Homeಮುಖಪುಟಕೊರೊನಾ ಮುನ್ನೆಚ್ಚರಿಕೆ: ಮಂಡ್ಯದ ಗಾರ್ಮೆಂಟ್ಸ್‌ಗಳಿಗೆ 10ದಿನ ರಜೆ ಘೋಷಿಸಿ, ಏಕಾಏಕಿ ಹಿಂಪಡೆದ ಜಿಲ್ಲಾಡಳಿತ!

ಕೊರೊನಾ ಮುನ್ನೆಚ್ಚರಿಕೆ: ಮಂಡ್ಯದ ಗಾರ್ಮೆಂಟ್ಸ್‌ಗಳಿಗೆ 10ದಿನ ರಜೆ ಘೋಷಿಸಿ, ಏಕಾಏಕಿ ಹಿಂಪಡೆದ ಜಿಲ್ಲಾಡಳಿತ!

ಗಾರ್ಮೆಂಟ್ಸ್‌ ಮಾಲೀಕರ ಒತ್ತಡಕ್ಕೆ ಮಣಿದ ಜಿಲ್ಲಾಡಳಿತದ ವಿರುದ್ಧ ಕಾರ್ಮಿಕರ ಅಸಮಾಧಾನ...

- Advertisement -
- Advertisement -

ಸಾಮುದಾಯಿಕವಾಗಿ ಕೊರೊನಾ ಹರಡದಂತೆ ತಡೆಯಲು ಎಲ್ಲೆಲ್ಲೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಐಟಿ ಕಂಪನಿಗಳು ಈಗಾಗಲೇ ಮನೆಯಿಂದಲೇ ಕೆಲಸ ಮಾಡಲು ಸೂಚಿಸಿವೆ. ಕರ್ನಾಟಕ ಸರ್ಕಾರವೇ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ತುರ್ತು ಪರಿಸ್ಥಿತಿ ಘೋಷಿಸಿದೆ. ಪ್ರಧಾನಿ ಮೋದಿಯವರು ಮಾರ್ಚ್‌ 22ರಂದು ಮನೆಯಲ್ಲಿಯೇ ಇದ್ದು ಅಂತರ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಕೊರೊನಾ ಹರಡುವಿಕೆ ಭಾರತದಲ್ಲಿ ಮೊದಲ ಹಂತದಲ್ಲಿದ್ದ ಅದು ಎರಡು ಮತ್ತು ಮೂರನೇ ಹಂತಕ್ಕೆ ಹೋಗದಂತೆ ತಡೆಯಲು ತೀವ್ರ ಎಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಆದರೆ ಕೆಲವು ಕಾರ್ಖಾನೆಗಳು ಮತ್ತು ಗಾರ್ಮೆಂಟ್ಸ್‌ಗಳು ಮಾತ್ರ ಇನ್ನು ಲಾಭದ ಹಂಗಿನಿಂದ ಹೊರಬಂದಂತೆ ಕಾಣುತ್ತಿಲ್ಲ.

ಮಾರ್ಚ್‌ 19ರಂದು ಮಂಡ್ಯದ ಜಿಲ್ಲಾಧಿಕಾರಿಗಳಾದ ಎಂ.ವಿ ವೆಂಕಟೇಶ್‌ರವರು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಗಾರ್ಮೆಂಟ್ಸ್‌ಗಳಿಗೆ ಮಾರ್ಚ್‌ 31ರವರೆಗೆ ರಜೆ ಘೋಷಿಸಿದ್ದರು. ಅವರು ಹೊರಡಿಸಿದ್ದ ಆದೇಶದಲ್ಲಿ ಅದು ಸಂಬಳಸಹಿತ ರಜೆಯೊ, ಸಂಬಳ ರಹಿತ ರಜೆಯೊ ಅದನ್ನು ಕೂಡ ಕಾರ್ಮಿಕರಿಗೆ ತಿಳಿಸಿರಲಿಲ್ಲ. ಆದರೆ ಪತ್ರಿಕೆಗಳ ಜೊತೆ ಮಾತನಾಡಿದಾಗ ಸಂಬಳ ಸಹಿತ ರಜೆ ಎಂದು ತಿಳಿಸಿದ್ದರು. ಇದರಿಂದ ಜಿಲ್ಲೆಯಲ್ಲಿ ಕೆಲಸ ಮಾಡುವ ಸುಮಾರು 20 ಸಾವಿರ ಗಾರ್ಮೆಂಟ್ಸ್‌ ನೌಕರರು ನಿಟ್ಟುಸಿರು ಬಿಟ್ಟು ಮಾರ್ಚ್‌ 20ರಂದು ಕೆಲಸಕ್ಕೆ ತೆರಳದೆ ಮನೆಯಲ್ಲಿಯೇ ಉಳಿದರು.

ಆದರೆ ಅದೇ ದಿನ ಗಾರ್ಮೆಂಟ್ಸ್‌ಗಳ ಮ್ಯಾನೇಜರ್‌ಗಳು ಈ ನಿರ್ಧಾರದ ವಿರುದ್ಧ ಕಿಡಿಕಾರಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿನ ಈ ನಿರ್ಧಾರ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅನ್ವಯವಾಗಬೇಕಾಗುತ್ತದೆ. ಇದರಿಂದ ಕಂಪನಿಗೆ ನಷ್ಟವುಂಟಾಗುತ್ತದೆ ಎಂದು ಜಿಲ್ಲಾಧಿಕಾರಿಗಳೊಡನೆ ಸಭೆ ನಡೆಸಿ, ರದ್ದುಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರಿಂದಲೇ ಜಿಲ್ಲಾಧಿಕಾರಿಗೆ ಫೋನ್‌ ಮಾಡಿಸಲಾಗಿದೆ ಎನ್ನಲಾಗಿದೆ. ಒತ್ತಾಯಕ್ಕೆ ಮಣಿದ ಜಿಲ್ಲಾಧಿಕಾರಿಗಳು ರಜೆ ರದ್ದುಗೊಳಿಸಿದ್ದಾರೆ. ಗಾರ್ಮೆಂಟ್ಸ್‌ನಿಂದ ಎಲ್ಲಾ ಕಾರ್ಮಿಕರಿಗೆ ಕರೆ ಮಾಡಿ ಮಾರ್ಚ್‌ 21ರಿಂದಲೇ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಹೆಸರು ಹೇಳಲು ಇಚ್ಚಿಸದ ಕಾರ್ಮಿಕರೊಬ್ಬರು ನಾನುಗೌರಿ.ಕಾಂಗೆ ಖಚಿತಪಡಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಗಾರ್ಮೆಂಟ್ ಅಂಡ್ ಟೆಕ್ಸ್ ಟೈಲ್ ವರ್ಕರ್ಸ್ ಯೂನಿಯನ್‌ನ ಜಯರಾಮ್ ಎ. ಹೆಚ್ ರವರನ್ನು ಮಾತನಾಡಿಸಿತು. ಅವರು “ಒಟ್ಟು ಮಂಡ್ಯ ಜಿಲ್ಲೆಯಲ್ಲಿ 10-15 ಸಾವಿರ ಮಹಿಳಾ ಕಾರ್ಮಿಕರು ಹಲವು ಗಾರ್ಮೆಂಟ್ಸ್‌‌ಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ 30ಜನರ ಮಾದರಿಗಳನ್ನು ಪರೀಕ್ಷೆಗೆ ಕಳಿಸಲಾಗಿದೆ. ಅಪ್ಪಿ ತಪ್ಪಿ ಸೋಂಕು ಹರಡಿದರೆ ಬಹಳ ದೊಡ್ಡ ಅನಾಹುತಕ್ಕೆ ಕಾರಣವಾಗುತ್ತದೆ. ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲಿ ಸಂಬಳ ಸಹಿತ ರಜೆ ನೀಡಿ ಈ ಕಾರ್ಮಿಕರ ಹಿತಕಾಯಬೇಕಾಗಿರುವುದು ಸರ್ಕಾರ ಮತ್ತು ಜಿಲ್ಲಾಢಳಿತದ ಕೆಲಸ. ಆದರೆ ರಜೆ ರದ್ದುಗೊಳಿಸಿವುದು ದೊಡ್ಡ ಪ್ರಮಾದವಾಗಿದೆ. ಶಾಹಿ ಎಕ್ಸ್‌ಪೋರ್ಟ್‌ ಗಾರ್ಮೆಂಟ್ಸ್‌ನ ಆಡಳಿತ ಮಂಡಳಿಯೇ ಇದಕ್ಕೆಲ್ಲಾ ನೇತೃತ್ವ ವಹಿಸಿದ್ದಾರೆ. ತಮ್ಮ ಲಾಭದ ದುರಾಸೆಗಾಗಿ ತಾವೇ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆ ನೀಡಿ ರಜೆಯನ್ನು ರದ್ದುಗೊಳಿಸಲು ಕಾರಣರಾಗಿದ್ದಾರೆ ಎಂದು ದೂರಿದರು.

ಜಿಲ್ಲಾಧಿಕಾರಿಗಳು ರಜೆಯ ಆದೇಶವನ್ನು ಹಿಂಪಡೆಯುವ ಮೂಲಕ ತಾನೆಂಥ ಜನ ವಿರೋಧಿ, ಮಹಿಳಾ ಕಾರ್ಮಿಕ ವಿರೋಧಿ, ಹೊಣೆಗೇಡಿ ಮತ್ತು ಬಂಡವಾಳ ಶಾಹಿ ಮಾಲೀಕರ ಪರ ಎಂಬುದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾರೆ. ರಾಜ್ಯದಲ್ಲಿ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಬಡ, ಮಹಿಳಾ ಕಾರ್ಮಿಕರು ಗಾರ್ಮೆಂಟ್ಸ್ ಗಳಲ್ಲಿ ಕನಿಷ್ಠ ವೇತನ ಪಡೆದು ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಜೆ ಹಿಂಪಡೆದಿರುವುದು ಸರಿಯಲ್ಲ. ಸರಕಾರ ಈಗ ಹೊರಡಿಸಿರುವ ಆದೇಶ ಪತ್ರವನ್ನು ಮರುಪರಿಶೀಲಿಸಿ ಕೊರೊನಾ ವೈರಸ್ ತಹಬಂದಿಗೆ ಬರುವವರೆಗೆ ಗಾರ್ಮೆಂಟ್ಸ್ ಉದ್ದಿಮೆಗಳನ್ನು ಮುಚ್ಚುವಂತೆ ಆದೇಶಿಸಿ ಗಾರ್ಮೆಂಟ್ಸ್ ನೌಕರರ ಅರೋಗ್ಯ ಮತ್ತು ಪ್ರಾಣ ಕಾಪಾಡಲಿ ಇಲ್ಲದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಅವರು ಒತ್ತಾಯಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳ ಪ್ರತಿಕ್ರಿಯೆ ಪಡೆಯಲು ಹಲವು ಬಾರಿ ಅವರ ಕಚೇರಿಗೆ ಸಂಪರ್ಕಿಸಿದರೂ ಸಹ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಕೊರೊನಾದಂತಹ ಸಾಮುದಾಯಿಕವಾಗಿ ಹಬ್ಬುವ ವೈರಸ್‌ಗಳನ್ನು ತಡೆಯುವುದು ಇಡೀ ದೇಶದ ನಾಗರಿಕರ ಜವಾಬ್ದಾರಿಯಾಗಿದೆ. ಅದಕ್ಕಾಗಿಯೇ ದೂರ ಇದ್ದು, ಮನೆಗಳಲ್ಲಿಯೇ ಉಳಿದು ಪ್ರತಿಯೊಬ್ಬರೂ ಅದರ ವಿರುದ್ಧ ಹೋರಾಡಬೇಕಿದೆ. ಇಂತಹ ಸಂದರ್ಭದಲ್ಲಿ ಕೇವಲ ಗಾರ್ಮೆಂಟ್ಸ್‌ಗಳ ಲಾಭದ ದುರಾಸೆಗಾಗಿ ರಜೆ ರದ್ದುಗೊಳಿಸಿ ಅವರಿಂದ ದುಡಿಸಿಕೊಳ್ಳಲು ಹೊರಟಿರುವುದು ಅಪಾಯಕಾರಿ ನಡೆಯಾಗಿದೆ. ಇನ್ನು ಭಾನುವಾರ ಮೋದಿಯವರೇ ಮನೆಯಿಂದ ಹೊರಬರಬೇಡಿ ಎಂದರೆ ಬೆಂಗಳೂರಿನ ಶಾಹಿ ಎಕ್ಸ್‌ಪೋರ್ಟ್‌ ಗಾರ್ಮೆಂಟ್ಸ್‌ನಲ್ಲಿ ತನ್ನ ಕಾರ್ಮಿಕರಿಗೆ ಕೆಲಸಕ್ಕೆ ಹಾಜರಾಗಬೇಕೆಂದು ತಾಕೀತು ಮಾಡಿದೆ. ಇದೆಂತೆಹ ದ್ವಂದ್ವ?

ಸರ್ಕಾರ ಈ ಕೂಡಲೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಸಂಬಳ ಸಹಿತ ರಜೆ ನೀಡಿ ಕಾರ್ಮಿಕರ ಹಿತ ಕಾಯಬೇಕಾಗಿದೆ. ಇಲ್ಲದಿದ್ದಲ್ಲಿ ಮುಂದೆ ಒದಗುವ ಭಾರೀ ಅನಾಹುತವನ್ನು ಎದುರಿಸಬೇಕಾಗುತ್ತದೆ.


ಇದನ್ನೂ ಓದಿ: ಕೊರೊನಾ ಮುನ್ನೆಚ್ಚರಿಕೆ : ಸಾವಿರಾರು ಜನ ಸೇರುವ ಗಾರ್ಮೆಂಟ್ಸ್, ಕಂಪನಿಗಳಿಗೆ ರಜೆ ಇಲ್ಲ ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...