Homeಮುಖಪುಟಕೊರೊನಾ ಮುನ್ನೆಚ್ಚರಿಕೆ: ಮಂಡ್ಯದ ಗಾರ್ಮೆಂಟ್ಸ್‌ಗಳಿಗೆ 10ದಿನ ರಜೆ ಘೋಷಿಸಿ, ಏಕಾಏಕಿ ಹಿಂಪಡೆದ ಜಿಲ್ಲಾಡಳಿತ!

ಕೊರೊನಾ ಮುನ್ನೆಚ್ಚರಿಕೆ: ಮಂಡ್ಯದ ಗಾರ್ಮೆಂಟ್ಸ್‌ಗಳಿಗೆ 10ದಿನ ರಜೆ ಘೋಷಿಸಿ, ಏಕಾಏಕಿ ಹಿಂಪಡೆದ ಜಿಲ್ಲಾಡಳಿತ!

ಗಾರ್ಮೆಂಟ್ಸ್‌ ಮಾಲೀಕರ ಒತ್ತಡಕ್ಕೆ ಮಣಿದ ಜಿಲ್ಲಾಡಳಿತದ ವಿರುದ್ಧ ಕಾರ್ಮಿಕರ ಅಸಮಾಧಾನ...

- Advertisement -
- Advertisement -

ಸಾಮುದಾಯಿಕವಾಗಿ ಕೊರೊನಾ ಹರಡದಂತೆ ತಡೆಯಲು ಎಲ್ಲೆಲ್ಲೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಐಟಿ ಕಂಪನಿಗಳು ಈಗಾಗಲೇ ಮನೆಯಿಂದಲೇ ಕೆಲಸ ಮಾಡಲು ಸೂಚಿಸಿವೆ. ಕರ್ನಾಟಕ ಸರ್ಕಾರವೇ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ತುರ್ತು ಪರಿಸ್ಥಿತಿ ಘೋಷಿಸಿದೆ. ಪ್ರಧಾನಿ ಮೋದಿಯವರು ಮಾರ್ಚ್‌ 22ರಂದು ಮನೆಯಲ್ಲಿಯೇ ಇದ್ದು ಅಂತರ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಕೊರೊನಾ ಹರಡುವಿಕೆ ಭಾರತದಲ್ಲಿ ಮೊದಲ ಹಂತದಲ್ಲಿದ್ದ ಅದು ಎರಡು ಮತ್ತು ಮೂರನೇ ಹಂತಕ್ಕೆ ಹೋಗದಂತೆ ತಡೆಯಲು ತೀವ್ರ ಎಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಆದರೆ ಕೆಲವು ಕಾರ್ಖಾನೆಗಳು ಮತ್ತು ಗಾರ್ಮೆಂಟ್ಸ್‌ಗಳು ಮಾತ್ರ ಇನ್ನು ಲಾಭದ ಹಂಗಿನಿಂದ ಹೊರಬಂದಂತೆ ಕಾಣುತ್ತಿಲ್ಲ.

ಮಾರ್ಚ್‌ 19ರಂದು ಮಂಡ್ಯದ ಜಿಲ್ಲಾಧಿಕಾರಿಗಳಾದ ಎಂ.ವಿ ವೆಂಕಟೇಶ್‌ರವರು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಗಾರ್ಮೆಂಟ್ಸ್‌ಗಳಿಗೆ ಮಾರ್ಚ್‌ 31ರವರೆಗೆ ರಜೆ ಘೋಷಿಸಿದ್ದರು. ಅವರು ಹೊರಡಿಸಿದ್ದ ಆದೇಶದಲ್ಲಿ ಅದು ಸಂಬಳಸಹಿತ ರಜೆಯೊ, ಸಂಬಳ ರಹಿತ ರಜೆಯೊ ಅದನ್ನು ಕೂಡ ಕಾರ್ಮಿಕರಿಗೆ ತಿಳಿಸಿರಲಿಲ್ಲ. ಆದರೆ ಪತ್ರಿಕೆಗಳ ಜೊತೆ ಮಾತನಾಡಿದಾಗ ಸಂಬಳ ಸಹಿತ ರಜೆ ಎಂದು ತಿಳಿಸಿದ್ದರು. ಇದರಿಂದ ಜಿಲ್ಲೆಯಲ್ಲಿ ಕೆಲಸ ಮಾಡುವ ಸುಮಾರು 20 ಸಾವಿರ ಗಾರ್ಮೆಂಟ್ಸ್‌ ನೌಕರರು ನಿಟ್ಟುಸಿರು ಬಿಟ್ಟು ಮಾರ್ಚ್‌ 20ರಂದು ಕೆಲಸಕ್ಕೆ ತೆರಳದೆ ಮನೆಯಲ್ಲಿಯೇ ಉಳಿದರು.

ಆದರೆ ಅದೇ ದಿನ ಗಾರ್ಮೆಂಟ್ಸ್‌ಗಳ ಮ್ಯಾನೇಜರ್‌ಗಳು ಈ ನಿರ್ಧಾರದ ವಿರುದ್ಧ ಕಿಡಿಕಾರಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿನ ಈ ನಿರ್ಧಾರ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅನ್ವಯವಾಗಬೇಕಾಗುತ್ತದೆ. ಇದರಿಂದ ಕಂಪನಿಗೆ ನಷ್ಟವುಂಟಾಗುತ್ತದೆ ಎಂದು ಜಿಲ್ಲಾಧಿಕಾರಿಗಳೊಡನೆ ಸಭೆ ನಡೆಸಿ, ರದ್ದುಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರಿಂದಲೇ ಜಿಲ್ಲಾಧಿಕಾರಿಗೆ ಫೋನ್‌ ಮಾಡಿಸಲಾಗಿದೆ ಎನ್ನಲಾಗಿದೆ. ಒತ್ತಾಯಕ್ಕೆ ಮಣಿದ ಜಿಲ್ಲಾಧಿಕಾರಿಗಳು ರಜೆ ರದ್ದುಗೊಳಿಸಿದ್ದಾರೆ. ಗಾರ್ಮೆಂಟ್ಸ್‌ನಿಂದ ಎಲ್ಲಾ ಕಾರ್ಮಿಕರಿಗೆ ಕರೆ ಮಾಡಿ ಮಾರ್ಚ್‌ 21ರಿಂದಲೇ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಹೆಸರು ಹೇಳಲು ಇಚ್ಚಿಸದ ಕಾರ್ಮಿಕರೊಬ್ಬರು ನಾನುಗೌರಿ.ಕಾಂಗೆ ಖಚಿತಪಡಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಗಾರ್ಮೆಂಟ್ ಅಂಡ್ ಟೆಕ್ಸ್ ಟೈಲ್ ವರ್ಕರ್ಸ್ ಯೂನಿಯನ್‌ನ ಜಯರಾಮ್ ಎ. ಹೆಚ್ ರವರನ್ನು ಮಾತನಾಡಿಸಿತು. ಅವರು “ಒಟ್ಟು ಮಂಡ್ಯ ಜಿಲ್ಲೆಯಲ್ಲಿ 10-15 ಸಾವಿರ ಮಹಿಳಾ ಕಾರ್ಮಿಕರು ಹಲವು ಗಾರ್ಮೆಂಟ್ಸ್‌‌ಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ 30ಜನರ ಮಾದರಿಗಳನ್ನು ಪರೀಕ್ಷೆಗೆ ಕಳಿಸಲಾಗಿದೆ. ಅಪ್ಪಿ ತಪ್ಪಿ ಸೋಂಕು ಹರಡಿದರೆ ಬಹಳ ದೊಡ್ಡ ಅನಾಹುತಕ್ಕೆ ಕಾರಣವಾಗುತ್ತದೆ. ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲಿ ಸಂಬಳ ಸಹಿತ ರಜೆ ನೀಡಿ ಈ ಕಾರ್ಮಿಕರ ಹಿತಕಾಯಬೇಕಾಗಿರುವುದು ಸರ್ಕಾರ ಮತ್ತು ಜಿಲ್ಲಾಢಳಿತದ ಕೆಲಸ. ಆದರೆ ರಜೆ ರದ್ದುಗೊಳಿಸಿವುದು ದೊಡ್ಡ ಪ್ರಮಾದವಾಗಿದೆ. ಶಾಹಿ ಎಕ್ಸ್‌ಪೋರ್ಟ್‌ ಗಾರ್ಮೆಂಟ್ಸ್‌ನ ಆಡಳಿತ ಮಂಡಳಿಯೇ ಇದಕ್ಕೆಲ್ಲಾ ನೇತೃತ್ವ ವಹಿಸಿದ್ದಾರೆ. ತಮ್ಮ ಲಾಭದ ದುರಾಸೆಗಾಗಿ ತಾವೇ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆ ನೀಡಿ ರಜೆಯನ್ನು ರದ್ದುಗೊಳಿಸಲು ಕಾರಣರಾಗಿದ್ದಾರೆ ಎಂದು ದೂರಿದರು.

ಜಿಲ್ಲಾಧಿಕಾರಿಗಳು ರಜೆಯ ಆದೇಶವನ್ನು ಹಿಂಪಡೆಯುವ ಮೂಲಕ ತಾನೆಂಥ ಜನ ವಿರೋಧಿ, ಮಹಿಳಾ ಕಾರ್ಮಿಕ ವಿರೋಧಿ, ಹೊಣೆಗೇಡಿ ಮತ್ತು ಬಂಡವಾಳ ಶಾಹಿ ಮಾಲೀಕರ ಪರ ಎಂಬುದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾರೆ. ರಾಜ್ಯದಲ್ಲಿ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಬಡ, ಮಹಿಳಾ ಕಾರ್ಮಿಕರು ಗಾರ್ಮೆಂಟ್ಸ್ ಗಳಲ್ಲಿ ಕನಿಷ್ಠ ವೇತನ ಪಡೆದು ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಜೆ ಹಿಂಪಡೆದಿರುವುದು ಸರಿಯಲ್ಲ. ಸರಕಾರ ಈಗ ಹೊರಡಿಸಿರುವ ಆದೇಶ ಪತ್ರವನ್ನು ಮರುಪರಿಶೀಲಿಸಿ ಕೊರೊನಾ ವೈರಸ್ ತಹಬಂದಿಗೆ ಬರುವವರೆಗೆ ಗಾರ್ಮೆಂಟ್ಸ್ ಉದ್ದಿಮೆಗಳನ್ನು ಮುಚ್ಚುವಂತೆ ಆದೇಶಿಸಿ ಗಾರ್ಮೆಂಟ್ಸ್ ನೌಕರರ ಅರೋಗ್ಯ ಮತ್ತು ಪ್ರಾಣ ಕಾಪಾಡಲಿ ಇಲ್ಲದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಅವರು ಒತ್ತಾಯಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳ ಪ್ರತಿಕ್ರಿಯೆ ಪಡೆಯಲು ಹಲವು ಬಾರಿ ಅವರ ಕಚೇರಿಗೆ ಸಂಪರ್ಕಿಸಿದರೂ ಸಹ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಕೊರೊನಾದಂತಹ ಸಾಮುದಾಯಿಕವಾಗಿ ಹಬ್ಬುವ ವೈರಸ್‌ಗಳನ್ನು ತಡೆಯುವುದು ಇಡೀ ದೇಶದ ನಾಗರಿಕರ ಜವಾಬ್ದಾರಿಯಾಗಿದೆ. ಅದಕ್ಕಾಗಿಯೇ ದೂರ ಇದ್ದು, ಮನೆಗಳಲ್ಲಿಯೇ ಉಳಿದು ಪ್ರತಿಯೊಬ್ಬರೂ ಅದರ ವಿರುದ್ಧ ಹೋರಾಡಬೇಕಿದೆ. ಇಂತಹ ಸಂದರ್ಭದಲ್ಲಿ ಕೇವಲ ಗಾರ್ಮೆಂಟ್ಸ್‌ಗಳ ಲಾಭದ ದುರಾಸೆಗಾಗಿ ರಜೆ ರದ್ದುಗೊಳಿಸಿ ಅವರಿಂದ ದುಡಿಸಿಕೊಳ್ಳಲು ಹೊರಟಿರುವುದು ಅಪಾಯಕಾರಿ ನಡೆಯಾಗಿದೆ. ಇನ್ನು ಭಾನುವಾರ ಮೋದಿಯವರೇ ಮನೆಯಿಂದ ಹೊರಬರಬೇಡಿ ಎಂದರೆ ಬೆಂಗಳೂರಿನ ಶಾಹಿ ಎಕ್ಸ್‌ಪೋರ್ಟ್‌ ಗಾರ್ಮೆಂಟ್ಸ್‌ನಲ್ಲಿ ತನ್ನ ಕಾರ್ಮಿಕರಿಗೆ ಕೆಲಸಕ್ಕೆ ಹಾಜರಾಗಬೇಕೆಂದು ತಾಕೀತು ಮಾಡಿದೆ. ಇದೆಂತೆಹ ದ್ವಂದ್ವ?

ಸರ್ಕಾರ ಈ ಕೂಡಲೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಸಂಬಳ ಸಹಿತ ರಜೆ ನೀಡಿ ಕಾರ್ಮಿಕರ ಹಿತ ಕಾಯಬೇಕಾಗಿದೆ. ಇಲ್ಲದಿದ್ದಲ್ಲಿ ಮುಂದೆ ಒದಗುವ ಭಾರೀ ಅನಾಹುತವನ್ನು ಎದುರಿಸಬೇಕಾಗುತ್ತದೆ.


ಇದನ್ನೂ ಓದಿ: ಕೊರೊನಾ ಮುನ್ನೆಚ್ಚರಿಕೆ : ಸಾವಿರಾರು ಜನ ಸೇರುವ ಗಾರ್ಮೆಂಟ್ಸ್, ಕಂಪನಿಗಳಿಗೆ ರಜೆ ಇಲ್ಲ ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...