Homeಮುಖಪುಟಕೊರೊನಾ ಮುನ್ನೆಚ್ಚರಿಕೆ: ಮಂಡ್ಯದ ಗಾರ್ಮೆಂಟ್ಸ್‌ಗಳಿಗೆ 10ದಿನ ರಜೆ ಘೋಷಿಸಿ, ಏಕಾಏಕಿ ಹಿಂಪಡೆದ ಜಿಲ್ಲಾಡಳಿತ!

ಕೊರೊನಾ ಮುನ್ನೆಚ್ಚರಿಕೆ: ಮಂಡ್ಯದ ಗಾರ್ಮೆಂಟ್ಸ್‌ಗಳಿಗೆ 10ದಿನ ರಜೆ ಘೋಷಿಸಿ, ಏಕಾಏಕಿ ಹಿಂಪಡೆದ ಜಿಲ್ಲಾಡಳಿತ!

ಗಾರ್ಮೆಂಟ್ಸ್‌ ಮಾಲೀಕರ ಒತ್ತಡಕ್ಕೆ ಮಣಿದ ಜಿಲ್ಲಾಡಳಿತದ ವಿರುದ್ಧ ಕಾರ್ಮಿಕರ ಅಸಮಾಧಾನ...

- Advertisement -
- Advertisement -

ಸಾಮುದಾಯಿಕವಾಗಿ ಕೊರೊನಾ ಹರಡದಂತೆ ತಡೆಯಲು ಎಲ್ಲೆಲ್ಲೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಐಟಿ ಕಂಪನಿಗಳು ಈಗಾಗಲೇ ಮನೆಯಿಂದಲೇ ಕೆಲಸ ಮಾಡಲು ಸೂಚಿಸಿವೆ. ಕರ್ನಾಟಕ ಸರ್ಕಾರವೇ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ತುರ್ತು ಪರಿಸ್ಥಿತಿ ಘೋಷಿಸಿದೆ. ಪ್ರಧಾನಿ ಮೋದಿಯವರು ಮಾರ್ಚ್‌ 22ರಂದು ಮನೆಯಲ್ಲಿಯೇ ಇದ್ದು ಅಂತರ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಕೊರೊನಾ ಹರಡುವಿಕೆ ಭಾರತದಲ್ಲಿ ಮೊದಲ ಹಂತದಲ್ಲಿದ್ದ ಅದು ಎರಡು ಮತ್ತು ಮೂರನೇ ಹಂತಕ್ಕೆ ಹೋಗದಂತೆ ತಡೆಯಲು ತೀವ್ರ ಎಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಆದರೆ ಕೆಲವು ಕಾರ್ಖಾನೆಗಳು ಮತ್ತು ಗಾರ್ಮೆಂಟ್ಸ್‌ಗಳು ಮಾತ್ರ ಇನ್ನು ಲಾಭದ ಹಂಗಿನಿಂದ ಹೊರಬಂದಂತೆ ಕಾಣುತ್ತಿಲ್ಲ.

ಮಾರ್ಚ್‌ 19ರಂದು ಮಂಡ್ಯದ ಜಿಲ್ಲಾಧಿಕಾರಿಗಳಾದ ಎಂ.ವಿ ವೆಂಕಟೇಶ್‌ರವರು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಗಾರ್ಮೆಂಟ್ಸ್‌ಗಳಿಗೆ ಮಾರ್ಚ್‌ 31ರವರೆಗೆ ರಜೆ ಘೋಷಿಸಿದ್ದರು. ಅವರು ಹೊರಡಿಸಿದ್ದ ಆದೇಶದಲ್ಲಿ ಅದು ಸಂಬಳಸಹಿತ ರಜೆಯೊ, ಸಂಬಳ ರಹಿತ ರಜೆಯೊ ಅದನ್ನು ಕೂಡ ಕಾರ್ಮಿಕರಿಗೆ ತಿಳಿಸಿರಲಿಲ್ಲ. ಆದರೆ ಪತ್ರಿಕೆಗಳ ಜೊತೆ ಮಾತನಾಡಿದಾಗ ಸಂಬಳ ಸಹಿತ ರಜೆ ಎಂದು ತಿಳಿಸಿದ್ದರು. ಇದರಿಂದ ಜಿಲ್ಲೆಯಲ್ಲಿ ಕೆಲಸ ಮಾಡುವ ಸುಮಾರು 20 ಸಾವಿರ ಗಾರ್ಮೆಂಟ್ಸ್‌ ನೌಕರರು ನಿಟ್ಟುಸಿರು ಬಿಟ್ಟು ಮಾರ್ಚ್‌ 20ರಂದು ಕೆಲಸಕ್ಕೆ ತೆರಳದೆ ಮನೆಯಲ್ಲಿಯೇ ಉಳಿದರು.

ಆದರೆ ಅದೇ ದಿನ ಗಾರ್ಮೆಂಟ್ಸ್‌ಗಳ ಮ್ಯಾನೇಜರ್‌ಗಳು ಈ ನಿರ್ಧಾರದ ವಿರುದ್ಧ ಕಿಡಿಕಾರಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿನ ಈ ನಿರ್ಧಾರ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅನ್ವಯವಾಗಬೇಕಾಗುತ್ತದೆ. ಇದರಿಂದ ಕಂಪನಿಗೆ ನಷ್ಟವುಂಟಾಗುತ್ತದೆ ಎಂದು ಜಿಲ್ಲಾಧಿಕಾರಿಗಳೊಡನೆ ಸಭೆ ನಡೆಸಿ, ರದ್ದುಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರಿಂದಲೇ ಜಿಲ್ಲಾಧಿಕಾರಿಗೆ ಫೋನ್‌ ಮಾಡಿಸಲಾಗಿದೆ ಎನ್ನಲಾಗಿದೆ. ಒತ್ತಾಯಕ್ಕೆ ಮಣಿದ ಜಿಲ್ಲಾಧಿಕಾರಿಗಳು ರಜೆ ರದ್ದುಗೊಳಿಸಿದ್ದಾರೆ. ಗಾರ್ಮೆಂಟ್ಸ್‌ನಿಂದ ಎಲ್ಲಾ ಕಾರ್ಮಿಕರಿಗೆ ಕರೆ ಮಾಡಿ ಮಾರ್ಚ್‌ 21ರಿಂದಲೇ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಹೆಸರು ಹೇಳಲು ಇಚ್ಚಿಸದ ಕಾರ್ಮಿಕರೊಬ್ಬರು ನಾನುಗೌರಿ.ಕಾಂಗೆ ಖಚಿತಪಡಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಗಾರ್ಮೆಂಟ್ ಅಂಡ್ ಟೆಕ್ಸ್ ಟೈಲ್ ವರ್ಕರ್ಸ್ ಯೂನಿಯನ್‌ನ ಜಯರಾಮ್ ಎ. ಹೆಚ್ ರವರನ್ನು ಮಾತನಾಡಿಸಿತು. ಅವರು “ಒಟ್ಟು ಮಂಡ್ಯ ಜಿಲ್ಲೆಯಲ್ಲಿ 10-15 ಸಾವಿರ ಮಹಿಳಾ ಕಾರ್ಮಿಕರು ಹಲವು ಗಾರ್ಮೆಂಟ್ಸ್‌‌ಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ 30ಜನರ ಮಾದರಿಗಳನ್ನು ಪರೀಕ್ಷೆಗೆ ಕಳಿಸಲಾಗಿದೆ. ಅಪ್ಪಿ ತಪ್ಪಿ ಸೋಂಕು ಹರಡಿದರೆ ಬಹಳ ದೊಡ್ಡ ಅನಾಹುತಕ್ಕೆ ಕಾರಣವಾಗುತ್ತದೆ. ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲಿ ಸಂಬಳ ಸಹಿತ ರಜೆ ನೀಡಿ ಈ ಕಾರ್ಮಿಕರ ಹಿತಕಾಯಬೇಕಾಗಿರುವುದು ಸರ್ಕಾರ ಮತ್ತು ಜಿಲ್ಲಾಢಳಿತದ ಕೆಲಸ. ಆದರೆ ರಜೆ ರದ್ದುಗೊಳಿಸಿವುದು ದೊಡ್ಡ ಪ್ರಮಾದವಾಗಿದೆ. ಶಾಹಿ ಎಕ್ಸ್‌ಪೋರ್ಟ್‌ ಗಾರ್ಮೆಂಟ್ಸ್‌ನ ಆಡಳಿತ ಮಂಡಳಿಯೇ ಇದಕ್ಕೆಲ್ಲಾ ನೇತೃತ್ವ ವಹಿಸಿದ್ದಾರೆ. ತಮ್ಮ ಲಾಭದ ದುರಾಸೆಗಾಗಿ ತಾವೇ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆ ನೀಡಿ ರಜೆಯನ್ನು ರದ್ದುಗೊಳಿಸಲು ಕಾರಣರಾಗಿದ್ದಾರೆ ಎಂದು ದೂರಿದರು.

ಜಿಲ್ಲಾಧಿಕಾರಿಗಳು ರಜೆಯ ಆದೇಶವನ್ನು ಹಿಂಪಡೆಯುವ ಮೂಲಕ ತಾನೆಂಥ ಜನ ವಿರೋಧಿ, ಮಹಿಳಾ ಕಾರ್ಮಿಕ ವಿರೋಧಿ, ಹೊಣೆಗೇಡಿ ಮತ್ತು ಬಂಡವಾಳ ಶಾಹಿ ಮಾಲೀಕರ ಪರ ಎಂಬುದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾರೆ. ರಾಜ್ಯದಲ್ಲಿ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಬಡ, ಮಹಿಳಾ ಕಾರ್ಮಿಕರು ಗಾರ್ಮೆಂಟ್ಸ್ ಗಳಲ್ಲಿ ಕನಿಷ್ಠ ವೇತನ ಪಡೆದು ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಜೆ ಹಿಂಪಡೆದಿರುವುದು ಸರಿಯಲ್ಲ. ಸರಕಾರ ಈಗ ಹೊರಡಿಸಿರುವ ಆದೇಶ ಪತ್ರವನ್ನು ಮರುಪರಿಶೀಲಿಸಿ ಕೊರೊನಾ ವೈರಸ್ ತಹಬಂದಿಗೆ ಬರುವವರೆಗೆ ಗಾರ್ಮೆಂಟ್ಸ್ ಉದ್ದಿಮೆಗಳನ್ನು ಮುಚ್ಚುವಂತೆ ಆದೇಶಿಸಿ ಗಾರ್ಮೆಂಟ್ಸ್ ನೌಕರರ ಅರೋಗ್ಯ ಮತ್ತು ಪ್ರಾಣ ಕಾಪಾಡಲಿ ಇಲ್ಲದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಅವರು ಒತ್ತಾಯಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳ ಪ್ರತಿಕ್ರಿಯೆ ಪಡೆಯಲು ಹಲವು ಬಾರಿ ಅವರ ಕಚೇರಿಗೆ ಸಂಪರ್ಕಿಸಿದರೂ ಸಹ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಕೊರೊನಾದಂತಹ ಸಾಮುದಾಯಿಕವಾಗಿ ಹಬ್ಬುವ ವೈರಸ್‌ಗಳನ್ನು ತಡೆಯುವುದು ಇಡೀ ದೇಶದ ನಾಗರಿಕರ ಜವಾಬ್ದಾರಿಯಾಗಿದೆ. ಅದಕ್ಕಾಗಿಯೇ ದೂರ ಇದ್ದು, ಮನೆಗಳಲ್ಲಿಯೇ ಉಳಿದು ಪ್ರತಿಯೊಬ್ಬರೂ ಅದರ ವಿರುದ್ಧ ಹೋರಾಡಬೇಕಿದೆ. ಇಂತಹ ಸಂದರ್ಭದಲ್ಲಿ ಕೇವಲ ಗಾರ್ಮೆಂಟ್ಸ್‌ಗಳ ಲಾಭದ ದುರಾಸೆಗಾಗಿ ರಜೆ ರದ್ದುಗೊಳಿಸಿ ಅವರಿಂದ ದುಡಿಸಿಕೊಳ್ಳಲು ಹೊರಟಿರುವುದು ಅಪಾಯಕಾರಿ ನಡೆಯಾಗಿದೆ. ಇನ್ನು ಭಾನುವಾರ ಮೋದಿಯವರೇ ಮನೆಯಿಂದ ಹೊರಬರಬೇಡಿ ಎಂದರೆ ಬೆಂಗಳೂರಿನ ಶಾಹಿ ಎಕ್ಸ್‌ಪೋರ್ಟ್‌ ಗಾರ್ಮೆಂಟ್ಸ್‌ನಲ್ಲಿ ತನ್ನ ಕಾರ್ಮಿಕರಿಗೆ ಕೆಲಸಕ್ಕೆ ಹಾಜರಾಗಬೇಕೆಂದು ತಾಕೀತು ಮಾಡಿದೆ. ಇದೆಂತೆಹ ದ್ವಂದ್ವ?

ಸರ್ಕಾರ ಈ ಕೂಡಲೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಸಂಬಳ ಸಹಿತ ರಜೆ ನೀಡಿ ಕಾರ್ಮಿಕರ ಹಿತ ಕಾಯಬೇಕಾಗಿದೆ. ಇಲ್ಲದಿದ್ದಲ್ಲಿ ಮುಂದೆ ಒದಗುವ ಭಾರೀ ಅನಾಹುತವನ್ನು ಎದುರಿಸಬೇಕಾಗುತ್ತದೆ.


ಇದನ್ನೂ ಓದಿ: ಕೊರೊನಾ ಮುನ್ನೆಚ್ಚರಿಕೆ : ಸಾವಿರಾರು ಜನ ಸೇರುವ ಗಾರ್ಮೆಂಟ್ಸ್, ಕಂಪನಿಗಳಿಗೆ ರಜೆ ಇಲ್ಲ ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...