆಯಲ್ಲಿ ನೂರು ಪರಸೆಂಟ್ ಗಡಿಯನ್ನು ಮುಟ್ಟಿತಂತಲ್ಲಾ. ಕರ್ನಾಟಕದಲ್ಲಿ ಯಾವುದೂ ನ್ಯಾಯವಾಗಿ ಸಿಗುವುದಿಲ್ಲ, ಎಲ್ಲದಕ್ಕೂ ಲಂಚ ಕೊಡಲೇಬೇಕೆಂಬ ನಿಯಮ ಜಾರಿಯಾದುದಕ್ಕೆ ಕಾರಣ ಹುಡುಕುತ್ತ ಹೋದರೆ, ಒಂದು ಕಾಲದಲ್ಲಿ ಅಷ್ಟೋಇಷ್ಟೋ ಪ್ರಾಮಾಣಿಕವಾಗಿದ್ದ ಅಂದರೆ, ಎ.ಕೆ ಸುಬ್ಬಯ್ಯ ಶಿವಪ್ಪನವರ ಕಾಲದಲ್ಲಿ ಇದ್ದದ್ದಕ್ಕಿಂತ ಇಂದು ಭ್ರಷ್ಟತೆಯ ವಿಷವೃಕ್ಷವಾಗಿ ಬೆಳೆಯಲು ಪಾರ್ಟಿಯ ಅಜೆಂಡಾವೆ ಕಾರಣವಂತಲ್ಲಾ. ಅಂದು ನಾಗಪುರದಿಂದ ಹೊರಟ ಆದೇಶದಂತೆ ಬಿಜೆಪಿ ಈ ದೇಶದಲ್ಲಿ ಬಲಿಷ್ಟವಾಗಿ ಬೇರೂರಬೇಕಾದರೆ ಹಣ ಬೇಕು. ಆ ಹಣ ಸರಕಾರದ ಖಜಾನೆಯಿಂದಲೇ ಬರಬೇಕು ಮತ್ತು ಸರಕಾರದ ಕಾರ್ಯಕ್ರಮಗಳಿಂದಲೇ ಕಟಾವಾಗಬೇಕು, ಹುದ್ದೆ ನೀಡುವಲ್ಲಿ ವಸೂಲಾಗಬೇಕು, ಆದ್ದರಿಂದ ಪಾರ್ಟಿಯ ಕಾರ್ಯಕರ್ತರು ಪಾರ್ಟಿಯವರ ಮೇಲೆ ಭ್ರಷ್ಟತೆ ಆಪಾದನೆ ಮಾಡಬಾರದು, ತಮ್ಮ ಪಾಲನ್ನು ಪ್ರಸಾದದಂತೆ ಪಡೆದು ಪಾರ್ಟಿ ಬೆಳೆಯಲು ಅನುಕೂಲ ಮಾಡಿಕೊಡಬೇಕು ಎಂಬ ಮೌಖಿಕ ಕಾನೂನು ಜಾರಿಯಾದ್ದುದರಿಂದ ಅವ್ಯಾಹತವಾಗಿ ಸರಕಾರದಿಂದಲೇ ಭ್ರಷ್ಟತೆ ನಡೆದಿದ್ದರಿಂದ, ಸದ್ಯಕ್ಕೆ ಕರ್ನಾಟಕ ಹಂಡ್ರೆಡ್ ಪರಸೆಂಟ್ ಭ್ರಷ್ಟತೆಯಲ್ಲಿ ಮುಳುಗಿದೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಈಗ ಎತ್ತಿಗೆ ಲಾಳ ಕಟ್ಟೋರು ಯಾರು ಅಂತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...