Homeಮುಖಪುಟಕೊರೊನಾ ಮುನ್ನೆಚ್ಚರಿಕೆ: ಮಂಡ್ಯದ ಗಾರ್ಮೆಂಟ್ಸ್‌ಗಳಿಗೆ 10ದಿನ ರಜೆ ಘೋಷಿಸಿ, ಏಕಾಏಕಿ ಹಿಂಪಡೆದ ಜಿಲ್ಲಾಡಳಿತ!

ಕೊರೊನಾ ಮುನ್ನೆಚ್ಚರಿಕೆ: ಮಂಡ್ಯದ ಗಾರ್ಮೆಂಟ್ಸ್‌ಗಳಿಗೆ 10ದಿನ ರಜೆ ಘೋಷಿಸಿ, ಏಕಾಏಕಿ ಹಿಂಪಡೆದ ಜಿಲ್ಲಾಡಳಿತ!

ಗಾರ್ಮೆಂಟ್ಸ್‌ ಮಾಲೀಕರ ಒತ್ತಡಕ್ಕೆ ಮಣಿದ ಜಿಲ್ಲಾಡಳಿತದ ವಿರುದ್ಧ ಕಾರ್ಮಿಕರ ಅಸಮಾಧಾನ...

- Advertisement -
- Advertisement -

ಸಾಮುದಾಯಿಕವಾಗಿ ಕೊರೊನಾ ಹರಡದಂತೆ ತಡೆಯಲು ಎಲ್ಲೆಲ್ಲೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಐಟಿ ಕಂಪನಿಗಳು ಈಗಾಗಲೇ ಮನೆಯಿಂದಲೇ ಕೆಲಸ ಮಾಡಲು ಸೂಚಿಸಿವೆ. ಕರ್ನಾಟಕ ಸರ್ಕಾರವೇ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ತುರ್ತು ಪರಿಸ್ಥಿತಿ ಘೋಷಿಸಿದೆ. ಪ್ರಧಾನಿ ಮೋದಿಯವರು ಮಾರ್ಚ್‌ 22ರಂದು ಮನೆಯಲ್ಲಿಯೇ ಇದ್ದು ಅಂತರ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಕೊರೊನಾ ಹರಡುವಿಕೆ ಭಾರತದಲ್ಲಿ ಮೊದಲ ಹಂತದಲ್ಲಿದ್ದ ಅದು ಎರಡು ಮತ್ತು ಮೂರನೇ ಹಂತಕ್ಕೆ ಹೋಗದಂತೆ ತಡೆಯಲು ತೀವ್ರ ಎಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಆದರೆ ಕೆಲವು ಕಾರ್ಖಾನೆಗಳು ಮತ್ತು ಗಾರ್ಮೆಂಟ್ಸ್‌ಗಳು ಮಾತ್ರ ಇನ್ನು ಲಾಭದ ಹಂಗಿನಿಂದ ಹೊರಬಂದಂತೆ ಕಾಣುತ್ತಿಲ್ಲ.

ಮಾರ್ಚ್‌ 19ರಂದು ಮಂಡ್ಯದ ಜಿಲ್ಲಾಧಿಕಾರಿಗಳಾದ ಎಂ.ವಿ ವೆಂಕಟೇಶ್‌ರವರು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಗಾರ್ಮೆಂಟ್ಸ್‌ಗಳಿಗೆ ಮಾರ್ಚ್‌ 31ರವರೆಗೆ ರಜೆ ಘೋಷಿಸಿದ್ದರು. ಅವರು ಹೊರಡಿಸಿದ್ದ ಆದೇಶದಲ್ಲಿ ಅದು ಸಂಬಳಸಹಿತ ರಜೆಯೊ, ಸಂಬಳ ರಹಿತ ರಜೆಯೊ ಅದನ್ನು ಕೂಡ ಕಾರ್ಮಿಕರಿಗೆ ತಿಳಿಸಿರಲಿಲ್ಲ. ಆದರೆ ಪತ್ರಿಕೆಗಳ ಜೊತೆ ಮಾತನಾಡಿದಾಗ ಸಂಬಳ ಸಹಿತ ರಜೆ ಎಂದು ತಿಳಿಸಿದ್ದರು. ಇದರಿಂದ ಜಿಲ್ಲೆಯಲ್ಲಿ ಕೆಲಸ ಮಾಡುವ ಸುಮಾರು 20 ಸಾವಿರ ಗಾರ್ಮೆಂಟ್ಸ್‌ ನೌಕರರು ನಿಟ್ಟುಸಿರು ಬಿಟ್ಟು ಮಾರ್ಚ್‌ 20ರಂದು ಕೆಲಸಕ್ಕೆ ತೆರಳದೆ ಮನೆಯಲ್ಲಿಯೇ ಉಳಿದರು.

ಆದರೆ ಅದೇ ದಿನ ಗಾರ್ಮೆಂಟ್ಸ್‌ಗಳ ಮ್ಯಾನೇಜರ್‌ಗಳು ಈ ನಿರ್ಧಾರದ ವಿರುದ್ಧ ಕಿಡಿಕಾರಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿನ ಈ ನಿರ್ಧಾರ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅನ್ವಯವಾಗಬೇಕಾಗುತ್ತದೆ. ಇದರಿಂದ ಕಂಪನಿಗೆ ನಷ್ಟವುಂಟಾಗುತ್ತದೆ ಎಂದು ಜಿಲ್ಲಾಧಿಕಾರಿಗಳೊಡನೆ ಸಭೆ ನಡೆಸಿ, ರದ್ದುಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರಿಂದಲೇ ಜಿಲ್ಲಾಧಿಕಾರಿಗೆ ಫೋನ್‌ ಮಾಡಿಸಲಾಗಿದೆ ಎನ್ನಲಾಗಿದೆ. ಒತ್ತಾಯಕ್ಕೆ ಮಣಿದ ಜಿಲ್ಲಾಧಿಕಾರಿಗಳು ರಜೆ ರದ್ದುಗೊಳಿಸಿದ್ದಾರೆ. ಗಾರ್ಮೆಂಟ್ಸ್‌ನಿಂದ ಎಲ್ಲಾ ಕಾರ್ಮಿಕರಿಗೆ ಕರೆ ಮಾಡಿ ಮಾರ್ಚ್‌ 21ರಿಂದಲೇ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಹೆಸರು ಹೇಳಲು ಇಚ್ಚಿಸದ ಕಾರ್ಮಿಕರೊಬ್ಬರು ನಾನುಗೌರಿ.ಕಾಂಗೆ ಖಚಿತಪಡಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಗಾರ್ಮೆಂಟ್ ಅಂಡ್ ಟೆಕ್ಸ್ ಟೈಲ್ ವರ್ಕರ್ಸ್ ಯೂನಿಯನ್‌ನ ಜಯರಾಮ್ ಎ. ಹೆಚ್ ರವರನ್ನು ಮಾತನಾಡಿಸಿತು. ಅವರು “ಒಟ್ಟು ಮಂಡ್ಯ ಜಿಲ್ಲೆಯಲ್ಲಿ 10-15 ಸಾವಿರ ಮಹಿಳಾ ಕಾರ್ಮಿಕರು ಹಲವು ಗಾರ್ಮೆಂಟ್ಸ್‌‌ಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ 30ಜನರ ಮಾದರಿಗಳನ್ನು ಪರೀಕ್ಷೆಗೆ ಕಳಿಸಲಾಗಿದೆ. ಅಪ್ಪಿ ತಪ್ಪಿ ಸೋಂಕು ಹರಡಿದರೆ ಬಹಳ ದೊಡ್ಡ ಅನಾಹುತಕ್ಕೆ ಕಾರಣವಾಗುತ್ತದೆ. ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲಿ ಸಂಬಳ ಸಹಿತ ರಜೆ ನೀಡಿ ಈ ಕಾರ್ಮಿಕರ ಹಿತಕಾಯಬೇಕಾಗಿರುವುದು ಸರ್ಕಾರ ಮತ್ತು ಜಿಲ್ಲಾಢಳಿತದ ಕೆಲಸ. ಆದರೆ ರಜೆ ರದ್ದುಗೊಳಿಸಿವುದು ದೊಡ್ಡ ಪ್ರಮಾದವಾಗಿದೆ. ಶಾಹಿ ಎಕ್ಸ್‌ಪೋರ್ಟ್‌ ಗಾರ್ಮೆಂಟ್ಸ್‌ನ ಆಡಳಿತ ಮಂಡಳಿಯೇ ಇದಕ್ಕೆಲ್ಲಾ ನೇತೃತ್ವ ವಹಿಸಿದ್ದಾರೆ. ತಮ್ಮ ಲಾಭದ ದುರಾಸೆಗಾಗಿ ತಾವೇ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆ ನೀಡಿ ರಜೆಯನ್ನು ರದ್ದುಗೊಳಿಸಲು ಕಾರಣರಾಗಿದ್ದಾರೆ ಎಂದು ದೂರಿದರು.

ಜಿಲ್ಲಾಧಿಕಾರಿಗಳು ರಜೆಯ ಆದೇಶವನ್ನು ಹಿಂಪಡೆಯುವ ಮೂಲಕ ತಾನೆಂಥ ಜನ ವಿರೋಧಿ, ಮಹಿಳಾ ಕಾರ್ಮಿಕ ವಿರೋಧಿ, ಹೊಣೆಗೇಡಿ ಮತ್ತು ಬಂಡವಾಳ ಶಾಹಿ ಮಾಲೀಕರ ಪರ ಎಂಬುದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾರೆ. ರಾಜ್ಯದಲ್ಲಿ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಬಡ, ಮಹಿಳಾ ಕಾರ್ಮಿಕರು ಗಾರ್ಮೆಂಟ್ಸ್ ಗಳಲ್ಲಿ ಕನಿಷ್ಠ ವೇತನ ಪಡೆದು ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಜೆ ಹಿಂಪಡೆದಿರುವುದು ಸರಿಯಲ್ಲ. ಸರಕಾರ ಈಗ ಹೊರಡಿಸಿರುವ ಆದೇಶ ಪತ್ರವನ್ನು ಮರುಪರಿಶೀಲಿಸಿ ಕೊರೊನಾ ವೈರಸ್ ತಹಬಂದಿಗೆ ಬರುವವರೆಗೆ ಗಾರ್ಮೆಂಟ್ಸ್ ಉದ್ದಿಮೆಗಳನ್ನು ಮುಚ್ಚುವಂತೆ ಆದೇಶಿಸಿ ಗಾರ್ಮೆಂಟ್ಸ್ ನೌಕರರ ಅರೋಗ್ಯ ಮತ್ತು ಪ್ರಾಣ ಕಾಪಾಡಲಿ ಇಲ್ಲದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಅವರು ಒತ್ತಾಯಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳ ಪ್ರತಿಕ್ರಿಯೆ ಪಡೆಯಲು ಹಲವು ಬಾರಿ ಅವರ ಕಚೇರಿಗೆ ಸಂಪರ್ಕಿಸಿದರೂ ಸಹ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಕೊರೊನಾದಂತಹ ಸಾಮುದಾಯಿಕವಾಗಿ ಹಬ್ಬುವ ವೈರಸ್‌ಗಳನ್ನು ತಡೆಯುವುದು ಇಡೀ ದೇಶದ ನಾಗರಿಕರ ಜವಾಬ್ದಾರಿಯಾಗಿದೆ. ಅದಕ್ಕಾಗಿಯೇ ದೂರ ಇದ್ದು, ಮನೆಗಳಲ್ಲಿಯೇ ಉಳಿದು ಪ್ರತಿಯೊಬ್ಬರೂ ಅದರ ವಿರುದ್ಧ ಹೋರಾಡಬೇಕಿದೆ. ಇಂತಹ ಸಂದರ್ಭದಲ್ಲಿ ಕೇವಲ ಗಾರ್ಮೆಂಟ್ಸ್‌ಗಳ ಲಾಭದ ದುರಾಸೆಗಾಗಿ ರಜೆ ರದ್ದುಗೊಳಿಸಿ ಅವರಿಂದ ದುಡಿಸಿಕೊಳ್ಳಲು ಹೊರಟಿರುವುದು ಅಪಾಯಕಾರಿ ನಡೆಯಾಗಿದೆ. ಇನ್ನು ಭಾನುವಾರ ಮೋದಿಯವರೇ ಮನೆಯಿಂದ ಹೊರಬರಬೇಡಿ ಎಂದರೆ ಬೆಂಗಳೂರಿನ ಶಾಹಿ ಎಕ್ಸ್‌ಪೋರ್ಟ್‌ ಗಾರ್ಮೆಂಟ್ಸ್‌ನಲ್ಲಿ ತನ್ನ ಕಾರ್ಮಿಕರಿಗೆ ಕೆಲಸಕ್ಕೆ ಹಾಜರಾಗಬೇಕೆಂದು ತಾಕೀತು ಮಾಡಿದೆ. ಇದೆಂತೆಹ ದ್ವಂದ್ವ?

ಸರ್ಕಾರ ಈ ಕೂಡಲೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಸಂಬಳ ಸಹಿತ ರಜೆ ನೀಡಿ ಕಾರ್ಮಿಕರ ಹಿತ ಕಾಯಬೇಕಾಗಿದೆ. ಇಲ್ಲದಿದ್ದಲ್ಲಿ ಮುಂದೆ ಒದಗುವ ಭಾರೀ ಅನಾಹುತವನ್ನು ಎದುರಿಸಬೇಕಾಗುತ್ತದೆ.


ಇದನ್ನೂ ಓದಿ: ಕೊರೊನಾ ಮುನ್ನೆಚ್ಚರಿಕೆ : ಸಾವಿರಾರು ಜನ ಸೇರುವ ಗಾರ್ಮೆಂಟ್ಸ್, ಕಂಪನಿಗಳಿಗೆ ರಜೆ ಇಲ್ಲ ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...