Homeಕರೋನಾ ತಲ್ಲಣ‘ಭಾರತದಲ್ಲಿ ಕೊರೊನಾ ಇಳಿಮುಖ’- ಅಂಕಿ ಅಂಶ ವಿಶ್ವಾಸಾರ್ಹವಲ್ಲವೆಂದ WHO ವಿಜ್ಞಾನಿ

‘ಭಾರತದಲ್ಲಿ ಕೊರೊನಾ ಇಳಿಮುಖ’- ಅಂಕಿ ಅಂಶ ವಿಶ್ವಾಸಾರ್ಹವಲ್ಲವೆಂದ WHO ವಿಜ್ಞಾನಿ

- Advertisement -
- Advertisement -

ಭಾರತದಲ್ಲಿ ಸೋಮವಾರದಂದು ಹೊಸ ಕೊರೊನಾ ವೈರಸ್ ಪ್ರಕರಣಗಳು ಕುಸಿತವಾಗಿದೆ ಎಂದು ವರದಿಯಾಗಿದೆ. ಆದರೆ ವೈರಸ್ ವೇಗವಾಗಿ ಹರಡುತ್ತಿರುವ ಗ್ರಾಮೀಣ ಪ್ರದೇಶಗಳಲ್ಲಿ ಪರೀಕ್ಷೆಯ ಕೊರತೆಯಿಂದಾಗಿ ಈ ಅಂಕಿ-ಅಂಶ ವಿಶ್ವಾಸಾರ್ಹವಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ತಜ್ಞರು ಹೇಳಿದ್ದಾರೆ.

ವೈರಸ್‌ನ ಹೊಸ ರೂಪಾಂತರವು ಸೋಂಕಿನ ಉಲ್ಬಣಕ್ಕೆ ಕಾರಣವಾಗಿದ್ದರಿಂದ, ಕಳೆದ ತಿಂಗಳಿನಿಂದ ಪ್ರತಿದಿನ 4 ಲಕ್ಷಕ್ಕಿಂತಲೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿತ್ತು. ಕಳೆದ ಕೆಲವು ದಿನಗಳಿಂದ ಸೋಂಕು ಕುಸಿತ ಕಂಡರೂ ಸಹ, ಸೋಂಕುಗಳು ಉತ್ತುಂಗಕ್ಕೇರಿವೆ ಎಂಬ ಬಗ್ಗೆ ಖಚಿತತೆಯಿಲ್ಲ ಎಂದು ತಜ್ಞರು ಹೇಳಿದ್ದಾರೆ. ಜೊತೆಗೆ ಭಾರತದಲ್ಲಿ ಪತ್ತೆಯಾಗಿರುವ ಬಿ.1.617 ವೈರಸ್ ವಿಶ್ವದಾದ್ಯಂತ ಕಳವಳಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಹೆಚ್ಚು ಮಾತನಾಡಿದರೇ ನನ್ನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಬಹುದು: ಬಿಜೆಪಿ ಶಾಸಕ

“ದೇಶದ ಅನೇಕ ಭಾಗಗಳಲ್ಲಿ ಸೋಂಕು ಇನ್ನೂ ಉತ್ತುಂಗಕ್ಕೇರಿಲ್ಲ, ಅವು ಇನ್ನೂ ಏರುತ್ತಿವೆ” ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಹೇಳಿದ್ದಾರೆಂದು ‘ದಿ ಹಿಂದೂ’ ಪತ್ರಿಕೆ ವರದಿ ಮಾಡಿದೆ.

“ಅತಿ ಹೆಚ್ಚು ರಾಷ್ಟ್ರೀಯ ಪಾಸಿಟಿವ್‌ ದರ 20% ಆಗಿದ್ದರೂ, ಇದಕ್ಕಿಂತಲೂ ಕೆಟ್ಟ ಪರಿಸ್ಥಿತಿ ಎದುರಾಗುವ ಸಾಧ್ಯತೆಯಿದೆ. ಹೆಚ್ಚಿನ ರಾಜ್ಯಗಳಲ್ಲಿ ಪರೀಕ್ಷೆ ಇನ್ನೂ ಅಸಮರ್ಪಕವಾಗಿದೆ. ಹೆಚ್ಚುತ್ತಿರುವ ಕೊರೊನಾ ಪಾಸಿಟಿವ್‌ ದರವನ್ನು ನೋಡಿದಾಗ ನಾವು ಸಾಕಷ್ಟು ಪರೀಕ್ಷಿಸುತ್ತಿಲ್ಲ ಎಂದು ತಿಳಿಯುತ್ತದೆ” ಎಂದು ಸ್ವಾಮಿನಾಥನ್‌ ಹೇಳಿದ್ದಾರೆ.

ಕಳೆದ ತಿಂಗಳಿನಿಂದ ತೀವ್ರವಾಗಿ ಏರುತ್ತಲೆ ಇದ್ದ ಕೊರೊನಾ ಸೋಂಕು ಕಳೆದ 24 ಗಂಟೆಗಳಲ್ಲಿ ಇಳಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ಹೇಳಿದೆ. ಕಳೆದ ಒಂದು ದಿನದಲ್ಲಿ ಹೊಸ ಕೊರೊನಾ ಪಾಸಿಟಿವ್‌ ಪ್ರಕರಣ 281,386 ಇಳಿದೆ. ಏಪ್ರಿಲ್ 21 ರ ನಂತರ ಇದೇ ಮೊದಲ ಬಾರಿಗೆ 3 ಲಕ್ಷಕ್ಕಿಂಲೂ ಕಡಿಮೆ ಪ್ರಕರಣ ವರದಿಯಾಗಿದೆ. ದೇಶದಲ್ಲಿ ದೈನಂದಿನ ಸಾವುಗಳು 4,000 ಕ್ಕಿಂತ ಹೆಚ್ಚಿವೆ ಎಂದು ವರದಿಯಾಗಿದೆ.

ಇದನ್ನೂ ಓದಿ: ‘ಹೊಸ ಶಿಕ್ಷಣ ನೀತಿ’ಯ ಅನುಷ್ಠಾನ ಕುರಿತ ಕೇಂದ್ರದ ಸಭೆಯನ್ನು ಬಹಿಷ್ಕರಿಸಿದ ‘ಸ್ಟಾಲಿನ್’ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...