Homeಮುಖಪುಟಕೊರೊನಾ ಮುನ್ನೆಚ್ಚರಿಕೆ: ಮಂಡ್ಯದ ಗಾರ್ಮೆಂಟ್ಸ್‌ಗಳಿಗೆ 10ದಿನ ರಜೆ ಘೋಷಿಸಿ, ಏಕಾಏಕಿ ಹಿಂಪಡೆದ ಜಿಲ್ಲಾಡಳಿತ!

ಕೊರೊನಾ ಮುನ್ನೆಚ್ಚರಿಕೆ: ಮಂಡ್ಯದ ಗಾರ್ಮೆಂಟ್ಸ್‌ಗಳಿಗೆ 10ದಿನ ರಜೆ ಘೋಷಿಸಿ, ಏಕಾಏಕಿ ಹಿಂಪಡೆದ ಜಿಲ್ಲಾಡಳಿತ!

ಗಾರ್ಮೆಂಟ್ಸ್‌ ಮಾಲೀಕರ ಒತ್ತಡಕ್ಕೆ ಮಣಿದ ಜಿಲ್ಲಾಡಳಿತದ ವಿರುದ್ಧ ಕಾರ್ಮಿಕರ ಅಸಮಾಧಾನ...

- Advertisement -
- Advertisement -

ಸಾಮುದಾಯಿಕವಾಗಿ ಕೊರೊನಾ ಹರಡದಂತೆ ತಡೆಯಲು ಎಲ್ಲೆಲ್ಲೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಐಟಿ ಕಂಪನಿಗಳು ಈಗಾಗಲೇ ಮನೆಯಿಂದಲೇ ಕೆಲಸ ಮಾಡಲು ಸೂಚಿಸಿವೆ. ಕರ್ನಾಟಕ ಸರ್ಕಾರವೇ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ತುರ್ತು ಪರಿಸ್ಥಿತಿ ಘೋಷಿಸಿದೆ. ಪ್ರಧಾನಿ ಮೋದಿಯವರು ಮಾರ್ಚ್‌ 22ರಂದು ಮನೆಯಲ್ಲಿಯೇ ಇದ್ದು ಅಂತರ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಕೊರೊನಾ ಹರಡುವಿಕೆ ಭಾರತದಲ್ಲಿ ಮೊದಲ ಹಂತದಲ್ಲಿದ್ದ ಅದು ಎರಡು ಮತ್ತು ಮೂರನೇ ಹಂತಕ್ಕೆ ಹೋಗದಂತೆ ತಡೆಯಲು ತೀವ್ರ ಎಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಆದರೆ ಕೆಲವು ಕಾರ್ಖಾನೆಗಳು ಮತ್ತು ಗಾರ್ಮೆಂಟ್ಸ್‌ಗಳು ಮಾತ್ರ ಇನ್ನು ಲಾಭದ ಹಂಗಿನಿಂದ ಹೊರಬಂದಂತೆ ಕಾಣುತ್ತಿಲ್ಲ.

ಮಾರ್ಚ್‌ 19ರಂದು ಮಂಡ್ಯದ ಜಿಲ್ಲಾಧಿಕಾರಿಗಳಾದ ಎಂ.ವಿ ವೆಂಕಟೇಶ್‌ರವರು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಗಾರ್ಮೆಂಟ್ಸ್‌ಗಳಿಗೆ ಮಾರ್ಚ್‌ 31ರವರೆಗೆ ರಜೆ ಘೋಷಿಸಿದ್ದರು. ಅವರು ಹೊರಡಿಸಿದ್ದ ಆದೇಶದಲ್ಲಿ ಅದು ಸಂಬಳಸಹಿತ ರಜೆಯೊ, ಸಂಬಳ ರಹಿತ ರಜೆಯೊ ಅದನ್ನು ಕೂಡ ಕಾರ್ಮಿಕರಿಗೆ ತಿಳಿಸಿರಲಿಲ್ಲ. ಆದರೆ ಪತ್ರಿಕೆಗಳ ಜೊತೆ ಮಾತನಾಡಿದಾಗ ಸಂಬಳ ಸಹಿತ ರಜೆ ಎಂದು ತಿಳಿಸಿದ್ದರು. ಇದರಿಂದ ಜಿಲ್ಲೆಯಲ್ಲಿ ಕೆಲಸ ಮಾಡುವ ಸುಮಾರು 20 ಸಾವಿರ ಗಾರ್ಮೆಂಟ್ಸ್‌ ನೌಕರರು ನಿಟ್ಟುಸಿರು ಬಿಟ್ಟು ಮಾರ್ಚ್‌ 20ರಂದು ಕೆಲಸಕ್ಕೆ ತೆರಳದೆ ಮನೆಯಲ್ಲಿಯೇ ಉಳಿದರು.

ಆದರೆ ಅದೇ ದಿನ ಗಾರ್ಮೆಂಟ್ಸ್‌ಗಳ ಮ್ಯಾನೇಜರ್‌ಗಳು ಈ ನಿರ್ಧಾರದ ವಿರುದ್ಧ ಕಿಡಿಕಾರಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿನ ಈ ನಿರ್ಧಾರ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅನ್ವಯವಾಗಬೇಕಾಗುತ್ತದೆ. ಇದರಿಂದ ಕಂಪನಿಗೆ ನಷ್ಟವುಂಟಾಗುತ್ತದೆ ಎಂದು ಜಿಲ್ಲಾಧಿಕಾರಿಗಳೊಡನೆ ಸಭೆ ನಡೆಸಿ, ರದ್ದುಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರಿಂದಲೇ ಜಿಲ್ಲಾಧಿಕಾರಿಗೆ ಫೋನ್‌ ಮಾಡಿಸಲಾಗಿದೆ ಎನ್ನಲಾಗಿದೆ. ಒತ್ತಾಯಕ್ಕೆ ಮಣಿದ ಜಿಲ್ಲಾಧಿಕಾರಿಗಳು ರಜೆ ರದ್ದುಗೊಳಿಸಿದ್ದಾರೆ. ಗಾರ್ಮೆಂಟ್ಸ್‌ನಿಂದ ಎಲ್ಲಾ ಕಾರ್ಮಿಕರಿಗೆ ಕರೆ ಮಾಡಿ ಮಾರ್ಚ್‌ 21ರಿಂದಲೇ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಹೆಸರು ಹೇಳಲು ಇಚ್ಚಿಸದ ಕಾರ್ಮಿಕರೊಬ್ಬರು ನಾನುಗೌರಿ.ಕಾಂಗೆ ಖಚಿತಪಡಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಗಾರ್ಮೆಂಟ್ ಅಂಡ್ ಟೆಕ್ಸ್ ಟೈಲ್ ವರ್ಕರ್ಸ್ ಯೂನಿಯನ್‌ನ ಜಯರಾಮ್ ಎ. ಹೆಚ್ ರವರನ್ನು ಮಾತನಾಡಿಸಿತು. ಅವರು “ಒಟ್ಟು ಮಂಡ್ಯ ಜಿಲ್ಲೆಯಲ್ಲಿ 10-15 ಸಾವಿರ ಮಹಿಳಾ ಕಾರ್ಮಿಕರು ಹಲವು ಗಾರ್ಮೆಂಟ್ಸ್‌‌ಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ 30ಜನರ ಮಾದರಿಗಳನ್ನು ಪರೀಕ್ಷೆಗೆ ಕಳಿಸಲಾಗಿದೆ. ಅಪ್ಪಿ ತಪ್ಪಿ ಸೋಂಕು ಹರಡಿದರೆ ಬಹಳ ದೊಡ್ಡ ಅನಾಹುತಕ್ಕೆ ಕಾರಣವಾಗುತ್ತದೆ. ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲಿ ಸಂಬಳ ಸಹಿತ ರಜೆ ನೀಡಿ ಈ ಕಾರ್ಮಿಕರ ಹಿತಕಾಯಬೇಕಾಗಿರುವುದು ಸರ್ಕಾರ ಮತ್ತು ಜಿಲ್ಲಾಢಳಿತದ ಕೆಲಸ. ಆದರೆ ರಜೆ ರದ್ದುಗೊಳಿಸಿವುದು ದೊಡ್ಡ ಪ್ರಮಾದವಾಗಿದೆ. ಶಾಹಿ ಎಕ್ಸ್‌ಪೋರ್ಟ್‌ ಗಾರ್ಮೆಂಟ್ಸ್‌ನ ಆಡಳಿತ ಮಂಡಳಿಯೇ ಇದಕ್ಕೆಲ್ಲಾ ನೇತೃತ್ವ ವಹಿಸಿದ್ದಾರೆ. ತಮ್ಮ ಲಾಭದ ದುರಾಸೆಗಾಗಿ ತಾವೇ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆ ನೀಡಿ ರಜೆಯನ್ನು ರದ್ದುಗೊಳಿಸಲು ಕಾರಣರಾಗಿದ್ದಾರೆ ಎಂದು ದೂರಿದರು.

ಜಿಲ್ಲಾಧಿಕಾರಿಗಳು ರಜೆಯ ಆದೇಶವನ್ನು ಹಿಂಪಡೆಯುವ ಮೂಲಕ ತಾನೆಂಥ ಜನ ವಿರೋಧಿ, ಮಹಿಳಾ ಕಾರ್ಮಿಕ ವಿರೋಧಿ, ಹೊಣೆಗೇಡಿ ಮತ್ತು ಬಂಡವಾಳ ಶಾಹಿ ಮಾಲೀಕರ ಪರ ಎಂಬುದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾರೆ. ರಾಜ್ಯದಲ್ಲಿ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಬಡ, ಮಹಿಳಾ ಕಾರ್ಮಿಕರು ಗಾರ್ಮೆಂಟ್ಸ್ ಗಳಲ್ಲಿ ಕನಿಷ್ಠ ವೇತನ ಪಡೆದು ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಜೆ ಹಿಂಪಡೆದಿರುವುದು ಸರಿಯಲ್ಲ. ಸರಕಾರ ಈಗ ಹೊರಡಿಸಿರುವ ಆದೇಶ ಪತ್ರವನ್ನು ಮರುಪರಿಶೀಲಿಸಿ ಕೊರೊನಾ ವೈರಸ್ ತಹಬಂದಿಗೆ ಬರುವವರೆಗೆ ಗಾರ್ಮೆಂಟ್ಸ್ ಉದ್ದಿಮೆಗಳನ್ನು ಮುಚ್ಚುವಂತೆ ಆದೇಶಿಸಿ ಗಾರ್ಮೆಂಟ್ಸ್ ನೌಕರರ ಅರೋಗ್ಯ ಮತ್ತು ಪ್ರಾಣ ಕಾಪಾಡಲಿ ಇಲ್ಲದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಅವರು ಒತ್ತಾಯಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳ ಪ್ರತಿಕ್ರಿಯೆ ಪಡೆಯಲು ಹಲವು ಬಾರಿ ಅವರ ಕಚೇರಿಗೆ ಸಂಪರ್ಕಿಸಿದರೂ ಸಹ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಕೊರೊನಾದಂತಹ ಸಾಮುದಾಯಿಕವಾಗಿ ಹಬ್ಬುವ ವೈರಸ್‌ಗಳನ್ನು ತಡೆಯುವುದು ಇಡೀ ದೇಶದ ನಾಗರಿಕರ ಜವಾಬ್ದಾರಿಯಾಗಿದೆ. ಅದಕ್ಕಾಗಿಯೇ ದೂರ ಇದ್ದು, ಮನೆಗಳಲ್ಲಿಯೇ ಉಳಿದು ಪ್ರತಿಯೊಬ್ಬರೂ ಅದರ ವಿರುದ್ಧ ಹೋರಾಡಬೇಕಿದೆ. ಇಂತಹ ಸಂದರ್ಭದಲ್ಲಿ ಕೇವಲ ಗಾರ್ಮೆಂಟ್ಸ್‌ಗಳ ಲಾಭದ ದುರಾಸೆಗಾಗಿ ರಜೆ ರದ್ದುಗೊಳಿಸಿ ಅವರಿಂದ ದುಡಿಸಿಕೊಳ್ಳಲು ಹೊರಟಿರುವುದು ಅಪಾಯಕಾರಿ ನಡೆಯಾಗಿದೆ. ಇನ್ನು ಭಾನುವಾರ ಮೋದಿಯವರೇ ಮನೆಯಿಂದ ಹೊರಬರಬೇಡಿ ಎಂದರೆ ಬೆಂಗಳೂರಿನ ಶಾಹಿ ಎಕ್ಸ್‌ಪೋರ್ಟ್‌ ಗಾರ್ಮೆಂಟ್ಸ್‌ನಲ್ಲಿ ತನ್ನ ಕಾರ್ಮಿಕರಿಗೆ ಕೆಲಸಕ್ಕೆ ಹಾಜರಾಗಬೇಕೆಂದು ತಾಕೀತು ಮಾಡಿದೆ. ಇದೆಂತೆಹ ದ್ವಂದ್ವ?

ಸರ್ಕಾರ ಈ ಕೂಡಲೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಸಂಬಳ ಸಹಿತ ರಜೆ ನೀಡಿ ಕಾರ್ಮಿಕರ ಹಿತ ಕಾಯಬೇಕಾಗಿದೆ. ಇಲ್ಲದಿದ್ದಲ್ಲಿ ಮುಂದೆ ಒದಗುವ ಭಾರೀ ಅನಾಹುತವನ್ನು ಎದುರಿಸಬೇಕಾಗುತ್ತದೆ.


ಇದನ್ನೂ ಓದಿ: ಕೊರೊನಾ ಮುನ್ನೆಚ್ಚರಿಕೆ : ಸಾವಿರಾರು ಜನ ಸೇರುವ ಗಾರ್ಮೆಂಟ್ಸ್, ಕಂಪನಿಗಳಿಗೆ ರಜೆ ಇಲ್ಲ ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....