Homeಮುಖಪುಟಕೊರೊನಾ ಮುನ್ನೆಚ್ಚರಿಕೆ: ಮಂಡ್ಯದ ಗಾರ್ಮೆಂಟ್ಸ್‌ಗಳಿಗೆ 10ದಿನ ರಜೆ ಘೋಷಿಸಿ, ಏಕಾಏಕಿ ಹಿಂಪಡೆದ ಜಿಲ್ಲಾಡಳಿತ!

ಕೊರೊನಾ ಮುನ್ನೆಚ್ಚರಿಕೆ: ಮಂಡ್ಯದ ಗಾರ್ಮೆಂಟ್ಸ್‌ಗಳಿಗೆ 10ದಿನ ರಜೆ ಘೋಷಿಸಿ, ಏಕಾಏಕಿ ಹಿಂಪಡೆದ ಜಿಲ್ಲಾಡಳಿತ!

ಗಾರ್ಮೆಂಟ್ಸ್‌ ಮಾಲೀಕರ ಒತ್ತಡಕ್ಕೆ ಮಣಿದ ಜಿಲ್ಲಾಡಳಿತದ ವಿರುದ್ಧ ಕಾರ್ಮಿಕರ ಅಸಮಾಧಾನ...

- Advertisement -
- Advertisement -

ಸಾಮುದಾಯಿಕವಾಗಿ ಕೊರೊನಾ ಹರಡದಂತೆ ತಡೆಯಲು ಎಲ್ಲೆಲ್ಲೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಐಟಿ ಕಂಪನಿಗಳು ಈಗಾಗಲೇ ಮನೆಯಿಂದಲೇ ಕೆಲಸ ಮಾಡಲು ಸೂಚಿಸಿವೆ. ಕರ್ನಾಟಕ ಸರ್ಕಾರವೇ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ತುರ್ತು ಪರಿಸ್ಥಿತಿ ಘೋಷಿಸಿದೆ. ಪ್ರಧಾನಿ ಮೋದಿಯವರು ಮಾರ್ಚ್‌ 22ರಂದು ಮನೆಯಲ್ಲಿಯೇ ಇದ್ದು ಅಂತರ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಕೊರೊನಾ ಹರಡುವಿಕೆ ಭಾರತದಲ್ಲಿ ಮೊದಲ ಹಂತದಲ್ಲಿದ್ದ ಅದು ಎರಡು ಮತ್ತು ಮೂರನೇ ಹಂತಕ್ಕೆ ಹೋಗದಂತೆ ತಡೆಯಲು ತೀವ್ರ ಎಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಆದರೆ ಕೆಲವು ಕಾರ್ಖಾನೆಗಳು ಮತ್ತು ಗಾರ್ಮೆಂಟ್ಸ್‌ಗಳು ಮಾತ್ರ ಇನ್ನು ಲಾಭದ ಹಂಗಿನಿಂದ ಹೊರಬಂದಂತೆ ಕಾಣುತ್ತಿಲ್ಲ.

ಮಾರ್ಚ್‌ 19ರಂದು ಮಂಡ್ಯದ ಜಿಲ್ಲಾಧಿಕಾರಿಗಳಾದ ಎಂ.ವಿ ವೆಂಕಟೇಶ್‌ರವರು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಗಾರ್ಮೆಂಟ್ಸ್‌ಗಳಿಗೆ ಮಾರ್ಚ್‌ 31ರವರೆಗೆ ರಜೆ ಘೋಷಿಸಿದ್ದರು. ಅವರು ಹೊರಡಿಸಿದ್ದ ಆದೇಶದಲ್ಲಿ ಅದು ಸಂಬಳಸಹಿತ ರಜೆಯೊ, ಸಂಬಳ ರಹಿತ ರಜೆಯೊ ಅದನ್ನು ಕೂಡ ಕಾರ್ಮಿಕರಿಗೆ ತಿಳಿಸಿರಲಿಲ್ಲ. ಆದರೆ ಪತ್ರಿಕೆಗಳ ಜೊತೆ ಮಾತನಾಡಿದಾಗ ಸಂಬಳ ಸಹಿತ ರಜೆ ಎಂದು ತಿಳಿಸಿದ್ದರು. ಇದರಿಂದ ಜಿಲ್ಲೆಯಲ್ಲಿ ಕೆಲಸ ಮಾಡುವ ಸುಮಾರು 20 ಸಾವಿರ ಗಾರ್ಮೆಂಟ್ಸ್‌ ನೌಕರರು ನಿಟ್ಟುಸಿರು ಬಿಟ್ಟು ಮಾರ್ಚ್‌ 20ರಂದು ಕೆಲಸಕ್ಕೆ ತೆರಳದೆ ಮನೆಯಲ್ಲಿಯೇ ಉಳಿದರು.

ಆದರೆ ಅದೇ ದಿನ ಗಾರ್ಮೆಂಟ್ಸ್‌ಗಳ ಮ್ಯಾನೇಜರ್‌ಗಳು ಈ ನಿರ್ಧಾರದ ವಿರುದ್ಧ ಕಿಡಿಕಾರಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿನ ಈ ನಿರ್ಧಾರ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅನ್ವಯವಾಗಬೇಕಾಗುತ್ತದೆ. ಇದರಿಂದ ಕಂಪನಿಗೆ ನಷ್ಟವುಂಟಾಗುತ್ತದೆ ಎಂದು ಜಿಲ್ಲಾಧಿಕಾರಿಗಳೊಡನೆ ಸಭೆ ನಡೆಸಿ, ರದ್ದುಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರಿಂದಲೇ ಜಿಲ್ಲಾಧಿಕಾರಿಗೆ ಫೋನ್‌ ಮಾಡಿಸಲಾಗಿದೆ ಎನ್ನಲಾಗಿದೆ. ಒತ್ತಾಯಕ್ಕೆ ಮಣಿದ ಜಿಲ್ಲಾಧಿಕಾರಿಗಳು ರಜೆ ರದ್ದುಗೊಳಿಸಿದ್ದಾರೆ. ಗಾರ್ಮೆಂಟ್ಸ್‌ನಿಂದ ಎಲ್ಲಾ ಕಾರ್ಮಿಕರಿಗೆ ಕರೆ ಮಾಡಿ ಮಾರ್ಚ್‌ 21ರಿಂದಲೇ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಹೆಸರು ಹೇಳಲು ಇಚ್ಚಿಸದ ಕಾರ್ಮಿಕರೊಬ್ಬರು ನಾನುಗೌರಿ.ಕಾಂಗೆ ಖಚಿತಪಡಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಗಾರ್ಮೆಂಟ್ ಅಂಡ್ ಟೆಕ್ಸ್ ಟೈಲ್ ವರ್ಕರ್ಸ್ ಯೂನಿಯನ್‌ನ ಜಯರಾಮ್ ಎ. ಹೆಚ್ ರವರನ್ನು ಮಾತನಾಡಿಸಿತು. ಅವರು “ಒಟ್ಟು ಮಂಡ್ಯ ಜಿಲ್ಲೆಯಲ್ಲಿ 10-15 ಸಾವಿರ ಮಹಿಳಾ ಕಾರ್ಮಿಕರು ಹಲವು ಗಾರ್ಮೆಂಟ್ಸ್‌‌ಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ 30ಜನರ ಮಾದರಿಗಳನ್ನು ಪರೀಕ್ಷೆಗೆ ಕಳಿಸಲಾಗಿದೆ. ಅಪ್ಪಿ ತಪ್ಪಿ ಸೋಂಕು ಹರಡಿದರೆ ಬಹಳ ದೊಡ್ಡ ಅನಾಹುತಕ್ಕೆ ಕಾರಣವಾಗುತ್ತದೆ. ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲಿ ಸಂಬಳ ಸಹಿತ ರಜೆ ನೀಡಿ ಈ ಕಾರ್ಮಿಕರ ಹಿತಕಾಯಬೇಕಾಗಿರುವುದು ಸರ್ಕಾರ ಮತ್ತು ಜಿಲ್ಲಾಢಳಿತದ ಕೆಲಸ. ಆದರೆ ರಜೆ ರದ್ದುಗೊಳಿಸಿವುದು ದೊಡ್ಡ ಪ್ರಮಾದವಾಗಿದೆ. ಶಾಹಿ ಎಕ್ಸ್‌ಪೋರ್ಟ್‌ ಗಾರ್ಮೆಂಟ್ಸ್‌ನ ಆಡಳಿತ ಮಂಡಳಿಯೇ ಇದಕ್ಕೆಲ್ಲಾ ನೇತೃತ್ವ ವಹಿಸಿದ್ದಾರೆ. ತಮ್ಮ ಲಾಭದ ದುರಾಸೆಗಾಗಿ ತಾವೇ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆ ನೀಡಿ ರಜೆಯನ್ನು ರದ್ದುಗೊಳಿಸಲು ಕಾರಣರಾಗಿದ್ದಾರೆ ಎಂದು ದೂರಿದರು.

ಜಿಲ್ಲಾಧಿಕಾರಿಗಳು ರಜೆಯ ಆದೇಶವನ್ನು ಹಿಂಪಡೆಯುವ ಮೂಲಕ ತಾನೆಂಥ ಜನ ವಿರೋಧಿ, ಮಹಿಳಾ ಕಾರ್ಮಿಕ ವಿರೋಧಿ, ಹೊಣೆಗೇಡಿ ಮತ್ತು ಬಂಡವಾಳ ಶಾಹಿ ಮಾಲೀಕರ ಪರ ಎಂಬುದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾರೆ. ರಾಜ್ಯದಲ್ಲಿ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಬಡ, ಮಹಿಳಾ ಕಾರ್ಮಿಕರು ಗಾರ್ಮೆಂಟ್ಸ್ ಗಳಲ್ಲಿ ಕನಿಷ್ಠ ವೇತನ ಪಡೆದು ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಜೆ ಹಿಂಪಡೆದಿರುವುದು ಸರಿಯಲ್ಲ. ಸರಕಾರ ಈಗ ಹೊರಡಿಸಿರುವ ಆದೇಶ ಪತ್ರವನ್ನು ಮರುಪರಿಶೀಲಿಸಿ ಕೊರೊನಾ ವೈರಸ್ ತಹಬಂದಿಗೆ ಬರುವವರೆಗೆ ಗಾರ್ಮೆಂಟ್ಸ್ ಉದ್ದಿಮೆಗಳನ್ನು ಮುಚ್ಚುವಂತೆ ಆದೇಶಿಸಿ ಗಾರ್ಮೆಂಟ್ಸ್ ನೌಕರರ ಅರೋಗ್ಯ ಮತ್ತು ಪ್ರಾಣ ಕಾಪಾಡಲಿ ಇಲ್ಲದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಅವರು ಒತ್ತಾಯಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳ ಪ್ರತಿಕ್ರಿಯೆ ಪಡೆಯಲು ಹಲವು ಬಾರಿ ಅವರ ಕಚೇರಿಗೆ ಸಂಪರ್ಕಿಸಿದರೂ ಸಹ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಕೊರೊನಾದಂತಹ ಸಾಮುದಾಯಿಕವಾಗಿ ಹಬ್ಬುವ ವೈರಸ್‌ಗಳನ್ನು ತಡೆಯುವುದು ಇಡೀ ದೇಶದ ನಾಗರಿಕರ ಜವಾಬ್ದಾರಿಯಾಗಿದೆ. ಅದಕ್ಕಾಗಿಯೇ ದೂರ ಇದ್ದು, ಮನೆಗಳಲ್ಲಿಯೇ ಉಳಿದು ಪ್ರತಿಯೊಬ್ಬರೂ ಅದರ ವಿರುದ್ಧ ಹೋರಾಡಬೇಕಿದೆ. ಇಂತಹ ಸಂದರ್ಭದಲ್ಲಿ ಕೇವಲ ಗಾರ್ಮೆಂಟ್ಸ್‌ಗಳ ಲಾಭದ ದುರಾಸೆಗಾಗಿ ರಜೆ ರದ್ದುಗೊಳಿಸಿ ಅವರಿಂದ ದುಡಿಸಿಕೊಳ್ಳಲು ಹೊರಟಿರುವುದು ಅಪಾಯಕಾರಿ ನಡೆಯಾಗಿದೆ. ಇನ್ನು ಭಾನುವಾರ ಮೋದಿಯವರೇ ಮನೆಯಿಂದ ಹೊರಬರಬೇಡಿ ಎಂದರೆ ಬೆಂಗಳೂರಿನ ಶಾಹಿ ಎಕ್ಸ್‌ಪೋರ್ಟ್‌ ಗಾರ್ಮೆಂಟ್ಸ್‌ನಲ್ಲಿ ತನ್ನ ಕಾರ್ಮಿಕರಿಗೆ ಕೆಲಸಕ್ಕೆ ಹಾಜರಾಗಬೇಕೆಂದು ತಾಕೀತು ಮಾಡಿದೆ. ಇದೆಂತೆಹ ದ್ವಂದ್ವ?

ಸರ್ಕಾರ ಈ ಕೂಡಲೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಸಂಬಳ ಸಹಿತ ರಜೆ ನೀಡಿ ಕಾರ್ಮಿಕರ ಹಿತ ಕಾಯಬೇಕಾಗಿದೆ. ಇಲ್ಲದಿದ್ದಲ್ಲಿ ಮುಂದೆ ಒದಗುವ ಭಾರೀ ಅನಾಹುತವನ್ನು ಎದುರಿಸಬೇಕಾಗುತ್ತದೆ.


ಇದನ್ನೂ ಓದಿ: ಕೊರೊನಾ ಮುನ್ನೆಚ್ಚರಿಕೆ : ಸಾವಿರಾರು ಜನ ಸೇರುವ ಗಾರ್ಮೆಂಟ್ಸ್, ಕಂಪನಿಗಳಿಗೆ ರಜೆ ಇಲ್ಲ ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಒಪ್ಪುವುದಿಲ್ಲ : ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...